ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

Posted by Vidyamaana on 2024-07-06 13:28:18 |

Share: | | | | |


ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

   ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ.ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

62ನೇ ವಯಸ್ಸಿನಲ್ಲಿ 46 ವರ್ಷದ ಮಹಿಳೆಯನ್ನು ಮದುವೆಯಾದ ಖತರ್ನಾಗ್ ಗ್ಯಾಂಗ್ ಸ್ಟರ್

Posted by Vidyamaana on 2024-03-21 15:39:55 |

Share: | | | | |


62ನೇ ವಯಸ್ಸಿನಲ್ಲಿ 46 ವರ್ಷದ ಮಹಿಳೆಯನ್ನು ಮದುವೆಯಾದ ಖತರ್ನಾಗ್ ಗ್ಯಾಂಗ್ ಸ್ಟರ್

ಬಿಹಾರ: ಲೋಕಸಭೆ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಯಾಗಿದ್ದ ಕಿಮಿನಲ್​​ ಹಿನ್ನೆಲೆ ಇರುವ ಕುಖ್ಯಾತ ರೌಡಿಯೊಬ್ಬ ಚುನಾವಣೆಗೆ ನಿಲ್ಲುವ ಉದ್ದೇಶದಿಂದ ರಾತ್ರೋರಾತ್ರಿ ಮದುವೆ ಆಗಿದ್ದಾನೆ. ಮದುವೆಗೂ, ಚುನಾವಣೆಗೂ ಏನು ಸಂಬಂಧ ಎಂದು ನಿಮಗೆ ಪ್ರಶ್ನೆ ಮೂಡುತ್ತಿರಬಹುದು..

ಆದರೆ ಈ ಕುರಿತಾದ ಇಂಟ್ರಸ್ಟಿಂಗ್​ ಕಹಾನಿ ಇಲ್ಲಿದೆ…

ಅಶೋಕ್ ಮಹ್ತೋ ಬಿಹಾರದ ನವಾಡ ಪ್ರದೇಶದಲ್ಲಿ ದೊಡ್ಡ ಗ್ಯಾಂಗ್​ಸ್ಟರ್​. ನಾವಡ ಜೈಲ್ ಬ್ರೇಕ್ ಘಟನೆಯಲ್ಲೂ ಭಾಗಿಯಾಗಿದ್ದ. ಕೆಲವು ಕ್ರಿಮಿನಲ್​ ಹಿನ್ನೆಲೆ ಹೊಂದಿರುವ ಈತ ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದುಕೊಂಡಿದ್ದಾನೆ. ಈ ಕುರಿತಾಗಿ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಈ ಹಿಂದೆ ಭೇಟಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

2001ರಲ್ಲಿ ನವಾಡ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣದಲ್ಲಿ 17 ವರ್ಷ ಸೆರೆಮನೆವಾಸಕ್ಕೆ ಗುರಿಯಾದ ಅಶೋಕ್ ಮಹ್ತೋ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಒಳಗಾದವರಿಗೆ ಜೈಲಿನಿಂದ ಬಿಡುಗಡೆಯಾಗಿ ಆರು ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಹೀಗಾಗಿ ನೀನು ಮದುವೆ ಆಗು, ಪತ್ನಿಯನ್ನೇ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆ ಆರ್‌ಜೆಡಿ ಹಿರಿಯ ನಾಯಕರೊಬ್ಬರು ಸಲಹೆ ನೀಡಿದ್ದಾರೆ. ಈ ಗ್ಯಾಂಗ್​ಸ್ಟರ್​​ ಮಾಸ್ಟರ್​ ಪ್ಲ್ಯಾನ್​​ ಮಾಡಿದ್ದಾನೆ.

ಅಶೋಕ್ ಮಹ್ತೋ ಬಿಹಾರದ ಮುಂಗೇರ್ ಕ್ಷೇತ್ರದಿಂದ ಆರ್‌ಜೆಡಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಆದರೆ, ಕ್ರಿಮಿನಲ್ ಹಿಸ್ಟರಿ ಇರುವ ಕಾರಣ ಟಿಕೆಟ್ ಸಿಗದಿದ್ದರೆ ಪತ್ನಿ ಮೂಲಕವಾಗಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾನೆ ಎನ್ನಲಾಗಿದೆ.

ಗ್ಯಾಂಗಸ್ಟರ್​ ಅಶೋಕ್ ಮಹ್ತೋ 62 ನೇ ವಯಸ್ಸಿನಲ್ಲಿ 46 ವರ್ಷದ ಮಹಿಳೆಯನ್ನು ಮದುವೆಯಾಗಿದ್ದಾನೆ. ಕೆಲವೇ ಮಂದಿ ಅತಿಥಿಗಳು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮತ್ತೋ ವಿವಾಹ ಸಮಾರಂಭ ನೆರವೇರಿದೆ. ಅಶೋಕ್ ಮಹತೋ ಮದುವೆಯಾದ ಹುಡುಗಿಯ ಹೆಸರು ಕುಮಾರಿ ಅನಿತಾ. ಆಕೆಗೆ 46 ವರ್ಷ ಮತ್ತು ದೆಹಲಿಯ ಆರ್‌ಕೆ ಪುರಂ ನಿವಾಸಿ. ಪಾಟ್ನಾ ಜಿಲ್ಲೆಯ ಸೇಲಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕರೌಟದಲ್ಲಿರುವ ಮಾ ಜಗದಂಬಾ ಸ್ಥಾನ ದೇವಸ್ಥಾನದಲ್ಲಿ ಮಂಗಳವಾರ ವಿವಾಹವಾದರು.

ವಿವಾಹದ ನಂತರ, ಅಶೋಕ್ ಮಹ್ತೋ ಪತ್ನಿ ಅನಿತಾ ಜತೆ ಮಾಜಿ ಸಿಎಂ ರಾಬಿದೇವಿಯವರ ನಿವಾಸಕ್ಕೆ ತೆರಳಿ ಆರ್ ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಅವರ ಆಶೀರ್ವಾದ ಪಡೆದರು. ಬಿಹಾರದ ಮುಂಗೇರ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣದಲ್ಲಿ ಪತ್ನಿಯನ್ನು ಕಣಕ್ಕಿಳಿಸುವ ಮೂಲಕ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಅವರು ವಿವಾಹವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪತ್ನಿಯನ್ನು ಚುನಾವಣಾ ಕಣಕ್ಕೆ ಇಳಿಸುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಇನ್ನೂ ಯಾವುದೂ ನಿರ್ಧಾರವಾಗಿಲ್ಲ ಎಂದ ಮತ್ತೋ, ಪತ್ನಿಗೆ ಟಿಕೆಟ್ ನೀಡುವ ಬಗ್ಗೆ ಲಾಲೂ ಯಾವುದೇ ಖಚಿತ ಭರವಸೆ ನೀಡಿಲ್ಲ.

ಕಳೆದ ವರ್ಷ ಜೈಲಿನಿಂದ ಬಿಡುಗಡೆಯಾಗಿದ್ದ ಈತನ ವಿರುದ್ಧ ಪ್ರಸ್ತುತ ನ್ಯಾಯಾಲಯಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿವೆ ಎನ್ನಲಾಗಿದೆ.

ತಾ| ಯುವ ಪ್ರಶಸ್ತಿ ಘೋಷಣೆ- 4 ಯುವಕ ಮಂಡಲ, 2 ಮಹಿಳಾ ಮಂಡಲ, 7 ಮಂದಿಗೆ ವೈಯಕ್ತಿಕ ಪ್ರಶಸ್ತಿ

Posted by Vidyamaana on 2023-01-12 12:28:55 |

Share: | | | | |


ತಾ| ಯುವ ಪ್ರಶಸ್ತಿ ಘೋಷಣೆ- 4 ಯುವಕ ಮಂಡಲ, 2 ಮಹಿಳಾ ಮಂಡಲ, 7 ಮಂದಿಗೆ ವೈಯಕ್ತಿಕ ಪ್ರಶಸ್ತಿ

ಪುತ್ತೂರು: ತಾಲೂಕು ಯುವಜನ ಒಕ್ಕೂಟದ ವತಿಯಿಂದ ನೀಡಲಾಗುವ 2021-22ನೇ ಸಾಲಿನ ‘ಯುವ ಪ್ರಶಸ್ತಿ’ಗೆ ವಿಷ್ಣು ಯುವಕರ ಬಳಗ ಮಜ್ಜಾರಡ್ಕ, ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ‍್ಯಾಕ್ಟ್ ಕ್ಲಬ್ ಪುತ್ತೂರು, ನವೋದಯ ಮಹಿಳಾ ಮಂಡಲ ಬನ್ನೂರು ಹಾಗೂ ಸ್ಪೂರ್ತಿ ಮಹಿಳಾ ಮಂಡಲ ಆಯ್ಕೆಯಾಗಿದೆ. ವೈಯಕ್ತಿಕ ವಿಭಾಗದಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ ಮನು ಕುಮಾರ್, ಕ್ರೀಡೆಯಲ್ಲಿ ನಿಶ್ಚಲ್ ಕೆ.ಜೆ., ಯುವ ಜನತೆಯಲ್ಲಿ ಹರಿಪ್ರಸಾದ್, ಧಾರ್ಮಿಕದಲ್ಲಿ ಮನ್ಮಥ ಶೆಟ್ಟಿ, ಕ್ರೀಡೆಯಲ್ಲಿ ಧನ್ವಿ ಜೆ.ರೈ, ಸಾಹಿತ್ಯದಲ್ಲಿ ಅಪೂರ್ವ ಕಾರಂತ್ ಹಾಗೂ ಸಂಘಟನೆಯಲ್ಲಿ ರಾಜೇಶ್ ಮಯೂರ ಆಯ್ಕೆಯಾಗಿದ್ದಾರೆ.

ನಿಶ್ಚಲ್ ಕೆ.ಜೆ: ನೆಹರು ನಗರ ರಕ್ತೇಶ್ವರಿ ವಠಾರದ ಜನಾರ್ದನ ಹಾಗೂ ಜ್ಯೋತಿ ದಂಪತಿ ಪುತ್ರ ನಿಶ್ಚಲ್ ವಿವೇಕಾನಂದ ಪ.ಪೂ ಕಾಲೇಜಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ. ಕ್ರೀಡೆ ಹಾಗೂ ಯೋಗದಲ್ಲಿ ತೊಡಗಿಸಿಕೊಂಡಿರುವ ಇವರು ಯೋಗಾಭ್ಯಾಸದಲ್ಲಿ ರಾಜ್ಯ, ರಾಷ್ಟ್ರ, ಅಂತರ್ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಧನ್ವಿ ಜೆ.ರೈ: ಮುಕ್ರಂಪಾಡಿ ಮಲ್ಲಿಕಾ ಜಯರಾಮರೈ ಎನ್ ರವರ ಪುತ್ರಿಯಾಗಿರುವ ಧನ್ವಿ ಯವರು 2019ರಲ್ಲಿ ನಡೆದ ರಾಷ್ಟ್ರ ಲೈಫ್ ಸೇವಿಂಗ್‌ನಲ್ಲಿ ಒಟ್ಟು ಏಳು ಚಿನ್ನ, ಎರಡು ಬೆಳ್ಳಿ, ಒಂದು ಕಂಚು ಪದಕ, ಇನ್ನೂರು ಮೀಟರ್ ಒಬ್ಸ್‌ಸ್ಟೆಲ್‌ಸ್ವಿಮ್‌ನಲ್ಲಿ ರಾಷ್ಟ್ರೀಯ ದಾಖಲೆ ಮಾಡಿರುತ್ತಾರೆ. ಇವರ ಸಾಧನೆಗೆ ನೂರಾರು ಸನ್ಮಾನ,ಪುರಸ್ಕಾರಗಳು ದೊರೆತಿದೆ.‌

ಮನ್ಮಥ ಶೆಟ್ಟಿ; ಕೊಡಿಪ್ಪಾಡಿ ಗ್ರಾಮದ ಶೇರ ದಿ.ಚಂದ್ರಹಾಸ ಶೆಟ್ಟಿಯವರ ಪುತ್ರನಾಗಿರುವ ಮನ್ಮಥ ಶೆಟ್ಟಿಯವರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತುಳುನಾಡಿನ ದೈವಾರಾಧನೆಯಲ್ಲಿ ಹಲವಾರು ವರ್ಷಗಳಿಂದ ಮಧ್ಯಸ್ಥರಾಗಿ ತೊಡಗಿಸಿಕೊಂಡು ದೈವಗಳಿಗೆ ಮದಿಪು ಹೇಳುತ್ತಾ ತುಳುನಾಡಿನ ಮೂಲ ಸಂಪ್ರದಾಯ ಉಳಿಸುವಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯ, ಅಂತಾರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ನಿರೂಪಣೆ ನಡೆಸುತ್ತಿದ್ದಾರೆ. ಇವರ ಸೇವೆಗೆ ಹಲವು ಪ್ರಶಸ್ತಿ ಸನ್ಮಾನಗಳು ಲಭಿಸಿದೆ.

ಹರಿಪ್ರಸಾದ್ ಎಸ್; ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿರುವ ಹರಿಪ್ರಸಾದ್ ಬಡಗನ್ನೂರು ಕೆಮನಡ್ಕ ರಮೇಶ್ ರೈ ಮತ್ತು ರತ್ನಾವತಿ ಎಸ್ ದಂಪತಿ ಪುತ್ರ. ಸಾಮಾಜಿಕ ಪ್ರಜ್ಞೆ ಮತ್ತು ಪರಿಸರದ ಬಗ್ಗೆ ಕಾಳಜಿಯಿಂದ ವನಪರ್ವ ಅಭಿಯಾನ ಮತ್ತು ಮಳೆಕೊಯ್ಲು ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿ ಬಳಸುವಲ್ಲಿ ತರಬೇತಿ, ಆರೋಗ್ಯ ಜಾಗೃತಿ, ಡಿಜಿಟಲ್ ಜಾಗೃತಿ, ಬಸ್ಸು ತಂಗುದಾಣ ಸ್ವಚ್ಚತೆ, ನಾಯಕತ್ವ ಪೂರಕ ವೇದಿಕೆಗಳನ್ನು ಕಲ್ಪಿಸಿಕೊಟ್ಟಿರುತ್ತಾರೆ.

ಎಚ್.ಎಸ್ ಮನು ಕುಮಾರ್; ನೆಹರುನಗರದ ಶಿವನಗರ ಸುಂದರ ಹಾಗೂ ದೇವಕಿ ದಂಪತಿ ಪುತ್ರನಾಗಿರುವ ಮನುಕುಮಾರ್, ಶಿವಮಣಿ ಕಲಾ ತಂಡವನ್ನು ಸ್ಥಾಪಿಸಿ, ಹಲವಾರು ಹಿರಿಯ, ಕಿರಿಯ ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ಬೆಳೆಸುತ್ತಾ ವೇದಿಕೆಗಳನ್ನು ಒದಗಿಸಿದ್ದಾರೆ. ಹಲವಾರು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸುತ್ತಿದ್ದಾರೆ. ಮಕ್ಕಳಿಗೆ ನೃತ್ಯ, ಯಕ್ಷಗಾನ, ಹುಲಿ ಕುಣಿತ ಇನ್ನಿತರ ಕಲೆಗಳಲ್ಲಿ ವೇದಿಕೆಗಳನ್ನು ಒದಗಿಸಿದ್ದಾರೆ. ಸಾಹಿತ್ಯ, ನಾಟಕ ರಚನೆ, ನಿರ್ದೇಶನವನ್ನು ನೀಡುತ್ತಿದ್ದಾರೆ. ಇವರ ಶಿವಮಣಿ ಕಲಾತಂಡ ಸರ್ಕಾರದ ಮಾನ್ಯತೆ ಪಡೆದ ಕಲಾ ಸಂಘವಾಗಿ ಮುನ್ನ ನಡೆಯುತ್ತಿದೆ.


ಅಪೂರ್ವ ಕಾರಂತ; ದರ್ಬೆ ವೆಂಕಟ್ರಮಣ ಕಾರಂತ, ಸಂಧ್ಯಾ ದಂಪತಿ ಪುತ್ರಿ ಯಾಗಿರುವ ಅಪೂರ್ವ ಇಂಜಿನಿಯರಿಂಗ್ ಪದವೀಧರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ಸೇವೆ, ಕಾರ್ಯಕ್ರಮ ನಿರೂಪಣೆ, ಸಾಹಿತ್ಯ ಸಮ್ಮೇಳನ ಜಿಲ್ಲೆ, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗಳಲ್ಲಿ ಭಾಗವಹಿರುತ್ತಾರೆ. ಹಲವಾರು ಕಥೆ,ಕವನಗಳನ್ನು ರಚಿಸಿರುತ್ತಾರೆ.


ರಾಜೇಶ್ ಮಯೂರ: ಅರಿಯಡ್ಕ ಗ್ರಾಮದ ಗೋಳ್ತಿಲ ನಿವಾಸಿಯಾದ ರಾಜೇಶ್ ಕೆ ಮಯೂರ ಗೋಳ್ತಿಲ ಇವರು ದಿ| ಕೊರಗಪ್ಪ ರೈ ಮತ್ತು ಶ್ಯಾಮಲ ದಂಪತಿ ಪುತ್ರ. ಅತೀ ಮೆಚ್ಚಿನ ಡ್ರಾಯಿಂಗ್ ನಲ್ಲಿ ಒಲವು ಇದ್ದ ಕಾರಣ ಶಾಲಾ ಶಿಕ್ಷಕರ ಪ್ರೋತ್ಸಾಹದೊಂದಿಗೆ ಮುಂದೆ ಕಲಾವಿದನಾಗಿ ವೃತ್ತಿ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದರೂ ಹತ್ತು ಹಲವು ಸಮಾಜಮುಖಿ ಕೆಲಸಗಳೊಂದಿಗೆ ಪರಿಸರದಲ್ಲಿ ಚಿರಪರಿಚತರಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲು ಮರಣಾನಂತರ ಕೆ.ಎಸ್.ಹೆಗ್ಡೆ ದೇರಲಕಟ್ಟೆಗೆ ದಾನ ಮಾಡಿರುತ್ತಾರೆ. ಈಗಾಗಲೇ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿರುತ್ತಾರೆ. ಜೊತೆಗೆ ಹಲವು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


ವಿಷ್ಣು ಯುವ ಶಕ್ತಿ ಬಳಗ; 2018 ರಲ್ಲಿ ಪ್ರಾರಂಭಗೊಂಡ ಮಜ್ಜಾರಡ್ಕ ಶ್ರೀ ವಿಷ್ಣು ಯುವ ಶಕ್ತಿ ಬಳಗವು ಶ್ರಮ, ಸೇವೆ, ಸಹಾಯ ಎಂಬ ಧ್ಯೆಯ ವಾಕ್ಯದೊಂದಿಗೆ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿದೆ. ಗ್ರಾಮದಲ್ಲಿ ಸಣ್ಣ ಪುಟ್ಟ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು, ಸಂಘವು ನೆಹರು ಯುವ ಕೇಂದ್ರ ಮಂಗಳೂರು ಇದರಲ್ಲಿ ನೋಂದಾವಣೆಯನ್ನು ಮಾಡಿಕೊಂಡು ನಿತ್ಯ ನಿರಂತರವಾಗಿ ವಿಭಿನ್ನ ಕಾರ್ಯದ ಮೂಲಕ ಯುವಜನತೆಗೆ ಮಾದರಿಯಾಗುತ್ತಿದೆ. ಕೆಸರುಡೊಂಜಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುತ್ತಿದೆ.


ವಿಕ್ರಂ ಯುವಕ ಮಂಡಲ: ಶಾಂತಿಗೋಡು ವಿಕ್ರಂ ಯುವಕ ಮಂಡಲವು ಸುಮಾರು 30 ವರ್ಷಗಳಿಂದ ಗ್ರಾಮೀಣ ಮಟ್ಟದಲ್ಲಿ ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ, ಸಾಹಿತ್ಯ ಹಾಗೂ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದೆ.


ನವೋದಯ ಮಹಿಳಾ ಮಂಡಲ; ಬನ್ನೂರು ನವೋದಯ ಮಹಿಳಾ ಮಂಡಲವು ಗ್ರಾಮೀಣ ಕ್ರೀಡೆ, ಮಳೆಕೊಯ್ಲ, ಜಲಮರುಪೂರಣ ಮಾಹಿತಿ ಕಾರ್ಯಾಗಾರ, ಡಿಜಿಟಲ್ ಕಾರ್ಯಾಗಾರ, ಚಿಣ್ಣರ ಸಂಭ್ರಮ ಸೇರಿದಂತೆ ಹಲವು ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ.


ರೋಟರ‍್ಯಾಕ್ಟ್ ಕ್ಲಬ್; ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾಗಿರುವ ರೋಟರ‍್ಯಾಕ್ಟ್ ಕ್ಲಬ್ ಸ್ವಚ್ಚತಾ ಅಭಿಯಾನ, ಮೇಕ್ ಇನ್ ಇಂಡಿಯಾ, ಮಣ್ಣಿನ ಸಂರಕ್ಷಣೆ, ನೀರಿನ ಸಂರಕ್ಷಣೆ ಹಾಗೂ ಜಲಮರುಪೂರಣ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿರುತ್ತದೆ. ಜೊತೆಗೆ ಇನ್ನಿತರ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.


ಸ್ಪೂರ್ತಿ ಮಹಿಳಾ ಮಂಡಲ; ಧಾರ್ಮಿಕ, ಸಮಾಜ ಸೇವೆಯಲ್ಲಿ ಸಕ್ರಿಯವಾಗಿರುವ ಬನ್ನೂರು ಸ್ಪೂರ್ತಿ ಮಹಿಳಾ ಮಂಡಲ ಕಳೆದ ಎಂಟು ವರ್ಷಗಳಿಂದ ಹಲವು ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದೆ. ಸ್ವಚ್ಚತೆ, ಗಾಂಧಿ ಜಯಂತಿ, ಆರೋಗ್ಯ ತಪಾಸಣೆ, ಆಯುಷ್ಮಾನ್ ಕಾರ್ಡ್ ನೋಂದಣಿ ಮೊದಲಾದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.


ಜ.14 ಯುವ ಸಪ್ತಾಹ, ಪ್ರಶಸ್ತಿ ಪ್ರದಾನ: ತಾ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಇದರ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ ಯುವ ಸಪ್ತಾಹ, ವಿವೇಕ ರಥ-ಯುವ ಪಥ ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ ಜ.14ರಂದು ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ಉಳಯ ಯುವ ಸಂದೇಶ ನೀಡಲಿದ್ದಾರೆ.


ನಗರ ಸಭಾ ಸದಸ್ಯ ಪಿ.ಜಿ ಜಗನ್ನಿವಾಸ ರಾವ್, ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ., ವಿವೇಕಾನಂದ ವಿದ್ಯಾ ವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ ಕೃಷ್ಣ ಭಟ್, ತಹಶೀಲ್ದಾರ್ ನಿಸರ್ಗಪ್ರಿಯ ಜೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ವೈ ನಾಯಕ್, ಪೊಲೀಸ್ ಉಪ ಅಧೀಕ್ಷಕ ಡಾ.ವೀರಯ್ಯ ಹೀರೇಮಠ್, ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ಹಾಗೂ ತಾ.ಪಂ ಕಾರ್ಯನಿರ್ವಾಹಕಾಽಕಾರಿ ನವೀನ್ ಭಂಡಾರಿ ತಿಳಿಸಿದ್ದಾರೆ.

ಹಿಂದೂ ಹಿತಾಸಕ್ತಿಗೆ ಬದ್ಧವಾದ ಪುತ್ತಿಲ ಪರಿವಾರ

Posted by Vidyamaana on 2023-05-23 06:24:47 |

Share: | | | | |


ಹಿಂದೂ ಹಿತಾಸಕ್ತಿಗೆ ಬದ್ಧವಾದ ಪುತ್ತಿಲ ಪರಿವಾರ

ಪುತ್ತೂರು: ಸ್ವಾರ್ಥರಹಿತವಾದ ಹಿಂದೂ ಪರವಾದ ಮತ್ತು ಹಿಂದೂಗಳ ಹಿತಾಸಕ್ತಿಗೆ ಬದ್ಧವಾಗಿ ನಡೆಸಲ್ಪಡುವ ಸ್ವತಂತ್ರವಾದ ಹಿಂದೂ ಕಾರ್ಯಕರ್ತರನ್ನೊಳಗೊಂಡ ಸಮೂಹವೇ ಪುತ್ತಿಲ ಪರಿವಾರ. ಹೊರತಾಗಿ, ಯಾವುದೇ ಸಂಘಟನೆಗಳಿಗೆ ಪರ್ಯಾಯವಾಗಿ ಹುಟ್ಟಿಕೊಂಡ ಸಂಘಟನೆಯಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಅಪಪ್ರಚಾರಗಳಿಗೆ ಉತ್ತರವಾಗಿ ಈ ಹೇಳಿಕೆ ಹೊರಬಿದ್ದಿದೆ ಎಂದು ಹೇಳಲಾಗುತ್ತಿದೆ.

ಇದು ಹಿಂದುಗಳಿಗಾಗಿ ಕೆಲಸ ಮಾಡುವ ಸಮೂಹವೇ ಹೊರತು ಯಾವುದೇ ರಾಜಕೀಯ ಸ್ವಹಿತಾಸಕ್ತಿಯಿಂದ ಉದ್ದೇಶಿತಗೊಂಡ ಸಮೂಹವಲ್ಲ.

ಎಲ್ಲರೂ ಗಮನಿಸಬೇಕು ಯಾವುದೇ ರಾಜಕೀಯ ಪಕ್ಷಕ್ಕಾಗಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕಾಗಲಿ ಪರ್ಯಾಯವಾಗಿ ಉದ್ದೇಶಿಸಿದ ಸಮೂಹವಲ್ಲ.

ಹಿಂದೆಯೂ ಹೇಳಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಭಾ.ಜ.ಪಾ.ಕ್ಕೆ ಪ್ರತಿರೋಧವಾಗಿ ಈ ಸಮೂಹ ಕೆಲಸ ಮಾಡುವುದಿಲ್ಲ.

ಮಾತಿನ ಬದ್ಧತೆ, ಮೌಲ್ಯ, ಧರ್ಮ ಮತ್ತು ಸಿದ್ಧಾಂತದ ಪ್ರತಿಪಾದನೆಯ ತಳಹದಿಯಲ್ಲಿ ಜನಸೇವಾ ಕಾರ್ಯಕ್ರಮಗಳನ್ನು ಈ ಸಮೂಹ (ಪರಿವಾರ) ಮಾಡಲಿದೆ.

ಯಾರ್ಯಾರೋ ಕೊಡುವ ಉತ್ಪ್ರೇಕ್ಷೆಯ, ದ್ವೇಷ ಹುಟ್ಟು ಹಾಕುವ ಮಾದರಿಯ ಹೇಳಿಕೆಗಳಾಗಲಿ, ಮಾಧ್ಯಮ ಪ್ರಚಾರಕ್ಕಾಗಲಿ ನಮ್ಮದು ವಿರೋಧವಿದೆ ಮತ್ತು ಅದಕ್ಕೂ ನಮ್ಮ ಪರಿವಾರದ ಉದ್ದೇಶಕ್ಕೂ ಯಾವುದೇ ಸಂಬಂಧವಿರುವುದಿಲ್ಲ.

ಆದುದರಿಂದ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದಿರಿ ಎಂದು ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

Posted by Vidyamaana on 2024-04-21 15:46:43 |

Share: | | | | |


ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ಗುಜರಾತ್‌ನ ಗಾಂಧಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ. ಈ ನಡುವೆ ಅವರ ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 36 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ಇದೇ ವೇಳೆ ಅವರು ತಮ್ಮ ಬಳಿಯಲ್ಲಿ ಯಾವುದೇ ಕಾರಿಲ್ಲ ಎಂದು ಹೇಳಿರುವ ಶಾ, ಅವರ ಪತ್ನಿ ಬಳಿ ಇದೆ 31 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ತಿಳಿಸಿದ್ದಾರೆ. 

ಅಫಿಡವಿಟ್ ಪ್ರಕಾರ, ಶಾ ಮತ್ತು ಅವರ ಪತ್ನಿ ಒಟ್ಟು 65.67 ಕೋಟಿ ರೂ. ಗಮನಾರ್ಹವಾಗಿ, ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವರದಿಯಾದ 30.49 ಕೋಟಿ ರೂ.ಗಿಂತ ಗಮನಾರ್ಹ ಹೆಚ್ಚಳವನ್ನು ಸೂಚಿಸುತ್ತದೆ, ಕಳೆದ ಐದು ವರ್ಷಗಳಲ್ಲಿ ಶೇಕಡಾ 100 ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ತೋರಿಸುತ್ತದೆ.

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ ನ ದಶಮಾನೋತ್ಸವ ಕುರಿತು ಪೂರ್ವಭಾವಿ ಸಭೆ

Posted by Vidyamaana on 2024-01-23 13:20:30 |

Share: | | | | |


ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ ನ ದಶಮಾನೋತ್ಸವ ಕುರಿತು ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಸೋಮವಾರ ಸ್ವಸಹಾಯ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು.


ಸಭೆಯಲ್ಲಿ ದಶಮಾನೋತ್ಸವದ ಅಂಗವಾಗಿ ಪ್ರತೀ ತಿಂಗಳು ಒಂದು ಕಾರ್ಯಕ್ರಮ ನಡೆಸುವುದರ ಜತೆಗೆ ಪ್ರತೀ ವಲಯದಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ತೀರ್ಮಾನಿಸಲಾಯಿತು.ವೇದಿಕೆಯಲ್ಲಿ ಒಕ್ಕಲಿಗ ಟ್ರಸ್ಟ್ ನ ಡಿ.ವಿ.ಮನೋಹರ, ಎ.ವಿ.ನಾರಾಯಣ, ದಿವ್ಯಪ್ರಸಾದ್ ಎ.ಎಮ್., ವಸಂತ ವೀರಮಂಗಲ, ಜಿನ್ನಪ್ಪ ಗೌಡ ಮಳವೇಲು, ಪದ್ಮಯ್ಯ ಗೌಡ ವಾರಣಾಸಿ, ವೆಂಕಪ್ಪ ಗೌಡ, ಶ್ರೀಧರ ಗೌಡ ಕಣಜಾಲು ಉಪಸ್ಥಿತರಿದ್ದರು.

Recent News


Leave a Comment: