ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಸುದ್ದಿಗಳು News

Posted by vidyamaana on 2024-07-05 10:22:02 |

Share: | | | | |


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-09-12 04:47:25 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್‌ ಉಪಕೇಂದ್ರದಲ್ಲಿ 110ಕೆ.ವಿ ಮತ್ತು 33 ಕೆ.ವಿ ಲೈನ್ ಬೇ ಯ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.12ರಂದು ಮಂಗಳವಾರ ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 336.0 ಮಾಡಾವು–ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ ಗುತ್ತಿಗಾರು, 33ಕೆವಿ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕಪ್ ಸುಳ್ಯ, ಕಾವು, ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕೊಹ್ಲಿ ಆಕರ್ಷಕ ಶತಕ: ಟೀಮ್ ಇಂಡಿಯಾಕ್ಕೆ ಶರಣಾದ ಬಾಂಗ್ಲಾ

Posted by Vidyamaana on 2023-10-19 21:40:35 |

Share: | | | | |


ಕೊಹ್ಲಿ ಆಕರ್ಷಕ ಶತಕ: ಟೀಮ್ ಇಂಡಿಯಾಕ್ಕೆ ಶರಣಾದ ಬಾಂಗ್ಲಾ

ಪುಣೆ :ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಗುರುವಾರ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ದ ವಿರುದ್ಧ ಭಾರತ 7 ವಿಕೆಟ್ ಗಳ ಅಮೋಘ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ ಶತಕ ಪಂದ್ಯದ ಆಕರ್ಷಣೆಯಾಗಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾ ಗೆಲ್ಲಲು 257 ರನ್ ಗಳ ಗುರಿ ಭಾರತಕ್ಕೆ ನೀಡಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ಒದಗಿಸಿಕೊಟ್ಟರು. 48 ರನ್ ಗಳಿಸಿದ್ದ ಶರ್ಮ ಹಸನ್ ಮಹಮೂದ್ ಎಸೆದ ಚೆಂಡನ್ನು ದೊಡ್ಡ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ ನಲ್ಲಿ ಹೃದೋಯ್ ಕ್ಯಾಚಿತ್ತು ನಿರ್ಗಮಿಸಿದರು. ಅರ್ಧ ಶತಕದಿಂದ ವಂಚಿತರಾದರು. ಗಿಲ್ 53 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 19 ರನ್ ಗಳಿಸಿ ಔಟಾದರು.


ಅಮೋಘ ಆಟವಾಡಿದ ಕೊಹ್ಲಿ ಭರ್ಜರಿ ಆಟವಾಡಿ ಅಜೇಯ ಶತಕ ಸಿಡಿಸಿದರು. 97 ಎಸೆತಗಳಲ್ಲಿ 103 ರನ್ ಗಳಿಸಿದರು. 6ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಕೊಹ್ಲಿ ಅವರಿಗೆ ಶತಕ ಸಂಭ್ರಮಿಸಲು ನೇರವಾದ ರಾಹುಲ್ ಔಟಾಗದೆ 34 ರನ್ ಗಳಿಸಿದರು.


ಬಾಂಗ್ಲಾ ಉತ್ತಮ ಆರಂಭ ಪಡೆಯಿತು. ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೊದಲ ವಿಕೆಟ್ ಗೆ 93 ರನ್ ಗಳ ಜತೆಯಾಟವಾಡಿದರು. ತಂಜಿದ್ ಹಸನ್ 51 ರನ್ ಮತ್ತು ಲಿಟ್ಟನ್ ದಾಸ್ 66 ರನ್ ಗಳಿಸಿ ಔಟಾದರು. ನಜ್ಮುಲ್ ಹೊಸೈನ್ ಶಾಂಟೊ 8, ಮೆಹಿದಿ ಹಸನ್ ಮಿರಾಜ್ 3 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. ತೌಹಿದ್ ಹೃದಯ್ 16 ,ಮುಶ್ಫಿಕರ್ ರಹೀಮ್ 38, ನಸುಮ್ ಅಹ್ಮದ್ 14, ಮಹಮುದುಲ್ಲಾ 46 ರನ್ ಗಳಿಸಿ ಔಟಾದರುಭಾರತದ ಪರ ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ 2 ವಿಕೆಟ್ ಪಡೆದರು. ಶಾರ್ದೂಲ್ ಮತ್ತು ಕುಲದೀಪ್ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿ ಯಾದರು

ಬೆಳ್ತಂಗಡಿ : ಡ್ರಾಯಿಂಗ್ ಶಿಕ್ಷಕ ರೂಪೇಶ್ ನ ಅಶ್ಲೀಲ ಮೆಸೇಜ್ ; ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Posted by Vidyamaana on 2024-02-12 21:19:40 |

Share: | | | | |


ಬೆಳ್ತಂಗಡಿ : ಡ್ರಾಯಿಂಗ್ ಶಿಕ್ಷಕ ರೂಪೇಶ್ ನ ಅಶ್ಲೀಲ ಮೆಸೇಜ್ ; ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. 


ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ. 


ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು.‌ ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

Posted by Vidyamaana on 2023-03-09 08:47:17 |

Share: | | | | |


ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. 

ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜ್‌ಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..ವೈಷ್ಣವಿ ರವರ ತಂದೆ ಚಂದ್ರಶೇಖರ್ ರವರು ರಾಮಕುಂಜ ಶಾಲೆಯಲ್ಲಿ ಶಿಕ್ಷಕರಾಗಿದ್ದು, ತಾಯಿ ಸೌಮ್ಯ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ

Posted by Vidyamaana on 2023-09-06 09:08:36 |

Share: | | | | |


ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಕಡಿತಗೊಳಿಸಲಾಗಿತ್ತು.ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತ ನೀತಿ ಅನುಸರಿಸುತ್ತಿದೆ.


ಸಾಮಾನ್ಯ ಶಾಲೆಗಳಿಗೆ ಆ.8 ರಿಂದ 24 ಕ್ಕೆ ಸೀಮಿತಗೊಂಡಿದ್ದು, ವಿಶೇಷ ಶಾಲೆ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಅಯ್ಯರ್ ಇಶಾನ್ ಕಿಶನ್ ಹೆಸರು ಕೈಬಿಟ್ಟ BCCI

Posted by Vidyamaana on 2024-02-28 21:51:15 |

Share: | | | | |


2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಅಯ್ಯರ್  ಇಶಾನ್ ಕಿಶನ್ ಹೆಸರು ಕೈಬಿಟ್ಟ BCCI

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2023-24ರ ಋತುವಿಗಾಗಿ ‘ಕೇಂದ್ರ ಗುತ್ತಿಗೆ’ ಪಡೆದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.ಟೀಮ್‌ ಇಂಡಿಯಾದ ಯುವ ಬ್ಯಾಟರ್‌ ಗಳಾದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಬಿಸಿಸಿಐಯ ಸೂಚನೆಯ ಮೇರೆಗೂ ದೇಶಿಯ ಕ್ರಿಕೆಟ್‌ ನಲ್ಲಿ ಭಾಗಿಯಾಗದ ಇಶಾನ್‌ ಹಾಗೂ ಶ್ರೇಯಸ್‌ ಅವರನ್ನು ಗುತ್ತಿಗೆ ಪಟ್ಟಿಯಿಂದ ಹೊರಗಿಡಲಾಗಿದೆಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ.

ಕಳೆದ ಬಾರಿಯಂತೆ ಈ ಬಾರಿಯೂ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವಿಂದ್ರ ಜಡೇಜಾ ಅವರನ್ನು ಎ+ ಗುತ್ತಿಗೆಯ ಪಟ್ಟಿಯಲ್ಲಿ ಪರಿಗಣಿಸಲಾಗಿದೆ. ಇನ್ನು ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಎ ಗ್ರೇಡ್‌ ಪಟ್ಟಿಗೆ ಭಡ್ತಿ ಹೊಂದಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ಗೆ ಆಯ್ಕೆಯಾಗದಿದ್ದರೂ ಹಾರ್ದಿಕ್ ಪಾಂಡ್ಯ ಗ್ರೇಡ್ ಎ ಪಟ್ಟಿಯಲ್ಲಿ ತಮ್ಮ ಹೆಸರನ್ನು ಉಳಿಸಿಕೊಂಡಿದ್ದಾರೆ. ಹಾರ್ದಿಕ್ 2023 ರಲ್ಲಿ T20I ಕ್ರಿಕೆಟ್‌ನಲ್ಲಿ 11 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು.2023-24ರಲ್ಲಿ 8 ಟಿ20ಐಗಳಲ್ಲಿ ಭಾರತವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಗ್ರೇಡ್ ಬಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧದ ಭಾರತದ ಸರಣಿ ಗೆಲುವಿನ ಹೀರೋ ಯಶಸ್ವಿ ಜೈಸ್ವಾಲ್ ಅವರು ಬಿ ಗ್ರೇಡ್ ನಲ್ಲಿ ಸ್ಥಾನ ಪಡೆದಿದ್ದಾರೆ.

ನಿಗದಿತ ಅವಧಿಯೊಳಗೆ ಕನಿಷ್ಠ 3 ಟೆಸ್ಟ್‌ಗಳು ಅಥವಾ 8 ODIಗಳು ಅಥವಾ 10 T20I ಗಳನ್ನು ಆಡುವ ಮಾನದಂಡವನ್ನು ಪೂರೈಸುವ ಕ್ರಿಕೆಟಿಗರನ್ನು ಸ್ವಯಂ ಆಗಿ ಗ್ರೇಡ್ ಸಿ ಗೆ ಸೇರುತ್ತಾರೆ. ಎಲ್ಲಾ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಭಾಗವಹಿಸಲು ಆದ್ಯತೆ ನೀಡಬೇಕು ಎಂದು ಬಿಸಿಸಿಐ ಶಿಫಾರಸು ಮಾಡಿದೆ.

ಇಲ್ಲಿದೆ ಪಟ್ಟಿ..

ಗ್ರೇಡ್ A+ (4 ಆಟಗಾರರು):  ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ A (6 ಆಟಗಾರರು): ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ B (5 ಆಟಗಾರರು):  ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್. ‌

ಗ್ರೇಡ್ C (15 ಆಟಗಾರರು): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.

ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.

Recent News


Leave a Comment: