ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಲಂಚ ಪಡೆಯುವವನ ಜೊತೆ ಕೊಡುವವನಿಗೂ ಶಿಕ್ಷೆ ಆಗಬೇಕು - ಹೈಕೋರ್ಟ್

Posted by Vidyamaana on 2023-06-30 08:25:16 |

Share: | | | | |


ಲಂಚ ಪಡೆಯುವವನ ಜೊತೆ ಕೊಡುವವನಿಗೂ ಶಿಕ್ಷೆ ಆಗಬೇಕು - ಹೈಕೋರ್ಟ್

ಬೆಂಗಳೂರು : ಲಂಚ ಪಡೆಯುವ ವ್ಯಕ್ತಿ ಮಾತ್ರವಲ್ಲ ಲಂಚ ಕೊಡುವ ವ್ಯಕ್ತಿಗೂ ಶಿಕ್ಷೆ ಆಗಬೇಕು ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ವಿರುದ್ಧದ ಲಂಚದ ಪ್ರಕರಣದಲ್ಲಿ ಐವರು ಆರೋಪಿಗಳ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಕುಮಾರ್‌ಗೆ ಲಂಚ ನೀಡಲು ಮುಂದಾದ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಕರ್ನಾಟಕ ಅರೋಮಾ ಕಂಪೆನಿ ಮಾಲೀಕರಾದ ಕೈಲಾಶ್ ಎಸ್. ರಾಜ್, ವಿನಯ್ ಎಸ್. ರಾಜ್, ಚೇತನ್ ಮಾರ್ಲೇಚ, ಸಿಬ್ಬಂದಿ ಅಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.ಲಂಚ ಪಡೆಯುವ ವ್ಯಕ್ತಿಯ ಜೊತೆಜೊತೆಗೇ ಲಂಚ ಕೊಡುವ ವ್ಯಕ್ತಿಯನ್ನೂ ಶಿಕ್ಷೆಗೆ ಒಳಪಡಿಸಬೇಕು ಮತ್ತು ಲಂಚದ ಪ್ರವೃತ್ತಿಯನ್ನು ಬುಡಸಮೇತ ಹೊಸಕಿ ಹಾಕಲು ಇದು ಸಕಾಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ

ಟಿಪ್ಪರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು | ಮೃತ ಸವಾರನ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-06-10 03:37:31 |

Share: | | | | |


ಟಿಪ್ಪರಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು | ಮೃತ ಸವಾರನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ಟಿಪ್ಪರ್ ಹಾಗೂ ದ್ವಿಚಕ್ರ ನಡುವೆ ಜೂ 2 ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ಸವಾರ ಮಹಮ್ಮದ್ ಅನೀಸ್ ಮೃತಪಟ್ಟವರು. ಸಹಸವಾರ ಹಮೀದ್ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಬಿಸಿರೋಡ್ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಗೆ ನೀರಕಟ್ಟೆಯಿಂದ ಬಿಸಿರೋಡ್ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಅನೀಸ್ ಅವರ ಮುಖಕ್ಕೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸಹಸವಾರ ಹಮೀದ್ ಅವರ ಕಾಲಿಗೆ ಗಾಯವಾಗಿತ್ತು.

ಗಂಭೀರ ಗಾಯಗೊಂಡಿದ್ದ ಅನೀಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅನೀಸ್ ಅವರು ಮುಂಭಾಗದಿಂದ ಬರುತ್ತಿದ್ದ ಬೇರೆ ನಂಬರ್  ನ ಮೋಟಾರ್ ಸೈಕಲ್ ಸವರನಿಗೆ  ನಮಸ್ಕಾರ ಮಾಡುತ್ತಾ, ರಾಂಗ್ ಸೈಡಿನಿಂದ ವಾಹನ ಚಲಾಯಿಸುತ್ತಿದ್ದರು. ಇದರಿಂದಾಗಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಟಿಪ್ಪರ್ ಚಾಲಕ ಆಶಿಫ್ ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದ ಮೃತಪಟ್ಟ ಅನೀಸ್ ವಿರುದ್ಧ ಐಪಿಸಿ ಕಲಂ 279, 337, 304(ಎ) ಅಡಿಯಲ್ಲಿ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

Posted by Vidyamaana on 2024-04-26 18:34:04 |

Share: | | | | |


ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವಂತೆ ಚುನಾವಣಾ ಆಯೋಗ ಎಷ್ಟೇ ಜಾಗೃತಿ ಮೂಡಿಸಿದ್ರೂ ಜನರು ಮಾತ್ರ ಅದೆಷ್ಟು ನಿರ್ಲಕ್ಷ್ಯವಹಿಸಿದ್ದಾರೆಂದರೆ ಅವರು ತಮ್ಮೂರಲ್ಲೇ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುತ್ತಿಲ್ಲ. ಕೆಲವರು ಬಿಸಿಲು ಝಳಕ್ಕೆ ಹೆದರಿ ಮನೆಯಲ್ಲಿ ಉಳಿದರೆ ಇನ್ನು ಕೆಲವರು ಮತದಾನದ ದಿನದಂದು ರಜೆ ಸಿಕ್ಕಿದ್ದಕ್ಕೆ ಟ್ರಿಪ್ ಹೋಗುತ್ತಿರೋ ಜನರ ನಡುವೆ ಕುಂತೂರು ಎಮಿರೇಟ್ಸ್ ಕ್ಲಬ್ ಇದರ ಗೌರವಾಧ್ಯಕ್ಷ ಸತ್ತಾರ್ ಯು ಕೆ ಮತದಾನ ಮಾಡುವ ಸಲುವಾಗಿಯೇ 

ಕೆಸರು ನೀರನಲ್ಲಿ ಮುಳುಗಿಸಿ ಸಾಯಿಸಿದಳು ತಾಯಿ

Posted by Vidyamaana on 2023-09-14 11:45:45 |

Share: | | | | |


ಕೆಸರು ನೀರನಲ್ಲಿ ಮುಳುಗಿಸಿ ಸಾಯಿಸಿದಳು ತಾಯಿ

ಮಂಜೇಶ್ವರ: ಒಂದೂವರೆ ತಿಂಗಳ ಹಸುಗೂಸನ್ನು ಮಗುವಿನ ತಾಯಿಯೇ ಕೆಸರು ನೀರಿನಲ್ಲಿ ಮುಳುಗಿಸಿ ಸಾಯಿಸಿರುವ ಹೃದಯವಿದ್ರಾವಕ ಘಟನೆಯೊಂದು ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪಚ್ಚಂಪಾರೆ ಎಂಬಲ್ಲಿ ನಡೆದಿದೆ.


ಸತ್ಯನಾರಾಯಣ ಮತ್ತು ಸುಮಂಗಲಿ ದಂಪತಿಯ ಒಂದೂವರೆ ತಿಂಗಳ ಹೆಣ್ಣುಮಗುವೇ ಈ ರೀತಿಯಾಗಿ ಸಾವಿಗೀಡಾಗಿದ್ದು, ಕೆಲ ದಿನಗಳ ಹಿಂದೆ ತಾಯಿ ಮತ್ತು ಮಗು ನಾಪತ್ತೆಯಾಗಿದ್ದರು.


ಬಳಿಕ ಮನೆಯವರು ಹುಡುಕಲು ಪ್ರಾರಂಭಿಸಿದಾಗ, ಮನೆಯ ಸ್ವಲ್ಪ ದೂರದಲ್ಲೇ ಸುಮಂಗಲಿ ಪತ್ತೆಯಾಗಿದ್ದಾರೆ. ಆಕೆಯ ಬಳಿ ಮಗುವಿನ ಕುರಿತು ವಿಚಾರಿಸಿದಾಗ, ಮಗುವನ್ನು ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೆಸರು ನೀರಿನಲ್ಲಿ ಮುಳುಗಿಸಿ ಸಾಯಿಸಿರುವುದಾಗಿ ಆಕೆ ತಿಳಿಸಿದಾಗ ಎಲ್ಲರಿಗೂ ಶಾಕ್ ಆಗಿತ್ತು.


ಕೂಡಲೇ ಆಕೆ ಹೇಳಿದ ಸ್ಥಳದಲ್ಲಿಹುಡುಕಿದಾಗ ಅಲ್ಲಿ ಶಿಶು ಪತ್ತೆಯಾಗಿದ್ದು ತಕ್ಷಣವೇ ಆ ಮಗುವನ್ನು ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆ ಪುಟ್ಟ ಕಂದಮ್ಮ ತನ್ನ ಉಸಿರನ್ನು ನಿಲ್ಲಿಸಿಯಾಗಿತ್ತು!


ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಗಡುಕಿ ಮಹಿಳೆಯನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ಮಗುವನ್ನು ಕೊಲೆ ಮಾಡಲು ಬೇರಿನ್ಯಾವುದೇ ಕಾರಣವಿದೆಯೇ ಎಂಬುದರ ಕುರಿತೂ ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

Posted by Vidyamaana on 2024-06-03 07:05:40 |

Share: | | | | |


BIG NEWS : ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

ಬೆಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ನಾಳೆ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿಆರ್‍ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ.

ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಹಿತದೃಷ್ಠಿಯಿಂದ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.

ಷರತ್ತುಗಳು:

ಪ್ರತಿಬಂಧಕಾಜ್ಞೆ ಅನ್ವಯ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ.

ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

ವಿಜಯೇಂದ್ರ ಆದ್ಯತೆಗೆ ಅಸಮಾಧಾನ: 2ನೇ ದಿನದ ಪಾದಯಾತ್ರೆಯಿಂದ ಮುಖಂಡರು ನಾಪತ್ತೆ!

Posted by Vidyamaana on 2024-08-04 17:55:08 |

Share: | | | | |


ವಿಜಯೇಂದ್ರ ಆದ್ಯತೆಗೆ ಅಸಮಾಧಾನ: 2ನೇ ದಿನದ ಪಾದಯಾತ್ರೆಯಿಂದ ಮುಖಂಡರು ನಾಪತ್ತೆ!

   ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ ಬೇಗುದಿ ಶುರುವಾಗಿದೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚಿದೆ. ಈ ಭಾಗದಲ್ಲಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದ್ದರಿಂದ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಂತರ ಪಾದಯಾತ್ರೆ ಉದ್ಘಾಟನೆಯಲ್ಲಿ ಕಾಣಿಸಿಕೊಂಡರೂ ನಂತರ ನಾಪತ್ತೆಯಾದರು.

Recent News


Leave a Comment: