ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ

Posted by Vidyamaana on 2023-07-24 01:17:37 |

Share: | | | | |


ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್ ಹೇಳಿದ್ದಾರೆ.


ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು , ಬಂಟ್ವಾಳ, ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

Posted by Vidyamaana on 2023-07-04 21:46:28 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾ


ಬೆಂಗಳೂರು: ವಿಧಾನ ಸಭಾ ಚುನಾವಣೆಯ ಸೋಲಿನ ಬಳಿಕ ರಾಜಕೀಯದ ಸುಳಿಗಾಳಿಯಲ್ಲಿ ಓಲಾಡುತ್ತಿರುವ ರಾಜ್ಯ ಬಿಜೆಪಿ ಎಂಬ ನಾವೆಯ ಚುಕ್ಕಾಣಿಯನ್ನು ಮತ್ತೆ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಭಾವಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತನ್ನ ಕೈಗೆ ತೆಗೆದುಕೊಂಡಿದ್ದಾರೆ. ಪ್ರಬಲ ಕಾಂಗ್ರೆಸ್ ಪಕ್ಷವನನ್ನು ಸದನದ ಹೊರಗೆ ಮತ್ತು ಒಳಗೆ ಸಮರ್ಥವಾಗಿ ಎದುರಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲುವಂತಾಗಲು ಬಿಜೆಪಿಗೆ ಸದ್ಯಕ್ಕೆ ಸಮರ್ಥ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷರು ಬೇಕಾಗಿದ್ದಾರೆ.


ಈ ಕಾರಣದಿಂದ ಕಮಲ ಪಕ್ಷದ ಕೇಂದ್ರ ಪ್ರಮುಖರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತುರ್ತಾಗಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಎಸ್.ವೈ ವಿಪಕ್ಷ ನಾಯಕನ ಸ್ಥಾನಕ್ಕೆ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಚಿಸಿರುವ ಎರಡು ಹೆಸರುಗಳು ಸ್ವತಃ ಕೇಂದ್ರ ಬಿಜೆಪಿ ನಾಯಕರನ್ನೇ ಅಚ್ಚರಿಯಲ್ಲಿ ಕೆಡವಿದೆ.


ಪಕ್ಷ ಮತ್ತೆ ರಾಜ್ಯದಲ್ಲಿ ಸಮರ್ಥವಾಗಿ ಬೆಳೆಯಬೇಕಾದ್ರೆ ಇವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಬಿಎಸ್.ವೈ ಕೆಂದ್ರ ನಾಯಕರ ಮನ ಒಲಿಸಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರುಗಳನ್ನು ಬಿ.ಎಸ್.ವೈ ಸೂಚಿಸಿದ್ದು ಈ ಕುರಿತು ಕೇಂದ್ರ ಬಿಜೆಪಿ ನಾಯಕರು ಗಂಭೀರವಾಗಿ ಆಲೋಚಿಸುತ್ತಿದ್ದು ಇವತ್ತು ಅಥವಾ ನಾಳೆಯೊಳಗೆ ಈ ಕುರಿತಾಗಿ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.


ಈ ಹಿಂದೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿದ್ದಾಗ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಅವರು ಬಳಿಕ ನಮೋ 2.0 ಸಂಪುಟದಲ್ಲಿ ಕೇಂದ್ರ ಸಚಿವೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿಪಕ್ಷಗಳನ್ನು ಎದುರಿಸಲು ಮತ್ತು ರಾಜ್ಯಾದ್ಯಂತ ಬಿಜೆಪಿಯನ್ನು ಮರು ಸಂಘಟಿಸಲು ಶೋಭಾ ಅವರ ರಾಜಕೀಯ ಅನುಭವ ಪ್ರಯೋಜವಾಗುತ್ತದೆ ಎಂಬ ವಾದವನ್ನು ಬಿಎಸ್ ವೈ ಬಣ ಮಂಡಿಸುತ್ತಿದೆ. ಇನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರರೂ ಸಹ ಬಿ.ಎಸ್.ವೈ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು ಇವರಿಬ್ಬರಿಗೆ ಕೇಂದ್ರ ನಾಯಕರು ಓಕೆ ಅಂದ್ರೆ ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ವೈ ಬಣದ ಹಿಡಿತ ಮತ್ತೆ ಬಿಗಿಯಾಗಲಿದೆ.

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ

Posted by Vidyamaana on 2023-12-07 20:38:11 |

Share: | | | | |


ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ


ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.


ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.

 ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ.

-ಮುಳಿಯ ಜ್ಯುವೆಲ್ಸ್  ಸಂಸ್ಥೆಯ  ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.


ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

ಉಡುಪಿ: ನಾನು ಹಸಿ ಮೀನು ಮುಟ್ಟಿದ್ದೇನೆಂದು ದೇವಸ್ಥಾನದ ಒಳಗೆ ಹೋಗಲು ನಿರಾಕರಿಸಿದ ರಾಹುಲ್ ಗಾಂಧಿ

Posted by Vidyamaana on 2023-04-28 02:54:41 |

Share: | | | | |


ಉಡುಪಿ: ನಾನು ಹಸಿ ಮೀನು ಮುಟ್ಟಿದ್ದೇನೆಂದು ದೇವಸ್ಥಾನದ ಒಳಗೆ ಹೋಗಲು ನಿರಾಕರಿಸಿದ ರಾಹುಲ್ ಗಾಂಧಿ

ಉಡುಪಿ: ಕಾಪು ತಾಲೂಕಿನ ಉಚ್ಚಿಲಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಲ್ಲಿನ ಶಾಲಿನಿ ಡಾ.ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಜಿಲ್ಲೆಯ ಮೀನುಗಾರರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮದ ಬಳಿಕ ಪಕ್ಕದಲ್ಲೇ ಇರುವ ಪುನರ್ನಿಮಾಣಗೊಂಡ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರಾದರೂ ದೇವಸ್ಥಾನ ದೊಳಗೆ ತೆರಳಲು ನಿರಾಕರಿಸಿದ್ದಾರೆ.

ಸಂವಾದ ಕಾರ್ಯಕ್ರಮದ ಕೊನೆಯಲ್ಲಿ ಮೀನುಗಾರ ಮಹಿಳೆಯೊಬ್ಬರು ನೀಡಿದ ಭಾರೀ ಗಾತ್ರದ ಅಂಜಲ್ ಮೀನನ್ನು ಸ್ವೀಕರಿಸಿದ ರಾಹುಲ್ ಗಾಂಧಿ ಬಳಿಕ ಅದನ್ನು ಪಕ್ಕದಲ್ಲಿದ್ದ ಕಾಂಗ್ರೆಸ್ ಮುಖಂಡ ಪ್ರತಾಪನ್ ಅವರಿಗೆ ನೀಡಿದರು.ಇಲ್ಲಿಗೆ ಬರುವ ಸ್ವಲ್ಪ ಮೊದಲು ತಾನು ಹಸಿ ಮೀನು ಮುಟ್ಟಿದ್ದರಿಂದ ದೇವಸ್ಥಾನದ ಒಳಗೆ ಹೋಗಲು ರಾಹುಲ್ ಗಾಂಧಿ ನಿರಾಕರಿಸಿದರು. ದೇವಸಾನಕ್ಕೆ ಭೇಟಿ ನೀಡಿದ ಅವರನ್ನು ಒಳಗೆ ಬರಲು ಹೇಳಿದಾಗ ನಾನು ಮೀನು ಮುಟ್ಟಿರುವುದರಿಂದ ಒಳಗೆ ಹೋಗಲು ಆಗುವುದಿಲ್ಲ ಎಂದು ಒಳಗೆ ಹೋಗಲು ನಿರಾಕರಿಸಿದ್ದಾರೆ.

ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ

Posted by Vidyamaana on 2023-08-07 05:20:38 |

Share: | | | | |


ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.


ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್‌ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬ್ಯಾಂಕಾಕ್‌ ನಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.


ಸ್ಪಂದನಾ ವಿಜಯ್ ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಜನಿಸಿದರು. ಮಾಜಿ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರು ನಟ ವಿಜಯ್ ರಾಘವೇಂದ್ರ ಅವರನ್ನು 2007ರಲ್ಲಿ ವಿವಾಹವಾದರು. ಸ್ಪಂದನಾ ಅವರು 2016 ರಲ್ಲಿ ವಿ. ರವಿಚಂದ್ರನ್ ಜೊತೆಗೆ “ಅಪೂರ್ವ” ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಅರಳಿದ ಪೂಕಳಂ

Posted by Vidyamaana on 2023-08-29 11:51:13 |

Share: | | | | |


ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಅರಳಿದ ಪೂಕಳಂ

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನಲ್ಲಿ 16 ನೇ ವರ್ಷದ ಓಣಂ ಹಬ್ಬವನ್ನು ಆಚರಿಸಲಾಯಿತು. 

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದವರು ಸೇರಿ ಪೂಕಳಂ ರಚಿಸಿದ್ದು ಸಂಸ್ಥೆಯ ಸಂಚಾಲಕರಾದ ಗೋಕುಲ್ನಾಥ್ ಪಿ. ವಿ. ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾ ಗೋಕುಲ್ನಾಥ್ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಓಣಂ ಹಬ್ಬದ ಆಚರಣೆಗೆ ಚಾಲನೆ ನೀಡಲಾಯಿತು.

ಸಂಸ್ಥೆಯ ಉಪನ್ಯಾಸಕಿಯರಾದ ಅನುಪಮ ಇವರು ಓಣಂ ಹಬ್ಬವನ್ನು ಆಚರಿಸುವ ರೀತಿಯ ಕುರಿತು ತಿಳಿಸಿದರು.

ಹಾಸ್ಟೆಲ್ ವಾರ್ಡನ್ ಆಗಿರುವ ಕಲಾವತಿ ಇವರು ಮಾತನಾಡಿ, ‘ಓಣಂ ಹಬ್ಬದಲ್ಲಿರುವ ವಿಶೇಷ ಖಾದ್ಯದ ಹಾಗೂ ಆಚರಣೆಯ ಕುರಿತು ಮಾಹಿತಿನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್ನಾಥ್ ಅವರು ಮಾತನಾಡಿ, ‘ಈ ಹಬ್ಬದ ಆಚರಣೆಯು ನಿಮ್ಮಲ್ಲರ ಬದುಕಿನಲ್ಲಿ ಒಂದು ಸವಿ ನೆನಪಾಗಿ ಉಳಿಯಲಿ’ ಎಂದು ಹಾರೈಸಿದರು.

ಸಂಸ್ಥೆಯ ಮುಖ್ಯ ಶಿಕ್ಷಕಿ, ‘ಓಣಂ ಹಬ್ಬದ ಹೂವಿನ ಅಲಂಕಾರದಲ್ಲಿ ಬಳಸಿದ ವಿವಿಧ ಹೂವುಗಳಂತೆ ವಿದ್ಯಾರ್ಥಿಗಳ ಜೀವನವು ಸುಂದರವಾಗಲಿ’ ಎಂದು ಶುಭಹಾರೈಸಿದರು. ಕಛೇರಿ ಸಿಬ್ಬಂದಿಯಾದ ಶ್ರೀಮತಿ ಸುಷ್ಮಲತಾ ಮಾತನಾಡಿ ಶುಭಹಾರೈಸಿದರು.

ಸಂಸ್ಥೆಯ ಸಂಚಾಲಕರಾದ ಗೋಕುಲ್ನಾಥ್ ಪಿ. ವಿ. ಓಣಂ ಹಬ್ಬವನ್ನು ಕೇರಳದಲ್ಲಿ ಯಾಕೆ ಆಚರಿಸುತ್ತಾರೆ ಎನ್ನುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ‘ಕೇರಳದಲ್ಲಿ ಆಚರಿಸುವ ಅತೀ ದೊಡ್ಡ ಹಬ್ಬ ಓಣಂ ಆಗಿದ್ದು ಇದನ್ನು ಹತ್ತು ದಿನ ಆಚರಿಸುತ್ತಿದ್ದು ಹಬ್ಬದಲ್ಲಿ ವಿಶೇಷವಾಗಿ 24 ಬಗೆಯ ಖಾದ್ಯಗಳನ್ನು ಸವಿಯುದರ ಜತೆಗೆ ಮಹಾಬಲಿ ಚಕ್ರವರ್ತಿಯನ್ನು ವಿಶೇಷವಾಗಿ ಗೌರವಿಸುವುದು ಸಂಪ್ರದಾಯವಾಗಿದೆ ಎಂದು ತಿಳಿಸಿ ಓಣಂ ಹಬ್ಬದ ಶುಭಾಶಯವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.



Leave a Comment: