ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


BREAKING : ಭಾರತ ಸೇರಿ ವಿಶ್ವದಾದ್ಯಂತ ಪೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2024-03-20 22:29:59 |

Share: | | | | |


BREAKING : ಭಾರತ ಸೇರಿ ವಿಶ್ವದಾದ್ಯಂತ ಪೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ : ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಬುಧವಾರ ಇದ್ದಕ್ಕಿದ್ದಂತೆ ವಿಶ್ವದಾದ್ಯಂತ ಅನೇಕ ಜನರಿಗೆ ಕೆಲಸ ಮಾಡುವುದನ್ನ ನಿಲ್ಲಿಸಿದೆ. ಬಳಕೆದಾರರು ಲಾಗ್ ಇನ್ ಮಾಡಲು ಅಥವಾ ತಮ್ಮ ಇನ್ಸ್ಟಾಗ್ರಾಮ್ ಫೀಡ್ಗಳನ್ನ ತಾಜಾ ಮಾಡಲು ಸಾಧ್ಯವಾಗುತ್ತಿಲ್ಲ.ಕೆಲವರನ್ನ ತಮ್ಮ ಪಾಸ್ ವರ್ಡ್ಗಳನ್ನ ಬದಲಾಯಿಸಲು ಸಹ ಕೇಳಲಾಯಿತು. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳು ಮತ್ತು ಇತರ ಹಲವಾರು ಪ್ಲಾಟ್ಫಾರ್ಮ್ಗಳು ಭಾರಿ ಸ್ಥಗಿತಗೊಂಡ ಕೆಲವೇ ವಾರಗಳ ನಂತರ ಇದು ಬಂದಿದೆ.


ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ ಎರಡೂ ಮೆಟಾ ಅಪ್ಲಿಕೇಶನ್ಗಳಲ್ಲಿ ಕ್ರ್ಯಾಶ್ಗಳು ಮತ್ತು ಲಾಗಿನ್ ಸಮಸ್ಯೆಗಳನ್ನು ಅನುಭವಿಸುವ ಬಗ್ಗೆ ತಮ್ಮ ಹತಾಶೆಯನ್ನ ವ್ಯಕ್ತಪಡಿಸಲು ಭಾರತ ಮತ್ತು ಪ್ರಪಂಚದಾದ್ಯಂತದ ಜನರು ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಕಡೆಗೆ ತಿರುಗಿದರು. ಹೆಚ್ಚುವರಿಯಾಗಿ, ಮೆಸೆಂಜರ್ ಅಪ್ಲಿಕೇಶನ್ ಬಳಸುವಾಗ ಕೆಲವು ಬಳಕೆದಾರರು ತೊಂದರೆಗಳನ್ನು ಎದುರಿಸಿದ್ದಾರೆ.ಬಳಕೆದಾರರೊಬ್ಬರು ಎಕ್ಸ್ನಲ್ಲಿ "ಇದು ನಾನು ಮಾತ್ರವೇ ಅಥವಾ ಎಲ್ಲರೂ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ 🤔 #facebookdown #instagramdown ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ.

BREAKING : ದೇಶಾದ್ಯಂತ ಫೇಸ್ ಬುಕ್ ಸರ್ವರ್ ಡೌನ್ ಬಳಕೆದಾರರ ಪರದಾಟ

Posted by Vidyamaana on 2023-10-18 22:39:00 |

Share: | | | | |


BREAKING : ದೇಶಾದ್ಯಂತ ಫೇಸ್ ಬುಕ್  ಸರ್ವರ್ ಡೌನ್ ಬಳಕೆದಾರರ ಪರದಾಟ

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಹೌದು, ಫೇಸ್ಬುಕ್ನ ಸರ್ವರ್ ಬುಧವಾರ ಸ್ಥಗಿತವನ್ನ ಅನುಭವಿಸಿದ್ದು, ಹಲವಾರು ಬಳಕೆದಾರರು ಹೊಸ ಪೋಸ್ಟ್ ಅಪ್ಲೋಡ್ ಮಾಡುವಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.ಇನ್ನು ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್, ಅಪ್ಲಿಕೇಶನ್ ಮತ್ತು ವೆಬ್ಸೈಟ್ ಎರಡಕ್ಕೂ ಸರ್ವರ್ ಸಂಪರ್ಕ ಸಮಸ್ಯೆಗಳಿಗೆ ಸಂಬಂಧಿಸಿದ ವರದಿಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯನ್ನ ತೋರಿಸಿದೆ.

KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ ಬಸ್ ಸಮೇತ ಠಾಣೆಗೊಯ್ದ ಚಾಲಕ

Posted by Vidyamaana on 2023-10-15 15:15:48 |

Share: | | | | |


KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ ಬಸ್ ಸಮೇತ ಠಾಣೆಗೊಯ್ದ ಚಾಲಕ

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ.ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.ಇವರಿಬ್ಬರ ನಡುವೆ ಕೆಲ ಹೊತ್ತು ವಾಗ್ವಾದ ನಡೆದ ಬಳಿಕ ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.


ಕಡೆಗೂ ಪ್ರಯಾಣಿಕ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ಸನ್ನೇ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿದ್ದಾನೆ.


ಎಸ್.ಐ.ಬುದ್ದಿಮಾತು :

ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.


ಬಡವರ ಗೋಳು ಕೇಳುವವರು ಯಾರು?


ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ, ಮೀನು ಕೊಂಡುಹೋಗಲು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಈತ ಮಾಡಿದ್ದಾನೆ.


ಒಂದು ಕೆ.ಜಿ.ಕೋಳಿಗೋಸ್ಕರ ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.


ಬಡವರು ಕೋಳಿ ಮಾಂಸ ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.


ಕೋಳಿ,ಮೀನು ತರುವಂತಿಲ್ಲ:

ಬಸ್ ನಲ್ಲಿ ಕೋಳಿ, ಮೀನು ಮಾಂಸ ತರುವಂತಿಲ್ಲ, ಜೀವ ಇರುವ ವಸ್ತುಗಳನ್ನು ತರಬಹುದು, ಮಾಂಸವಾದರೆ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

Posted by Vidyamaana on 2023-09-13 16:21:22 |

Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು

ವಿಷ ಸೇವನೆ ಮಾಡಿ ಗಂಭೀರವಾಗಿ ಅಸ್ವಸ್ಥಗೊಂಡು ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-09-04 07:15:05 |

Share: | | | | |


ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.


ಇದೀಗ ಆ ಮಹಿಳೆಯು ಕನ್ನಡದ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದಿದ್ದಾರೆ.


ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ ವಾಹಿನಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Posted by Vidyamaana on 2024-02-23 18:47:27 |

Share: | | | | |


ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಪುರುಷರಕಟ್ಟೆ ಟೈ ಬ್ರೇಕರ್ಸ್ ನೇತೃತ್ವದಲ್ಲಿ 25ನೇ ವರ್ಷದ ಹೊನಲು ಬೆಳಕಿನ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನರಿಮೊಗರು ಶಾಲಾ ಮೈದಾನದಲ್ಲಿ ಫೆ. 24, 25ರಂದು ನಡೆಯಲಿದೆ.

ಪ್ರಕಾಶ್ ಪುರುಷರಕಟ್ಟೆ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾಟ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಫೆ. 24ರಂದು ಬೆಳಿಗ್ಗೆ ಪಂದ್ಯ ಉದ್ಘಾಟನೆಗೊಳ್ಳಲಿದೆ.

8 ತಂಡಗಳ ಕ್ರಿಕೆಟ್ ಪಂದ್ಯ ಇದಾಗಿದ್ದು, ಪ್ರಥಮ 50025 ರೂ. ಹಾಗೂ ದ್ವಿತೀಯ 25025 ರೂ. ನಗದು ಬಹುಮಾನ ನೀಡಲಾಗುವುದು. ವಿಜೇತ ತಂಡದ ಮಾಲಕರಿಗೆ ಫ್ರಿಡ್ಹ್ ಬಹುಮಾನವಾಗಿ ಲಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.



Leave a Comment: