ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಕದ್ದ ಸ್ಕೂಟಿಯಲ್ಲಿ ತಿರುಗಾಡುತ್ತಲೇ ಹಲವೆಡೆ ಕಳ್ಳತನ – ಚಾಲಾಕಿ ಖದೀಮ ಸುರೇಶ ಅಂದರ್

Posted by Vidyamaana on 2023-08-26 09:01:14 |

Share: | | | | |


ಕದ್ದ ಸ್ಕೂಟಿಯಲ್ಲಿ ತಿರುಗಾಡುತ್ತಲೇ ಹಲವೆಡೆ ಕಳ್ಳತನ – ಚಾಲಾಕಿ ಖದೀಮ ಸುರೇಶ ಅಂದರ್

ಬೆಳ್ತಂಗಡಿ : ಪೊಲೀಸರಿಗೆ ತಲೆನೋವಾಗಿದ್ದ ಸರಣಿ ಅಂತರ್ ರಾಜ್ಯ ಕಳ್ಳನೊಬ್ಬ ಸ್ಕೂಟರ್ ಕದ್ದು ಬೆಳ್ತಂಗಡಿ ತಾಲೂಕಿನ ಹಲವೆಡೆ ಕನ್ನ ಹಾಕಿ ಅದರಲ್ಲಿ ಸಿಕ್ಕಿದ್ದ ಹಣವನ್ನು ಜೂಜಾಟಕ್ಕೆ ಬಳಸುತ್ತಿದ್ದ ಕದಿಮನೊಬ್ಬನನ್ನು ಕಳ್ಳತನ ಮಾಡಿ ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಆಗಸ್ಟ್ 25 ರಂದು ಧರ್ಮಸ್ಥಳ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ‌.


ಆಗಸ್ಟ್  9 ರಂದು ರಾತ್ರಿ 10 ಗಂಟೆಯಿಂದ ಆಗಸ್ಟ್ 10 ರ ಬೆಳಿಗ್ಗೆ 6.30 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಪ್ರಸನ್ನ ಅರಿಗ ಎಂಬವರ ಪದ್ಮಾಂಬ ಪ್ರಾವಿಜನ್ ಸ್ಟೋರ್ ರಾಡ್ ನಿಂದ ಬೀಗ ಮುರಿದು ಒಳಹೋಗಿ ಕ್ಯಾಶ್ ಕೌಂಟರ್ ನಲ್ಲಿದ್ದ ಐದು ಸಾವಿರ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಸನ್ನ ಅರಿಗ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 


 

ಧರ್ಮಸ್ಥಳ ಪೊಲೀಸ್‌ ಸಬ್ ಇನ್ಸ್ಪೆಕ್ಟರ್ ಅನಿಲ್‌ ಕುಮಾರ್ ತಂಡ ಆಗಸ್ಟ್25 ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಕಳ್ಳತನ ಮಾಡಿಕೊಂಡು ಸ್ಕೂಟರ್ ವಾಹನದಲ್ಲಿ ಕಾರ್ಕಳ ಮನೆಗೆ ಹೋಗುತ್ತಿದ್ದಾಗ ಅಡ್ಡಹಾಕಿ ವಾಹನ ಪರಿಶೀಲನೆ ನಡೆಸಿದಾಗ ದಾಖಲೆಗಳಿಲ್ಲದೆ  ಅನುಮಾನಸ್ಪದವಾಗಿ ವರ್ತಿಸುತ್ತಿದ್ದಾಗ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಕೂಟರ್ ಕಳ್ಳತನ ಮಾಡಿ ಅದರಲ್ಲಿಯೇ ಹಲವು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ‌‌. ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ,ಅತ್ತೂರು ಗ್ರಾಮದ ದಿ.ಕೊರಗಪ್ಪ ಪೂಜಾರಿ ಮಗನಾದ  ಸುರೇಶ ಕೆ. ಪೂಜಾರಿ(50) ಎಂಬಾತ ಆರೋಪಿಯಾಗಿದ್ದಾನೆ.ಈ ಆರೋಪಿಯು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ KA-21-U-9418 ನಂಬರಿನ ಸ್ಕೂಟಿಯೊಂದನ್ನು ಕಳ್ಳತನ ಮಾಡಿ ಸದ್ರಿ ಸ್ಕೂಟಿಯನ್ನು ಉಪಯೋಗಿಸಿಕೊಂಡು ಸುಮಾರು ಒಂದುವರೆ ತಿಂಗಳಿನಿಂದ ಧರ್ಮಸ್ಥಳ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ನೆರಿಯಾ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ, ವೇಣೂರು ಸೇರಿ ಸುಮಾರು 25 ಕ್ಕೂ ಹೆಚ್ಚು ಕಡೆಗಳಲ್ಲಿ ಸರಣಿ ಕಳವು ಮಾಡಿದ್ದು. ಈತನು ಮಟ್ಕಾ (ಓಸಿ) ಆಡುವ ಚಟವುಳ್ಳವನಾಗಿದ್ದು, ಕಳ್ಳತನ ಮಾಡಿದ ಹಣವನ್ನು ಮಟ್ಕಾ ಆಟಕ್ಕೆ ಕಟ್ಟಿ ಸೊತಿರುವುದಾಗಿ ತನಿಖೆ ವೇಳೆ ತಪ್ಪೊಪ್ಪಿಕೊಂಡಿರುತ್ತಾನೆ. 


ಈತನು ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ ಠಾಣೆ, ಹಿರಿಯಡಕ ಠಾಣೆ, ಪಡುಬಿದ್ರಿ ಠಾಣೆ, ಮುಲ್ಕಿ ಠಾಣೆ, ಹೆಬ್ರಿ ಠಾಣೆ, ಉಡುಪಿ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ, ಮತ್ತು ಬೆಳಗಾಂ ಮಾರ್ಕೆಟ್‌ ಪೊಲೀಸ್‌ ಠಾಣೆಗಳು ಸೇರಿ ಒಟ್ಟು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದು. ಕಳೆದ ಎರಡು ತಿಂಗಳು ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರಗೆ ಬಂದು ವಾಪಸ್ ಕಳ್ಳತನ ಕೃತ್ಯ ಮುಂದುವರೆಸಿಕೊಂಡಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಆರೋಪಿಯಿಂದ 20,220 ರೂಪಾಯಿ ನಗದು ಹಾಗೂ ಕಳ್ಳತನ ಮಾಡಿ ಕೃತ್ಯಕ್ಕೆ ಉಪಯೋಗಿಸಿದ KA-21-U-9418 ನಂಬರಿನ ಸ್ಕೂಟಿ ವಾಹನ ಅಂದಾಜು ಮೌಲ್ಯ 25 ಸಾವಿರ ಅಗಿದ್ದು ಅದನ್ನು ವಶಪಡಿಸಿಕೊಂಡಿದ್ದು ವಶಪಡಿಸಿಕೊಂಡಿರುವ ಸೊತ್ತುಗಳು ಒಟ್ಟು ಅಂದಾಜು ಮೌಲ್ಯ 45 ಸಾವಿರ ಅಗಿದ್ದು. ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಗಸ್ಟ್ 26 ರಂದು (ಇಂದು) ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ‌.


ಈ ಪ್ರಕರಣದಲ್ಲಿ ಆರೋಪಿಯ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ (ಕಾ.ಸು)ಅನಿಲ್ ಕುಮಾರ್ ಡಿ, ಪಿ.ಎಸ್.ಐ (ತನಿಖೆ) ಸಮರ್ಥ ಗಾಣಿಗೇರ್ ಅಲ್ಲದೇ ಈ ಹಿಂದೆ ಪಿಎಸ್ಐ ಆಗಿದ್ದ (ತನಿಖೆ) ಲೋಲಾಕ್ಷ ಪಿ ರವರ ನೇತೃತ್ವದ ಸಿಬ್ಬಂದಿಗಳಾದ ಎ.ಎಸ್.ಐ ಸ್ಯಾಮುವೆಲ್ ತಂಡದ ಸಿಬ್ಬಂದಿಗಳಾದ ರಾಜೇಶ್‌, ಪ್ರಶಾಂತ್, ಶೇಖರ್, ಸತೀಶ ನಾಯ್ಕ ಜಿ, ಶಶಿಧರ, ಮಂಜುನಾಥ,ಧರ್ಮಪಾಲ್, ಅಸ್ಲಾಂ, ಕೃಷ್ಣಪ್ಪ, ಪ್ರಮೋದಿನಿ, ಮಲ್ಲಿಕಾರ್ಜುನ,ಅಭಿಜಿತ್ ಮೆಹಬೂಬ್, ನಾಗರಾಜ ಬುಡ್ರಿ, ದೀಪು, ಮಧು, ಹರೀಶ್, ಜಗದೀಶ್ , ಚಾಲಕ ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಗ್ರಾಹಕರ ಜವಾಬ್ದಾರಿ ನೆನಪಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ!!

Posted by Vidyamaana on 2024-02-12 07:42:40 |

Share: | | | | |


ಗ್ರಾಹಕರ ಜವಾಬ್ದಾರಿ ನೆನಪಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ!!

ವಿಟ್ಲ: ಜಿಲ್ಲೆ ಮಾತ್ರವಲ್ಲ ರಾಜ್ಯದ ಚಿತ್ತವನ್ನೇ ತನ್ನತ್ತ ಸೆಳೆದುಕೊಂಡ ಘಟನೆ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ. ವಿರಳಾತೀವಿರಳ ಪ್ರಕರಣದಲ್ಲಷ್ಟೇ ಬ್ಯಾಂಕ್ ದರೋಡೆಯನ್ನು ದರೋಡೆಕೋರರು ಯಶಸ್ವಿಯಾಗಿ ನಡೆಸುತ್ತಾರೆ. ಅಂತಹ ಸಿನಿಮೀಯ ಘಟನೆ ಅಡ್ಯನಡ್ಕದಲ್ಲಿ ನಡೆದಿದ್ದು, ದರೋಡೆಕೋರರು ನಗ ಹಾಗೂ ನಗದಿನೊಂದಿಗೆ ಪರಾರಿಯಾಗಿದ್ದಾರೆ.

ಇದೀಗ ಆರೋಪಿಗಳಿಬ್ಬರ ಪತ್ತೆ ಆಗಿರಬಹುದು. ಪೊಲೀಸರು ತಮ್ಮ ಶ್ರಮದ ಎಲ್ಲೆ ಮೀರಿ ದರೋಡೆಕೋರರ ಹೆಡೆಮುರಿ ಕಟ್ಟಿರಬಹುದು. ಆದರೆ, ಈ ಪ್ರಕರಣ ಗ್ರಾಹಕರ ಜವಾಬ್ದಾರಿಯನ್ನು ನೆನಪಿಸಿದೆ ಎಂದು ಹೇಳಿದರೆ ತಪ್ಪಾಗದು.

ಹೌದು! ಎಚ್ಚರ ಗ್ರಾಹಕ ಎಚ್ಚರ!! ಶ್ಲೋಗನ್ ನೀವು ಎಲ್ಲಾ ಕಡೆಯೂ ಕೇಳಿರಬಹುದು. ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಅನ್ವಯಿಸುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬ್ಯಾಂಕಿಂಗ್ ಕ್ಷೇತ್ರ ಅತೀ ಸೇಫ್ ಆಗಿದೆ, ಬ್ಯಾಂಕಿಂಗ್ ಉದ್ಯಮಿಗಳು ಹದ್ದಿನ ಕಣ್ಣಿನಿಂದ ನಮ್ಮ ಆಸ್ತಿಯನ್ನು ಕಾಪಾಡುತ್ತಾರೆ ಎಂಬ ಭ್ರಮೆಯಿಂದ ಈಗಲಾದರೂ ಸ್ವಲ್ಪ ಹೊರಬಂದು ನೋಡಿ. ಅಡ್ಯನಡ್ಕ ಕರ್ಣಾಟಕ ಬ್ಯಾಂಕನ್ನು ದರೋಡೆ ಮಾಡುವ ಹಿಂದೆ ಬ್ಯಾಂಕಿನಿಂದ ನಡೆದಿರಬಹುದಾದ ತಪ್ಪುಗಳನ್ನೇ ಗಮನಿಸಿದರೂ ಸಾಕು!!

1) ದರೋಡೆಕೋರರು ಬ್ಯಾಂಕ್ ಒಳನುಗ್ಗಲು ಬಳಸಿದ ಕಿಟಕಿಯನ್ನು ಇದೀಗ ಮುಚ್ಚಲಾಗಿದೆ. ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಕಟ್ಟಡದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಲಾಗುತ್ತಿದೆ.

2) ಸ್ಟ್ರಾಂಗ್ ರೂಮ್ ಅನ್ನು ಇದೀಗ ಮತ್ತಷ್ಟು ಭದ್ರ ಪಡಿಸಲಾಗುತ್ತಿದೆ. ಅದರ ಬಾಗಿಲುಗಳನ್ನು ಕ್ರೇನ್ ಸಹಾಯದಿಂದ ಅಳವಡಿಸಲಾಗುತ್ತಿದೆ.

ತಾವೇ ನಂಬರ್  ವನ್ ಎಂದು ಬಿಂಬಿಸಿಕೊಳ್ಳುತ್ತಾ, ಗ್ರಾಮ ಗ್ರಾಮದಲ್ಲೂ ತಲೆ ಎತ್ತುತ್ತಿರುವ ಬ್ಯಾಂಕಿಂಗ್ ಉದ್ಯಮ ಬರೀಯ ಉದ್ಯಮವಾಗಿದೆಯಷ್ಟೇ. ಗ್ರಾಹಕರು ಅಡ ಇಡುವ ಆಸ್ತಿಗಳ ಸೇಫ್ ಬಗ್ಗೆ ಗಮನ ಹರಿಸಿಯೇ ಇಲ್ಲ. ಗ್ರಾಹಕರು ತಾವು ಸ್ವತ್ತು ಅಡ ಇಡುವ ಮೊದಲು ಇವುಗಳನ್ನೆಲ್ಲಾ ಗಮನಿಸಿಕೊಳ್ಳುವುದು ಅನಿವಾರ್ಯ.

1) ತಮಗೆ ಸೇವೆ ನೀಡುತ್ತಿರುವ ಬ್ಯಾಂಕ್ ಅದೆಷ್ಟು ಸೇಫ್ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು.

2) ಸ್ವತ್ತುಗಳಿಗೆ ಅವರೆಷ್ಟು ಭದ್ರತೆ ನೀಡುತ್ತಾರೆ ಎನ್ನುವ ಬಗ್ಗೆಯೂ ಖಾತ್ರಿ ಪಡಿಸಿಕೊಳ್ಳಬೇಕು.

3) ಲೋನ್ ನೀಡುವಾಗ ಬ್ಯಾಂಕುಗಳು ಪಡೆದುಕೊಳ್ಳುವ ದಾಖಲಾತಿ, ಪರಿಶೀಲನೆ ಇವುಗಳನ್ನು ಅಡ ಇಡುವ ಸಂದರ್ಭ ಅನುಸರಿಸುತ್ತಿವೆಯೇ? ಇಲ್ಲಾ ಎಂದಾದರೆ ಗ್ರಾಹಕರು ಇವನ್ನು ಮಾಡಲೇಬೇಕು ತಾನೇ?

ಪೊಲೀಸರ ಜವಾಬ್ದಾರಿ:

ಯಾವುದೇ ಅವಘಡ ನಡೆದಾಗಲೂ ಮೊದಲ ಬೈಗುಳ ಪೊಲೀಸರಿಗೆ. ಯಾಕೆ ಹೀಗೆ? ಕೃತ್ಯ ನಡೆದ ಬಳಿಕವಷ್ಟೇ ಪೊಲೀಸರ ಪ್ರವೇಶ ಆಗುತ್ತದೆ. ಅದಕ್ಕೆ ಮೊದಲು ಕೃತ್ಯವನ್ನು ತಡೆಯುವಲ್ಲಿ ಗ್ರಾಹಕರ ಪಾತ್ರ ಪ್ರಮುಖವಾದದ್ದು. ತನಗೇಕೆ ಬೇಕು? ತನಗೇನು ಪ್ರಯೋಜನ? ಎಂಬಿತ್ಯಾದಿ ಧೋರಣೆ ಬಿಟ್ಟು ಪ್ರತಿಯೊಬ್ಬರು  ನಮ್ಮ ಕರ್ತವ್ಯ, ಜವಾಬ್ದಾರಿಯನ್ನು ನೆನಪಿಸಿಕೊಳ್ಳಬೇಕು.

ಬ್ಯಾಂಕ್ ದರೋಡೆ ಪ್ರಕರಣವನ್ನೇ ನೋಡಿದರೂ, ದರೋಡೆಕೋರರು ಎಷ್ಟು ಚಾಲಕಿಗಳು ಎನ್ನುವುದನ್ನು ಅರಿತುಕೊಳ್ಳಬಹುದು. ಆಧುನಿಕ ತಂತ್ರಜ್ಞಾನಗಳನ್ನು ಕಳ್ಳರು ಅಥವಾ ದರೋಡೆಕೋರರು ಬಳಸಿಕೊಳ್ಳುವ ರೀತಿಗೆ ಆಶ್ಚರ್ಯಪಡಲೇಬೇಕು. ಹೀಗಿದ್ದರೂ ಕೃತ್ಯವನ್ನು ಬೇಧಿಸಿದರೆ ಪೊಲೀಸರಿಗೆ ಶಹಬ್ಬಾಶ್, ಬೇಧಿಸದೇ ಇದ್ದರೆ ಮತ್ತದೇ ಬೈಗುಳಗಳ ಸುರಿಮಳೆ. ಇದರಿಂದ ಹೊರಬಂದು ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳುವ ಅಗತ್ಯ ತುಂಬಾ ಇದೆ.

ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

Posted by Vidyamaana on 2024-04-10 22:03:09 |

Share: | | | | |


ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಗಳ ಮತ ಬೇಡ, ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆಂದು ಸುದ್ದಿಪತ್ರಿಕೆಯ ವರದಿ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಬಗ್ಗೆ ಹರೀಶ್‌ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು.


ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 66ಸಿ ಮತ್ತು 66ಡಿ ಹಾಗೂ ಐಪಿಸಿ ಸೆಕ್ಷನ್‌ 153ಎ, 120ಬಿ, 419, 469, 471, 505(2) ಮತ್ತು 468ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ವಸ್ತ್ರ ವಿತರಣೆ

Posted by Vidyamaana on 2023-11-06 13:43:19 |

Share: | | | | |


ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ವಸ್ತ್ರ ವಿತರಣೆ

ಪುತ್ತೂರು : ರೈ ಎಸ್ಟೇಟ್ ಎಜುಕೇಶನಲ್ ಆಂಡ್  ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಚಪ್ಪರ ಮುಹೂರ್ತವು ನಡೆಯಿತು.

ಶಾಸಕರಾದ ಅಶೋಕ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಟ್ರಸ್ಟ ಮುಖ್ಯಸ್ಥರಾದ ಸುಮಾ ಅಶೋಕ್ ರೈ, ಸೀತಾರಾಮ ರೈ ಹೆಗ್ಗಡೆ ಹಿತ್ತಿಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,  ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ,  ಮುರಳೀದರ್ ರೈ ಮಟಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ,  ಪಂಜಿಗುಡ್ಡೆ ಈಶ್ವರಭಟ್, ಶಿವರಾಮ ಆಳ್ವ,ನ್ಯಾಯವಾದಿ ಅರುಣಾ ಆಳ್ವ ಟ್ರಸ್ಟಿನ ಸದಸ್ಯ ಪ್ರಮುಖರಾದ ಕೃಷ್ಣಪ್ರಸಾದ್ ಭಟ್, ಯೋಗೀಶ್ ಸಾಮಾನಿ, ಶಿವಪ್ರಸಾದ್, ರಾಕೇಶ್ ರೈಕುದ್ಕಾಡಿ,ರಾಮಣ್ಣ ಪಿಲಿಂಜ, ಚಂದ್ರಶೇಕರ ಕಲ್ಲಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

Posted by Vidyamaana on 2023-11-03 17:29:34 |

Share: | | | | |


ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.


ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು ಕರೆ ವೀಕ್ಷಣೆ ಮಾಡಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರಾದ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.


ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಲ್ಲಿ ನಡೆಯುತ್ತಿರುವ ಇತರೆ ಕಾಮಗಾರಿಗಳನ್ನು ಸಚಿವರು ಪರಿಶೀಲನೆ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀಧರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

Posted by Vidyamaana on 2024-04-12 14:41:18 |

Share: | | | | |


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

ಮೈಸೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

Recent News


Leave a Comment: