Posted by vidyamaana on 2024-07-05 12:01:03 |
ಲಂಡನ್ : ಬ್ರಿಟನ್ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್ ನಂಬರ್ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.
ಹಾಲಿ ಪ್ರಧಾನಿ ರಿಷಿ ಸುನಕ್(Rishi Sunak) ಅವರ ಪಕ್ಷ ಕನ್ಸರ್ವೇಟಿವ್ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್ ಪಕ್ಷದ ಕೀರ್ ಸ್ಟಾರ್ಮರ್(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು
ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.
ಪಕ್ಷಗಳ ಬಲಾಬಲ ಹೇಗಿದೆ?
ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,
ಕನ್ಸರ್ವೇಟಿವ್ ಪಕ್ಷ ಕೇವಲ – 81
ಲೇಬರ್ ಪಾರ್ಟಿ - 360
ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3
ಲಿಬರಲ್ ಡೆಮೋಕ್ರಾಟ್ಗಳು - 49
ರಿಫಾರ್ಮ್ ಯುಕೆ - 3
ಇತರೆ - 1
ಎಕ್ಸಿಟ್ ಪೋಲ್ ಭವಿಷ್ಯ ಏನು?
ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್ ಪೋಲ್ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.
ಕನ್ಸರ್ವೇಟಿವ್: 131
ಲೇಬರ್ ಪಕ್ಷ: 410
ಲಿಬರಲ್ ಡೆಮೋಕ್ರಾಟ್ಗಳು: 61
ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10
ರಿಫಾರ್ಮ್ ಯುಕೆ: 13
ಪ್ಲೈಡ್ ಸಿಮ್ರು: 4
ಗ್ರೀನ್ಸ್: 2
ರಿಷಿ ಸುನಕ್ಗೆ ಆಡಳಿತ ವಿರೋಧಿ ಅಲೆ
44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.
Posted by Vidyamaana on 2023-09-21 12:20:26 |
ಮಂಗಳೂರು: ಜನಸ್ನೇಹಿ ಪೊಲೀಸಿಂಗ್ನ ಭಾಗವಾಗಿ ಪಾರದರ್ಶಕ ಮತ್ತು ತ್ವರಿತ ಸೇವೆಗೆ ಮುಂದಡಿ ಇಟ್ಟಿರುವ ಪೊಲೀಸ್ ಇಲಾಖೆಯು ಸಾರ್ವಜನಿಕರು ತಮಗೆ ಪೊಲೀಸ್ ಠಾಣೆಯಲ್ಲಿ ದೊರೆಯುವ ಸ್ಪಂದನೆಯ ಬಗ್ಗೆ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಶೀಘ್ರ ಜಾರಿಗೆ ತರಲಿದೆ.
ಸಾರ್ವಜನಿಕರು ದೂರು, ಅರ್ಜಿ, ಅಹವಾಲು ಇತ್ಯಾದಿಗಳನ್ನು ಸಲ್ಲಿಸಲು ಠಾಣೆಗೆ ತೆರಳಿದಾಗ ವಿಎಂಎಸ್ನಲ್ಲಿ (ವಿಸಿಟರ್ ಮ್ಯಾನೇಜ್ಮೆಂಟ್ ಸಿಸ್ಟಂ) ವಿವರ ದಾಖಲಿಸಿಕೊಂಡು ಆ ವಿವರಗಳುಳ್ಳ ಮುದ್ರಿತ ಚೀಟಿಯನ್ನು ನೀಡಲಾಗುತ್ತದೆ. ಅದರಲ್ಲಿ ಯಾವ ಅಧಿಕಾರಿ/ಸಿಬಂದಿಯನ್ನು ಭೇಟಿ ಮಾಡಬೇಕು ಎಂಬ ಮಾಹಿತಿಯೂ ಇರುತ್ತದೆ. ಸಂಬಂಧಿಸಿದ ಅಧಿಕಾರಿ/ಸಿಬಂದಿಯನ್ನು ಭೇಟಿಯಾದ ಅನಂತರ ಅವರು ಅದಕ್ಕೆ ಸಹಿ ಮಾಡುವ ಮೂಲಕ ಅಹವಾಲು ಸ್ವೀಕರಿಸಿರುವುದನ್ನು ದೃಢಪಡಿಸಬೇಕು.
ಆ ಪ್ರಕ್ರಿಯೆಗಳು ಮುಗಿದ ಬಳಿಕ ವಿಎಂಎಸ್ನಲ್ಲಿ ನಮೂದಾಗಿರುವ ದೂರು ದಾರರ ಮೊಬೈಲ್ ಸಂಖ್ಯೆಗೆ ಇಲಾಖೆಯಿಂದ ಲಿಂಕ್ ಕಳುಹಿಸಲಾಗುತ್ತದೆ. ಆ ಲಿಂಕ್ ಅನ್ನು ಒತ್ತಿದಾಗ “ಫೀಡ್ಬ್ಯಾಕ್’ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಠಾಣೆಯಲ್ಲಿ ದೊರೆತ ಸ್ಪಂದನೆಯ ಕುರಿತು ಕೆಲವು ಪ್ರಶ್ನೆಗಳಿದ್ದು ಅವುಗಳಿಗೆ ಉತ್ತರಿಸಬೇಕು. ಅದು ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತ ಮೊದಲಾದ ಉನ್ನತ ಅಧಿಕಾರಿಗಳಿಗೆ ತಲುಪುತ್ತದೆ. ಲಿಂಕ್ ಮೂಲಕ ಅಲ್ಲದೆ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕವೂ ಫೀಡ್ಬ್ಯಾಕ್ ನೀಡಬಹುದು. ಎಲ್ಲ ಠಾಣೆಗಳಲ್ಲಿಯೂ ಕ್ಯುಆರ್ ಕೋಡ್ ಅಳವಡಿಸಿ ಸಾರ್ವಜನಿಕರಿಂದ ಫೀಡ್ಬ್ಯಾಕ್ ಪಡೆಯಲು ವ್ಯವಸ್ಥೆ ಮಾಡಲಾಗುತ್ತದೆ.ಠಾಣೆಯಲ್ಲಿರುವಾಗಲೇ ಫೀಡ್ಬ್ಯಾಕ್ ನೀಡಬೇಕಾಗಿಲ್ಲ. ಅನಂತರವೂ ನೀಡಬಹುದು.
ಪೊಲೀಸರ ಮೇಲೆ ನಿಗಾ!
ಜನಸ್ಪಂದನಾ ಮೂಲಕ ಪರೋಕ್ಷವಾಗಿ ಸಾರ್ವಜನಿಕರು ಸ್ಥಳೀಯ ಪೊಲೀಸರ ಮೇಲೆಯೇ ನಿಗಾ ಇಡಲು ಸಾಧ್ಯವಾಗಲಿದೆ. ವಿನಾಕಾರಣವಾಗಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವುದು, ಒರಟುತನದಿಂದ ವರ್ತಿಸುವುದು, ವಾಪಸ್ ಕಳುಹಿಸುವುದು, ಎಫ್ಐಆರ್ ದಾಖಲಿಸಲು ಹಿಂದೇಟು ಹಾಕುವುದು ಮೊದಲಾದವುಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲು ಇದರಿಂದ ಅನುಕೂಲವಾಗಲಿದೆ. ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರೆಟ್ ಸಹಿತ ಕೆಲವು ನಗರ ಹಾಗೂ ಕೆಲವು ಜಿಲ್ಲೆಗಳಲ್ಲಿ ಇಂತಹ ಫೀಡ್ಬ್ಯಾಕ್ ವ್ಯವಸ್ಥೆ ಆರಂಭಗೊಂಡಿದ್ದು ದ.ಕ., ಉಡುಪಿ ಸಹಿತ ಇತರ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳ್ಳಲಿದೆ.
ಜನಸ್ಪಂದನಾ ಮೂಲಕ ಪೊಲೀಸರ ಸ್ಪಂದನೆ ಬಗ್ಗೆ ಸಾರ್ವಜನಿಕರು ನೇರವಾಗಿ ಮಾಹಿತಿ ನೀಡಬಹುದು. ಇದು ಸರಳ ವ್ಯವಸ್ಥೆಯಾಗಿದ್ದು ಪರಿಣಾಮಕಾರಿಯಾಗಲಿದೆ. ಜನರ ಪ್ರತಿಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ವಿಚಾರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಗೆ ಸಂಬಂಧಿಸದ ವಿಚಾರಗಳಾಗಿದ್ದರೆ ಯಾರನ್ನು ಸಂಪರ್ಕಿಸಬಹುದು ಎಂಬುದನ್ನುಸಾರ್ವಜನಿಕರಿಗೆ ತಿಳಿಸಲಾಗುವುದು.
ಉಡುಪಿ ಜಿಲ್ಲೆಯಲ್ಲಿಯೂ ಪ್ರತೀ ಪೊಲೀಸ್ ಠಾಣೆಯಲ್ಲಿ ಜನಸ್ಪಂದನ ಶೀಘ್ರ ಆರಂಭಗೊಳ್ಳಲಿದೆ. ಇದಕ್ಕೆ ಪೂರಕವಾಗಿ ತರಬೇತಿ ಪೂರ್ಣಗೊಂಡಿದೆ
Posted by Vidyamaana on 2023-12-13 07:26:47 |
ಪುತ್ತೂರು : ಪಂಜಾಬ್ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ.
ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ.
ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ.
ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.
Posted by Vidyamaana on 2023-05-12 12:00:38 |
ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಇದೀಗ ಮತ ಎಣಿಕೆಗೆ ಕ್ಷಣಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣಗೊಳ್ಳಬಹುದೆಂಬ ಸೂಚನೆ ಸಿಕ್ಕಿರುವುದರಿಂದ ರಾಜ್ಯದಲ್ಲಿ ಮೂರೂ ಪಕ್ಷಗಳೂ ‘ಹೈ ಅಲರ್ಟ್’ನಲ್ಲಿವೆ.
ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವ ಸಾಧ್ಯತೆಗಳು ಕಡಿಮೆಯಿದ್ದು ಕಾಂಗ್ರೆಸ್ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳನ್ನು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವುದು ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಇದೀಗ ಫಲಿತಾಂಶದ ಬಳಿಕ ‘ಅಪರೇಷನ್ ಕಮಲ’ ನಡೆಯುವ ಸಾಧ್ಯತೆ ದಟ್ಟವಾಗಿರುವ ಕಾರಣ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೊಸ ಪ್ಲ್ಯಾನ್ ಹೆಣೆದಿದ್ದು, ಮೇ13ರಂದು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಕಾಂಗ್ರೆಸ್ ಅಭ್ಯರ್ಥಿ ತನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ನೇರವಾಗಿ ಬೆಂಗಳೂರಿಗೆ ಬರುವಂತೆ ಪಕ್ಷದ ಹೈಕಮಾಂಡ್ ‘ಸ್ಟ್ರಿಕ್ಟ್ ಆದೇಶ’ ರವಾನಿಸಿದೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ಜೊತೆ ವರ್ಚ್ಯವಲ್ ಮೀಟಿಂಗ್ ನಡೆಸಿದ್ದು ಈ ಸಂದರ್ಭದಲ್ಲಿ ಇಂತಹದ್ದೊಂದು ಸೂಚನೆಯನ್ನು ‘ಕೈ’ ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
Posted by Vidyamaana on 2023-09-10 05:57:57 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 10 ರಂದು
8.45 ಕ್ಕೆ ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಸಭಾಭವನ ಶಿಲ್ಯಾನಾಸ, ಸನ್ಮಾನ
11 ಗಂಟೆ ಮೂಡಬಿದ್ರೆ ದ ಕ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ
4.30 ಕ್ಕೆ ಮಹಿಷಮರ್ಧಿನಿ ದೇವಸ್ಥಾನ ಕೋಡಿಂಬಾಡಿಯಲ್ಲಿ ಸಭೆ
5.30 ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ ಕೋಡಿಂಬಾಡಿ ಶಾಲೆಯಲ್ಲಿ ಅಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
Posted by Vidyamaana on 2024-02-20 11:24:25 |
ಮಂಗಳೂರು: ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಆರೋಪ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಪೋಷಕಿಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಪೋಷಕಿಯ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.
ಜೆಪ್ಪಿನಮೊಗರು ನಿವಾಸಿಯಾಗಿರುವ ಪೋಷಕಿ ಕವಿತಾ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಗೆ ಕವಿತಾ ದೂರು ನೀಡಿದ್ದಾರೆ.
ಕವಿತಾ ಪುತ್ರಿ ಸೇಂಟ್ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ಪೋಷಕರ ಪ್ರತಿಭಟನೆಯಲ್ಲೂ ಕವಿತಾ ಭಾಗವಹಿಸಿದ್ದರು.
ಶಿಕ್ಷಕಿ ಆಡಿಯೋ ವೈರಲ್ ಮಾಡಿದ್ದು ಪೋಷಕಿ ಕವಿತಾ ಎಂದು ಆರೋಪಿಸಿ ಬೆದರಿಕೆ ಹಾಕಲಾಗಿದ್ದು, ಕತಾರ್, ದುಬೈ, ಸೌದಿ ಅರೇಬಿಯಾ ಸೇರಿದಂತೆ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು,ಹಲವು ವಿದೇಶಿ ನಂಬರ್ ಗಳಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಕವಿತಾ ದೂರು ದಾಖಲಿಸಿದ್ದಾರೆ
Posted by Vidyamaana on 2023-08-22 03:26:32 |
ಪುತ್ತೂರು : ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿ ಅಹ್ಮದ್ ಸಹದ್(15) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಸಹದ್ ಉಪ್ಪಿನಂಗಡಿ ಪೆದಮಲೆಯ ನಿವಾಸಿ ಸಮದ್ ಹಾಜಿ ಹಾಗೂ ಬೆದ್ರೋಡಿಯ ರೇಷ್ಮಾ ದಂಪತಿಯ ಮೊದಲ ಪುತ್ರನಾಗಿದ್ದು, ಇಂಡಿಯನ್ ಸ್ಕೂಲ್ನಲ್ಲಿ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು.
ಸಂತಾಪ ಸೂಚಕವಾಗಿ ಆ 22ರಂದು ಇಂಡಿಯನ್ ಸ್ಕೂಲಿಗೆ ರಜೆ ಘೋಷಿಸಲಾಗಿದ್ದು, ಆ 22 ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ. ಬುಧವಾರದ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಇಂಡಿಯನ್ ಸ್ಕೂಲ್ನ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ