Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2024-05-23 04:56:11 |
ಮಂಗಳೂರು, ಮೇ.22: ದಿನವಿಡೀ ಪ್ರತಿಭಟನೆ, ಹೈಡ್ರಾಮಾ ನಾಟಕದ ಬಳಿಕ ರಾತ್ರಿ ವೇಳೆಗೆ ಶಾಸಕ ಹರೀಶ್ ಪೂಂಜ ವಕೀಲರು ಮತ್ತು ಪಕ್ಷದ ನಾಯಕರ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ರಾತ್ರಿ 9.30ಕ್ಕೆ ಜಿಲ್ಲೆಯ ಇತರ ಬಿಜೆಪಿ ಶಾಸಕರು, ವಕೀಲರು ಮತ್ತು ಇತರ ನಾಯಕರ ಜೊತೆಗೆ ಪೂಂಜ ಠಾಣೆಗೆ ಹಾಜರಾಗಿದ್ದು, ವಿಚಾರಣೆ ಎದುರಿಸಿದ್ದಾರೆ.
ಸಂಜೆ ವೇಳೆಗೆ ತಾನೇ ಖುದ್ದಾಗಿ ಶಾಸಕರನ್ನು ಪೊಲೀಸ್ ಠಾಣೆಗೆ ಕರೆತರುವುದಾಗಿ ಸಂಸದ ನಳಿನ್ ಕುಮಾರ್ ಹೇಳಿದ್ದರಿಂದ ಪೊಲೀಸರು ಠಾಣೆಗೆ ಹಿಂತಿರುಗಿದ್ದರು. ಅದರಂತೆ, ಸಂಸದರ ಸೂಚನೆಯಂತೆ ಬಿಜೆಪಿ ನಾಯಕರ ಜೊತೆಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಠಾಣೆಗೆ ಬಂದಿದ್ದು ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ.
Posted by Vidyamaana on 2024-05-19 07:56:34 |
ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವಿನ ನಾಕೌಟ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಪಡೆಯೂ 27 ರನ್ಗಳ ಭರ್ಜರಿ ಜಯ ಸಾಧಿಸಿದ್ದು, ಪ್ಲೇಆಫ್ ಪ್ರವೇಶಿಸಿದೆ. ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಮತ್ತೊಮ್ಮೆ ಕಳಪೆ ಅಂಪೈರಿಂಗ್ ಕಂಡು ಬಂದಿದ್ದು, ಈ ಬಗ್ಗೆ ಕ್ರೀಡಾಭಿಮಾನಿಗಳು ಕಿಡಿಕಾರುತ್ತಿದ್ದಾರೆ.ಅಂಪೈರ್ನ ವಿವಾದಾತ್ಮಕ ತೀರ್ಪಿನ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ಈ ವಿಚಾರವನ್ನು ಮುಂದಿಟ್ಟುಕೊಂಡು ಟ್ರೋಲ್ ಮಾಡಲಾಗುತ್ತಿದೆ.ಆರ್ಸಿಬಿ ಬ್ಯಾಟಿಂಗ್ ವೇಳೆ ಮಿಚೆಲ್ ಸ್ಯಾಂಟ್ನರ್ ಎಸೆದ 13ನೇ ಓವರ್ನಲ್ಲಿ ರಜತ್ ಪಾಟೀದಾರ್ ಬಾರಿಸಿದ ಚೆಂಡು ಬೌಲರ್ ಕೈತಾಗಿ ನಾನ್ಸ್ಟ್ರೈಕ್ ಎಂಡ್ನಲ್ಲಿದ್ದ ಸ್ಟಂಪ್ಸ್ ತಾಗುತ್ತದೆ. ಈ ವೇಳೆ ಕ್ರೀಸ್ ಬಿಟ್ಟು ಒಂದು ಹೆಜ್ಜೆ ಮುಂದಿದ್ದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಕೂಡಲೇ ಹಿಂತಿರುಗಿ ತಮ್ಮ ಬ್ಯಾಟನ್ನು ಕ್ರೀಸ್ನೊಳಗೆ ಇರಿಸುತ್ತಾರೆ. ಇದನ್ನು ಪರಿಶೀಲಿಸುವಂತೆ ಆನ್ಫೀಲ್ಡ್ ಅಂಪೈರ್ ಥರ್ಡ್ ಅಂಪೈರ್ಗೆ ಮನವಿ ಮಾಡುತ್ತಾರೆ. ಇದನ್ನು ಪರಿಶೀಲಿಸಿದ ಥರ್ಡ್ ಅಂಪೈರ್ ಮೈಕೆಲ್ ಗೋಫ್ ಔಟ್ ಎಂದು ತೀರ್ಪು ನೀಡುತ್ತಾರೆ. ಮೂರನೇ ಅಂಪೈರ್ನ ಈ ತೀರ್ಪಿಗೆ ಆರ್ಸಿಬಿ ನಾಯಕ ಫಾಫ್ ಸೇರಿದಂತೆ ಸಹ ಆಟಗಾರರು ಅಸಮಾಧಾನ ಹೊರಹಾಕುತ್ತಾರೆ.
Posted by Vidyamaana on 2024-06-10 19:59:05 |
ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
Posted by Vidyamaana on 2024-03-18 10:13:07 |
ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್ ಕುಮಾರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ... ಸುಮಾರು 1474.29 ಕೋಟಿ ರೂಪಾಯಿಗಳ ದಾಖಲೆಯ ಅನುದಾನವನ್ನು ಪುತ್ತೂರು ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿದ್ದಾರೆ.... ಈ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ರೀತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪುತ್ತೂರಿನ ತಾರೀತ್ತಡಿ ನಿವಾಸಿ ಜಯಾನಂದ ಬಂಗೇರ ವ್ಯಂಗ್ಯರೀತಿಯಲ್ಲಿ ಬರಹಗಳನ್ನು ಬರೆದು ಅನುದಾನ ಬಿಡುಗಡೆ ಆಗಿಲ್ಲ....ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದ.ಇದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ್ದರು.
ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
non
-wrap" class="left relative" style="margin: 0px; pnon
ding: 0px; border: 0px; vertical-align: baseline; position: relative; float: left; width: 360px;">
Posted by Vidyamaana on 2024-03-31 14:47:26 |
ಪುತ್ತೂರು :ಹಲವಾರು ನೂತನ ಧಾರ್ಮಿಕ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ ಬಪ್ಪಳಿಗೆ ಇದೀಗ ಪಳ್ಳಿ ದರ್ಸ್ ಎಂಬ ಶಿಕ್ಷಣ ಸಂಸ್ಥೆಯನ್ನು ಸ್ಥಾಪನೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಮರ್ಹೂಂ ಪುತ್ತೂರು ಸೈಯ್ಯದ್ ಕೆ ಪಿ ಮುಹಮ್ಮದ್ ಹಾದೀ ತಙಳ್ ಸ್ಮರಣಾರ್ಥ ಪ್ರಪ್ರಥಮ ಧಾರ್ಮಿಕ ಶಿಕ್ಷಣ ಸಂಸ್ಥೆಯಾಗಿದೆ.