ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

Posted by Vidyamaana on 2023-11-24 11:50:09 |

Share: | | | | |


ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

ಪುತ್ತೂರು : ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ, ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕರಾಗಿರುವ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಡಿಸೆಂಬರ್ 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜು(ಸ್ವಾಯತ್ತ) ನಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆಯು ನಡೆಯಲಿದೆ.

ಕೆ.ಎ.ಎಸ್,  ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪಿಯುಸಿ / ಪದವಿ ಓದುತ್ತಿರುವ / ಓದು ಮುಗಿಸಿರುವ 40 ವರ್ಷದ ವರೆಗಿನ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲು ನೋಂದಣಿ ಮಾಡಿದ 1000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಋಣಾತ್ಮಕ ಅಂಕಗಳನ್ನು ಪರಿಗಣಿಸಲಾಗುತ್ತದೆ.100 ಅಂಕಗಳ ಪ್ರಶ್ನೆ ಪತ್ರಿಕೆ ಇದಾಗಿದ್ದು, ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಕಾಲಾವಕಾಶ 90 ನಿಮಿಷ (ಬೆಳಿಗ್ಗೆ 11:00 ರಿಂದ 12:30). 

ಭಾಗವಹಿಸುವ ಅಭ್ಯರ್ಥಿಗಳು ಬೆಳಿಗ್ಗೆ 10:00 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರತಕ್ಕದ್ದು. ನಂತರ ಬಂದವರಿಗೆ ಅವಕಾಶವಿಲ್ಲ. ಪರೀಕ್ಷಾ ಪತ್ರಿಕೆ ಕನ್ನಡ ಮಾಧ್ಯಮದಲ್ಲಿ ಇರುತ್ತದೆ. ಆಯೋಜಕರ ತೀರ್ಮಾನವೇ ಅಂತಿಮವಾಗಿರುತ್ತದೆ. ನೋಂದಣಿಗಾಗಿ ವಿದ್ಯಾಮಾತಾದ ಪುತ್ತೂರು / ಸುಳ್ಯ ಕಛೇರಿಗೆ 26 ನವೆಂಬರ್ 2023ರ ಒಳಗಾಗಿ ಭೇಟಿ ನೀಡಬಹುದು. ಇಲ್ಲವೇ ಇಲ್ಲಿ ನೀಡಿರುವ QR ಕೋಡ್ ಬಳಸಿ ನೋಂದಾಯಿಸಿಕೊಳ್ಳಬಹುದು.



 ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ  ಅಕಾಡೆಮಿ,ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ

ಫೋನ್ ನಂ. :  9148935808 / 9620468869

ಸುಳ್ಯ ಶಾಖೆ :

ವಿದ್ಯಾಮಾತಾ ಅಕಾಡೆಮಿ

 ಟಿ.ಎ.ಪಿ.ಸಿ.ಎಂ.ಎಸ್  ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239

PH: 9448527606 ನ್ನು ಸಂಪರ್ಕಿಸಬಹುದು.

ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

Posted by Vidyamaana on 2024-01-17 09:31:21 |

Share: | | | | |


ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

ಹೊಸದಿಲ್ಲಿ: ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯವಾಗಲಿವೆ ಎಂದು ಈಗಾಗಲೇ ಎನ್‌ಎಚ್‌ಎಐ ಎಚ್ಚರಿಸಿದೆ. ಫಾಸ್ಟಾಗ್‌ಗೆ ಕೆವೈಸಿ ಪೂರ್ಣಗೊಂಡಿದೆಯೇ, ಇಲ್ಲವೇ ಎಂಬ ಸ್ಥಿತಿಗತಿ ತಿಳಿಯುವುದು ಹೇಗೆ ಹಾಗೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಪರಿಶೀಲನೆ ಹೇಗೆ?

ಬಳಕೆದಾರರು https://fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಲಾಗಿನ್‌ ಆಗಲು ನೋಂದಾಯಿತ ಮೊಬೈಲ್‌ ಸಂಖ್ಯೆ, ಪಾಸ್‌ವರ್ಡ್‌ ಮತ್ತು ಬಳಿಕ ಮೊಬೈಲ್‌ಗೆ ಬರುವ ಒಟಿಪಿ ಬೇಕಾಗಲಿದೆ.

ಒಮ್ಮೆ ಲಾಗಿನ್‌ ಆದ ಅನಂತರ, ಡ್ಯಾಶ್‌ಬೋರ್ಡ್‌ಗೆ ತೆರಳಿ, “ಮೈ ಪ್ರೊಫೈಲ್‌’ ವಿಭಾಗದ ಮೇಲೆ ಕ್ಲಿಕ್‌ ಮಾಡಬೇಕು.

ಇಲ್ಲಿ ನಿಮ್ಮ ಕೈವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಸ್ಥಿತಿಗತಿ ಹಾಗೂ ನೀವು ಸಲ್ಲಿಸಿರುವ ಪ್ರೊಫೈಲ್‌ ವಿವರ ಸಿಗಲಿದೆ.

ಪೂರ್ಣಗೊಳ್ಳದಿದ್ದರೆ ಏನು ಮಾಡಬೇಕು?

ಪ್ರೊಫೈಲ್‌ ವಿಭಾಗದಲ್ಲಿ, ಕೆವೈಸಿ ಎಂಬ ಉಪ ವಿಭಾಗವಿದೆ. ಅಲ್ಲಿ ಕ್ಲಿಕ್‌ ಮಾಡಿ ನೀವು ನಿಮ್ಮ ಕೆವೈಸಿ ಅಪ್‌ಡೇಟ್‌ ಮಾಡಬಹುದು.

ಬಳಕೆದಾರರು ಗುರುತು, ವಿಳಾಸದ ದಾಖಲೆಗಳನ್ನು ಸಲ್ಲಿಸಬೇಕು. ಪಾಸ್‌ಪೋರ್ಟ್‌ ಗಾತ್ರದ ಫೋಟೋ ಕೂಡ ಅಗತ್ಯ.

ಒಮ್ಮೆ ಪರಿಶೀಲಿಸಿ, ಅನಂತರ ದೃಢೀಕರಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ, “ಪ್ರೊಸೀಡ್‌’ ಕ್ಲಿಕ್‌ ಮಾಡಿ ದರೆ ಕೈವೈಸಿ ಪೂರ್ಣಗೊಳ್ಳಲಿದೆ.

ಇತ್ತೆದ ಜವನೆರ್ ಮಲ್ಪುನ ಬೇಲೆಗ್ ಪೀಂಕಾನ್ ಬಾಯಿ ಇಜ್ಜಿ ಮಾರ್ರೆ

Posted by Vidyamaana on 2024-03-30 08:28:35 |

Share: | | | | |


ಇತ್ತೆದ ಜವನೆರ್ ಮಲ್ಪುನ ಬೇಲೆಗ್ ಪೀಂಕಾನ್ ಬಾಯಿ ಇಜ್ಜಿ ಮಾರ್ರೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳನ್ನು ನೋಡಿ ಹೆಚ್ಚು ಪ್ರಭಾವಿತರಾಗುತ್ತಿದ್ದು, ವೈರಲ್​ ಆಗುವ ಭರದಲ್ಲಿ ಹುಚ್ಚಾಟವಾಡಿ ತಮ್ಮ ಮೈಮೇಲೆ ಗಂಡಾಂತರವನ್ನು ಎಳೆದುಕೊಳ್ಳುತ್ತಿದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ.ಮಾರ್ಚ್​ 25ರಂದು ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಗೇಶ್​ (24) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮುರಳಿ (25) ಯನ್ನು ವಶಕ್ಕೆ ಪಡೆದಿದ್ದಾರೆ. ಏರ್​​ಪ್ರೆಷರ್‌ ಪೈಪ್‌ನಿಂದ ಗುದನಾಳಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.



ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

Posted by Vidyamaana on 2024-07-03 20:52:26 |

Share: | | | | |


ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ - ವೈರಲ್ ಆಯ್ತು ಅಪರೂಪದ ವಿಡಿಯೋ..!

Posted by Vidyamaana on 2023-09-28 11:51:31 |

Share: | | | | |


ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ - ವೈರಲ್ ಆಯ್ತು ಅಪರೂಪದ ವಿಡಿಯೋ..!

ನವದೆಹಲಿ :  ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ ಮಂತ್ರಿಗೆ ಚಹಾ ತಂದು ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ.ಮೋದಿ ಅವರು ಟ್ವಿಟರ್ (ಎಕ್ಸ್‌) ನಲ್ಲಿ ಆಸಕ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದು, ಇದರಲ್ಲಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರದರ್ಶನದಲ್ಲಿ ವಿವಿಧ ರೋಬೋಟ್ ಸ್ಟಾಲ್‌ಗಳಲ್ಲಿ ಹಲವಾರು ರೋಬೋಟಿಕ್ ಕ್ರಿಯೆಗಳನ್ನು ವೀಕ್ಷಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ಮತ್ತು ಸಿಎಂಗೆ ರೋಬೋಟ್ ಚಹಾವನ್ನು ನೀಡಿದೆ‌.ನೈಸರ್ಗಿಕ ವಿಕೋಪಗಳು ಅಥವಾ ಅಗ್ನಿ ಅವಘಡಗಳ ಸಂದರ್ಭದಲ್ಲಿ ಮಾನವರಿಗೆ ರೋಬೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಪ್ರಧಾನಿ ಮೋದಿ ಅವರು ನೋಡಿದ್ದಾರೆಂದು ಈ ಕ್ಲಿಪ್ ತೋರಿಸಿದೆ.ರೋಬೋಟ್ ಇಂಜಿನಿಯರ್‌ಗಳು ಪಿಎಂ ಮೋದಿಯವರಿಗೆ ರೋಬೋಟ್‌ಗಳು ಹೇಗೆ ಜೀವನದ ವಿವಿಧ ಹಂತಗಳಲ್ಲಿ ಶಕ್ತರಾಗಿ ದೊಡ್ಡ ಪಾತ್ರವನ್ನು ವಹಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ.

ವೈರಲ್ ಆಯ್ತು ಅಪರೂಪದ ವಿಡಿಯೋ..!


ರೊಬೊಟಿಕ್ಸ್‌ ನೊಂದಿಗೆ ಭವಿಷ್ಯದ ಅಂತ್ಯವಿಲ್ಲದ ಸಾಧ್ಯತೆಗಳನ್ನು ಅನ್ವೇಷಿಸುವುದು! ಎಂದು ಟ್ವಿಟರ್ (ಎಕ್ಸ್) ಪೋಸ್ಟ್‌ ನಲ್ಲಿ ಪಿಎಂ ಮೋದಿ ಬರೆದುಕೊಂಡಿದ್ದಾರೆ.

ರಾಜ್ಯದಲ್ಲಿ ಬರವಿದ್ಧಾಗಲೂ ಅಧಿಕಾರಕ್ಕಾಗಿ ಕಾಂಗ್ರೆಸ್ ಕಿತ್ತಾಟ: ನಳಿನ್ ಕಟೀಲ್

Posted by Vidyamaana on 2023-11-04 16:13:11 |

Share: | | | | |


ರಾಜ್ಯದಲ್ಲಿ ಬರವಿದ್ಧಾಗಲೂ ಅಧಿಕಾರಕ್ಕಾಗಿ ಕಾಂಗ್ರೆಸ್ ಕಿತ್ತಾಟ: ನಳಿನ್ ಕಟೀಲ್

ವಿಜಯಪುರ: ಅಧಿಕಾರಕ್ಕಾಗಿ ಕಚ್ಚಾಟ ನಡೆಸಿರುವ ಕಾಂಗ್ರೆಸ್ ಸರ್ಕಾರ ಭೀಕರ ಬರದ ಸಂಕಷ್ಟದಲ್ಲಿರುವ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಇನ್ನೂ ಆಡಳಿತ ನಡೆಸುವ ವಿಧಾನ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.



ಶನಿವಾರ ಬಿಜೆಪಿ ಬರ ಅಧ್ಯಯನಕ್ಕಾಗಿ ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನಿಗೆ ಭೇಟಿ ನೀಡಿದ ಬಳಿಕ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಭೀಕರ ಬರದಿಂದ ಕಂಗೆಟ್ಟಿರುವ ಈ ಹಂತದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸಿದ್ದು, ರಾಜ್ಯದ ಜನ ಆಕ್ರೋಶಗೊಳ್ಳುವಂತೆ ಮಾಡಿದೆ ಎಂದು ಟೀಕಾ ಪ್ರಹಾರ ನಡೆಸಿದರು.


ರಾಜ್ಯದ ಬರದಂಥ ಸಂಕಷ್ಟದ ಸಂದಭದಲ್ಲೂ ಸಿದ್ಧರಾಮಯ್ಯ ಅವರು ರಾಜಕೀಯ ಮಾಡಲು ಹೊರಟಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾದಾಗ ಕೇಂದ್ರದ ಪರಹಾರ ನಿಧಿ ಬಿಡುಗಡೆ ಆಗುವವರೆಗೆ ಕಾಯದೆ, ಎನ್‍ಡಿಆರ್‍ಎಫ್ ನಿಮಯ ಅಂತೆಲ್ಲ ಸಮಯ ವ್ಯರ್ಥ ಮಾಡದೆ ತುರ್ತಾಗಿ ಸಂತ್ರಸ್ಥರ ನೆರವಿಗೆ ಧಾವಿಸಿದ್ದರು. ಆದರೆ ಸಿದ್ಧರಾಮಯ್ಯ ಇನ್ನಾದರೂ ರಾಜಕಾರಣ ಮಾಡುವುದನ್ನು ನಿಲ್ಲಿಸಿ ಬರದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.


ಕೇಂದ್ರ ಸರ್ಕಾರ ಕೂಡ ತನ್ನ ಅಧಿಕಾರಿಗಳ ತಂಡವನ್ನು ಕಳಿಸಿ ಅಧ್ಯಯನ ನಡೆಸಿದೆ. ಆದರೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಭಿಕರ ಬರದಿಂದಾಗಿ ಆಗಿರುವ ಒಟ್ಟು ನಷ್ಟದ ಕುರಿತು ವಿವರವನ್ನೇ ಈವರೆಗೆ ಕೇಂದ್ರಕ್ಕೆ ನೀಡಿಲ್ಲ. ಆದರೂ ಕೇಂದ್ರದ ವಿರುದ್ಧ ನೆರವು ನೀಡಿಲ್ಲ ಎಂದು ಆರೋಪಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.ವಿಜಯಪುರ ಜಿಲ್ಲೆಯನ್ನೇ ಅವಲೋಕಿಸಿದರೆ ರಾಜ್ಯದ ಪ್ರಭಾವಿ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ತಿಕೋಟ ತಾಲೂಕನ್ನೇ ಬರ ಪೀಡಿತ ಘೋಷಿತ ತಾಲೂಕ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿರಲಿಲ್ಲ. ತಮ್ಮದೇ ಕ್ಷೇತ್ರವನ್ನು ಬರ ಪೀಡಿತ ಎಂದು ಘೋಷಿಸುವಲ್ಲೂ ಜಿಲ್ಲೆಯ ಸಚಿವರಿಗೆ ಸಾಧ್ಯವಾಗಿರಲಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿರುದ್ಧ ಟೀಕಾ ಪ್ರಹಾರ ನಡೆಸಿದರು.ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಪಂಪ್‍ಸೆಟ್ ಆಧಾರಿತ ರೈತರು ಬೆಳೆ ಬೆಳೆಯಲು ಈ ಸರ್ಕಾರ ಸೂಕ್ತ ಹಾಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಅಲ್ಪಸರ್ವಲ್ಪ ಬೆಳೆ ಬೆಳೆದುಕೊಂಡಿರುವ ತಮ್ಮ ಬೆಳೇ ಉಳಿಸಿ ಎಂದು ಪಂಪ್‍ಸೆಟ್ ಇರುವ ರೈತರು ಗೋಗರೆದರೂ ಅವರ ಬೇಡಿಕೆಗೆ ಸ್ಪಂದಿಸುವ ಸೌಜನ್ಯ ತೋರದ ಈ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.


ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದ ಬಳಿಕ ಬಿಜೆಪಿ ತಂಡಗಳು ಬರ ಪರಿಸ್ಥಿತಿ ಕುರಿತು ಕೋರ ಸಮಿತಿ ಸಭೆಯಲ್ಲಿ ಚರ್ಚಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಲಿದೆ. ಅಲ್ಲದೇ ತುರ್ತಾಗಿ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸುತ್ತದೆ ಎಂದರು.


ಈ ಹಂತದಲ್ಲಿ ರೈತರು ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು, ಬರ ಬಿದ್ದಿರುವ ಈಗ ಈರುಳ್ಳಿ, ಟೊಮ್ಯಾಟೋ ಬೆಲೆ ಏರಿಸಿದ್ದಾರೆ. ಹೋಟೆಲ್‍ಗಳಲ್ಲಿ ದರ ಏರಿಕೆ ಮಾಡಿದರೂ ರೈತರ ಬೆಳೆಗಳಿಗೆ ಬೆಲೆ ಇಲ್ಲವಾಗಿದೆ. ಕನಿಷ್ಟ ಉತ್ತಮ ವಿದ್ಯುತ್ ನೀಡುತ್ತಿಲ್ಲ ಎಂದು ಅಶ್ಲೀಲ ಶಬ್ಧಗಳಿಂದಲೇ ನಿಂದಿಸಿ ಆಕ್ರೋಶ ಹೊರ ಹಾಕಿದಾಗ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ರೈತನ ಹೆಗಲು ನೇವರಿಸಿ ಸಮಾಧಾನಿಸಿದರು.


ಇದೇ ವೇಳೆ ಸ್ಥಳದಲ್ಲಿದ್ದ ಮಹಿಳೆಯರು ಉಚಿತ ಬಸ್ ಎಂದು ನಿತ್ಯ ಕೆಲಸ ಬಿಟ್ಟು ಊರೂರಿಗೆ ತಿರುಗಲು ಆಗುತ್ತಾ? ಮಾನ ಇರುವ ಯಾರೂ ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.


ಅವಳಿ ಜಿಲ್ಲೆಗಳ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ಮಾಜಿ ಸಚಿವ ಮುರುಗೇಶ ನಿರಾಣಿ,ಬೆಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಶಾಸಕರಾದ ರಮೇಶ ಭೂಸನೂರು, ಸೋಮನಗೌಡ ಸಾಸನೂರು, ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಉಮೇಶ ಕಾರಜೋಳ, ಸುರೇಶ ಬಿರಾದಾರ, ಬಸವರಾಜ ಬಿರಾದಾರ ಇತರರು ಉಪಸ್ಥಿತರಿದ್ದರು.



Leave a Comment: