ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

Posted by Vidyamaana on 2024-04-06 09:46:16 |

Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

ಪುತ್ತೂರು:ಯುವತಿಯೋರ್ವರನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿರುವ ಆರೋಪದ ಘಟನೆ ಕುರಿಯ ಮಲಾ‌ರ್ ಎಂಬಲ್ಲಿಂದ ವರದಿಯಾಗಿದೆ.

ಘಟನೆ ಕುರಿತು ಅಶ್ವಿತ್ ಕುಮಾರ್(24 ವ.)ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ತಾನು ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಕಟ್ಟಿಸಿದ ಹೊಸ ಮನೆಗೆ ಏ.3ರಂದು ಸಂಜೆ ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್ ಮುಕ್ವೆ ಎಂಬಾತ ಕರೆ ಮಾಡಿ.ನಿನ್ನಲ್ಲಿ ಮಾತನಾಡುವುದು ಇದೆ ಎಂದು ತಿಳಿಸಿದಾಗ, ತಾನು ಮಲಾರ್‌ನಲ್ಲಿದ್ದು, ದರ್ಬೆಗೆ ಬರುವುದಾಗಿ ತಿಳಿಸಿ, ಮಲಾರ್‌ನಿಂದ ತನ್ನ ಬೈಕ್‌ನಲ್ಲಿ ಹೊರಟು ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ

ಕೊಡಾಜೆ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣ

Posted by Vidyamaana on 2023-07-02 09:48:42 |

Share: | | | | |


ಕೊಡಾಜೆ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣ

ವಿಟ್ಲ: ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯ ಬಾಕಿಲದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಪ್ರತಾಪ್ (33)ರವರ ಸಹೋದರ ಪ್ರದೀಪ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ಎಂಬಲ್ಲಿ ಪ್ರತಾಪ್‌ ಎಂಬವರು ತನ್ನ ಪತ್ನಿಯೊಂದಿಗೆ ವಾಸವಾಗಿದ್ದು, ಪತ್ನಿ ಯಾವುದೋ ವ್ಯಕ್ತಿಯೊಂದಿಗೆ ಕೆಲವು ಸಮಯದಿಂದ ಮೊಬೈಲ್‌ ಪೋನ್‌ನಿಂದ ಮೆಸೆಜ್‌ ಮಾಡುತ್ತಿದ್ದುದರಿಂದ ಗಂಡ-ಹೆಂಡಿತಿಯೊಳಗೆ ಆಗಾಗ ಜಗಳವಾಗುತ್ತಾ ಸರಿಯಾಗಿ ಸಂಸಾರ ನಡೆಯದೆ ಇದ್ದುದರಿಂದ ಪ್ರತಾಪ್‌ ರವರ ಮಾನಸಿಕ ನೆಮ್ಮದಿ ಹಾಳಾಗಿತ್ತು. ಇದೇ ಕಾರಣದಿಂದ ಜು. 1ರಂದು ಮನೆಯ ಊಟದ ಕೋಣೆಯ ಸೀಲಿಂಗ್‌ ಫ್ಯಾನಿಗೆ ನೈಲಾನ್‌ ಸೀರೆಯನ್ನು ಕಟ್ಟಿ ಅದರ ಇನ್ನೊಂದು ತುದಿಯನ್ನು ನೇಣು ಕುಣಿಕೆಯನ್ನಾಗಿ ಮಾಡಿಕೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದನ್ನು ಕಂಡ ಅವರ ಪತ್ನಿ ಇಸ್ತ್ರಿಪೆಟ್ಟಿಗೆಯ ವೈಯರ್‌ನ್ನು ಅದೇ ಫ್ಯಾನಿಗೆ ಕಟ್ಟಿ ಅದರ ಇನ್ನೊಂದು ತುದಿಯನ್ನು ನೇಣು ಕುಣಿಕೆಯನ್ನು ಮಾಡಿಕೊಂಡು ಕುತ್ತಿಗೆಗೆ ನೇಣು ಹಾಕಿಕೊಂಡ ವಿಚಾರವನ್ನು ತಿಳಿದ ನೆರೆಕರೆಯವರು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದಾಗ ಪ್ರತಾಪರವರು ಮೃತಪಟ್ಟಿದ್ದು ವೀಣಾರವರನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಪ್ರತಾಪ್‌ರವರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಾಪ್ ಸಾಯುವ ಮುನ್ನ ಮಕ್ಕಳಿಗಾಗಿ ತಂದಿದ್ದ ಚಿಕನ್‌ ಚಿಲ್ಲಿ ಮನೆಯೊಳಗೆ ಪತ್ತೆಯಾಗಿತ್ತು. ಇದು ಪೂರ್ವನಿರ್ಧರಿತ ಆತ್ಮಹತ್ಯೆ ಎನ್ನುವುದನ್ನು ನಿರೂಪಿಸಿದಂತಿತ್ತು.


ಅಮ್ಮನಿಗೆ ಹೇಳಿದ ಕೊನೆ ಮಾತು!!!

ಸಹೋದರ ನೀಡಿದ ದೂರಿನಲ್ಲಿ, ಪ್ರತಾಪ್ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೂ ಇತ್ತು. ಪ್ರತಾಪ್ ಸಾಯುವ ಎರಡು ದಿನದ ಮೊದಲು ತನ್ನ ತಾಯಿಯ ಜೊತೆ, ತಾನು ಇನ್ನೆರಡು ದಿನದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ.

ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

Posted by Vidyamaana on 2024-01-02 11:22:43 |

Share: | | | | |


ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

ಚಿಕ್ಕಮಗಳೂರು: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ. 


ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. 


ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.‌

ಫೆ. 17 ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಪೂರ್ವಭಾವಿ ಸಭೆ

Posted by Vidyamaana on 2024-02-11 22:27:36 |

Share: | | | | |


ಫೆ. 17 ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಪೂರ್ವಭಾವಿ ಸಭೆ

ಪುತ್ತೂರು:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಮನೆಯನ್ನು ಬೆಳಗಿಸಿದೆ ಮತ್ತು ಪ್ರತೀ ಕುಟುಂಬಕ್ಕೂ ತಲುಪಿದೆ. ಶಕ್ತಿ ಯೋಜನೆಯಿಂದ ಕಾಂಗ್ರೆಸ್ ಎಲ್ಲರಿಗೂ ಶಕ್ತಿ ನೀಡಿದ್ದು ನಾವೆಲ್ಲರೂ ಸೇರಿ ಕಾಂಗ್ರೆಸ್‌ಗೆ ಶಕ್ತಿ ನೀಡುವ ಕೆಲಸವನ್ನು ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರಐ ಮನವಿ ಮಾಡಿದರು.


ಅವರು ಉದಯಗಿರಿ ಭಾಗೀರಥಿ ಸಭಾಭವನದಲ್ಲಿ ಫೆ. ೧೭ ರಂದು ಮಂಗಳೂರಿನ ಸಹ್ಯಾಧ್ರಿ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ಇಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ. ಕೆಎಂಎಫ್, ಮೆಡಿಕಲ್ ಕಾಲೇಜು, ಪುತ್ತೂರು ನಗರಕ್ಕೆ ಚರಂಡಿ ಯಓಜನೆ, ಬಹುಗ್ರಾಮಕುಡಿಯುವ ನೀರಿನ ಯೋಜನೆಗೆ ೧೦೧೦ ಕೋಟಿ ರಊ ಮಂಜೂರು, ಬಿರುಮಲೆ ಬೆಟ್ಟದ ಅಭಿವೃದ್ದಿಗೆ ೨ ಕೋಟಿ ಮಂಜೂರಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಉಪ್ಪಿನಂಘಡಿ ಸಹಸ್ರಲಿಂಗೇಶ್ವ ದೇವಸ್ಥಾನದ ಅಭಿವೃದ್ದಿಗೆ ಅನುದಾನ, ಸೇರಿದಂತೆ ಬೃಹತ್ ಅನುದಾನದ ಯೋಜನೆಗಳು ಮಂಜೂರಾಗಿದೆ. ಅಡಿಕೆ ಬೆಳೆಗಾರರಿಗೆ ವಿಮೆ ಮಂಜೂರು ಸೇರಿದಂತೆ ಅನೇಕ ಯೋಜನೆಗಳು ಮುಂದೆ ನಡೆಯಲಿದ್ದು ಪುತ್ತೂರು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿಯಗಲಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಹೊಳೇಯೇ ಹರಿದು ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ ಇದೆಲ್ಲವನ್ನೂ ಕೊಟ್ಟದ್ದು ಕಾಂಗ್ರೆಸ್ ಸರಕಾರವಾಗಿದೆ. ಜನರಿಗೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದ್ದು ಫೆ. ೧೭ ರಂದು ನಡೆಯುವ ರಾಜ್ಯಮಟ್ಟದ ಸಮಾವೇಶದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಶ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಜನತೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸ ಮಡಿದರೆ ಸರಕರ ಕೂಡಾ ಜನತೆಗೆ ಶಕ್ತಿ ನೀಡುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತದೆ ಎಂದು ಹೇಳಿದರು.


 


ವಲಯ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ


ವಲಯ ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಬೇಕಿದೆ. ಪ್ರತೀ ವಲಯ ಅಧ್ಯಕ್ಷರುಗಳಿಗೆ ತಲಾ ೨೦ ಲಕ್ಷ ಅನುದಾನವನ್ನು ನೀಡುವ ಕಾರ್ಯಕ್ಕೆ ಚವಾಲನೆ ನೀಡಲಾಗಿದೆ. ಗ್ರಾಮದಲ್ಲಿ ಅತೀ ಅಗತ್ಯವಿರುವ ಕಾಮಗಾರಿಯನ್ನು ಗುರುತಿಸಿ ಅದನ್ನು ಅಭಿವೃದ್ದಿ ಮಾಡುವ ಜವಾಬ್ದಾರಿಯನ್ನು ವಲಯ ಮತ್ತು ಬೂತ್ ಸಮಿತಿಗಳಿಗೆ ನೀಡಲಾಗಿದೆ. ವಲಯ ಮತ್ತು ಬೂತ್ ಅಧ್ಯಕ್ಷರ ಅನಮೋದನೆಯೊಂದಿಗೆ ಪ್ರತೀಯೊಂದು ಕಾಮಗಾರಿಯೂ ನಡೆಯಲಿದ್ದು ವಲಯ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಿರಂತರವಾಗಿ ಡನೆಯಬೇಕು ಎಂದು ಹೇಳಿದರು. ಪುತ್ತೂರಿನಲ್ಲಿ ವಿರೋಧ ಪಕ್ಷದವರಿಗೆ ಮಾತನಡಲು ವಿಷಯವೇ ಇಲ್ಲದಂತಾಗಿದೆ. ಹಿಂದೆಗಿಂತ ಹೆಚ್ಚು ಅಭಿವೃದ್ದಿ ಕೆಲಸಗಳು ನಡೆಯುತ್ತಿರುವುದನ್ನು ಅವರು ಕಾಣುತ್ತಿದ್ದು ಏನೂ ಮಾತನಾಡಲಾಗದ ಸ್ಥಿತಿಯಲ್ಲಿದ್ದಾರೆ ಎಂದು ಶಾಸಕರು ಹೇಳಿದರು.


 


ಕಾರ್ಯಕ್ರಮ ಯಶಶ್ವಿಗೊಳಿಸಿ: ಎಂ ಬಿ ವಿಶ್ವನಾಥ ರೈ


ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಫೆ. ೧೭ ರಂದು ನಡೆಯುವ ಕಾಂಗ್ರೆಸ್ ಸಮಾವೇಶವನ್ನು ಯಶಶ್ವಿಗೊಳಿಸುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಇಬ್ಬರು ಶಾಸಕರಿದ್ದರೂ ಹೈಕಮಾಂಡ್  ಮಂಗಳೂರಿನಲ್ಲೇ ಸಮಾವೇಶವನ್ನು ಆಯೋಜನೆ ಮಾಡಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಗತ ವೈಭವವನ್ನು ಮರಳಿತರಲು ಕಾರ್ಯಕತೃ ಶ್ರಮ ಅತೀ ಅಗತ್ಯವಾಗಿದೆ. ಕಾರ್ಯಕ್ರಮಕ್ಕೆ ತೆರಳುವಲ್ಲಿ ಎಲ್ಲಾ ಗ್ರಾಮಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದ್ದು ಕಾರ್ಯಕತೃಉ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


 


ಬಾಕ್ಸ್


೪೦ ಬಸ್ ವ್ಯವಸ್ಥೆ


ಕಾರ್ಯಕ್ರಮಕ್ಕೆ ಒಟ್ಟು ೪೦ ಬಸ್ ವ್ಯವಸ್ಥೆ ಇದ್ದು ಬೈಪಾಸ್ ಬಳಿ ಇರುವ ರೈ ಎಸ್ಟೇಟ್ ಕಚೇರಿಯಿಂದ ಬಸ್ಸು ಹೊರಡಲಿದೆ. ಎಲ್ಲಾ ಗ್ರಾಮಗಳಿಂದ ಬರುವ ಬಸ್ಸುಗಳು ಮತ್ತು ಕಾರ್ಯಕರ್ತರ ಖಾಸಗಿ ವಾಹನಗಳು ಸೇರಿ ಒಟ್ಟಾಗಿ ಪುತ್ತೂರಿನಿಂದ ಹೊರಡಲಿದೆ. ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.


 


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿಯವರು ಮಾತನಾಡಿ  ರಾಜ್ಯ ಮಟ್ಟದ ಸಮಾವೇಶ ಮಂಗಳೂರಿನಲ್ಲಿನಡೆಯುತ್ತಿರುವುದು ಅಭಿಮಾನದ ವಿಚಾರವಾಗಿದೆ. ಕಾರ್ಯಕ್ರಮಇತಿಹಾಸದಲ್ಲಿ ದಾಖಲೆಯಾಗಬೇಕು. ಪ್ರತೀ ಬೂತ್ ನಿಂದಲೂ ಕಾರ್ಯಕರ್ತರು ತೆರಳಲಿದ್ದು ,ಪುತ್ತೂರಿನಕಾಂಗ್ರೆಸ್ ಶಕ್ತಿ ಯನ್ನು ನಾವು ಪ್ರದರ್ಶಿಸಬೇಕುಎಂದು ಹೇಳಿದರು. ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದುಮನವಿ ಮಾಡಿದರು.


 


 


 


ಮನೆ ಮನೆಗೂ ತಿಳಿಸಿ: ಎಂ ಎಸ್ ಮಹಮ್ಮದ್


ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ರವರುಮಾತನಾಡಿ ಮಂಗಳೂರಿನಲ್ಲಿನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಪ್ರತೀ ಮನೆಗೂ ತಿಳಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು.ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿ.ಪಕ್ಷದ ಜವಾಬ್ದಾರಿಮತ್ತು ಇತರೆ ಜವಾಬ್ದಾರಿ ಹೊತ್ತುಕೊಂಡ ಕಾರ್ಯಕರ್ತರು ಪಕ್ಷಕ್ಕಾಗಿ ಹೆಚ್ಚು ಕೆಲಸಮಾಡುವ ಮೂಲಕ ಪಕ್ಷದ ಋಣ ತೀರಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.


ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಾರ್ಯವೈಖರಿ ಬಗ್ಹೆ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇದೆ.ದಿನ ೧೮ ಗಂಟೆ ಕಾರ್ಯಕರ್ತರಿಗಾಗಿ ಮೀಸಲಿಡುವ ರಾಜ್ಯದ ಏಕೈಕ ಶಾಸಕರಾಗಿದ್ದಾರೆ. ಕ್ಷೇತ್ರದ ಜನತೆಗಾಗಿ, ಕ್ಷೇತ್ರದ ಅಭಿವೃದ್ದಿಗಾಗಿ ವಾರದಲ್ಲಿ ಎರಡು ದಿನ ಬೆಂಗಳೂರಿನವಿಧಾನಸೌಧದಲ್ಲೇ ಠಿಕಾಣಿ ಹೂಡುತ್ತಿದ್ದು ಇಂಥಹ ಶಾಸಕರುನಮಗೆ ದೊರೆತಿರುವುದು ಸೌಭಾಗ್ಯ ಎಂದು ಹೇಳಿದರು.


 


ಶಾಸಕರಿಗೆ ಶಕ್ತಿನೀಡುವ ಕೆಲಸ ಮಾಡಬೇಕಿದೆ: ಕಾವು ಹೇಮನಾಥ ಶೆಟ್ಟಿ


ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಾರ್ಯವೈಖರಿ ಇಂದು ಪ್ರತೀಯೊಬ್ಬ ಕಾರ್ಯಕರ್ತರಿಗೂ ಗೊತ್ತಿದೆ. ವಲಯ ಮತ್ತು ಬೂತ್ ಅಧ್ಯಕ್ಷರ ಗಮನಕ್ಕೆ ಬಾರದೆ ಯಾವುದೇ ಕಾಮಗಾರಿಗೆ ಚಾಲನೆ ನೀಡುವುದಿಲ್ಲ ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕಾರ್ಯಕರ್ತರಿಗೆ ಈ ಗೌರವ ದೊರಕುತ್ತಿದೆ ಇದು ಉತ್ತಮ ಬೆಳವಣಿಗೆಯಾಗಿದೆ. ಚುನಾವಣೆ ಪೂರ್ವದಲ್ಲೂ ಬಡವರ ಪರವಾಗಿ ಕೆಲಸ ಮಾಡುತ್ತಿದ್ದ ಶಾಸಕರು ಶಾಸಕರಾದ ಬಳಿಕವೂ ಬಡವರ ಸೇವೆಯಲ್ಲಿತಮ್ಮನ್ನುತೊಡಗಿಸಿಕೊಂಡಿದ್ದಾರೆ. ಪ್ರತೀಯೊಂದು ಮನೆಗೂ ರಾಜ್ಯದ ಕಾಂಗ್ರೆಸ್ ಸರಕಾರದ ಯೋಜನೆ ತಲುಪಿಧ.ಎಲ್ಲರ ಖಾತೆಗೂ ಗೃಹಲಕ್ಷ್ಮೀ ಯೋಜನೆ ಬಂದಿದೆ, ಕರೆಂಟ್ ಬಿಲ್ ಫ್ರೀಯಾಗಿದೆ ಈ ಎಲ್ಲಾ ಕಾರಣಕ್ಕೆ ಮನೆಯ ಪ್ರತೀಯೊಬ್ಬ ಸದಸ್ಯನೂ ಸಮಾವೇಶದಲ್ಲಿಭಾಗವಹಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದುಮನವಿ ಮಾಡಿದರು.


ರಾಜ್ಯ ಸರಕಾರಕ್ಕೆ ಶಕ್ತಿತುಂಬುವ ಕೆಲಸ ಮಾಡಿದರೆ ಗ್ಯಾರಂಟಿ ಯೋಜನೆಗೆ ಬೆಂಬಲ ನೀಡಿದಂತಾಗುತ್ತದೆ.


ಪುತ್ತೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ. ಕುಡಿಯುವ ನೀರಿಗಾಗಿ ೧೦೧೦ ಕೋಟಿ ಕೆಎಂಎಫ್ , ಮೆಡಿಕಲ್ ಕಾಲೇಜು, ಮಾಣಿ ಸಂಪಾಜೆ ಚತುಷ್ಪಥ ರಸ್ತೆ ಇದೆಲ್ಲವೂ ಪುತ್ತೂರು ಶಾಸಕರ ಸಾಧನೆಯಾಗಿದೆ. ಶಾಸಕರು ಮಾಡುವ ಉತ್ತಮ ಕೆಲಸಕ್ಕೆ ನಾವು ಬೆಂಬಲ ನೀಡುವ ಉದ್ದೇಶದಿಂದ ನಾವೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಗತ್ಯತೆ ಇದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.


ವೇದಿಕೆಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂಡಿಸೋಜಾ, ಕೆಪಿಸಿಸಿ ಸದಸ್ಯರಾದ ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಉಪಸ್ಥಿತರಿದ್ದರು.ಕೆಪಿಸಿಸಿ ವಕ್ತಾರರಾದ ಅಮಲರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.

ಗುರುಂಪು ಬರೆ ಜರಿತ ಘಟನೆ : ಮೂವರು ಕಾರ್ಮಿಕರ ಮೃತದೇಹವೂ ಪತ್ತೆ. ಗದಗ ಮೂಲದ ಸೋಮಶೇಖರ ಶಾಂತಾ ದಂಪತಿ ಸಹಿತ ಮೂವರ ದಾರುಣ ಅಂತ್ಯ

Posted by Vidyamaana on 2023-03-25 10:26:04 |

Share: | | | | |


ಗುರುಂಪು ಬರೆ ಜರಿತ ಘಟನೆ : ಮೂವರು ಕಾರ್ಮಿಕರ ಮೃತದೇಹವೂ ಪತ್ತೆ. ಗದಗ ಮೂಲದ ಸೋಮಶೇಖರ ಶಾಂತಾ ದಂಪತಿ ಸಹಿತ ಮೂವರ ದಾರುಣ ಅಂತ್ಯ

ಸುಳ್ಯ: ಗುರುಂಪು ಬಳಿ ಸಂಭವಿಸಿದ ಬರೆ ಕುಸಿತ ದುರ್ಘಟನೆಯಲ್ಲಿ ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರ ಮೃತದೇಹವೂ ಪತ್ತೆಯಾಗಿದೆ.ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತು. ಅಬೂಬಕ್ಕರ್ ಎಂಬವರ ಮನೆಯ ಹಿಂದೆ ಬೃಹತ್ತಾದ ಬರೆ ತೆಗೆಯಲಾಗಿದ್ದು, ಅದರ ಕೆಳಗೆ ಫಿಲ್ಲರ್ ಹಾಕಿ ತಡೆಗೋಡೆಯ ಕಾಮಗಾರಿ ನಡೆಯುತ್ತಿತ್ತು. ಮಧ್ಯಾಹ್ನ ವೇಳೆಗೆ ಇಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ, ಇದ್ದಕ್ಕಿದ್ದಂತೆ ಮೇಲಿನಿಂದ ಬರೆಯ ಮಣ್ಣು ಕುಸಿದು ಬಿತ್ತು. ಕಾರ್ಮಿಕರು ಅದರಡಿ ಸಿಲುಕಿದರು. ಮಾಹಿತಿ ತಿಳಿದು ಸ್ಥಳಿಯ ಜನಪ್ರತಿನಿಧಿಗಳು ಧಾವಿಸಿ ಬಂದರು. ಪೊಲೀಸರು, ಅಗ್ನಿಶಾಮಕ ದಳದವರು ಧಾವಿಸಿ ಬಂದರು. ಪಕ್ಕದಲ್ಲಿಯೇ ಕೆಲಸ ಮಾಡುತ್ತಿದ್ದ ಇನ್ನೊಂದು ಜೆಸಿಬಿಯನ್ನು ತರಿಸಿ ಕಾರ್ಯಾಚರಣೆ ಆರಂಭಗೊಂಡಿತು.ಸುಮಾರು ಒಂದೂವರೆ ಗಂಟೆಯ ಕಾರ್ಯಾಚರಣೆ ಬಳಿಕ ಮೂವರ ದೇಹಗಳನ್ನು ಹೊರತೆಗೆಯಲಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಮೃತದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಮೃತಪಟ್ಟವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಗದಗದ ಮುಂಡರಗಿ ಮೂಲದ ಸೋಮಶೇಖರ, ಶಾಂತಾ ದಂಪತಿ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸುಶೀಲಾ ಜಿನ್ನಪ್ಪ, ತಹಶೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ನ.ಪಂ. ಮುಖ್ಯಾಧಿಕಾರಿ ಸುಧಾಕರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಭೇಟಿ ನೀಡಿದ್ದಾರೆ.

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ ಸಫ್ವಾನ್ ಅರೆಸ್ಟ್

Posted by Vidyamaana on 2024-07-07 09:34:59 |

Share: | | | | |


ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ನಿವಾಸಿ  ಸಫ್ವಾನ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್‌ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Recent News


Leave a Comment: