ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಸ್ಕಾರ್ಪಿಯೋ ಅಪಘಾತಕ್ಕೀಡಾಗಿ ಯುವಕ ಮೃತ್ಯು

Posted by Vidyamaana on 2023-09-26 20:28:29 |

Share: | | | | |


ಸ್ಕಾರ್ಪಿಯೋ ಅಪಘಾತಕ್ಕೀಡಾಗಿ ಯುವಕ ಮೃತ್ಯು

ಲಕ್ನೋ, ಸೆ.26: ಐಷಾರಾಮಿ ಕಾರುಗಳ ಬಗ್ಗೆ ತಪ್ಪಾದ ಭರವಸೆಗಳನ್ನು ನೀಡಿ ಮೋಸ ಎಸಗಿದ್ದಾರೆಂದು ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಮತ್ತು ಇತರ 12 ಮಂದಿಯ ವಿರುದ್ಧ ಉತ್ತರ ಪ್ರದೇಶದ ಖಾನ್ ಪುರದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.


ರಾಜೇಶ್ ಮಿಶ್ರಾ ಎಂಬವರು ದೂರು ನೀಡಿದ್ದು, ತನ್ನ ಮಗ ಡಾ.ಅಪೂರ್ವ ಮಿಶ್ರಾ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು ಅದಕ್ಕೆ ಕಂಪನಿಯ ನಿರ್ಲಕ್ಷ್ಯ ಕಾರಣ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. ರಾಜೇಶ್ ಮಿಶ್ರಾ ತನ್ನ ಮಗನಿಗೆ 17.40 ಲಕ್ಷ ಮೌಲ್ಯದ ಐಷಾರಾಮಿ ಕಪ್ಪು ಸ್ಕಾರ್ಪಿಯೋ ಕಾರನ್ನು ಗಿಫ್ಟ್ ನೀಡಿದ್ದರು. 2022ರ ಜನವರಿ 14ರಂದು ಮಗ ಮತ್ತು ಆತನ ಸ್ನೇಹಿತರು ಲಕ್ನೋದಿಂದ ಖಾನ್ ಪುರಕ್ಕೆ ಹಿಂತಿರುಗುತ್ತಿದ್ದಾಗ ಮಂಜಿನಲ್ಲಿ ಕಾಣಿಸದೆ ಕಾರು ಅಪಘಾತಕ್ಕೀಡಾಗಿತ್ತು. ಕಾರು ಪಲ್ಟಿ ಹೊಡೆದು ಅದರಲ್ಲಿದ್ದ ತನ್ನ ಏಕೈಕ ಮಗ ಅಪೂರ್ವ ಮಿಶ್ರಾ ಸ್ಥಳದಲ್ಲೇ ಮೃತಪಟ್ಟಿದ್ದ. ಕಾರಿನಲ್ಲಿ ಬೆಲ್ಟ್ ಹಾಕ್ಕೊಂಡಿದ್ದು, ಒಳಗಡೆ ಸೇಫ್ಟಿ ಬ್ಯಾಗ್ ಇದ್ದರೂ ಮಗನ ಜೀವ ಉಳಿಯಲಿಲ್ಲ. ಹೀಗಾಗಿ ಕಾರಿನ ಬಗ್ಗೆ ಕಂಪನಿ ನೀಡಿದ್ದ ಭರವಸೆ ಸುಳ್ಳಾಗಿದೆ. ಸೇಫ್ಟಿ ಇದೆಯೆಂಬ ಕಾರಣಕ್ಕೆ ಈ ಕಾರನ್ನು ಖರೀದಿಸಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


BS6 Mahindra Scorpio: Price, variant-wise features explained


ಕಾರು ಕಂಪೆನಿ ಮತ್ತು ಡೀಲರ್ ಗಳು ಸೇಫ್ಟಿ ಬಗ್ಗೆ ಎಡ್ವರ್ಟೈಸ್ ನೀಡಿದ್ದರಿಂದ ಕಾರು ಖರೀದಿಸಿದ್ದೆ. ಇಲ್ಲದಿದ್ದರೆ ಇಂತಹ ಕಾರು ಖರೀದಿ ಮಾಡುತ್ತಿರಲಿಲ್ಲ. ಅಪಘಾತ ಸಂದರ್ಭದಲ್ಲಿ ಏರ್ ಬ್ಯಾಗ್ ತೆರೆದುಕೊಂಡಿರಲಿಲ್ಲ. ಅದೇ ಕಾರಣದಿಂದ ಮಗನಿಗೆ ತೀವ್ರ ಪೆಟ್ಟಾಗಿತ್ತು. ಕಂಪನಿಯವರು ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಖಾನ್ ಪುರದ ಸ್ಥಳೀಯ ಕೋರ್ಟಿನಲ್ಲಿ ರಾಜೇಶ್ ಮಿಶ್ರಾ ದಾವೆ ಹೂಡಿದ್ದರು. ಕೋರ್ಟ್ ಸೂಚನೆಯಂತೆ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಕಂಪನಿಯ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.


ಐಪಿಸಿ ಸೆಕ್ಷನ್ 420(ಮೋಸ), 287(ಮೆಶಿನರಿ ವರ್ಕ್ ನಲ್ಲಿ ನಿರ್ಲಕ್ಷ್ಯ ಮಾಡಿರುವುದು), 304-ಎ( ಸಾವಿಗೆ ಕಾರಣವಾಗಿರುವುದು), 504(ಉದ್ದೇಶಪೂರ್ವಕ ಅಗೌರವ ಸೂಚಿಸಿ ಶಾಂತಿ ಭಂಗ), 506 ಮತ್ತು 102 ಬಿ (ಕ್ರಿಮಿನಲ್ ಕೂಟ ರಚನೆ) ಇತ್ಯಾದಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

Posted by Vidyamaana on 2023-10-21 10:10:13 |

Share: | | | | |


ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ನಾಪತ್ತೆ

ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.


2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು.


ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ

ಅಧಿವೇಶನದಲ್ಲಿ ತುಳುಮಾತನಾಡುವಾಗ ಬೆಂಬಲಿಸಿದ್ದ ಸಚಿವ ಝಮೀರ್ ಅಹ್ಮದ್

Posted by Vidyamaana on 2023-09-05 22:05:57 |

Share: | | | | |


ಅಧಿವೇಶನದಲ್ಲಿ ತುಳುಮಾತನಾಡುವಾಗ ಬೆಂಬಲಿಸಿದ್ದ ಸಚಿವ ಝಮೀರ್ ಅಹ್ಮದ್

ಪುತ್ತೂರು: ನಾನು ವಿಧಾನಸಭೆಯಲ್ಲಿ ತುಳುವಿನಲ್ಲಿ ಮತನಾಡುವಾಗ ನನಗೆ ಬೆಂಬಲ ನೀಡಿದವರು ಸಚಿವ ಝಮೀರ್ ಅಹ್ಮದ್ ರವರು , ನಾನು ಅಧಿವೇಶನದಲ್ಲಿ ಎದ್ದು ನಿಂತು ಮಾತನಾಡುವಾಗ ಕೆಲವರು ಆಕ್ಷೇಪ ಮಾಡಿದ್ದರು ಆ ವೇಳೆ ಪಾತೆರ‍್ಲೆ ಅಶೋಕರೆ  ಪಾತೆರ‍್ಲೆ ಎಂದು ನನಗೆ ಬೆಂಬಲ ನೀಡಿದ್ದಾರೆ ಇದಕ್ಕಾಗಿ ಇಂದು ತುಳುನಾಡಿಗೆ ಬಂದ ಸಚಿವ ಝಮೀರ್ ಅಹ್ಮದ್ ರವರಿಗೆ ನಾನು ತುಳುನಾಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಮಿತ್ತೂರು ದಾರುಲ್ ಇರ್ಷಾದ್ ಶಾಲೆಯಲ್ಲಿ ಪ್ರಧಾನಮಂತ್ರಿ ಜನ ವಇಕಾಸ ಯೋಜನೆಯಡಿ ನಿರ್ಮಾಣವಾದ ಪ್ರೌಢ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ತುಳುವನ್ನು ಎಂಟನೇ ಪರಿಚ್ಚೇದ ಮತ್ತು ರಾಜ್ಯದ ದ್ವಿತೀಯ ಭಾಷೆಯಾಗಿ ಪರಿಗಣಿಸಬೇಕು ಎಂಬ ಕಾರಣಕ್ಕೆ ನಾನು ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿದ್ದೆ ಈ ವೇಳೆ ನನಗೆ ಸಚಿವರು ನೀಡಿದ ಪ್ರೋತ್ಸಾಹ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.


ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಿಂದ ಇದ್ದಾರೆ. ಐದು ಗ್ಯಾರಂಟಿಗಳು ಜನರಿಗೆ ಬದುಕು ಕೊಟ್ಟಿದೆ. ಶಕ್ತಿ ಯೋಜನೆ, ಅನ್ನಾಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಎಲ್ಲಾ ಮನೆಗಳನ್ನು ಬೆಳಗಿಸಿದೆ. ಯೋಜನೆಯನ್ನು ಅಪಹಾಸ್ಯ ಮಾಡುತ್ತಿದ್ದವರು ತಮ್ಮ ಖಾತೆಗೆ ಹಣ ಜಮಾವಣೆಯಾದಾಗ ಮೌನವಾಗಿದ್ದಾರೆ, ಮನೆಯಲ್ಲಿ ಉಚಿತ ಕರೆಂಟ್ ಉರಿಯುವಾಗಿ ಹಾಸ್ಯ ಮಾಡುತ್ತಿದ್ದವರ ಉರಿ ನಿಂತು ಹೋಗಿದೆ. ರಾಜ್ಯದ ಎಲ್ಲಾ ಜನರಿಗೂ ಸಮಾನ ಅವಕಾಶವನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜಧರ್ಮ ಪಾಲನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಸೀದಿ ಆಡಳಿತದಿಂದ ಉತ್ತಮ ಬಾಂಧವ್ಯ

ಜಿಲ್ಲೆಯಲ್ಲಿ ಪುತ್ತೂರು ಮತ್ತು ಉಳ್ಳಾಲ ಹೊರತುಪಡಿಸಿ ಬೇರೆ ಕಡೆ ಕಾಂಗ್ರೆಸ್ ಅಲ್ಪಮತದಿಂದ ಸೋತಿದೆ ವಿನಾ ಕಾಂಗ್ರೆಸ್ ಗೆ ಹಾನಿಯಾಗಿಲ್ಲ, ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗಿದ್ದು ಮುಂದಿನ ದಿನಗಳಲ್ಲಿ ಜನ ಕಾಂಗ್ರೆಸ್ಸನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಾತ್ರ ಜನತೆ ಸಂತೋಷದಿಂದ ಇರಲು ಸಾಧ್ಯವಾಗುತ್ತದೆ. ಸಿದ್ದರಾಮಯ್ಯ ಸೀಎಂ ಆದ ಬಳಿಕ ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಕೋಮುವಾದ ಮಾಡುವವರ ಹೆಡೆಮುರಿ ಕಟ್ಟುವಲ್ಲಿ ಸರಕಾರ ಸಫಲವಾಗಿದೆ ಎಂದ ಶಾಸಕರು ಈ ಭಾಗದ ಮಸೀದಿ ಆಡಳಿತ ಕಮಿಟಿಯವರು ಸಮಾಜದಲ್ಲಿ ಸೌಹಾರ್ಧದ ವಾತಾವರಣವನ್ನು ಬೆಂಬಲಿಸುತ್ತಿದ್ದು ಎಲ್ಲರ ಜೊತೆಯೋ ಅನ್ಯೋನ್ಯತೆಯಿಂದ ಇದ್ದು ಇದು ಹೆಮ್ಮೆಯ ವಿಚಾರವಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.


ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ನನ್ನ ಕ್ಷೇತ್ರದ ಜತೆಗೆ ಹೆಚ್ಚುವರಿಯಗಿ ನೀಡಬೇಕು, ಅನೇಕ ಬೇಡಿಕೆಗಳಿದ್ದು ಎಲ್ಲವನ್ನೂ ತಮ್ಮ ಮುಂದೆ ತರುತ್ತೇನೆ ಸಹಕಾರ ನೀಡಬೇಕು ಎಂದು ಸಚಿವ ಝಮಿರ್ ಅಹ್ಮದ್‌ರವರಿಗೆ ಮನವಿ ಮಾಡಿದರು.


ತುಳುವಿನಲ್ಲೇ ಮಾತು ಆರಂಭಿಸಿದ ಸಚಿವ ಝಮೀರ್


ಸಚಿವ ಝಮೀರ್ ಅಹ್ಮದ್‌ರವರು ತುಳುವಿನಲ್ಲೇ ತನ್ನ ಮಾತು ಆರಂಭಿಸಿ ಎಂಕ್ ಒಂತೆ ತುಳು ಬರ‍್ಪುಂಡು ಜಾಸ್ತಿ ಗೊತ್ತಿಜ್ಜಿ ಎಂದು ಹೇಳುವ ಮೂಲಕ ತುಳುನಾಡಿನ ಭಾಷೆಗೂ ಗೌರವ ನೀಡುವ ಕೆಲಸವನ್ನು ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Posted by Vidyamaana on 2023-07-23 12:44:06 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಂಗಳೂರು : ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರ್ಪಡೆಗೊಂಡಿದೆ.ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಸಂಭವ್ಯವಿದೆ.ಬಾಗಲಕೋಟೆ, ಚಿತ್ರದುರ್ಗ, ಗದಗ ಮತ್ತು ಮೈಸೂರಿನಲ್ಲಿ ಚದುರಿದ ಮಳೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ ರಾಯಚೂರು, ಚಾಮರಾಜ್ ನಗರ ಮತ್ತು ಮಂಡ್ಯದಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ಕಲ್ಬುರ್ಗಿಯಲ್ಲಿ ಅತಿಸಾಧಾರಣ ಮಳೆ ಬೀಳುವ ಸಂಭವವಿದೆ.


ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆಗುಂಬೆ, ಹೊಸನಗರದ ಸೊನಾಲೆ, ತ್ರಿಣಿವೆ, ಸುಳಗೋಡು, ಮೇಲಿನ ಬೆಸಿಗೆ, ನಗರ, ಮುಂಬಾರು ತೀರ್ಥಹಳ್ಳಿಯ ಹಾದಿಗಲ್ಲು, ಬಿದರಗೋಡು, ಹೊನ್ನೆತಾಳುವಿನಲ್ಲಿ ಉತ್ತಮ ಮಳೆಯಾಗಿದೆ.ಜಿಲ್ಲೆಯ ಪ್ರಮುಖ ಜಲಾಶಯಗಳ ಮಟ್ಟ

ಚಿಕ್ಕಮಗಳೂರಿನ 10 ಗ್ರಾಮಪಂಚಾಯಿತಿಗಳಲ್ಲಿ ಉತ್ತಮ ಮಳೆತಾಗಿದ್ದು ಇದರಿಂದ ತುಂಗ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ. ನಿನ್ನೆ ರಾತ್ರಿ 35 ಸಾವಿರ ಕ್ಯೈಸೆಕ್ ನೀರು ಹರಿಬರುತ್ತಿದ್ದು ಬೆಳಗಿನ ಜಾವದ ಸಮಯದಲ್ಲಿ ಮಳೆ ಕಡಿಮೆಯಾದ ಕಾರಣ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿತ್ತು.


ಈಗ ಮಳೆ ಹೆಚ್ಚಾದ ಕಾರಣ 40 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ತುಂಗ ನದಿಯ ಗಾಜನೂರು ಜಲಾಶಯದಲ್ಲಿ 21 ಗೇಟು ತೆರೆದು ಹರಿಬಿಡಲಾಗುತ್ತಿದೆ.ಅದರಂತೆ ಭದ್ರೆಯ ಒಖಹರಿವು ಹೆಚ್ಚಳವಾಗಿದೆ. 186 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 145ಅಡಿ ನೀರು ಸಂಗ್ರಹವಾಗಿದೆ. 12165 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇಷ್ಟು ಹೊತ್ತಿಗೆ ಭದ್ರ ಡ್ಯಾಂ ತುಂಬಿ ಗೇಟ್ ಓಪನ್ ಮಾಡಲಾಗಿತ್ತು. 184 ಅಡಿ ನೀರು ಸಂಗ್ರಹವಾಗಿತ್ತು. ಜು.18, 2022 ರಂದು ಜಲಾಶಯದಿಂದ ನದಿಗೆ ನೀರು ಹರಿಸಲಸಗಿತ್ತು.


ಅದರಂತೆ ಲಿಂಗನ ಮಕ್ಕಿ ಜಲಾಶಯದಲ್ಲಿ 52,374 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1819 ಅಡಿ ಎತ್ತರದ ಜಲಾಶಯದಲ್ಲಿ ಸಧ್ಯಕ್ಕೆ 1770.70 ಅಡಿ ನೀರು ಸಂಗ್ರಹವಾಗಿದೆ. ನಿನ್ನೆ 1767.30 ಅಡಿ ನೀರು ಸಂಗ್ರಹವಾಗಿತ್ತು. ಒಳಹರಿವು ಹೆಚ್ಚಳದಿಂದ ಮೂರು ಅಡಿ ಹೆಚ್ಚಳವಾಗಿದೆ. ಕಳೆದ ವರ್ಷ ಈ ದಿನ 1797 ಅಡಿ ನೀರು ಸಂಗ್ರಹವಾಗಿದೆ.

ಸುಬ್ರಮಣ್ಯ:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

Posted by Vidyamaana on 2024-06-27 12:57:18 |

Share: | | | | |


ಸುಬ್ರಮಣ್ಯ:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಸುಬ್ರಮಣ್ಯ; ಕರಾವಳಿ ಹಾಗೂ ಪಶ್ಚಿಮಘಟ್ಟಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಕುಮಾರಧಾರಾ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಏರಿಕೆಯಾಗಿದೆ. ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದೆ.

ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

Posted by Vidyamaana on 2024-01-29 07:59:38 |

Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.  ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.


ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 


ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.



Leave a Comment: