Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-03-19 16:41:04 |
ಪುತ್ತೂರು: ಪುರುಷರ ಫ್ಯಾಷನ್ ಜಗತ್ತಿನಲ್ಲಿ ಸಿಗ್ನೇಚರ್ ಮೂಡಿಸಲು ಪುತ್ತೂರಿಗೆ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ ಆಗಮಿಸುತ್ತಿದೆ.
ಮಾ. 20ರಂದು ಸಂಜೆ 4 ಗಂಟೆಗೆ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗದ ಸೂಪರ್ ಟವರಿನಲ್ಲಿ ಶುಭಾರಂಭಗೊಳ್ಳಸಲಿದೆ.
ಫ್ಯಾಷನ್ ಜಗತ್ತಿನಲ್ಲಿ ಇಂದು ಪುರುಷರಿಗೆ ಅಗತ್ಯವಾದ ಕಲಾತ್ಮಕ ವಸ್ತುಗಳು ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ. ಇದರಲ್ಲಿ ಬಟ್ಟೆಗಳಿಗೆ ಅಗ್ರಸ್ಥಾನ. ಪುರುಷರಿಗೊಪ್ಪುವ ಕಲಾತ್ಮಕ ಬಟ್ಟೆಗಳ ಸಾಲಿನಲ್ಲಿ ಪುತ್ತೂರು ಸ್ವಲ್ಪ ಹಿಂದೆಯೇ ಉಳಿದಿತ್ತು. ಈ ಸ್ಥಾನವನ್ನು ಭರ್ತಿ ಮಾಡಲು ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ ಪುತ್ತೂರಿಗೆ ಕಾಲಿಡಲಿದೆ.
ಸಿಯಾರಾಮ್, ಅರವಿಂದ್, ರೇಮಂಡ್, ಲಿನೆನ್ ಕ್ಲಬ್ ಬ್ರಾಂಡೆಡ್ ಕಂಪೆನಿಗಳ ಉಡುಗೆಗಳು ಇಲ್ಲಿ ಲಭ್ಯವಾಗಲಿದೆ. ಪುರುಷರ ಪ್ಯಾಂಟ್, ಶರ್ಟ್ಸ್, ಕುರ್ತಾ, ಪೈಜಾಮ್, ಕೋಟ್ಸ್, ಶೇರ್ವಾನಿ, ಸೂಟ್ಸ್, ಕಂದೂರ, ಜೋಧ್ ಪುರಿ, ಡ್ರೆಸ್ ಕೋಡ್ ಮೊದಲಾದ ಹಲವು ವಿನ್ಯಾಸದ ಬಟ್ಟೆಗಳು ಗ್ರಾಹಕರಿಗೆ ವಿಶೇಷ ದರದಲ್ಲಿ ಲಭ್ಯವಾಗಲಿದೆ ಎಂದು ಸಂಸ್ಥೆಯ ಪಾಲುದಾರ ಫಾರೂಕ್ ಸಾಲ್ಮರ ತಿಳಿಸಿದ್ದರೆ.
ಶುಭಾರಂಭ ಪ್ರಯುಕ್ತ ವಿಶೇಷ ಆಫರ್:
ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಆಫರನ್ನು ಗ್ರಾಹಕರಿಗೆ ನೀಡುತ್ತಿದೆ. ಉದ್ಘಾಟನೆಯ ದಿನದಿಂದ ಒಂದು ವಾರಗಳ ಕಾಲ ಈ ಆಫರ್ ಚಾಲ್ತಿಯಲ್ಲಿರಲಿದೆ. ದೋಮೆಸ್ಟಿಕ್ ಬ್ರಾಂಡೆಡ್ ಕಂಪೆನಿಗಳ ಉಡುಪುಗಳು ಕೇವಲ 999 ರೂ.ಗೆ ಹಾಗೂ ಸಿಯಾರಾಮ್, ಅರವಿಂದ್ ರೇಮೊಂಡ್ ಬ್ರಾಂಡೆಡ್ ಕಂಪೆನಿಗಳ ಉಡುಪುಗಳ ಮೇಲೆ ಕೇವಲ 1700/ಲಭ್ಯವಾಗಲಿದೆ. ಅದೂ ಸ್ಟಿಚ್ಚಿಂಗ್ ಸಹಿತ.
Posted by Vidyamaana on 2023-09-17 20:06:36 |
ಸುರತ್ಕಲ್: ಖಾಸಗಿ ಎಕ್ಸ್ ಪ್ರೆಸ್ ಬಸ್ಸನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.
ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಪುತ್ತುಮೋನು ಎಂಬವರಮಗ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಇಮ್ಮಿಯಾಝ್ ಎಂಬವರ ಮಗ ಅರಾಫತ್ ಎಂದು ತಿಳಿದು ಬಂದಿದೆ.
ಘಟನೆಯ ವಿವರ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ
ಹೊಡೆಯಿತೆನ್ನಲಾಗಿದೆ.
ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು. ಪೊಲೀಸ್ ಇಲಾಖೆ ಈ ಬಸ್ಸಿನ ಸಿಬ್ಬಂದಿಯ ಆಟಾಟೋಪ ನಿಲ್ಲಿಸಲು ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Posted by Vidyamaana on 2024-06-30 16:12:44 |
ಬೆಂಗಳೂರು ,ಜೂ.30- ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
Posted by Vidyamaana on 2023-08-22 16:20:28 |
ಪುತ್ತೂರು: ನೂತನ ಶಾಸಕ ಅಶೋಕ್ ಕುಮಾರ್ ರೈ ಅವರ ನೂತನ ಕಚೇರಿ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಆ. 28ರಂದು ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆಗೊಳ್ಳಲಿದೆ.
ಹಿಂದಿನ ಸಹಾಯಕ ಆಯುಕ್ತರ ಕಚೇರಿ, ನಂತರ ಪುಡಾ ಆಫೀಸ್ ಆಗಿದ್ದ ಕಟ್ಟಡದಲ್ಲೇ ಶಾಸಕರ ನೂತನ ಕಚೇರಿ ಇರಲಿದೆ. ಸಾರ್ವಜನಿಕರ ಅನುಕೂಲತೆ ದೃಷ್ಟಿಯನ್ನಿಟ್ಟುಕೊಂಡು ಹೊಸ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ.
ಸಾಕಷ್ಟು ಸ್ಥಳಾವಕಾಶ ಇಟ್ಟುಕೊಂಡು ನೂತನ ಕಚೇರಿಯ ಪ್ಲ್ಯಾನ್ ಸಿದ್ಧಪಡಿಸಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಆಗದಂತೆ ಸುವ್ಯವಸ್ಥಿತವಾಗಿ ಕಚೇರಿ ನಿರ್ಮಾಣ ಮಾಡಲಾಗಿದೆ.
Posted by Vidyamaana on 2023-01-10 11:32:15 |
ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.
ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ ಮಾಡುವವರಿಕೆ, ಎಫ್ಓಪಿ ಸಂಸ್ಥಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಜ. 4ರಂದು ಸಚಿವ ಎಸ್. ಅಂಗಾರ ಅವರು ಕಚೇರಿಯನ್ನು ಉದ್ಘಾಟಿಸಿದರು. ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪನಿರ್ದೇಶಕಿ ಸುಶ್ಮಿತಾ ರಾವ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಪುತ್ತೂರ್ದ ಮುತ್ತು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.
Read More:ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ
Posted by Vidyamaana on 2023-08-12 16:15:04 |
ಕಡೂರು: ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಸ್ವಾರಸ್ಯಕರ ಘಟನೆ ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್ನಲ್ಲಿ ವರದಿಯಾಗಿದೆ.
ಎರಡನೇ ಅವಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದರ ಜೊತೆಗೆ ಗೆಲುವು ಸಾಧಿಸಿದ ಪಂಚಾಯತ್ನ ಒಟ್ಟು 7 ಜನ ಸದಸ್ಯರಲ್ಲಿ ಮೊದಲಿನಿಂದಲೂ 3 ಮತ್ತು 4 ಜನ ಸದಸ್ಯರ ಎರಡು ಗುಂಪುಗಳಿದ್ದವು. ತಾಯಿ ನೇತ್ರಾವತಿ ಮತ್ತು ಮಗಳು ಸ್ನೇಹಾ ಬೆಂಬಲದಿಂದ ನಾಲ್ಕು ಜನರ ಗುಂಪಿನ ಎನ್.ಆರ್.ರಂಜಿತಾ ಮತ್ತು ಎಂ.ಎಲ್.ಹರೀಶ್ ಮೊದಲ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ ರಂಜಿತಾ ಮತ್ತು ಪ್ರಕಾಶ್, ನೇತ್ರಾವತಿ ಮತ್ತು ಸ್ನೇಹಾ ಅವರಿಗೆ ಬೆಂಬಲ ಸೂಚಿಸಿದರು. ಇದರಿಂದಾಗಿ ತಾಯಿ ಮತ್ತು ಮಗಳು ಅಧಿಕಾರಕ್ಕೇರಿದ್ದಾರೆ. ಬದಲಾದ ಮೀಸಲಾತಿ ಮತ್ತು 4 ಸದಸ್ಯರ ನಡುವಿನ ಒಗ್ಗಟ್ಟು ಚುನಾವಣೆಯಲ್ಲಿ ತಾಯಿ, ಮಗಳು ಗೆಲುವು ಸಾಧಿಸಲು ಸಹಕಾರಿಯಾಗಿದೆಎರಡನೇ ಅವಧಿಗೆ ಗರ್ಜೆ ಗ್ರಾಮ ಪಂಚಾಯತ್ ಚುನಾವಣೆ ನಡೆದ ಸಂದರ್ಭ ಅಧ್ಯಕ್ಷ ಸ್ಥಾನಕ್ಕೆ ಸ್ನೇಹಾ ಮತ್ತು ಜಿ.ಮಲ್ಲಿಕಾರ್ಜುನ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಎನ್.ನೇತ್ರಾವತಿ ಮತ್ತು ಎಂ.ಜ್ಯೋತಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಮಗಳು ಸ್ನೇಹಾ ಮತ್ತು ತಾಯಿ ನೇತ್ರಾವತಿ ತಲಾ 4 ಮತಗಳನ್ನು ಪಡೆದರೆ, ಪ್ರತಿಸ್ರಗಳಾದ ಮಲ್ಲಿಕಾರ್ಜುನ್ ಮತ್ತು ಜ್ಯೋತಿ ತಲಾ ಮೂರು ಮತಗಳನ್ನು ಪಡೆದು ಸೋತಿದ್ದರು. ಸ್ನೇಹ ಮತ್ತು ನೇತ್ರಾವತಿ ತಲಾ ಒಂದು ಮತಗಳ ಅಂತರದಿಂದ ಗೆಲುವು ಸಾಧಿಸಿ ಅಧ್ಯಕ್ಷ ಮತ್ತು ಉಪಾಧ್ಯಾಕ್ಷ ಸ್ಥಾನಕ್ಕೆ ಆಯ್ಕೆಯಾದರುಒಂದೇ ಮನೆಗೆ ಎರಡು ಹುದ್ದೆ!
ಮಗಳು ಸ್ನೇಹಾ ಮತ್ತು ತಾಯಿ ನೇತ್ರಾವತಿ ಗರ್ಜೆ ಗ್ರಾಮದವರಾಗಿದ್ದು, ಒಂದೇ ಮನೆಯಲ್ಲೇ ವಾಸವಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಗಳು ಸ್ನೇಹಾ ಜಿ.ಮಾದಾಪುರ ಗ್ರಾಮದಿಂದ ಮತ್ತು ತಾಯಿ ಗರ್ಜೆಯಿಂದ ಗೆಲುವು ಸಾಧಿಸಿ ಒಂದೇ ಅವಧಿಯಲ್ಲಿ ಒಂದೇ ಮನೆಯಿಂದ ಇಬ್ಬರು ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಸ್ನೇಹಾ ಮತ್ತು ನೇತ್ರಾವತಿಗೆ ಒಲಿದು ಬಂದಿರುವುದರಿಂದ ಒಂದೇ ಮನೆಗೆ ಎರಡು ಹುದ್ದೆಗಳು ಸಿಕ್ಕಂತಾಗಿದೆ.