ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಇತ್ತೆದ ಜವನೆರ್ ಮಲ್ಪುನ ಬೇಲೆಗ್ ಪೀಂಕಾನ್ ಬಾಯಿ ಇಜ್ಜಿ ಮಾರ್ರೆ

Posted by Vidyamaana on 2024-03-30 08:28:35 |

Share: | | | | |


ಇತ್ತೆದ ಜವನೆರ್ ಮಲ್ಪುನ ಬೇಲೆಗ್ ಪೀಂಕಾನ್ ಬಾಯಿ ಇಜ್ಜಿ ಮಾರ್ರೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳನ್ನು ನೋಡಿ ಹೆಚ್ಚು ಪ್ರಭಾವಿತರಾಗುತ್ತಿದ್ದು, ವೈರಲ್​ ಆಗುವ ಭರದಲ್ಲಿ ಹುಚ್ಚಾಟವಾಡಿ ತಮ್ಮ ಮೈಮೇಲೆ ಗಂಡಾಂತರವನ್ನು ಎಳೆದುಕೊಳ್ಳುತ್ತಿದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ.ಮಾರ್ಚ್​ 25ರಂದು ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಗೇಶ್​ (24) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮುರಳಿ (25) ಯನ್ನು ವಶಕ್ಕೆ ಪಡೆದಿದ್ದಾರೆ. ಏರ್​​ಪ್ರೆಷರ್‌ ಪೈಪ್‌ನಿಂದ ಗುದನಾಳಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.



Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

Posted by Vidyamaana on 2024-03-06 04:53:57 |

Share: | | | | |


Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

      ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ನರೇಂದ್ರ ಮೋದಿ ಯಾರು ಎಂದು ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರ ಹೇಗಿತ್ತು ಎಂಬುದನ್ನು ನೀವು ಒಮ್ಮೆ ನೋಡಿ


ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಭಾವನಾತ್ಮಕವಾಗಿದ್ದರೆ, ಕೆಲವು ವಿಡಿಯೋಗಳು ನಮಗೆಲ್ಲರಿಗೂ ಜೀವನ ಪಾಠವನ್ನು ಕಲಿಸುವಂತಿರುತ್ತದೆ. ಇನ್ನೂ ಹಲವು ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ.


ಇಂತಹ ದೃಶ್ಯಗಳಂತೂ ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರವನ್ನು ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಖಾಸಗಿ ನ್ಯೂಸ್ ಚಾನೆಲ್ ಒಂದರ ರಿಪೋರ್ಟರ್ ಒಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಜನರಲ್ ನಾಲೆಜ್ ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ವೈರಲ್ ಆಗುತ್ತಿರುವ ಈ ವಿಡಿಯೋವನ್ನು @psyco_rider_143 ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.


ವೈರಲ್ ವಿಡಿಯೋದಲ್ಲಿ ಪತ್ರಕರ್ತೆಯೊಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ನೋಡಬಹುದು. ಮೊದಲಿಗೆ ಆ ಪತ್ರಕರ್ತೆ ವಿದ್ಯಾರ್ಥಿಯೊರ್ವನ ಬಳಿ ಲಾಲು ಪ್ರಸಾದ್ ಯಾದವ್ ಯಾರು ಗೊತ್ತಾ? ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ಬಾಲಕ ಹಾ.. ಗೊತ್ತಿದೆ ಅನ್ನೋ ಉತ್ತರವನ್ನು ನೀಡುತ್ತಾನೆ. ಬಳಿಕ ಪತ್ರಕರ್ತೆ ಹಾಗಾದ್ರೆ ಅವರು ಯಾರು ಎಂದು ಹೇಳಬಹುದೇ ಎಂದು ಪ್ರಶ್ನೆ ಕೇಳುತ್ತಾರೆ. ಈ ಪ್ರಶ್ನೆಗೆ ಹೇಗೆ ಉತ್ತರಿಸುವುದು ಎಂದು ತಿಳಿಯದ ಆ ವಿದ್ಯಾರ್ಥಿ ನಗುತ್ತಾ, ನಾಚಿಕೆಯಿಂದ ಅಲ್ಲಿಂದ ಹೋಗಿಯೇ ಬಿಡುತ್ತಾನೆ.


ನಂತರ ರಿಪೋರ್ಟರ್ ವಿದ್ಯಾರ್ಥಿನಿಯೊಬ್ಬಳ ಬಳಿ ನರೇಂದ್ರ ಮೋದಿ ಯಾರು ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ವಿದ್ಯಾರ್ಥಿನಿ ಬಹಳ ಆತ್ಮವಿಶ್ವಾಸದಿಂದ ಬಿಹಾರದ ಪ್ರಧಾನ ಮಂತ್ರಿ ಎಂದು ಥಟ್ಟನೆ ಉತ್ತರಿಸುತ್ತಾಳೆ. ತಾನು ತಪ್ಪು ಉತ್ತರ ನೀಡಿದ್ದೇನೆ ಎಂದು ಅರಿತ ಆ ಬಾಲಕಿ ತಕ್ಷಣವೇ ಅವರು ಭಾರತದ ಪ್ರಧಾನ ಮಂತ್ರಿ ಎಂಬ ಉತ್ತರವನ್ನು ನೀಡುತ್ತಾಳೆ. ವಿದ್ಯಾರ್ಥಿನಿಯ ಉತ್ತರವನ್ನು ಕಂಡು ನೋಡುಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 70 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ʼಒಬ್ಬ ಬಳಕೆದಾರರು ಪಾಪ ಆ ಹುಡುಗಿ ಸ್ವಲ್ಪ ನರ್ವಸ್ ಆಗಿ ಮೊದಲಿಗೆ ತಪ್ಪು ಉತ್ತರವನ್ನು ನೀಡಿದ್ದಾಳೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬಿಹಾರದ ಶಿಕ್ಷಣ ಉತ್ತಮ ಗುಣಮಟ್ಟದ್ದಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ವಿದ್ಯಾರ್ಥಿಗಳ ಉತ್ತರವನ್ನು ಕೇಳಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ

ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಹನಟಿ ವಿದ್ಯಾ ಬರ್ಬರ ಕೊಲೆ

Posted by Vidyamaana on 2024-05-21 14:28:01 |

Share: | | | | |


ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಹನಟಿ ವಿದ್ಯಾ ಬರ್ಬರ ಕೊಲೆ

ಮೈಸೂರು: ಪತಿಯೇ ಪತ್ನಿಯನ್ನು (Husband and Wife) ಬರ್ಬರವಾಗಿ ಕೊಲೆ (Murder Case) ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಮೈಸೂರು (Mysuru) ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಹತ್ಯೆ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

Posted by Vidyamaana on 2023-07-23 17:17:55 |

Share: | | | | |


ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

ಮಂಜೇಶ್ವರ : ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ  ಯೋಜನೆಯ 57ನೇ ಸೇವಾ ಕಾರ್ಯವು ಉಪ್ಪಳ ಸಮೀಪದ ಪೈವಳಿಕೆ ಲಾಲ್‌‌ಬಾಗ್ ಬೋಳಂಗಳ ನಿವಾಸಿ  ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಜು 23ರಂದು ನಡೆಯಿತು . ಇವರ ಮನೆಯು ಶೋಚನಿಯಾವಸ್ಥೆಯಲ್ಲಿದ್ದು,  ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ.  ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ.. ಮೂರು ಮಂದಿಯ ಚಿಕಿತ್ಸೆಯ ವೆಚ್ಚ, ಮನೆಯ ಖರ್ಚು ವೆಚ್ಚ ಹೀಗೆ ಆರ್ಥಿಕವಾಗಿ ನೊಂದ ಕುಟುಂಬಕ್ಕೆ ಸೇವೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾಯಂಜನಿ ಯುವ ಬಳಗ ಸಂಸ್ಥಾಪಕರಾದ ರಂಜಿತ್ ಕುಮಾರ್, ಅಧ್ಯಕ್ಷರಾದ ಅಜಯ್ ರಾಜ್ ಉಪ್ಪಳ, ಸದಸ್ಯರಾದ ನವೀನ್ ಗುರಿಕಾರ, ನವೀನ್, ಟೀಮ್ ಮಂಜುಶ್ರೀ ತುಳುನಾಡ್ (ರಿ.) ಸಂಸ್ಥೆಯ ಗೌರವಾಧ್ಯಕ್ಷರು ಸದಾಶಿವ ಹೊಸಬೆಟ್ಟು, ಸಂಸ್ಥಾಪಕರು ರಾಜ್ಯ ಘಟಕ ಸಲಹೆಗಾರರು ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸ್ಥಾಪಕ ಅಧ್ಯಕ್ಷರು ಮನೋಜ್ ಕುಲಾಲ್ ಕೊಡಕ್ಕಲ್, ಸಂಸ್ಥಾಪಕರು ರಾಜ್ಯ ಅದ್ಯಕ್ಷರು ವಂಶಿ ಪಂಡಿತ್ ಕಣ್ಣೂರು, ಸಂಸ್ಥಾಪಕರು ರಾಜ್ಯ ಸಮಿತಿ ಪ್ರಚಾರ ಅಧ್ಯಕ್ಷರು ಸಚಿನ್ ಜಿ ಮಣೇಲ್‌ಬೈಲ್, ರಾಜ್ಯ ಸಮಿತಿ ಸದಸ್ಯರಾದ ಶರಣ್ ಜಿ ಮಣೇಲ್‌ಬೈಲ್, ರಮೇಶ್ ಕುಲಾಲ್ ನಾರಾಯಣ ಮಂಗಲ, ಮಹಿಳಾ ಘಟಕದ ಸದಸ್ಯರಾದ ಅಮಿತಾ ಶೆಟ್ಟಿ, ಬಬಿತಾ ಶೆಟ್ಟಿ, ಪೂರ್ಣಿಮ ರಾವ್ ಮುಂತಾದವರು ಉಪಸ್ಥಿತರಿದ್ದರು.

ವೋಟಿಂಗ್ ಮುಗಿಸಿದ ಮತದಾರ ನಿರಾಳ

Posted by Vidyamaana on 2023-05-12 06:22:32 |

Share: | | | | |


ವೋಟಿಂಗ್ ಮುಗಿಸಿದ ಮತದಾರ ನಿರಾಳ

ಬೆಂಗಳೂರು: ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ ಅವರ ಹೃದಯಬಡಿತ ಹೆಚ್ಚಾಗಿದೆ. ಮತ ಎಣಿಕೆ ನಡೆಯುವ ಶನಿವಾರದವರೆಗೂ ಅವರ ತಲೆಯಲ್ಲಿ ಸೋಲು- ಗೆಲುವಿನ ಲೆಕ್ಕಾಚಾರದ ಅಂಶಗಳೇ ಓಡುತ್ತಿರುತ್ತವೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಈಗ ಬೂತ್‌ಮಟ್ಟದಲ್ಲಿ ನಡೆದಿರುವ ಶೇಕಡವಾರು ಮತ ಚಲಾವಣೆಯ ಲೆಕ್ಕವಿಟ್ಟುಕೊಂಡು ತಾಳೆ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇಡೀ ದಿನ ಕ್ಷೇತ್ರದ ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ಮತದಾರರನ್ನೇ ನೋಡಿ ಲೆಕ್ಕ ಹಾಕುವ ಕೆಲಸವೂ ನಡೆದಿದೆ.ತಮ್ಮ ಪಕ್ಷದ ಮತದಾರರೆಂದು ಗುರುತಿಸಿಕೊಂಡಿರುವ ರಾಜಕೀಯ ಪಕ್ಷಗಳಿಗೆ ಶೇ.60 ರಿಂದ 70 ರಷ್ಟು ಲೆಕ್ಕ ಸಿಗುವುದೇ ಇಲ್ಲಿಂದ. ಇನ್ನುಳಿದ ಲೆಕ್ಕವನ್ನು ಚಲಾವಣೆಯಾದ ಮತಗಳ ಆಧಾರದ ಮೇಲೆ ಹಾಕುತ್ತಾರೆ.

ಹೀಗಾಗಿ ಬೂತ್‌ಮಟ್ಟದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಮತದಾರರ ಪಟ್ಟಿ ಹಿಡಿದು ಕುಳಿತಿದ್ದ ಪಕ್ಷದ ಕಾರ್ಯಕರ್ತರು ಕೊಡುವ ಲೆಕ್ಕದ ಮೇಲೆ ಅ ರ್ಥಿಗಳು ಸೋಲು-ಗೆಲುವಿನ ಲೆಕ್ಕ ಹಾಕುತ್ತಾರೆ. ಜತೆಗೆ ತಟಸ್ಥ ಮತದಾರರೆಂದು ಗುರುತಿಸಿಕೊಂಡಿರು ರ ಸ್ಪಂದನೆ ಯಾವ ಪಕ್ಷ, ಯಾವ ಅಭ್ಯರ್ಥಿ ಪರವಾಗಿತ್ತೆಂಬುದನ್ನು ಅವರದೇ ಆದ ಮೂಲಗಳು ಕೊಡುವ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳು ಲೆಕ್ಕಾಚಾರ ಮಾಡುತ್ತಾರೆ. ಈ ರೀತಿ ನಾನಾ ಲೆಕ್ಕಾಚಾರಗಳು ಗುರುವಾರ, ಶುಕ್ರವಾರದವರೆಗೂ ನಡೆಯುತ್ತಲೇ ಇರುತ್ತವೆ.ಭರ್ಜರಿ ಬೆಟ್ಟಿಂಗ್‌ ಶುರು

ಒಂದೆಡೆ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಗೆಲ್ಲುವ ಪಕ್ಷ ಯಾವುದು? ಸಿಎಂ ಯಾರಾಗುತ್ತಾರೆ? ಹಾಗೂ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದರ ಮೇಲೆ ಬೆಟ್ಟಿಂಗ್‌ ಕಟ್ಟುವುದು ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಈ ಮೂರು ಪಕ್ಷಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಮೇಲೂ ಬೆಟ್ಟಿಂಗ್‌ ನಡೆದಿದೆ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಬಹುದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಎಚ್‌.ಡಿ.ಕುಮಾರಸ್ವಾಮಿ ಈ ಮೂವರಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದರ ಮೇಲೆ ಭರ್ಜರಿ ಬೆಟ್ಟಿಂಗ್‌ ನಡೆದಿದೆ.ಚಿನ್ನಾಭರಣ, ಬೈಕ್‌, ಕಾರು, ಟ್ರ್ಯಾಕ್ಟರ್‌, ಹೊಲ, ಗದ್ದೆ, ಕುರಿ, ಕೋಳಿ ಜತೆಗೆ ಇಂತಿಷ್ಟು ಹಣವೆಂದು ಬೆಟ್ಟಿಂಗ್‌ ಮಾಡಲಾಗುತ್ತಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಅತಂತ್ರ ಫ‌ಲಿತಾಂಶವೆಂದು ಹೇಳುತ್ತಿದ್ದರೂ ಕಾಂಗ್ರೆಸ್‌ ಪಕ್ಷ ಅತ್ಯಧಿಕ ಸ್ಥಾನಗಳಿಸಿ ಅಧಿಕಾರಕ್ಕೆ ಬರುತ್ತದೆ ಎಂಬುದು ಕಾಂಗ್ರೆಸ್‌ ಪರ ಬೆಟ್ಟಿಂಗ್‌ ಕಟ್ಟುತ್ತಿರುವವರ ವಾದ.


ಮರೀಲ್ : ಆಟೋ ರಿಕ್ಷಾ ಚಾಲಕ ಮನೋಜ್ ರವರ ಪತ್ನಿ ಸಂಧ್ಯಾ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-05-28 18:03:28 |

Share: | | | | |


ಮರೀಲ್ : ಆಟೋ ರಿಕ್ಷಾ ಚಾಲಕ ಮನೋಜ್ ರವರ ಪತ್ನಿ ಸಂಧ್ಯಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ. 

ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ (45 ವ.) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.



Leave a Comment: