ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಯಾತ್ರೆ

Posted by Vidyamaana on 2023-06-24 10:25:38 |

Share: | | | | |


ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಯಾತ್ರೆ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲು ಕಂಡಿರುವ, ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರು ಶನಿವಾರ ಅಂದರೆ ಇಂದು ಸಂಜೆ 5.57ಕ್ಕೆ ದಿಗ್ವಿಜಯ ಚಾನೆಲ್ ಮೂಲಕ ಜನರ ಮುಂದೆ ಬರಲಿದ್ದಾರೆ.

ಇತ್ತೀಚೆಗೆ ಅರುಣ್ ಕುಮಾರ್ ಪುತ್ತಿಲ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಾದ್ಯಂತ ಹಾಗೂ ಹೊರಗಡೆಯೂ ಹೆಚ್ಚು ಹೆಚ್ಚು ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭವೇ ರಾಜ್ಯಾದ್ಯಂತ ಬೆಂಬಲ ಸೂಚಿಸಿ ಅನೇಕರು ಸಂದೇಶ ರವಾನಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಸಂದರ್ಶನ ರಾಜ್ಯದ ಪ್ರತಿಷ್ಠಿತ ದಿಗ್ವಿಜಯ ಚಾನೆಲಿನಲ್ಲಿ ಪ್ರಸಾರಗೊಳ್ಳಲಿದೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಪುತ್ತಿಲ ಅವರ ಸಂದರ್ಶನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಂದರ್ಶನದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ, ತಮಗಿದ್ದ ಜೀವ ಬೆದರಿಕೆ, ಶನಿ ಪೂಜೆಯ ಘಟನೆ ಮೊದಲಾದ ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮರ ಬಿದ್ದು ಮನೆ ಸಂಪೂರ್ಣ ಜಖಂ

Posted by Vidyamaana on 2023-07-06 08:04:52 |

Share: | | | | |


ಮರ ಬಿದ್ದು ಮನೆ ಸಂಪೂರ್ಣ ಜಖಂ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಬಿಮಾನಿ ಬಳಗದವರು 24 ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ.

ಮುಂಡೂರು ಗ್ರಾಮದ ಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ ಅದಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಮಳೆಗೆ ಮನೆ ಹಾನಿಯಾದರೆ ತಕ್ಷಣ ಮನೆಯನ್ನು ದುರಸ್ಥಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದು ಅದರಂತೆ ಅಬಿಮಾನಿ ಬಳಗದವರು ಮನೆಯನ್ನು ದುರಸ್ಥಿ ಮಾಡಿದ್ದಾರೆ. ತಂಡದಲ್ಲಿ ಸಿಂಹವನ ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ದೇವರಾಜ, ಆನಂದ ಸಿಂಹವನ, ಶಿವು ಸಿಂಹವನ, ರವಿ, ಪುಟ್ಟಪ್ಪ ನಾಯ್ಕ ಸುಂದರ ನಾಯ್ಕ ಮತ್ತಿತರರು ಮನೆ ದುರಸ್ಥಿ ಮಾಡುವಲ್ಲಿ ನೆರವಾದರು.

ಇಂದಿನಿಂದ ರಾಜ್ಯದಲ್ಲಿ ಹೊಸ ರೂಲ್ಸ್ ಜಾರಿ

Posted by Vidyamaana on 2023-08-01 01:58:11 |

Share: | | | | |


ಇಂದಿನಿಂದ ರಾಜ್ಯದಲ್ಲಿ ಹೊಸ ರೂಲ್ಸ್ ಜಾರಿ

ಬೆಂಗಳೂರು : ಆಗಸ್ಟ್.1ರ ಇಂದಿನಿಂದ ಹಲವು ಹೊಸ ನಿಯಮಗಳು ಜಾರಿಗೊಳ್ಳಲಿದ್ದಾವೆ. ಜನಜೀವನದ ಮೇಲೆ ಪರಿಣಾಮ ಬೀರುವ ಸರ್ಕಾರದ ಒಂದಷ್ಟು ತೀರ್ಮಾನಗಳು ಇಂದಿನಿಂದ ಜಾರಿಗೆ ಬರಲಿದ್ದಾರೆ. ಕೆಲವು ತೀರ್ಮಾನ ಸಮಾಧಾನ ತಂದರೇ, ಮತ್ತೆ ಕೆಲವು ಬಿಸಿ ಮುಟ್ಟಿಸಲಿವೆ. ಹೊಸ ಸರ್ಕಾರದ ಗೃಹ ಜ್ಯೋತಿಯ ಅನುಭವ, ಆಗಸ್ಟ್ ತಿಂಗಳ ಇಂದಿನಿಂದ ಜನಸಾಮಾನ್ಯರ ಅರಿವಿಗೆ ಬರಲಿದೆಹಾಗಾದ್ರೇ ಇಂದಿನಿಂದ ಹೊಸ ನಿಯಮಗಳೇನು? ಎನ್ನುವ ಬಗ್ಗೆ ಮುಂದೆ ಓದಿ.


ಇಂದಿನಿಂದ ವಿವಿಧ ನಿಯಮಗಳಲ್ಲಿ ಬದಲಾವಣೆಯಾಗಲಿವೆ. ಹಲವು ದುಬಾರಿಯಾದ್ರೇ, ಮತ್ತೆ ಕೆಲವು ಖುಷಿ ನೀಡುವಂತ ಸಂಗತಿಗಳು ಇದ್ದಾವೆ. ಆದಾಯ ತೆರಿಗೆ ಪಾವತಿಯ ಗಡುವು ಮುಕ್ತಾಯಗೊಂಡಿದೆ. ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಕರೆಂಟ್ ಫ್ರೀ ಆಗಲಿದೆ.

ವಿದ್ಯುತ್ ಉಚಿತ

ಆಗಸ್ಟ್ 1ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆಮಾಡಿದಂತೆ ಜೂನ್.18ರಿಂದ ಜುಲೈ.27ರ ಒಳಗಾಗಿ ನೋಂದಾಯಿಸಿಕೊಂಡಂತ ಗ್ರಾಹಕರಿಗೆ ವಿದ್ಯುತ್ ಉಚಿತವಾಗಲಿದೆ. 200 ಯೂನಿಟ್ ವರೆಗೆ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ದೊರೆಯಲಿದೆ.

ಶೇ.10ರಷ್ಟು ಹೋಟೆಲ್ ತಿನಿಸಿ ದುಬಾರಿ

ದಿನೇ ದಿನೇ ಹೆಚ್ಚಳವಾಗುತ್ತಿರುವಂತ ಅಗತ್ಯ ವಸ್ತುಗಳ ಬೆಲೆಯ ಕಾರಣದಿಂದ ನೀವು ರುಚಿ ರುಚಿಯಾಗಿ ಸವಿಯುವಂತ ಹೋಟೆಲ್ ತಿಂಡಿ-ತಿನಿಸುಗಳು ದುಬಾರಿಯಾಗಲಿವೆ. ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರುವಂತೆ ಶೇ.10ರಷ್ಟು ತಿನಿಸುಗಳ ಬೆಲೆ ಹೆಚ್ಚಳವಾಗಲಿದೆ.

ಹಾಲಿನ ದರ 3 ರೂ ಹೆಚ್ಚಳ

ಇಂದಿನಿಂದ ನಂದಿನಿ ಹಾಲಿನ ದರ 3 ರೂಹಚ್ಚಳವಾಗಲಿದೆ. ಹಾಲು ಉತ್ಪಾದಕರ ಒಕ್ಕೂಟದ ಒತ್ತಡಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಈ ನಿರ್ಧಾರವನ್ನು ಕೈಗೊಂಡಿದೆ. ಒಂದುದು ಹಾಲು ಮಹಾಮಂಡಳದಲ್ಲಿ ಪ್ರತಿ ಲೀಟರ್ ಹಾಲಿಗೆ ಒಂದೊಂದು ದರ ಇದ್ದು, ಹಾಲಿನ ದರಕ್ಕೆ ಹೆಚ್ಚುವರಿ ಮೂರು ರೂ ಸೇರಿಸಿ ಇಂದಿನಿಂದ ಮಾರಾಟವಾಗಲಿದೆ. ಆದರೇ ಈ ಹೆಚ್ಚುವರಿ ದರ ಹಾಲು ಉತ್ಪಾದಕರಿಗೆ ನೀಡಬೇಕು ಎಂಬುದಾಗಿ ಸರ್ಕಾರ ಷರತ್ತು ವಿಧಿಸಿದೆ.


ಹೆಚ್ಚಲಿಗೆ ಮೋಟಾರು ಟ್ಯಾಕ್ಸ್


ರಾಜ್ಯ ವಿಧಾನಸಭೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಉಭಯ ಸದನಗಳಲ್ಲೂ ಒಪ್ಪಿಗೆ ಪಡೆಯಲಾಗಿತ್ತು. ಇದಕ್ಕೆ ರಾಜ್ಯಪಾಲರು ಅಂಕಿತ ಕೂಡ ಹಾಕಿದ್ದಾರೆ. ಈ ತಿದ್ದುಪಡಿ ನಿಯಮದಂತೆ ಮೋಟಾರು ವಾಹನಗಳ ತೆರಿಗೆ ದರಗಳು ಹೆಚ್ಚಾಗಲಿವೆ.ಅತಿ ಭಾರದ ಸರಕು ವಾಹನಗಳು, ಮೋಟಾರು ಕ್ಯಾಬ್, ಶಾಲಾ ಕಾಲೇಜು ವಾಹನಗಳ ತೆರಿಗೆ ಹೆಚ್ಚಳವಾಗಲಿದೆ. ಶಾಲಾ ಮಕ್ಕಳು ತೆರಳುವ ಶಾಲೆಯ ಒಡೆತನದ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂ ನಿಂದ 100ಕ್ಕೆ ಏರಿಕೆ ಮಾಡಲಾಗಿದೆ.


ಐಟಿಆರ್ ವೈಫಲ್ಯಕ್ಕೆ ಇಂದಿನಿಂದ ದಂಡ ಫಿಕ್ಸ್


ನೀವು ಆದಾಯ ತೆರಿಗೆ ಪಾವತಿದಾರರು ಆಗಿದ್ದರೇ, ಜುಲೈ.31ರ ಒಳಗಾಗಿ ಪಾವತಿಸದೇ ಇದ್ದರೇ, ಇಂದಿನಿಂದ ದಂಡ ಪಾವತಿಸುವುದು ಫಿಕ್ಸ್ ಆಗಿದೆ. ನಿಗದಿತ ಅವಧಿಯ ಒಳಗಾಗಿ ಐಟಿಆರ್ ಫೈಲ್ ಮಾಡದೇ ಇದ್ದವರು 5,000ದವರೆಗೆ ದಂಡ ತೆರಬೇಕಿದೆ.

ರಾಜ್ಯದಲ್ಲಿ ಎತ್ತರದ ಕಟ್ಟಡಕ್ಕೆ ಶುಲ್ಕ

ಇನ್ನೂ ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಅಧಿನಿಯಮ 2023ರಕ್ಕೆ ಶಾಸನಸಭೆ ಒಪ್ಪಿಗೆ ನೀಡಲಾಗಿತ್ತು. ಇದು ರಾಜ್ಯಪತ್ರದಲ್ಲಿ ಕೂಡಪ್ರಕಟಲಾಗಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಾಜ್ಯ ಅಗ್ನಿಶಾಮ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿದೆ. ಅಂದರೆ ರಾಷ್ಟ್ರೀಯ ಕಟ್ಟಡ ಸಂಹಿತೆಯಲ್ಲಿ ಎತ್ತರದ ಕಟ್ಟಡ ಅಂದರೇ ಯಾವುದೆಂದು ಪ್ರಸ್ತಾಪವಿದೆ. ಅದರ ಪ್ರಕಾರ ನಿರಾಕ್ಷೇಪಣಾ ಪತ್ರ ಪಡೆಯುವಾಗ ನಿಯಮ ಪಾಲಿಸುವ ಜತೆ, ಕಟ್ಟ ಮಾಲೀಕರು ಶುಲ್ಕವನ್ನು ಕಟ್ಟಬೇಕಾಗುತ್ತದೆ

ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

Posted by Vidyamaana on 2023-04-30 13:36:11 |

Share: | | | | |


ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದರು.

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ

ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆಬಿಜೆಪಿ ಸದಾ ಇರಲಿದೆ ಎಂದರು.ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ನಕಲಿ ಟ್ರಾಫಿಕ್ ಪೊಲೀಸರು; ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ

Posted by Vidyamaana on 2024-05-24 05:59:45 |

Share: | | | | |


ನಕಲಿ ಟ್ರಾಫಿಕ್ ಪೊಲೀಸರು; ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ

ಬೆಂಗಳೂರು : ಸಾಮಾನ್ಯವಾಗಿ ಕಳ್ಳರು ಮನೆಗಳಲ್ಲಿ, ಬ್ಯಾಂಕ್ ಗಳನ್ನು ದರೋಡೆ ಮಾಡುವುದನ್ನು ನೋಡಿರುತ್ತೇವೆ. ಆದರೆ ಬೆಂಗಳೂರಲ್ಲಿ ಖದೀಮರು ಟ್ರಾಫಿಕ್ ಪೋಲೀಸರ ಹೆಸರಲ್ಲಿ ವಾಟ್ಸಪ್ ಮೂಲಕ ದಂಡ ವಸೂಲಿ ಮಾಡಿದ್ದಾರೆ. ಇದೀಗ ಖದೀಮರ ಕೈಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹೌದು ಮೃತ ಹೆಡ್​ ಕಾನ್ಸ್​ಟೇಬಲ್​ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರು ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಈ ಹಿನ್ನಲೆ ಮೂವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ ಹಾಗೂ ಸುಭಿರ್ ಮಲ್ಲಿಕ್ ಬಂಧಿತರು ಎಂದು ತಿಳಿದುಬಂದಿದೆ.

ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನ

Posted by Vidyamaana on 2023-09-19 11:45:11 |

Share: | | | | |


ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ  3ನೇ ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‌ ನಡೆಸಿದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.ಪ್ರಕರಣದ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ! ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.

Read More....

ರೌಡಿಯ ಹತ್ಯೆಗೆ ಪ್ರೇಮದ ಬಲೆ: ನಂಬಿಸಿ ಕೊಂದ ಸುಂದರಿ ಮಾಡೆಲ್ ಅಂದರ್‌


ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.


ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.


ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು


ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.


ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆ


ಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Recent News


Leave a Comment: