ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

Posted by Vidyamaana on 2024-01-31 15:20:24 |

Share: | | | | |


ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

ಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ಜು9: ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ

Posted by Vidyamaana on 2023-07-08 15:04:02 |

Share: | | | | |


ಜು9: ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ

ಪುತ್ತೂರು: ರೋಟರಿ ಕ್ಲಬ್‌ ಪುತ್ತೂರು ಇದರ ಪ್ರಾಯೋಜಕತ್ವದ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನ ಪದಸ್ವೀಕಾರ ಹಾಗೂ ಜಿಲ್ಲಾ ರೋಟರ್ಯಾಕ್ಟ್ ಪ್ರತಿನಿಧಿ ಪದಸ್ವೀಕಾರ ಸಮಾರಂಭ ಜುಲೈ 9ರಂದು ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಹಾಲಿನಲ್ಲಿ ನಡೆಯಲಿದೆ.

ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ರಾಹುಲ್ ಆಚಾರ್ಯ ನೇಮಕಗೊಂಡಿದ್ದು, ಕಾರ್ಯದರ್ಶಿಯಾಗಿ ಶ್ರೇಯಸ್, ಖಜಾಂಚಿಯಾಗಿ ಮಹೇಶ್ಚಂದ್ರ ಮತ್ತು ಅವರ ತಂಡ ಪದಸ್ವೀಕಾರ ಮಾಡಲಿದ್ದಾರೆ.

ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ:

ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷರಾಗಿ ಜ್ಯೋತಿಕಾ, ಕಾರ್ಯದರ್ಶಿಯಾಗಿ ಧನುಷಾ, ಐಪಿಪಿಯಾಗಿ ಗಣೇಶ್ ಎನ್. ಕಲ್ಲರ್ಪೆ ನೇಮಕಗೊಂಡಿದ್ದಾರೆ. ಸಭಾಪತಿಯಾಗಿ ಪ್ರೇಮಾನಂದ್ ಕಾರ್ಯನಿರ್ವಹಿಸಲಿದ್ದಾರೆ.

ಉಪಾಧ್ಯಕ್ಷರಾಗಿ ವಿಶಾಲ್, ಜತೆ ಕಾರ್ಯದರ್ಶಿಯಾಗಿ ನವೀನ್ ಚಂದ್ರ, ಕೋಶಾಧಿಕಾರಿಯಾಗಿ ಸುಕನ್ಯಾ, ಸಮುದಾಯ ಸೇವಾ ನಿರ್ದೇಶಕರಾಗಿ ವಿಜಯ್, ವೃತ್ತಿ ಸೇವಾ ನಿರ್ದೇಶಕರಾಗಿ ಪುರುಷೋತ್ತಮ್, ಅಂತಾರಾಷ್ಟ್ರೀಯ ಸೇವಾ ನಿರ್ದೇಶಕರಾಗಿ ಮಹೇಶ್ಚಂದ್ರ, ಸಂಘ ಸೇವಾ ನಿರ್ದೇಶಕರಾಗಿ ಶಶಿಧರ್ ಕೆ. ಮಾವಿನಕಟ್ಟೆ, ಬುಲೆಟಿನ್ ಎಡಿಟರ್ ಆಗಿ ಶ್ರೀಕಾಂತ್ ಬಿರಾವು, ಕ್ರೀಡಾ ನಿರ್ದೇಶಕರಾಗಿ ಹಿಮಾಂಶು ಕುಮಾರ್, ಸಾಂಸ್ಕೃತಿಕ ನಿರ್ದೇಶಕರಾಗಿ ಸುಬ್ರಹ್ಮಣಿ, ಪಿ.ಆರ್.ಓ. ಆಗಿ ನವೀನ್ ಬನ್ನೂರು, ಸಾರ್ಜಂಟ್ ಆಗಿ ಮುರಳಿ ನೇಮಕಗೊಂಡಿದ್ದಾರೆ.

ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

Posted by Vidyamaana on 2024-06-06 09:34:00 |

Share: | | | | |


ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

ಚೆನ್ನೈ: ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಚುನಾವಣೆ ಎದುರಿಸಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಕುಟುಂಬ ರಾಜಕಾರಣವನ್ನು ಟೀಕಿಸಿದರು.

ಆಡಳಿತಾರೂಢ ಡಿಎಂಕೆ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದರು.


ನಮ್ಮ ಅಪ್ಪ ಕುಪ್ಪಾಸ್ವಾಮಿ, ನಾನು ಒಬ್ಬ ರೈತನ ಮಗನಾಗಿದ್ದೇನೆ. ಏನು ಮಾಡೋದು ನಮ್ಮ ಅಪ್ಪ ಕರುಣಾನಿಧಿಯಲ್ಲ, ದೊಡ್ಡ ರಾಜಕೀಯ ನಾಯಕನೂ ಅಲ್ಲ. ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

Posted by Vidyamaana on 2024-07-08 08:23:43 |

Share: | | | | |


ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

 ಮಂಗಳೂರು : ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.ಈ ಕೃತ್ಯವನ್ನು ಹೊರ ರಾಜ್ಯದ ಚಡ್ಡಿ ಗ್ಯಾಂಗ್ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್ ಪರಿಸರದಲ್ಲಿ ಅಡ್ಡಾಡುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಐವರಿದ್ದ ಕಳ್ಳರ ತಂಡ ಮೆಲ್ಲನೆ ಹೆಜ್ಜೆ ಇಡುತ್ತಾ ಕೈಯಲ್ಲಿ ಟಾರ್ಚ್ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಚಡ್ಡಿ ಹಾಕಿದ್ದ ಕಳ್ಳರ ಗ್ಯಾಂಗ್ ಸದಸ್ಯರು ಬರುತ್ತಿದ್ದಾಗಲೇ ನಾಯಿಗಳು ಜೋರಾಗಿ ಬೊಗಳಿದ್ದು ಅವುಗಳತ್ತ ಕಳ್ಳರು ಕಲ್ಲೆಸೆದು ಓಡಿಸಿದ್ದಾರೆ.

ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

Posted by Vidyamaana on 2023-11-05 04:30:43 |

Share: | | | | |


ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ.



ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ (43) ಎಂಬ ದುರ್ದೈವಿ ಛಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನೇರುಘಟ್ಟ ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ತಮಿಳುನಾಡಿನಲ್ಲಿ ಅಪಘಾತ; ಚಾಲಕ ಸಾವು

Posted by Vidyamaana on 2023-10-25 16:32:41 |

Share: | | | | |


ಬನ್ನೇರುಘಟ್ಟ ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ತಮಿಳುನಾಡಿನಲ್ಲಿ  ಅಪಘಾತ; ಚಾಲಕ ಸಾವು

ಮೈಸೂರು : ದಸರಾ ಮಹೋತ್ಸವಕ್ಕೆ ತರಲಾಗಿದ್ದ ಆನೆಯನ್ನು ವಾಪಸ್‌ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಆದರೆ, ಅದೃಷ್ಟವಶಾತ್‌ ಲಾರಿಯಲ್ಲಿದ್ದ ಆನೆ ಪ್ರಾಣಾಪಾಯದಿಂದ ಪಾರಾಗಿದೆ. ನಂತರ, ಕ್ರೇನ್‌ ತರಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ.


ಬೆಂಗಳೂರಿನ ಹೊರವಲಯ ಬನ್ನೇರುಘಟ್ಟ ಬಳಿ ದಸರಾ ಉತ್ಸವಕ್ಕೆ ತರಲಾಗಿದ್ದ ತಮಿಳುನಾಡಿನ ತಿರುಚ್ಚಿಯ ಆನೆಯನ್ನು ವಾಪಸ್‌ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಲಾರಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಚಾಲಕ ಮೂತ್ರ ವಿಸರ್ಜನೆಗೆ ತೆರಳಿದಾಗ ಲಾರಿಯನ್ನು ಹ್ಯಾಂಡ್‌ ಬ್ರೇಕ್‌ ಮಾಡದ ಹಿನ್ನೆಲೆಯಲ್ಲಿ ಲಾರಿ ಮುಂದಕ್ಕೆ ಚಲಿಸಿ ಮುಂಭಾಗದಲ್ಲಿದ್ದ ಚಾಲಕನ ಮೇಲೆ ಹರಿದಿದೆ. ಇದರಿಂದ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಇಳಿದಿದ್ದ ಲಾರಿಯಲ್ಲಿ ಆನೆ ನಿಂತುಕೊಂಡಿದ್ದು, ಅದನ್ನು ಕ್ರೇನ್‌ ಮೂಲಕ ಸಂರಕ್ಷಣೆ ಮಾಡಲಾಗಿದೆ.ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶಾನಮಾವು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತಮಿಳುನಾಡಿನ ಪುದುಕ್ಕೊಟ್ಟೈ ಮೂಲದ ಆರೋಗ್ಯ ಸ್ವಾಮಿ ಮೃತಪಟ್ಟ ದುರ್ದೈವಿ ಆಗಿದ್ದಾನೆ. ಲಾರಿ ಮುಂದೆ ಮೂತ್ರ ವಿಸರ್ಜನೆಗೆ ಮಾಡುವಾಗ ಡ್ರೈವರ್ ಧಾರಣ ಸಾವನ್ನಪ್ಪಿದ್ದಾರೆ. ರಸ್ತೆಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುವಾಗ ಘಟನೆ ನಡೆದಿದೆ. ಲಾರಿಯ ಹ್ಯಾಂಡ್‌ ಬ್ರೇಕ್‌ ಮಾಡದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದ ಆನೆ ಸ್ವಲ್ಪ ಅಲುಗಾಡಿದ್ದರಿಂದ ಲಾರಿ ಸೀದಾ ಮುಂದಕ್ಕೆ ಹೋಗಿ ಚಾಲಕನ ಮೇಲೆ ಹರಿದಿದೆ.ತಿರುಚ್ಚಿ ಜಿಲ್ಲೆಯ ಶ್ರೀ ರಂಗಂ ಪ್ರದೇಶಕ್ಕೆ ಸೇರಿದ ಭಾಸ್ಕರನ್ ಬಳಿ 3 ಸಾಕಾನೆಗಳು ಇದ್ದವು. ಇದರಲ್ಲಿ ಕರ್ನಾಟಕ ರಾಜ್ಯದ ಬನ್ನೇರುಘಟ್ಟ ಪ್ರದೇಶದ ಪೆರುಮಾಳ್ ದೇವಸ್ಥಾನದಲ್ಲಿ ದಸರಾ ಹಬ್ಬವನ್ನು ಆಚರಿಸಲು ರಾಣಿ ಆನೆಯನ್ನು ಕರೆದೊಯ್ಯಲಾಗಿತ್ತು. 6 ಜನರು ರಾತ್ರಿ ಈಚರ್ ವಾಹನದಲ್ಲಿ ತಿರುಚ್ಚಿಗೆ ತೆರಳಿದರು. ಆದರೆ, ಆನೆಯಿರುವ ಸ್ಥಳಕ್ಕೆ ತೆರಳುವ ಮುನ್ನವೇ ದುರಂತ ಸಂಭವಿಸಿದೆ. ಆನೆಯ ರಕ್ಷಣಾ ಕಾರ್ಯದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತ ಮಾಡಲಾಗಿತ್ತು.ಎರಡು ಕ್ರೇನ್‌ಗಳ ಸಹಾಯದಿಂದ ಆನೆ ಯನ್ನ ಸುರಕ್ಷಿತವಾಗಿ ಹೊರತೆಗೆಯಲಾಯಿತು. ನಂತರ ಲಾರಿ ಚಾಲಕ ಆರೋಗ್ಯಸ್ವಾಮಿ ಅವರ ಮೃತದೇಹವನ್ನು ಹೂಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದರಿಂದ ಮಧ್ಯರಾತ್ರಿ ಸುಮಾರು 1 ಗಂಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೂಸೂರು, ಅನ್ನೋ ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.



Leave a Comment: