ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

Posted by Vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

Posted by Vidyamaana on 2023-12-21 15:55:45 |

Share: | | | | |


ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

ಬೆಂಗಳೂರು : ಪ್ರಿಯತಮನಿಗೆ ಪೆಟ್ರೋಲ್ ಸುರಿದು ಪ್ರಿಯತಮೆ ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಬಳಿ ನಡೆದಿದೆ.ಕಾನ್ಸ್ ಟೇಬಲ್ ಸಂಜಯ್ ಮೃತ ದುರ್ದೈವಿ. ಕಾನ್ಸ್ ಟೇಬಲ್ ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬುವವರು ಬೆಂಕಿ ಇಟ್ಟಿದ್ದಾರೆ.ಬೇರೆಯವನ ಜೊತೆ ಲವ್ವಿಡವ್ವಿ ನಡೆಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಹೋಮ್ ಗಾರ್ಡ್ ರಾಣಿ ಈ ಕೃತ್ಯವೆಸಗಿದ್ದಾಳೆ.


ಸಂಜಯ್ ಹಾಗೂ ರಾಣಿ ಇಬ್ಬರೂ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತಿದ್ದರು. ಈ ವೇಳೆ ಸಂಜಯ್ ಹಾಗೂ ರಾಣಿ ನಡುವೆ ಪ್ರೀತಿ ಶುರುವಾಗಿತ್ತು. ವಿವಾಹವಾಗಿದ್ದರೂ ಪಿಸಿ ಸಂಜಯ್ ನನ್ನು ರಾಣಿ ಲವ್ ಮಾಡುತ್ತಿದ್ದಳು. ಇತ್ತೀಚೆಗೆ ಕಾನ್ಸ್ ಟೇಬಲ್ ಸಂಜಯ್ ನನ್ನು ರಾಣಿ ಅವೈಡ್ ಮಾಡುತ್ತಿದ್ದಳು. ಇದರಿಂದ ಬೇಸರಗೊಂಡ ಸಂಜಯ್ ಎರಡು ದಿನಗಳ ಹಿಂದೆ ರಾಣಿ ಮನೆಗೆ ಹೋಗಿದ್ದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಈ ವೇಳೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ.ಗಂಭೀರವಾಗಿ ಗಾಯಗೊಂಡಿರುವ ಕಾನ್ಸ್ ಟೇಬಲ್ ಸಂಜಯ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇಂದು (ಜೂನ್ 30)ಹಾಜಿ ಮುಸ್ತಫಾ ಕೆಂಪಿ ಅವರಿಗೆ ಹುಟ್ಟೂರ ಸಂತಾಪ

Posted by Vidyamaana on 2023-06-30 04:42:52 |

Share: | | | | |


ಇಂದು (ಜೂನ್ 30)ಹಾಜಿ ಮುಸ್ತಫಾ ಕೆಂಪಿ ಅವರಿಗೆ ಹುಟ್ಟೂರ ಸಂತಾಪ

ಉಪ್ಪಿನಂಗಡಿ: ಇತ್ತೀಚೆಗಷ್ಟೇ ನಿಧನರಾದ ಮುಸ್ತಫಾ ಕೆಂಪಿ ಹಾಜಿ ಅವರಿಗೆ ಶ್ರದ್ಧಾಂಜಲಿ ಕೋರಿ ಜೂನ್ 30ರಂದು ಸಂಜೆ 4.30ಕ್ಕೆ ಉಪ್ಪಿನಂಗಡಿ ಎಚ್.ಎಂ. ಹಾಲ್ ನಲ್ಲಿ ಹುಟ್ಟೂರ ಸಂತಾಪ ಆಯೋಜಿಸಲಾಗಿದೆ.

ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಿಶ್ರಾಂತ ದುಡಿದ ಉಪ್ಪಿನಂಗಡಿಯ ಹೆಮ್ಮೆಯ ಪುತ್ರ ಮುಸ್ತಫಾ ಕೆಂಪಿ ಅವರಿಗೆ ಉಪ್ಪಿನಂಗಡಿ ನಾಗರಿಕರ ವತಿಯಿಂದ ಹುಟ್ಟೂರ ಸಂತಾಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಿಂಹ, ಶ್ರೀವತ್ಸ ಮನೆಗೆ ಬಂದರೂ ಭೇಟಿ ಮಾಡದ ರಾಮದಾಸ್ ಬಂಡಾಯ?

Posted by Vidyamaana on 2023-04-17 19:03:28 |

Share: | | | | |


ಸಿಂಹ, ಶ್ರೀವತ್ಸ ಮನೆಗೆ ಬಂದರೂ ಭೇಟಿ ಮಾಡದ ರಾಮದಾಸ್ ಬಂಡಾಯ?

ಮೈಸೂರು: ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಕಾರಣ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಆಕ್ರೋಶಗೊಂಡಿದ್ದು ಸೋಮವಾರ ರಾತ್ರಿ ಮನೆಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಮತ್ತು ಅಭ್ಯರ್ಥಿ ಶ್ರೀವತ್ಸ ಅವರ ಭೇಟಿ ನಿರಾಕರಿಸಿ ಆಕ್ರೋಶ ಹೊರ ಹಾಕಿದ್ದಾರೆ.ಟಿಕೆಟ್ ಕೈ ತಪ್ಪಿದ ಬಳಿಕ ಮನೆಯ ಒಂದು ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ರಾಮದಾಸ್ ಅವರು ಇಬ್ಬರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಮದಾಸ್, 30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕೋ ಬೇಡವೋ ಎಂಬುದುನ್ನು ನಾಳೆ ಸಂಜೆ ತಿಳಿಸುತ್ತೇನೆ.ಯಾವ ನಿರ್ಧಾರ ಮಾಡಬೇಕು ಅಂತ ನಾಳೆ ಹೇಳುತ್ತೇನೆ.ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೇವು. ಟಿಕೆಟ್ ತಪ್ಪಿರುವ ಕಾರಣ ರಾಮದಾಸ್ ಅವರಿಗೆ ನೋವಾಗಿದೆ.30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರೋದು ಸಹಜ. ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮಾತನಾಡಿ, ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. 30 ವರ್ಷದಿಂದ ಜತೆ ಇದ್ದೇವು. ಅವರು ನನ್ನ ವಿರುದ್ದ ಕೆಲಸ ಮಾಡಲ್ಲ.ಆ ವಿಶ್ವಾಸ ನನಗೆ ಇದೆ ಎಂದರು.

ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

Posted by Vidyamaana on 2023-04-04 22:43:37 |

Share: | | | | |


ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

ಬೆಳ್ತಂಗಡಿ: ಯುವತಿಯೊಬ್ಬಳೊಂದಿಗೆ ಬಸ್ಸಿನಲ್ಲಿ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4ರಂದು ನಡೆದಿದೆ. ಕಕ್ಕಿಂಜೆ ನಿವಾಸಿ ಸಾಹಿಲ್(22.ವ)ಹಲ್ಲೆಗೊಳಗಾದ ಯುವಕ.ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಹಿಲ್ ಇಂದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಬಸ್ಸಿನಿಂದ ಇಳಿದಿದ್ದಾಳೆ.ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೀಗ ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು,

ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು : ಖ್ಯಾತ ವೈದ್ಯ ಬೆಳ್ಳಿಪಾಡಿ ಡಾ.ಸುಧಾರಾಮ ರೈ ನಿಧನ

Posted by Vidyamaana on 2024-06-24 05:20:03 |

Share: | | | | |


ಪುತ್ತೂರು : ಖ್ಯಾತ ವೈದ್ಯ ಬೆಳ್ಳಿಪಾಡಿ ಡಾ.ಸುಧಾರಾಮ ರೈ ನಿಧನ

ಗಳೂರು, ಜೂ.23: ಖ್ಯಾತ ವೈದ್ಯ ಡಾ.ಸುಧಾರಾಮ ರೈ (80) ಅಲ್ಪ ಕಾಲದ ಅಸೌಖ್ಯದಿಂದ ಇಂಗ್ಲೆಂಡ್‌ನಲ್ಲಿ ರವಿವಾರ ನಿಧನರಾದರು.ಡಾ.ಸುಧಾರಾಮ ರೈ ಅವರು ಪತ್ನಿ ಮಂಜುಳಾ ಮತ್ತು ಮಕ್ಕಳಾದ ನಿತಿನ್ ಮತ್ತು ನೀಮಾ ಅವರನ್ನು ಅಗಲಿದ್ದಾರೆ.

ಹೆಸರಾಂತ ಬೆಳ್ಳಿಪಾಡಿ ಮನೆತನದವರಾದ ಡಾ.ಸುಧಾರಾಮ ರೈ ಅವರು ಆರೋಗ್ಯ ಮತ್ತು ಸಮುದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಡಾ. ಸುಧಾರಾಮ ರೈ ಅವರು ಪುತ್ತೂರಿನಲ್ಲಿ ತಮ್ಮ ಆರಂಭಿಕ ಶಿಕ್ಷಣ, ಮಣಿಪಾಲ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ

Recent News


Leave a Comment: