Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-05-03 21:42:15 |
ಕೋವಿಡ್ 19 ಸಾಂಕ್ರಾಮಿಕ ರೋಗದ ನಂತರ ಸ್ಥಗಿತಗೊಂಡಿದ್ದ ಮಂಗಳೂರಿನಿಂದ ಲಕ್ಷದ್ವೀಪ ಪ್ರಯಾಣಿಕ ಹಡಗು ಪುನರಾರಂಭಗೊಂಡಿದೆ. ಇದರ ಅಂಗವಾಗಿ, ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ ಮೊದಲ ಹೈಸ್ಪೀಡ್ ಪ್ರಯಾಣಿಕ ಹಡಗು ಎಂಎಸ್ವಿ ಪ್ಯಾರಾಲಿ ಮೇ 2ರಂದು ಗುರುವಾರ ಆಗಮಿಸಿದೆ.ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರಯಾಣಿಕ ಹಡಗು ಸಂಚಾರ ಸ್ಥಗಿತಗೊಂಡಿತ್ತು. ಸೇವೆಯನ್ನು ಪುನರಾರಂಭಿಸುವ ಭರವಸೆ ಪ್ರವಾಸಿಗರಲ್ಲಿತ್ತು.
ಲಕ್ಷದ್ವೀಪದಿಂದ ಹಳೆ ಬಂದರಿಗೆ 150 ಪ್ರಯಾಣಿಕರು, 8 ಕಾರ್ಮಿಕರು ಮತ್ತು 3 ಸಿಬ್ಬಂದಿ ಪ್ರಯಾಣಿಕ ಹಡಗಿನಲ್ಲಿ ಬಂದರು. ಮಾಜಿ ಶಾಸಕ ಜೆ.ಆರ್.ಲೋಬೊ ಬಂದರಿನಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದರು.
ಈ ಹಡಗು ಶನಿವಾರ ಲಕ್ಷದ್ವೀಪಕ್ಕೆ ಮರಳಲಿದೆ. ಈ ಮೊದಲು ಲಕ್ಷದ್ವೀಪದಿಂದ ಹಳೆ ಬಂದರಿಗೆ ಹಡಗಿನ ಪ್ರಯಾಣಕ್ಕೆ 13 ಗಂಟೆ ಸಮಯ ತೆಗೆದುಕೊಳ್ಳುತ್ತಿತ್ತು ಆದರೆ ಈಗ ಹೈ-ಸ್ಪೀಡ್ ಹಡಗು ಕೇವಲ 7 ಗಂಟೆ ತೆಗೆದುಕೊಳ್ಳುತ್ತದೆ. ಪ್ರಯಾಣದ ದರ 450 ರೂ. ಇದೆ.
Posted by Vidyamaana on 2023-09-21 12:20:26 |
ಮಂಗಳೂರು: ಜನಸ್ನೇಹಿ ಪೊಲೀಸಿಂಗ್ನ ಭಾಗವಾಗಿ ಪಾರದರ್ಶಕ ಮತ್ತು ತ್ವರಿತ ಸೇವೆಗೆ ಮುಂದಡಿ ಇಟ್ಟಿರುವ ಪೊಲೀಸ್ ಇಲಾಖೆಯು ಸಾರ್ವಜನಿಕರು ತಮಗೆ ಪೊಲೀಸ್ ಠಾಣೆಯಲ್ಲಿ ದೊರೆಯುವ ಸ್ಪಂದನೆಯ ಬಗ್ಗೆ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಶೀಘ್ರ ಜಾರಿಗೆ ತರಲಿದೆ.
ಸಾರ್ವಜನಿಕರು ದೂರು, ಅರ್ಜಿ, ಅಹವಾಲು ಇತ್ಯಾದಿಗಳನ್ನು ಸಲ್ಲಿಸಲು ಠಾಣೆಗೆ ತೆರಳಿದಾಗ ವಿಎಂಎಸ್ನಲ್ಲಿ (ವಿಸಿಟರ್ ಮ್ಯಾನೇಜ್ಮೆಂಟ್ ಸಿಸ್ಟಂ) ವಿವರ ದಾಖಲಿಸಿಕೊಂಡು ಆ ವಿವರಗಳುಳ್ಳ ಮುದ್ರಿತ ಚೀಟಿಯನ್ನು ನೀಡಲಾಗುತ್ತದೆ. ಅದರಲ್ಲಿ ಯಾವ ಅಧಿಕಾರಿ/ಸಿಬಂದಿಯನ್ನು ಭೇಟಿ ಮಾಡಬೇಕು ಎಂಬ ಮಾಹಿತಿಯೂ ಇರುತ್ತದೆ. ಸಂಬಂಧಿಸಿದ ಅಧಿಕಾರಿ/ಸಿಬಂದಿಯನ್ನು ಭೇಟಿಯಾದ ಅನಂತರ ಅವರು ಅದಕ್ಕೆ ಸಹಿ ಮಾಡುವ ಮೂಲಕ ಅಹವಾಲು ಸ್ವೀಕರಿಸಿರುವುದನ್ನು ದೃಢಪಡಿಸಬೇಕು.
ಆ ಪ್ರಕ್ರಿಯೆಗಳು ಮುಗಿದ ಬಳಿಕ ವಿಎಂಎಸ್ನಲ್ಲಿ ನಮೂದಾಗಿರುವ ದೂರು ದಾರರ ಮೊಬೈಲ್ ಸಂಖ್ಯೆಗೆ ಇಲಾಖೆಯಿಂದ ಲಿಂಕ್ ಕಳುಹಿಸಲಾಗುತ್ತದೆ. ಆ ಲಿಂಕ್ ಅನ್ನು ಒತ್ತಿದಾಗ “ಫೀಡ್ಬ್ಯಾಕ್’ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಠಾಣೆಯಲ್ಲಿ ದೊರೆತ ಸ್ಪಂದನೆಯ ಕುರಿತು ಕೆಲವು ಪ್ರಶ್ನೆಗಳಿದ್ದು ಅವುಗಳಿಗೆ ಉತ್ತರಿಸಬೇಕು. ಅದು ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತ ಮೊದಲಾದ ಉನ್ನತ ಅಧಿಕಾರಿಗಳಿಗೆ ತಲುಪುತ್ತದೆ. ಲಿಂಕ್ ಮೂಲಕ ಅಲ್ಲದೆ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕವೂ ಫೀಡ್ಬ್ಯಾಕ್ ನೀಡಬಹುದು. ಎಲ್ಲ ಠಾಣೆಗಳಲ್ಲಿಯೂ ಕ್ಯುಆರ್ ಕೋಡ್ ಅಳವಡಿಸಿ ಸಾರ್ವಜನಿಕರಿಂದ ಫೀಡ್ಬ್ಯಾಕ್ ಪಡೆಯಲು ವ್ಯವಸ್ಥೆ ಮಾಡಲಾಗುತ್ತದೆ.ಠಾಣೆಯಲ್ಲಿರುವಾಗಲೇ ಫೀಡ್ಬ್ಯಾಕ್ ನೀಡಬೇಕಾಗಿಲ್ಲ. ಅನಂತರವೂ ನೀಡಬಹುದು.
ಪೊಲೀಸರ ಮೇಲೆ ನಿಗಾ!
ಜನಸ್ಪಂದನಾ ಮೂಲಕ ಪರೋಕ್ಷವಾಗಿ ಸಾರ್ವಜನಿಕರು ಸ್ಥಳೀಯ ಪೊಲೀಸರ ಮೇಲೆಯೇ ನಿಗಾ ಇಡಲು ಸಾಧ್ಯವಾಗಲಿದೆ. ವಿನಾಕಾರಣವಾಗಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವುದು, ಒರಟುತನದಿಂದ ವರ್ತಿಸುವುದು, ವಾಪಸ್ ಕಳುಹಿಸುವುದು, ಎಫ್ಐಆರ್ ದಾಖಲಿಸಲು ಹಿಂದೇಟು ಹಾಕುವುದು ಮೊದಲಾದವುಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲು ಇದರಿಂದ ಅನುಕೂಲವಾಗಲಿದೆ. ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರೆಟ್ ಸಹಿತ ಕೆಲವು ನಗರ ಹಾಗೂ ಕೆಲವು ಜಿಲ್ಲೆಗಳಲ್ಲಿ ಇಂತಹ ಫೀಡ್ಬ್ಯಾಕ್ ವ್ಯವಸ್ಥೆ ಆರಂಭಗೊಂಡಿದ್ದು ದ.ಕ., ಉಡುಪಿ ಸಹಿತ ಇತರ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳ್ಳಲಿದೆ.
ಜನಸ್ಪಂದನಾ ಮೂಲಕ ಪೊಲೀಸರ ಸ್ಪಂದನೆ ಬಗ್ಗೆ ಸಾರ್ವಜನಿಕರು ನೇರವಾಗಿ ಮಾಹಿತಿ ನೀಡಬಹುದು. ಇದು ಸರಳ ವ್ಯವಸ್ಥೆಯಾಗಿದ್ದು ಪರಿಣಾಮಕಾರಿಯಾಗಲಿದೆ. ಜನರ ಪ್ರತಿಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ವಿಚಾರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಗೆ ಸಂಬಂಧಿಸದ ವಿಚಾರಗಳಾಗಿದ್ದರೆ ಯಾರನ್ನು ಸಂಪರ್ಕಿಸಬಹುದು ಎಂಬುದನ್ನುಸಾರ್ವಜನಿಕರಿಗೆ ತಿಳಿಸಲಾಗುವುದು.
ಉಡುಪಿ ಜಿಲ್ಲೆಯಲ್ಲಿಯೂ ಪ್ರತೀ ಪೊಲೀಸ್ ಠಾಣೆಯಲ್ಲಿ ಜನಸ್ಪಂದನ ಶೀಘ್ರ ಆರಂಭಗೊಳ್ಳಲಿದೆ. ಇದಕ್ಕೆ ಪೂರಕವಾಗಿ ತರಬೇತಿ ಪೂರ್ಣಗೊಂಡಿದೆ
Posted by Vidyamaana on 2024-06-22 15:43:58 |
ತಿರುವನಂತಪುರ: ಸಾಕಾನೆಯೊಂದು (Elephant) ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Footage) ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಮಾವುತನ್ನು ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯದವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.
Posted by Vidyamaana on 2023-07-15 10:49:03 |
ಬೆಂಗಳೂರು: ಇತ್ತೀಚೆಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸಭೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಕುರ್ಚಿಯಲ್ಲಿ ಕುಳಿತ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ 250ಕ್ಕೂ ಹೆಚ್ಚು ನಕಲಿ ಪಾಸ್ ಗಳು ಪತ್ತೆಯಾಗಿವೆ. ಅಲ್ಲದೆ, ಶಾಸಕರು, ಸಚಿವರ ಹೆಸರಿನ ಪಾಸ್ಗಳನ್ನು ಕಲರ್ ಜೆರಾಕ್ಸ್ ಮಾಡಿಸಿ ಭದ್ರತಾ ಸಿಬ್ಬಂದಿಗೆ ಯಾಮಾರಿಸುತ್ತಿದ್ದ ಸಂಚು ಬಹಿರಂಗಗೊಂಡಿದೆ.ವಿಧಾನಸೌಧ ಪ್ರವೇಶಕ್ಕೆ ಶಾಸಕರು, ಸಚಿವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಅವರ ಸಿಬ್ಬಂದಿ ಮತ್ತು ವಾಹನಗಳಿಗೂ ಅಧಿಕೃತ ಪಾಸ್ ನೀಡಲಾಗುತ್ತದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುವ ವಂಚಕರು, ಈ ಪಾಸ್ಗಳನ್ನು ದುರ್ಬಳಕೆ ಮಾಡಿಕೊಂಡು ಕಲರ್ ಜೆರಾಕ್ಸ್ ಮಾಡಿ ಒಳ ಪ್ರವೇಶಿಸುತ್ತಿರುವುದು ಪತ್ತೆಯಾಗಿದೆ. ಹೀಗೆ ಕಳೆದ 4-5 ದಿನಗಳಲ್ಲಿ ಸುಮಾರು 300 ಮಂದಿ ಈ ರೀತಿ ನಕಲಿ ಪಾಸ್ಗಳನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಿರುವುದು ಪತ್ತೆಯಾಗಿದೆ.ನಕಲಿ ಪಾಸ್ಗಳು ಮಾತ್ರವಲ್ಲ, ಅವಧಿ ಮೀರಿದ ಪಾಸ್ಗಳು ತಪಾಸಣೆ ವೇಳೆ ಸಿಕ್ಕಿವೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಜನಪ್ರತಿನಿಧಿಗಳು ಮತ್ತು ಅವರ ಸಿಬ್ಬಂದಿಗೂ ಮಾಹಿತಿ ನೀಡಿ ನಕಲಿ ಪಾಸ್ಗಳ ಕಡಿವಾಣಕ್ಕೆ ಸಹಾಯ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜುಲೈ 10ರಂದು ಬಜೆಟ್ ಮಂಡನೆ ವೇಳೆ ತಿಪ್ಪೇರುದ್ರಸ್ವಾಮಿ ಎಂಬಾತ ದೇವದುರ್ಗ ಶಾಸಕಿ ಕೆರೆಮ್ಮ ಸ್ಥಾನದಲ್ಲಿ ಕೆಲ ಹೊತ್ತು ಕುಳಿತುಕೊಂಡಿರುವುದು ಪತ್ತೆಯಾಗಿತ್ತು. ಹೀಗಾಗಿ ವಿಧಾನಸೌಧ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ ಎಸ್ .ಡಿ.ಶರಣಪ್ಪ, ಎಲ್ಲ ಪ್ರವೇಶ ದ್ವಾರದಲ್ಲಿ ತಪಾಸಣೆ ಬಿಗಿಗೊಳಿಸಿದರು.
ಮತ್ತೂಂದೆಡೆ ಅದೇ ದಿನ ಜು. 10ರಂದು ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಉದ್ಯೋಗಿ ಬ್ಯಾಗಿನಲ್ಲಿ ಚಾಕು ಇರುವುದು ಪತ್ತೆಯಾಗಿದ್ದು, ಪೊಲೀಸ್ ವಿಚಾರಣೆ ವೇಳೆ ಕ್ರಿಮಿನಲ್ ಉದ್ದೇಶವಿಲ್ಲದಿರುವುದು ಕಂಡು ಬಂದಿದ್ದರಿಂದ ಮುಚ್ಚಳಿಕೆ ಪತ್ರ ಬರೆಸಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಹೀಗಾಗಿ ವಿಧಾನಸೌಧಕ್ಕೆ ಪ್ರವೇಶಿಸುವ ಎಲ್ಲಾ ಗೇಟ್ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.ಅಲ್ಲದೆ, ಬ್ಯಾಗ್ ಸೇರಿ ಇತರೆ ವಸ್ತುಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್ಗಳನ್ನು ಕಡ್ಡಾಯವಾಗಿ ಸ್ಕಾನಿಂಗ್ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್ ಇದ್ದರೆ ಮಾತ್ರ ಒಳಪ್ರವೇಶಿಸಲು ಬಿಡಬೇಕು ಎಂದು ಮಾರ್ಷಲ್ಗಳಿಗೂ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ ಎಸ್.ಡಿ.ಶರಣಪ್ಪ, ಮುಂದಿನ ದಿನಗಳಲ್ಲಿ ನಕಲಿ ಪಾಸ್ ಬಳಸಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು
Posted by Vidyamaana on 2024-06-23 08:20:55 |
ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೂರಜ್ ರೇವಣ್ಣರನ್ನು ಬಂಧಿಸಲಾಗಿದೆ.
ನಿನ್ನೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.
Posted by Vidyamaana on 2023-10-04 12:00:24 |
ಚಿಕ್ಕಬಳ್ಳಾಪುರ: ಬೆಸ್ಕಾಂನಲ್ಲಿ ಕರ್ತವ್ಯನಿರತ ಲೈನ್ ಮ್ಯಾನ್ ವಿದ್ಯುತ್ ಜಂಪ್ ಕಟ್ ಆಗಿರುವುನ್ನು ಸರಿಪಡಿಸಲು ಹೋಗಿ ವಿದ್ಯುತ್ ಶಾಕ್ ನಿಂದ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಪತಿಯ ಸಾವು ಕಂಡ ಆತನ ಪತ್ನಿ ನವವಿವಾಹಿತೆ ಅಘಾತಕ್ಕೊಳಗಾಗಿದ್ದಾರೆ. ಆತನ ಹೆಸರು ವಿವೇಕ್ ಪಾಟೀಲ್, ಬೆಳಗಾವಿ ಜಿಲ್ಲೆ ರಾಯಬಾಗ್ ತಾಲೂಕಿನ ಉಬ್ಬರವಾಡಿ ನಿವಾಸಿ. ಚಿಕ್ಕಬಳ್ಳಾಪುರ ಜಿಲ್ಲಾ ಬೆಸ್ಕಾಂ ವಿಭಾಗದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ. ನಿನ್ನೆ ನಂದಿ ವಿಭಾಗದ ಕೋಳವನಹಳ್ಳಿ ಬೊಮ್ಮನಹಳ್ಳಿ ಮಾರ್ಗದಲ್ಲಿ ತ್ರೀ ಫೇಸ್ ಮಾರ್ಗದಲ್ಲಿ ಜಂಪ್ ಕಟ್ ಆಗಿದೆ ಅಂತ ಜಂಪ್ ಹಾಕಲು ವಿದ್ಯುತ್ ಕಂಬ ಹತ್ತಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಆನಂದಕುಮಾರ್. ಕೆ ಕಾರ್ಯಪಾಲಕ ಇಂಜಿನಿಯರ್, ಚಿಕ್ಕಬಳ್ಳಾಪುರ ಬೆಸ್ಕಾಂ ಮಾಹಿತಿ ನೀಡಿದ್ದಾರೆ.ವಿವೇಕ್ ಪಾಟೀಲ್ ಮಾರ್ಗದಾಳಾಗಿದ್ದು ನಿನ್ನೆ ಸಂಜೆ ಜಂಪ್ ಹಾಕುವಾಗ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಮಾರ್ಗದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿಲ್ಲ. ಆದರೂ ಜಂಪ್ ಹಾಕಲು ಮುಂದಾದಾಗ ಘಟನೆ ನಡೆದಿದೆ. ವಿವೇಕ್ ಪಾಟೀಲ್ ಇತ್ತಿಚಿಗೆ ಮದುವೆಯಾಗಿದ್ದು ಪತ್ನಿಯನ್ನು ಚಿಕ್ಕಬಳ್ಳಾಪುರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಮದುವೆಯಾಗಿ ವರ್ಷದೊಳಗೆ ಪತಿ ಕಳೆದುಕೊಂಡಿರುವ ವಿವೇಕ್ ಪತ್ನಿ ವರ್ಷಾ, ಗಂಡನನ್ನು ನೆನೆದು ಆಘಾತಕ್ಕೊಳಗಾಗಿದ್ದಾರೆ.
ಅಸಲಿಗೆ ಜಂಪ್ ಕಟ್ ಆಗಿರುವ ಸ್ಥಳ ಬೇರೊಬ್ಬ ಮಾರ್ಗದಾಳುವಿಗೆ ಸಂಬಂಧಿಸಿದ್ದು. ಆತ ಅನಾರೋಗ್ಯದಿಂದಿರುವ ಹಿನ್ನೆಲೆ ಮಾರ್ಗದಾಳು ವಿವೇಕ್ ಸಂಬಂಧಿಸಿದ ಮಾರ್ಗದ ವಿದ್ಯುತ್ ಸ್ಥಗಿತಗೊಳಿಸದೆ ಹಾಗೂ ಮುಂಜಾಗ್ರತೆ ಕೈಗೊಳ್ಳದೆ ಕರ್ತವ್ಯ ನಿರ್ವಹಣೆಗೆ ಮುಂದಾಗಿದ್ದೇ ಆತನ ಸಾವಿಗೆ ಕಾರಣ ಎನ್ನಲಾಗಿದೆ. ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.ಕೋಲಾರದ ಇಟಿಸಿಎಂ ವೃತ್ತದಲ್ಲಿ ಸಾರ್ವಜನಿಕವಾಗಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ರೆಹಮತ್ ಉಲ್ಲಾ ಬೇಗ್ (35) ಕತ್ತು ಕೊಯ್ದುಕೊಂಡು ಮೃತಪಟ್ಟ ವ್ಯಕ್ತಿ. ರೆಹಮತ್, ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲ ನಿವಾಸಿಯಾಗಿದ್ದು, ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಿಕೊಂಡಿದ್ದ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಿಂದ ಕತ್ತು ಕೊಯ್ದುಕೊಂಡಿದ್ದ ರೆಹಮತ್ ಉಲ್ಲಾ ಬೇಗ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.