ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಸೋಮೇಶ್ವರ ಕಡಲಿಗಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Posted by Vidyamaana on 2023-12-09 20:01:00 |

Share: | | | | |


ಸೋಮೇಶ್ವರ ಕಡಲಿಗಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಉಳ್ಳಾಲ, ಡಿ.9: ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ‌. 


ಸೋಮೇಶ್ವರದ ಪರಿಜ್ಞಾನ ಪಿಯು ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಸಮುದ್ರ ಪಾಲಾದವರು. ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಯಶ್ವಿತ್ ಮತ್ತು ಯುವರಾಜನ್ನ ಕಡಲಿನ ರಕ್ಕಸ ಅಲೆಗಳು ಎಳೆದು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಈಜು ತಜ್ಞರು ಭೇಟಿ ನೀಡಿದ್ದು ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

Posted by Vidyamaana on 2024-01-03 07:33:20 |

Share: | | | | |


ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

ಬೆಂಗಳೂರು : ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಬೇಡಿಕೆ ಮತ್ತು ಸ್ವೀಕಾರ ಕುರಿತು ಸ್ಪಷ್ಟ ಪುರಾವೆಗಳಿರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗದಗದ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್‌ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಲಂಚ ಪ್ರಕರಣವನ್ನು ರದ್ದುಪಡಿಸಿದೆ.ಲಂಚ ಸ್ವೀಕಾರ ಆರೋಪದ ಮೇಲೆ ತಮ್ಮ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸೆಕ್ಷನ್ 7(ಎ) ಪ್ರಕಾರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದಾಳಿ ನಡೆಸುವಂತಹ ಸಂದರ್ಭದಲ್ಲಿ ಆರೋಪಿ ಸರ್ಕಾರಿ ಅಧಿಕಾರಿ ಮುಂದೆ ಕೆಲಸ ಬಾಕಿಯಿದ್ದು, ಅದನ್ನು ನಿರ್ವಹಿಸಲು ಅವರು ಲಂಚಕ್ಕಾಗಿ ಬೇಡಿಕೆ ಇಟ್ಟಿರಬೇಕಾಗುತ್ತದೆ ಹಾಗೂ ಲಂಚ ಸ್ವೀಕರಿಸಿರಬೇಕಾಗುತ್ತದೆ. ಆಗಷ್ಟೇ ಆರೋಪ ಸಾಬೀತುಪಡಿಸಲು ಸಾಧ್ಯವಿದೆ ಎಂದು ಪೀಠ ಹೇಳಿದೆ.


ಈ ಪ್ರಕರಣದಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯ ಶೋಧನೆ ನಡೆಸಿದ್ದ ಎಸಿಬಿ ತನಿಖಾಧಿಕಾರಿಗಳು ಅರ್ಜಿದಾರರ ಕೈಯಲ್ಲಿದ್ದ 9,390 ರು. ಮತ್ತು ಅವರ ಜೇಬಿನಿಂದ 50 ರು. ವಶಕ್ಕೆ ಪಡೆದುಕೊಂಡಿದ್ದರು. ಆ ಮೊತ್ತವನ್ನು ಕಚೇರಿಯಲ್ಲಿ ದಾಖಲೆಗಳ ನೋಂದಣಿಗಾಗಿ ಶುಲ್ಕ ಸ್ವೀಕರಿಸಲಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ. ಹೀಗಿರುವಾಗ ಅರ್ಜಿದಾರರು ಬೇಡಿಕೆಯಿಟ್ಟು ಲಂಚ ಸ್ವೀಕರಿಸಿದ್ದಾರೆ ಎಂಬ ಅಂಶ ನಿಗೂಢವಾಗಿದೆ.ಮೇಲಾಗಿ ಎಸಿಬಿ ಅಧಿಕಾರಿಗಳು ಶೋಧನೆ ವೇಳೆ ಅರ್ಜಿದಾರರು ಬೇಡಿಕೆಯಿಟ್ಟ ಲಂಚ ಸ್ವೀಕರಿಸಿದ ಘಟನೆಯ ಪಂಚನಾಮೆ ಮಾಡಿಲ್ಲ. ಆದ್ದರಿಂದ ಪ್ರಕರಣ ವಿಚಾರಣೆಗೆ ಮುಂದುವರೆಸಿದರೆ ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. ಪ್ರಕರಣದ ವಿವರ:


ಗದಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಿಬ್ಬಂದಿ ಸಾರ್ವಜನಿಕರ ಕೆಲಸ ನಿರ್ವಹಣೆಗಾಗಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ. ಹೀಗಾಗಿ, ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸತ್ಯಾಂಶ ಪರಿಶೀಲಿಸಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು ಎಂದು ಕೋರಿ 2019ರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿಗೆ ಅನಾಮಧೇಯ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಪೊಲೀಸರು, ಗದಗ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಭೇಟಿ ನೀಡಿ ಶೋಧಿಸಿದ್ದರು. ಈ ವೇಳೆ ಅರ್ಜಿದಾರರ ಕೈಯಲ್ಲಿ 9,390 ರು. ಇದ್ದವು. ಆ ಹಣ ವಶಪಡಿಸಿಕೊಂಡಿದ್ದ ಎಸಿಬಿ ಪೊಲೀಸರು, ಶ್ರೀಕಾಂತ್‌ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಹಾಗೂ ಲಂಚ ಸ್ವೀಕರಿಸಿದ ಆರೋಪದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿತ್ತು. ಅದನ್ನು ಪ್ರಶ್ನಿಸಿ ಶ್ರೀಕಾಂತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು

ಈಶ್ವರಮಂಗಳ : ಒಂಟಿ ಸಲಗದ ಕಾಟ: ಜನತೆ ಪೀಕಲಾಟ

Posted by Vidyamaana on 2024-01-03 16:28:18 |

Share: | | | | |


ಈಶ್ವರಮಂಗಳ : ಒಂಟಿ ಸಲಗದ ಕಾಟ: ಜನತೆ ಪೀಕಲಾಟ

ಈಶ್ವರಮಂಗಲ: ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗ ಜ.3ರ ಬುಧವಾರ ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟಕ್ಕೆ ನುಗ್ಗಿ ಬಾಳೆ ಗಿಡ ಹಾನಿ ಮಾಡಿದ್ದು, ಹಲಸು ಮರದ  ಕೊಂಬೆಗಳನ್ನು ಮುರಿದು ತಿಂದಿದೆ.ಈಗಾಗಲೇ , ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಒಂಟಿ ಸಲಗ ಒಂದು ಗುಂಪಿನಿಂದ ಬೇರ್ಪಟ್ಟು ಕನಕಮಜಲು ಮುಗೇರಿನಿಂದ ಪೆರ್ನಾಜೆಗೆ ಬಂದು  ಹಾನಿಗೊಳಿಸಿ ಪುನಃ ಮುಗೇರಿನ ಕಡೆಗೆ ತೆರಳಿದೆ.ಒಂಟಿ ಸಲಗ ಮತ್ತೆ ಮತ್ತೆ ಜನನಿಬಿಡ ಪ್ರದೇಶಗಳಿಗೆ ದಾಳಿ ಮಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಈಗಾಗಲೇ ಈ ಆನೆಯನ್ನು ಹಿಡಿದು ಬೇರೆಡೆಗೆ ಸಾಗಿಸುವ ಕೆಲಸ ಆಗಬೇಕೆಂದು ಕೃಷಿಕರು ಆಗ್ರಹಿಸುತ್ತಾರೆ.


ಒಂಟಿ ಸಲಗ ಇನ್ನಷ್ಟು ಕೃಷಿ ಹಾನಿಗೊಳಿಸುವ ಸಾಧ್ಯತೆ ಇದ್ದು,  ಕೃಷಿಕರು ರಾತ್ರಿ ತೋಟಕ್ಕೆ ಹೋಗದಂತೆ ಎಚ್ಚರದಿಂದಿದ್ದು, ಪ್ರಾಣ ಹಾನಿಯಾಗದಂತೆ ಜಾಗೃತೆ ವಹಿಸುವಂತೆ ಅರಣ್ಯ ಇಲಾಖೆಯವರು ಸಲಹೆ ನೀಡಿದ್ದಾರೆ.

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Posted by Vidyamaana on 2024-03-13 11:46:25 |

Share: | | | | |


ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

*ಬೆಳ್ತಂಗಡಿ (ಮಾ -12):* ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದೆ.

         ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.

ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.

        ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

Posted by Vidyamaana on 2024-03-09 14:40:53 |

Share: | | | | |


ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್‌ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ.ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್‌ ಸ್ಟಾರ್ ಪ್ರೈವೇಟ್‌ ಲಿಮಿಟೆಡ್‌ ಜತೆ ಅಡಕೆ ಆಮದು ಒಪ್ಪಂದ ಮಾಡಿಕೊಂಡಿರುವುದಾಗಿ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಶುಕ್ರವಾರ ತಿಳಿಸಿದೆ.


2022ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಇದು 4.04 ಕೋಟಿ ರು.ಗೆ ಕುಸಿದಿತ್ತು. ಇದೀಗ ಲಂಕಾದಿಂದ ಭಾರಿ ಪ್ರಮಾಣದಲ್ಲಿ ಆಮದಿಗೆ ಬ್ರಿಟನ್‌ ಕಂಪನಿ ಮುಂದಾಗಿರುವುದರಿಂದ ಸಹಜವಾಗಿಯೇ ಅಡಕೆ ಬೆಳೆಗಾರರುಕಂಗಾಲಾಗುವಂತಾಗಿದೆ. ದೇಶದಲ್ಲಿ ಅಡಕೆ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ದೇಶದ ಹಲವು ಸಂಪ್ರದಾಯ ಹಾಗೂ ಸಮಾರಂಭಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ..ಇಂಡೋನೇಷ್ಯಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದಿಂದ ಭಾರತ ಅಡಕೆ ಆಮದು ಮಾಡಿಕೊಳ್ಳುತ್ತದೆ. ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಕೇಜಿಗೆ 351 ರು.ಗಿಂತ ಕಡಿಮೆ ಇಲ್ಲದ ಅಡಕೆ (ಸುಪಾರಿ) ಆಮದಿಗೆ ಮಾತ್ರವೇ ಅವಕಾಶವಿದೆ ಎಂದುದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ತಿಳಿಸಿದೆ.

ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

Posted by Vidyamaana on 2023-05-01 09:19:13 |

Share: | | | | |


ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಅಶೋಕ್ ಕುಮಾರ್ ರೈ ಅವರು ಎಸ್.ಡಿ.ಪಿ.ಐ. ಅನ್ನು ಕೆಣಕಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಾಗುವುದು ಎಂದು ಎಸ್.ಡಿ.ಪಿ.ಐ. ರಾಜ್ಯ ವಕ್ತಾರ ರಿಯಾಜ್ ಕಡಂಬು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲೀಲ್ ಕರೋಪಾಡಿ ಕೊಲೆಗೈದ ವ್ಯಕ್ತಿಗೆ ರಕ್ಷಣೆ ನೀಡಿರುವ, ತನ್ನ ಅಪಾರ್ಟ್ ಮೆಂಟಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೇಟ್ ನೀಡಿದೆ. ಭಾಷಣಗಳಲ್ಲಿ ಕಾಂಗ್ರೆಸ್ ಸೆಕ್ಯುಲರ್ ಪಕ್ಷ ಎಂದು ಹೇಳಿಕೊಳ್ಳುವ ರಾಷ್ಟ್ರೀಯ ನಾಯಕರು, ಪುತ್ತೂರಿನಲ್ಲಿ ಸಂಘ ಪರಿವಾರದ ವ್ಯಕ್ತಿಗೆ ಟಿಕೇಟ್ ನೀಡಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥೀ ಸಂಘ ಪರಿವಾರದವರು, ಕಾಂಗ್ರೆಸಿನ ಅಭ್ಯರ್ಥಿಯೂ ಸಂಘ ಪರಿವಾರದವರು, ಪಕ್ಷೇತರರಾಗಿ ಸ್ಪರ್ಧಿಸಿದವರೂ ಸಂಘ ಪರಿವಾರದವರು. ಆದ್ದರಿಂದ ಪುತ್ತೂರಿನಲ್ಲಿ ನ್ಯಾಯ, ನೀತಿಯ ಪರವಾಗಿರುವ ಎಸ್.ಡಿ.ಪಿ.ಐ. ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದೆ ಎಂದರು.

ಫ್ಯಾಸಿಸ್ಟ್ ಸರಕಾರದ ಧೊರಣೆಯಿಂದಾಗಿ ಶಾಫಿ ಬೆಳ್ಳಾರೆ ಜೈಲಿಗೆ ಹೋಗುವಂತಾಯಿತು. ಕೋಮುವಾದವನ್ನು ಸೃಷ್ಟಿಸಿ ಆ ಮೂಲಕ ಆಡಳಿತವನ್ನು ನಡೆಸುವ ಪಕ್ಷ ಬಿಜೆಪಿ, ಧರ್ಮಗಳ ನಡುವೆ ಕಂದಕ ಸೃಷ್ಟಿ ಮಾಡುತ್ತಿವೆ. ಇದರಿಂದಾಗಿ ಇಂದು ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ ಎಂದು ವಿಶ್ಲೇಷಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರ ಸಮಿತಿ ಸದಸ್ಯ ಇಬ್ರಾಹಿಂ ಹಾಜಿ ಸಾಗರ್, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮರ್ದ, ತಾಲೂಕು ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

Recent News


Leave a Comment: