Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2023-06-26 10:43:10 |
ಪುತ್ತೂರು: ಎರಡು ವರ್ಷದ ಹಿಂದೆ ತನ್ನ ಹುಟ್ಟುಹಬ್ಬದಂದು ನೆಟ್ಟ ಗಿಡದ ಅಡಿಯಲ್ಲೇ ಈ ಬಾರಿ ಮತ್ತೆ ಹುಟ್ಟು ಹಬ್ಬ ಆಚರಿಸುವ ಮೂಲಕ ಪುತ್ತೂರು ಅಂಬಿಕಾ ವಿದ್ಯಾಲಯದ ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರದ್ವಿನ್ ಎಲ್ಲರಿಗೂ ಮಾದರಿಯಾಗಿದ್ದಾನೆ.
ತನ್ನ ಹುಟ್ಟುಹಬ್ಬದಂದು ಪ್ರತೀ ವರ್ಷವೂ ಒಂದು ಗಿಡ ತನ್ನ ಮನೆಯ ಬಳಿ ನೆಡುವ ಮೂಲಕ ಬರ್ತ್ಡೇ ಆಚರಣೆ ಮಾಡುತ್ತಿದ್ದಾನೆ. ತನ್ನ ಏಳನೇ ವರ್ಷದ ಹುಟ್ಟುಹಬ್ಬದಂದು ಮನೆಯ ಅಂಗಳದಲ್ಲಿ ನೆಟ್ಟಿದ್ದ ಕದಂಬ ಗಿಡದ ಬುಡದಲ್ಲೇ ಈ ಬರಿ ತನ್ನ ೯ ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದು ಪರಿಸರ ಪ್ರೇಮಿಗಳಿಗೆ ಈ ಮೂಲಕ ತನ್ನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾನೆ.
ತಾನು ನೆಟ್ಟ ಗಿಡವನ್ನೇ ಹಬ್ಬಕ್ಕಾಗಿ ಬಲೂನ್ ಕಟ್ಟಿ ಶೃಂಗಾರ ಮಾಡಿ ಅದರ ಅಡಿಯಲ್ಲೇ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿ ಈ ಬಾರಿಯ ಹುಟ್ಟುಹಬ್ಬದಂದು ಇನ್ನೊಂದು ಗಿಡವನ್ನು ನೆಟ್ಟಿದ್ದಾನೆ. ಪ್ರದ್ವಿನ್ ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿ ಜಯಪ್ರಕಾಶ್ ಮತ್ತು ವಿನುತಾ ದಂಪತಿಗಳ ಪುತ್ರ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಯಪ್ರಕಾಶ್ ಬದಿನಾರ್ ಪರಿಸರದ ಬಗ್ಗೆ ಮಕ್ಕಳಿಗೆ ಎಳೆಯ ಪ್ರಾಯದಲ್ಲೇ ಪ್ರೀತಿ ಹುಟ್ಟುವಂತೆ ಮಾಡುವ ಏಕೈಕ ಉದ್ದೇಶದಿಂದ ತನ್ನ ಎರಡೂ ಮಕ್ಕಳ ಹುಟ್ಟು ಹಬ್ಬದಂದು ಪ್ರತೀ ವರ್ಷವೂ ಗಿಡ ನೆಡುವ ಮೂಲಕವೇ ಆಚರಣೆ ಮಾಡುತ್ತೇವೆ. ಇದು ಇನ್ನೊಬ್ಬರಿಗೆ ಪ್ರೇರಣೆಯಗಿ ಯಾರಾದರೂ ಒಂದು ಗಿಡ ನೆಟ್ಟರೂ ನಮಗೆ ಅದುವೇ ದೊಡ್ಡ ಸಂತೋಷ ಎಂದು ಹೇಳುತ್ತಾರೆ.
Posted by Vidyamaana on 2023-06-21 11:16:20 |
ಪುತ್ತೂರು: ‘ನಾನು ಬುತ್ತಿ ತಂದಿದ್ದೇನೆ ನಿಮಗೆ ಊಟ ರೆಡಿಯಾಗಿದೆ.. ಮೀನಿನ ಪರಿಮಳ ಮೂಗಿಗೆ ಹೊಡಿಯುತ್ತಿದೆ’ ಎಂದು ಹೇಳಿ ತನ್ನ ಮನೆಯಿಂದ ತಂದಿದ್ದ ಬುತ್ತಿ ಊಟವನ್ನು ಮಾಡುವ ಮೂಲಕ ಪುತ್ತೂರು ಶಾಸಕರಾದ ಅಶೋಕ್ ರೈ ಸಿಂಪ್ಲಿಸಿಟಿ ಮೆರೆದಿದ್ದಾರೆ. ಶಾಸಕರ ಈ ಸಿಂಪ್ಲಿಸಿಟಿಗೆ ಅಲ್ಲಿದ್ದ ಅಧಿಕಾರಿ ವರ್ಗದವರು ಬೆರಗಾಗಿದ್ದಾರೆ.
ಜೂ.20ರ ಮಂಗಳವಾರ ಪುತ್ತೂರಿನ ಪ್ರವಾಸಿ ಬಂಗ್ಲೆಯಲ್ಲಿ ಕೆಎಂಎಫ್ ಅಧಿಕಾರಿಗಳ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಸಹಿತ ಕೆಎಂಎಫ್ ಅಧಿಕಾರಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆ ಮುಗಿದ ಕೂಡಲೇ ಶಾಸಕರು `ಊಟ ರೆಡಿ ಉಂಟ.. ಯಾರೂ ಊಟ ಮಾಡದೆ ಹೋಗಬೇಡಿ, ವೆಜ್ ಮತ್ತು ನಾನ್ ವೆಜ್ ಎರಡೂ ವ್ಯವಸ್ಥೆ ಮಾಡಿದ್ದೇನೆ. ನಾನು ಬುತ್ತಿ ತಂದಿದ್ದು ಅದನ್ನು ಊಟ ಮಾಡುತ್ತೇನೆ..’ ಎಂದು ಹೇಳಿ ಮನೆಯಿಂದ ತಂದಿದ್ದ ಬುತ್ತಿಯನ್ನು ತೆರೆದು ಊಟ ಮಾಡಲು ಆರಂಭಿಸಿದರು.
ಶಾಸಕರ ಬುತ್ತಿಯಲ್ಲಿ ಚಪಾತಿ, ತೊಂಡೆ ಕಾಯಿ ಪಲ್ಯ ಮತ್ತು ಮಾಂಜಿ ಮೀನು ತವಾ ಫ್ರೈ ಇತ್ತು. ಮಾಂಜಿ ತವಾ ಫ್ರೈಯನ್ನು ತನ್ನ ಸುತ್ತ ಕುಳಿತಿದ್ದವವರಿಗೆ ಹಂಚಿ ತಾನೂ ತಿಂದರು. ಶಾಸಕರು ಬುತ್ತಿಯಲ್ಲಿ ಊಟ ಮಾಡುತ್ತಿರುವಾಗ ಸುತ್ತ ಮುತ್ತ ಕುಳಿತವರು ಶಾಸಕರ ಮುಖವನ್ನೇ ನೋಡುತ್ತಿದ್ದ ದೃಶ್ಯ ವಿಶೇಷವಾಗಿತ್ತು.
Posted by Vidyamaana on 2023-12-01 15:59:59 |
ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.
ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
Posted by Vidyamaana on 2023-06-25 12:49:12 |
ಬೆಂಗಳೂರು :ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ತಾನು ಸೋತಿದ್ದುಏಕೆ ಎಂದು ಪದೇ ಪದೇ ಹೇಳುವ ಮೂಲಕ ತಾನೇ ಆ ಹುದ್ದೆಗೆ ಅರ್ಹ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.
“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.
ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ನಂತರ ಉಲ್ಟಾ ಹೊಡೆದಿದ್ದರು. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ದರಿಲ್ಲ. ಹಾಗಾಗಿ ದಿನೇ ದಿನೇ ಗೊಂದಲ ಹೆಚ್ಚಾಗಿದೆ.
ಇತ್ತೀಚೆಗೆ ವಿ.ಸೋಮಣ್ಣ ಬಹಿರಂಗವಾಗಿ ನಾನು ಆಕಾಂಕ್ಷಿ ಎಂದು ಘೋಷಿಸಿದ್ದರು. ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದರು.
”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.
”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.
Posted by Vidyamaana on 2023-07-31 16:47:45 |
ಮಂಗಳೂರು : ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಆ.1ರ ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿ ಹಾಗೂ ಸ್ಪಷ್ಟ ಅಂಕಿ ಅಂಶಗಳನ್ನು ನೀಡಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸೂಚಿಸಿದರು.
ಅವರು ಜು.31ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ಇಲಾಖೆಗಳ ಮುಖ್ಯಸ್ಥರೇ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು, ಯಾವುದೇ ಕಾರಣಕ್ಕೂ ಗೊಂದಲಕ್ಕೆ ಆಸ್ಪದ ನೀಡುವ ಮಾಹಿತಿಯನ್ನು ಸಭೆಗೆ ನೀಡಬಾರದು, ನೂತನ ಸರ್ಕಾರದ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನ ಭಾಗ್ಯದ ಅನುಷ್ಠಾನಗಳ ಬಗ್ಗೆ ಸಂಬಂಧಿಸಿ ಇಲಾಖೆಗಳ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಬಂದರು ಇಲಾಖೆಗಳ ಸಮಗ್ರ ಮಾಹಿತಿ ಕಡಲ್ಕೊರೆತದ ಸಮಸ್ಯೆಗಳು, ಪ್ರಾಕೃತಿಕ ವಿಕೋಪ ಹಾಗೂ ನೀಡಲಾದ ಪರಿಹಾರ, ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಂಬಂಧಿಸಿದವರು ಸೂಕ್ತ ಮಾಹಿತಿ ನೀಡುವಂತೆ ಅವರು ತಿಳಿಸಿದರು.
ಅಲ್ಲದೇ ಮುಖ್ಯಮಂತ್ರಿಯವರು ಜಿಲ್ಲೆಯ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆಗಳು ಇರಬಹುದು, ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪೆÇಲೀಸ್ ಸಿಬ್ಬಂದಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Posted by Vidyamaana on 2023-06-20 03:56:16 |
ಬೆಂಗಳೂರು: ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಲಿದ್ದಾರೆ.ಜೂನ್.30ರಂದು ನಡೆಯಲಿರುವ ವಿಧಾನಪರಿಷತ್ತಿನ ಮೂರು ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಅದರಂತೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್ ಎಸ್ ಬೋಸೆರಾಜು ಅವರು ಸ್ಪರ್ಧಿಸಲಿದ್ದಾರೆ.
ಇಂದು ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.