ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

Posted by Vidyamaana on 2024-03-14 04:53:09 |

Share: | | | | |


ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಕೋರಿದ್ದಾರೆ.


ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.


ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದಹಿಡಿದು ‍ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎಂದು ಶ್ಲಾಘಿಸಿದ್ದಾರೆ.

ಬಿಜೆಪಿ ವಿಶ್ವದ ಅತ್ಯಂತ ದೊಡ್ಡ - ಶ್ರೀಮಂತ ಮತ್ತು ಭ್ರಷ್ಟ ಪಕ್ಷ

Posted by Vidyamaana on 2024-04-21 11:44:25 |

Share: | | | | |


ಬಿಜೆಪಿ ವಿಶ್ವದ ಅತ್ಯಂತ ದೊಡ್ಡ - ಶ್ರೀಮಂತ ಮತ್ತು ಭ್ರಷ್ಟ ಪಕ್ಷ

ಪುತ್ತೂರು: ಬಿಜೆಪಿ ವಿಶ್ವದ ಅತ್ಯಂತ ದೊಡ್ಡ ಪಕ್ಷ ಮಾತ್ರ ಅಲ್ಲ, ವಿಶ್ವದಲ್ಲಿ ಅತ್ಯಂತ ಶ್ರೀಮಂತ ಪಕ್ಷ. ಸುಪ್ರೀಂ ಕೋರ್ಟಿನ ಆದೇಶದ ನಂತರ ಚುನಾವಣಾ ಬಾಂಡ್‌ಗಳನ್ನು ಅಸ್ಸಾಂವಿಧಾನಿಕವೆಂದು ಕರೆದು, ರದ್ದು ಮಾಡಿ, ಜನಸಾಮಾನ್ಯರಿಗೆ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ಲ್ಲಿ ಸಿಗುವಂತೆ ಮಾಡಿತೋ, ಆಗ ಬಿಜೆಪಿ ಒಂದು ವಿಶ್ವದಲ್ಲಿ ಅತ್ಯಂತ ಭ್ರಷ್ಟ ಪಕ್ಷವೆಂದು ಜಗಜ್ಜಾಹೀರಾಯಿತು ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು.


೭೦ರ ದಶಕದಲ್ಲಿ ಬಿಜೆಪಿ ಚುನಾವಣೆಗೆ ನಿಲ್ಲುತ್ತಿದ್ದಾಗ ಪಕ್ಷದ ಅಭಿಮಾನಿಗಳ ಮನೆ ಮನೆಗೆ ಹೋಗಿ ಹಣವನ್ನ ಬೇಡಿ ತಂದು ಚುನಾವಣೆಯಲ್ಲಿ ಖರ್ಚು ಮಾಡುತ್ತಿದ್ದು, ಆಗ ಬಿಪಿಎಲ್  ಪಾರ್ಟಿ ಆಗಿತ್ತು. ೨೦೧೪ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತೋ, ಯಾವಾಗ ಅಂಬಾನಿ ಅದಾನಿಗಳ ಜೊತೆಗೆ ಮೋದಿಯವರು ಕೈ ಮಿಲಾಯಿಸಿದರೋ ಆ ಬಳಿಕ ಎಮ್ ಎಮ್ ಪಿ ಆಗಿ ಬದಲಾವಣೆ ಹೊಂದಿತು. ೨೦೧೭ರಲ್ಲಿ ಮೋದಿ ಸರ್ಕಾರ ಚುನಾವಣಾ ಬಾಂಡ್ ಗಳನ್ನು ಜಾರಿಗೆ ತಂದ ಬಳಿಕದ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟಿನಲ್ಲಿ ಪ್ರಕಟಿಸಿದಂತೆ ೧೬೪೯೨ ಕೋಟಿ ರೂಪಾಯಿಗಳ ಮೌಲ್ಯದ ಚುನಾವಣಾ ಬಾಂಡುಗಳನ್ನು ಖರೀದಿಸಲಾಗಿದೆ. ಶೇಕಡ ೫೩.೦೩ ಬಾಂಡ್‌ಗಳು ಅಂದರೆ ೮೨೫೨ ಕೋಟಿ ರೂಪಾಯಿಗಳ ಬಾಂಡುಗಳು ಬಿಜೆಪಿಗೆ ಸಂದಿವೆ

ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

Posted by Vidyamaana on 2024-05-16 07:12:58 |

Share: | | | | |


ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಇಂದು ಮುಂಜಾನೆ ನಡೆದ ಅಂಜಲಿ(20) ಹತ್ಯೆ ಪ್ರಕರಣದ ಆರೋಪಿ ವಿಶ್ವನಿಗೆ ಕ್ರಿಮಿನಲ್‌ ಹಿನ್ನೆಲೆ ಇದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಈತನ ಸ್ನೇಹಿತ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ವಿಶ್ವ ಕೂಡ ಕೊಲೆ ಮಾಡಿದ್ದಾನೆ.ಈತ ಕೊಲೆ ಮಾಡಲು ಸ್ನೇಹಿತನಿಂದ ಪ್ರೇರಣೆ ಪಡೆದಿದ್ನಾ ಎನ್ನುವ ಸಂಶಯ ಮೂಡಿದೆ.

ಹಂತಕ ವಿಶ್ವನ ಸ್ನೇಹಿತ ಶೇಷ್ಯಾ ಹುಬ್ಬಳ್ಳಿ ತಾಲೂಕಿನ ಹಳ್ಳ್ಯಾಳದ ಸದ್ದಾಂ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾನೆ. ಶೇಷ್ಯಾ ಕೊಲೆ ಮಾಡಿದ ಬಳಿಕ ಅಂಜಲಿಯನ್ನ ಮುಗಿಸಲು ವಿಶ್ವ ಪ್ಲಾನ್ ಮಾಡಿರಬಹುದು ಎನ್ನಲಾಗುತ್ತಿದೆ.

ಹೋರಿ ನಡೆಯುವಾಗ ಬೀ... ಅಲುಗಾಡುತ್ತೆ ಅದ್ರೆ ಕೆಳಗೆ ಬೀಳಲ್ಲ

Posted by Vidyamaana on 2023-11-05 21:30:11 |

Share: | | | | |


ಹೋರಿ ನಡೆಯುವಾಗ ಬೀ... ಅಲುಗಾಡುತ್ತೆ ಅದ್ರೆ ಕೆಳಗೆ ಬೀಳಲ್ಲ

ಬಾಗಲಕೋಟೆ (ನ.5): ಕಾಂಗ್ರೆಸ್ ಸರ್ಕಾರ ತಾನಾಗೇ ಬೀಳುತ್ತೆ ಎಂಬ ಬಿಜೆಪಿಯವರ ಹೇಳಿಕೆ ಸನ್ನಿವೇಶವನ್ನು ಬೀ*ದ ಹೋರಿಗೆ ಹೋಲಿಕೆ ಮಾಡಿ ಬಾಗಲಕೋಟೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿರುಗೇಟು ನೀಡಿದರು.


ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ, ತಾನಾಗೇ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತೆ ಎನ್ನುತ್ತಿರುವ ಬಿಜೆಪಿ ನಾಯಕರು.


ಆ ಕುರಿತು ಮಾದ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೀ*ದ ಹೋರಿ ನಡೆಯುವಾಗ ಅದರ ಬೀ* ಅಲುಗಾಡುತ್ತಿರುತ್ತೆ. ಹೋರಿ ಬೀ* ಅಲುಗಾಡುತ್ತೆ ಅಂದ್ರೆ ಅದು ಕೆಳಗೆ ಬೀಳಲ್ಲ. ಅದು ಹತ್ತು ಕಿ.ಮೀ ಹೋದರು ಹಾಗೆಯೇ ಅಲುಗಾಡುತ್ತಿರುತ್ತದೆ. ಅಲುಗಾಡುವ ಹೋರಿ ಬೀ* ತಿನ್ನಬೇಕು ಅಂತಾ 10 ನಾಯಿ ಬೆನ್ನು ಹತ್ತುತ್ತವೆ. ಅಲುಗಾಡುತ್ತೆ ಅಂದ್ರೆ ಬಿದ್ದೆ ಬೀಳುತ್ತೆ ನಾವು ತಿನಲೇಬೇಕು ಅಂತಾ ನಾಯಿಗಳು ಅನ್ಕೊಂತಾವೆ. ಬೀ* ಕೆಳಗೆ ಬೀಳಲ್ಲ, ಇವರು ಬೆನ್ನು ಹತ್ತುವುದನ್ನು ಬಿಡಲ್ಲ. ಬಿಜೆಪಿಗರ ಸದ್ಯದ ಪರಿಸ್ಥಿತಿ ಹಿಂಗಾಗಿದೆ ಎಂದು ವ್ಯಂಗ್ಯ ಮಾಡುವ ಮೂಲಕ ಟಾಂಗ್ ಕೊಟ್ಟ ನಂಜಯ್ಯನಮಠ.


ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಪತನ: ಸಂಸದ ಬಿ.ವೈ.ರಾಘವೇಂದ್ರ


ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಈಗಾಗಲೇ ಸಿಎಂ ಸ್ಥಾನ ವಿಚಾರವಾಗಿ ಮೂರು ಬಣಗಳಾಗಿ ಆಂತರಿಕ ಕಚ್ಚಾಟ ಶುರುವಾಗಿದೆ. ಕೆಲವು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಬಿದ್ದೊಗುತ್ತೆ. ಈ ಸರ್ಕಾರ ಬಿಳಿಸಲು ಯಾವುದೇ ಬಿಜೆಪಿ ಆಪರೇಷನ್ ಬೇಕಿಲ್ಲ. ತಾನಾಗೆ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಅವರ ಹೇಳಿಕೆಯನ್ನು ಬೀ*ದ ಹೋರಿಗೆ ಹೋಲಿಕೆ ಮಾಡಿದ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ.

ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

Posted by Vidyamaana on 2023-07-23 11:28:48 |

Share: | | | | |


ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಜು 23 ರಂದು ನಡೆಯಿತು.

   ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು   ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಉದ್ಘಾಟಿಸಿದರು. ಪುತ್ತೂರು ನಗರ ಸಭಾ ಸದಸ್ಯೆ ಕೆ. ಫಾತಿಮತ್ ಝೂರಾ ಮನೆಯ ಯಜಮಾನಿ ಜಮೀಲಾ ಅವರಿಗೆ ಕೀ ಹಸ್ತಾಂತರಿಸಿದರು.


 ಮನೆಯ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್, ಕಾರ್ಯದರ್ಶಿ ಮುಸ್ತಫ, ಮುಸ್ಲಿಂ ಯೂಥ್ ಫೆಡರೇಷನ್ ಅಧ್ಯಕ್ಷ ಅಝರ್ ಬನ್ನೂರು ಹಾಗೂ ಸ್ಥಳೀಯ ಸಂಸ್ಥೆಗಳಾದ ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಪರವಾಗಿ ಗೌರವ ಅಧ್ಯಕ್ಷ ರಫೀಕ್ ಬಾಂಬೆ , ಸುಲ್ತಾನ್ ಗೈಸ್ ಪರವಾಗಿ ಹನೀಫ್ , ವಾರ್ಡ್ ಸಂಖ್ಯೆ 05 ಬೂತ್ ಸಮಿತಿ ಪರವಾಗಿ ರಸೀಕ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. 


  ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸದಸ್ಯರಾದ ಪಿಬಿಕೆ ಮುಹಮ್ಮದ್, ಬದ್ರಿಯಾ ಜುಮಾ ಮಸ್ಜಿದ್ ಬನ್ನೂರು ಕಾರ್ಯದರ್ಶಿ ಅಶ್ರಫ್ ಹಾರಾಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಗೌರವ ಅಧ್ಯಕ್ಷ ರಫೀಕ್ ಬಾಂಬೆ, ಅಧ್ಯಕ್ಷ ಅಝರ್, ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪುತ್ತೂರು ಅಧ್ಯಕ್ಷ ಬಾತೀಶ ಬಡಕ್ಕೂಡಿ, ಮುಸ್ಲಿಂ ಯೂಥ್ ಫೆಡರೇಷನ್ ಬನ್ನೂರು ಕಾರ್ಯದರ್ಶಿ ಸೈಫುದ್ದೀನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಫಾಝ್ ಬನ್ನೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-04-29 21:24:36 |

Share: | | | | |


ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಇಲ್ಲಿನ ಬನ್ನೂರಿನ ಮೇಲ್ಮಜಲು ನಿವಾಸಿ ಸೀತಾರಾಮ ಶೆಟ್ಟಿ (55 ವ.) ಆದಿತ್ಯವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಗ್ಯಾಸ್ ಕಂಪೆನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಇವರು, ಮನೆಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು.



Leave a Comment: