Posted by vidyamaana on 2024-07-23 19:43:42 |
ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
Posted by Vidyamaana on 2023-08-03 05:13:52 |
ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಾಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ.2 ರಂದು ರಾತ್ರಿ ಸುಮಾರು9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆದ್ದು . ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Posted by Vidyamaana on 2024-02-03 11:15:11 |
ಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರು ನರಿಮೊಗರು ನಿವಾಸಿ ನೌಶಾದ್ ಬಿ.ಎ., ಕೇರಳ ನಿವಾಸಿ ಚಂದ್ರಮೋಹನ್ ಬಂಧಿತರು.
ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ. ಕ್ರ 08/2024 ಕಲಂ 392 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಸದ್ರಿ ತನಿಖಾ ತಂಡವು ಪ್ರಕರಣದ ತನಿಖೆ ನಡೆಸಿ, ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ರಿ ಆರೋಪಿಗಳಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ ರಿಷ್ಯಂತ್ ಐ ಪಿ ಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್ಪಿಎಸ್ ರವರುಗಳ ಮುಂದಾಳತ್ವದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ನೇತೃತ್ವದಲ್ಲಿ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ , ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ.ಪಿ ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ.
ಸದ್ರಿ ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.
ಸದ್ರಿ ತನಿಖಾ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದು, ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆಯನ್ನು ವ್ಯಕ್ತವಾಗಿದೆ.
Posted by Vidyamaana on 2024-08-03 04:49:52 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು 54.36 ಕೋಟಿ ನಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಇನ್ನು 20 ಕೋಟಿ ರೂ. ವಿಕೋಪ ನಿರ್ವಹಣೆಗೆ ಹಣ ಇದೆ. ಅದ್ಯಪಾಡಿ, ಕೆತ್ತಿಕಲ್ಗೆ ಪರಿಹಾರ ಕಂಡು ಹಿಡಿಯಲು ತಜ್ಞರ ತಂಡದಿಂಲೂ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದೆ. ಮಳೆ ಹಾನಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು 54.36 ಕೋಟಿ ನಷ್ಟವಾಗಿದೆ ಎಂದರು.
ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಇದುವರೆಗೆ 11 ಮಂದಿ ಜೀವ ಕಳೆದುಕೊಂಡಿದ್ದಾರೆ. 154 ಮನೆಗಳು ಪೂರ್ತಿ ಹಾನಿ, 484 ಮನೆಗಳು ಭಾಗಶಃ ಹಾನಿಯಾಗಿದೆ ಎಂದಿದ್ದಾರೆ.
Posted by Vidyamaana on 2023-12-03 12:26:48 |
ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳಗುಡ್ಡ ಕ್ಯಾಂಪ್ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು.
ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್ ರೇ ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಆಗ ರಿಮ್ಸ್ ವೈದ್ಯರ ತಂಡ ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್ಟಿ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾ. ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರಿದ್ದರು.
ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ್, ರಿಮ್ಸ್ ಮೆಡಿಕಲ್ ಕಾಲೇಜ ಪ್ರಾಂಶುಪಾಲ ಡಾ.ಬಸವರಾಜ್ ಎಂ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್ ಕೆಂಪೇಗೌಡ, ಇಎನ್ಟಿ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಹಾಗೂ ಅರವಳಿಕೆ ಮುಖ್ಯಸ್ಥ ಡಾಕ್ಟರ್ ನಂದನ್ ಪಡಶೆಟ್ಟಿ, ಓಟಿ ಇಂಚಾರ್ಜ್ ಶುಶ್ರುಷಕ ಮೇಲ್ವಿಚಾರಕಿ ಆಶಾ ಹುಂಬಿ ಅತ್ಯುತ್ತಮ ಉಪಕರಣಗಳನ್ನು ಆಸ್ಪತ್ರೆಗೆ ಒದಗಿಸಿ ಶಸ್ತ್ರ ಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ಇವರಿಗೆಲ್ಲ ಬಾಲಕನ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸದ್ಯ ಶಿವಕುಮಾರ ಆರಾಮವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ.ಸೇಫ್ಟಿ ಪಿನ್ ನುಂಗಿದ್ದ 5 ತಿಂಗಳ ಮಗು: ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿತ್ತು. 5 ತಿಂಗಳ ಮಗು ಅಚಾನಕ್ ಆಗಿ ಸೇಫ್ಟಿ ಪಿನ್ ನುಂಗಿತ್ತು. ಇದು ಪೋಷಕರಿಗೆ ತಿಳಿದಿರಲಿಲ್ಲ. ಮಗುವಿಗೆ ಉಸಿರಾಟದ ತೊಂದರೆಯಾಗಲು ಆರಂಭವಾದಾಗ ಅವರು ಮಗುವನ್ನು ಕರೆದುಕೊಂಡು ಸಮೀಪ ವೈದ್ಯರ ಬಳಿ ಹೋದಾಗ ಶೀತ ಭಾದೆ ಉಂಟಾಗಿದೆ ಎಂದು ಚಿಕಿತ್ಸೆ ನೀಡಲು ಆರಂಭಿಸಿದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿ ವೈದ್ಯರು ಎಕ್ಸ್ - ರೇ ಮಾಡಿದಾಗ ಶ್ವಾಸನಾಳದಲ್ಲಿ ಉದ್ದನೆಯ ಸೇಫ್ಟಿ ಪಿನ್ ಸಿಲುಕಿರುವುದು ಗೊತ್ತಾಗಿದೆ. ಫಿನ್ನ ಚುಪಾದ ಒಂದು ತುದಿ ಬಾಯ್ತೆರೆದುಕೊಂಡಿರುವುದನ್ನೂ ಕಂಡುಕೊಂಡರು. ಹೀಗಾಗಿ ಮಗುವಿಗೆ 40 ನಿಮಿಷದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನೆರವೇರಿಸಿ ಪಿನ್ ಅನ್ನು ಹೊರತೆಗೆದು ಮಗುವಿನ ಪ್ರಾಣ ಉಳಿಸಿದ್ದರು.
Posted by Vidyamaana on 2024-04-10 06:35:52 |
ಕೈಯಲ್ಲೊಂದು ಮೊಬೈಲ್, ಸಂಚರಿಸಲೊಂದು ಬೈಕ್ ಸಿಕ್ಕರೆ ಹದಿಹರೆಯದ ಯುವಕರಿಗೆ ಮತ್ತೆ ಉಪದೇಶದ ಅಗತ್ಯವೂ, ಕೇಳಿಸಿಕೊಳ್ಳುವ ವ್ಯವಧಾನವೂ ತೀರಾ ಇಲ್ಲದಾಗಿದೆ.
ಹಬ್ಬದ ಸಂಭ್ರಮ ದ ಹೆಸರಿನಲ್ಲಿ ಮೈಮರೆತು ಓಡಾಡದಿರಿ.
ಕೈಯಲ್ಲಿರುವ ಬೈಕ್ ನ ನಿಯಂತ್ರಣ ನಿಮ್ಮಲ್ಲಿದ್ದರೂ ಮುಂದುಗಡೆಯಿಂದ ಬರುವ ವಾಹನದ ನಿಯಂತ್ರಣ ನಿಮ್ಮಲ್ಲಿರಲ್ಲ ಎಂಬ ಪ್ರಜ್ಞೆಯಾದರೂ ಇರಲಿ.ಸಣ್ಣ ಪ್ರಾಯದ ಯುವಕರು ರಸ್ತೆಯ ನಡುವೆ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಳ್ಳುವಾಗ ಯಾರಿಗೆ ತಾನೆ ಅದನ್ನು ಸಹಿಸಲು ಸಾಧ್ಯ.
ಆಸ್ಪತ್ರೆಯ ಶವಾಗಾರದ ಮುಂದೆ ಏನೂ ಪರಿಚಯವಿಲ್ಲದವರೇ ಜನಾಝವನ್ನು ನೋಡಿ ಬಿಕ್ಕಿ ಬಿಕ್ಕಿ ಅಳುವಾಗ, ಹೆತ್ತು ಸಾಕಿ ಸಲಹಿದ ಆ ಹೆತ್ತವರ ರೋಧನೆ ಅದೆಷ್ಟರ ಮಟ್ಟಿಗೆ ಇರಬಹುದು?
ತಾಯಿಗೆ ಸಲಾಂ ಹೇಳಿ ಮನೆಯಿಂದ ಹೊರಟ ಮಗ ಮರಳಿ ಬಂದದ್ದು ಬಿಳಿ ವಸ್ತ್ರವನ್ನು ಹೊದಿಸಿದ ರೂಪದಲ್ಲಿ ಮಯ್ಯತ್ತಾಗಿಯಾಗಿತ್ತು!
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಕಬರ್ ತೋಡಿದ್ದು ಸ್ವತಃ ಅಪ್ಪನೇ ಆಗಿತ್ತು!
ಇಂತಹ ಹೃದಯ ಕಲ್ಲಾಗಿಸುವ ಅದೆಷ್ಟು ಮರಣ ವಾರ್ತೆಗಳಾಗಿದೆ ಕಳೆದ ಆರೇಳು ವರ್ಷಗಳಿಂದ ನಾವು ಕಣ್ಣಾರೆ ಕಾಣುತ್ತಿರುವುದು?
ಮರಣದ ಸ್ಮರಣೆಗಿಂತ ಉತ್ತಮವಾದ ಉಪದೇಶ ಮತ್ತೊಂದಿಲ್ಲ.ಆದರೂ ಪ್ರತಿಯೊಂದು ಮರಣ ಸಂಭವಿಸಿದಾಗಲೂ ಒಂದೆರಡು ವಾರಗಳಲ್ಲಿ ನಾವದನ್ನು ಮರೆತುಬಿಡುತ್ತೇವೆ.