ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 9

Posted by Vidyamaana on 2023-08-08 23:09:12 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 9

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 9 ರಂದು


ಬೆಳಿಗ್ಗೆ 10 ಗಂಟೆಗೆ ಅಜಲಡ್ಕದಲ್ಲಿ ಕೆರೆ ಉದ್ಘಾಟನೆ

11 ರಿಂದ ಅಧಿಕಾರಿಗಳ ಸಭೆ

ಸಂಜೆ 3ಕ್ಕೆ ನೆಟ್ಟಣಿಗೆ ಮುಡ್ನೂರು ಸರಕಾರಿ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ 

ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ

ಕದ್ರಿ ಠಾಣೆಯಲ್ಲಿ ಯುವತಿಯ ಅಪರಾವತಾರ

Posted by Vidyamaana on 2023-09-10 07:37:19 |

Share: | | | | |


ಕದ್ರಿ ಠಾಣೆಯಲ್ಲಿ ಯುವತಿಯ ಅಪರಾವತಾರ

ಮಂಗಳೂರು: ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದ ಯವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು ಪೊಲೀಸ್ ಕಮಿಷನರ್ ಈ ಬಗ್ಗೆ ಅರೆಬರೆ ಸ್ಪಷ್ಟನೆ ನೀಡಿದ್ದಾರೆ. 


ಸೆ.1 ರಂದು ಬೆಳಗ್ಗೆ 6.45ಕ್ಕೆ ಪಂಪ್ವೆಲ್ ನಲ್ಲಿ ಮೆಡಿಕಲ್ ಒಂದಕ್ಕೆ ಯುವತಿ ಬಂದಿದ್ದು ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದಳು. ರೌಂಡ್ಸ್ ನಲ್ಲಿದ್ದ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಒಯ್ಯಲು ಯತ್ನಿಸಿದಾಗ, ಅಲ್ಲಿಯೂ ಆಕೆ ದಾಳಿಗೆ ಮುಂದಾಗಿದ್ದಾಳೆ. ಇದರಿಂದ ಬೇಸತ್ತು ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದರು. ಆದರೆ ಯುವತಿಯನ್ನು ಅಲ್ಲಿಯೂ ಹಿಡಿದಿಡಲು ಮಹಿಳಾ ಸಿಬಂದಿ ಹರಸಾಹಸ ಪಟ್ಟಿದ್ದಾರೆ. 




ಬಳಿಕ ಕಾಲಿಗೆ ಕೋಳ ತೊಡಿಸಿ ಕೈಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಿದ್ದಾರೆ. ಡ್ರಗ್ಸ್ ವ್ಯಸನದಿಂದ ಆಕೆ ಈ ರೀತಿ ವರ್ತಿಸುತ್ತಿದ್ದಾಳೆಂಬ ಸಂಶಯದಿಂದ ಚೆಕ್ ಮಾಡಿದಾಗ, ನೆಗೆಟಿವ್ ಬಂದಿದೆ. ಪೋಷಕರ ಬಗ್ಗೆ ಕೇಳಿದಾಗಲೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇನ್ನೊಮ್ಮೆ ಇಂಗ್ಲಿಷ್ ಮಾತಾಡುತ್ತಿದ್ದಳು. ಮಾನಸಿಕ ತಜ್ಞರಲ್ಲಿ ತೋರಿಸಬೇಕೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಕಡೆಗೆ ಪೊಲೀಸರು ಒಯ್ಯುತ್ತಿದ್ದಾಗ, ಆಕೆ ತನ್ನ ಮನೆ ಇಲ್ಲೇ ಇದೆಯೆಂದು ಹೇಳಿದ್ದಾಳೆ. ಬಳಿಕ ಪೋಷಕರಿಗೆ ಮಾಹಿತಿ ನೀಡಿ, ಮತ್ತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 


ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಆಕೆಗೆ ಮಾನಸಿಕ ಸಮಸ್ಯೆಯಂತೆ. ಹಾಗಾಗಿ ಮನೆಯಲ್ಲೇ ಇಟ್ಟು ಚಿಕಿತ್ಸೆ ನೀಡುತ್ತಿದ್ದರಂತೆ. ಆದರೆ, ಈ ಕುರಿತು ಸರಿಯಾದ ಮಾಹಿತಿ ಪೊಲೀಸರಲ್ಲಿ ಇಲ್ಲ. ಡ್ರಗ್ಸ್ ವ್ಯಸನಕ್ಕೆ ಬಲಿಯಾದವರು ಡ್ರಗ್‌ ಸಿಗದೇ ಇದ್ದಾಗ ಈ ರೀತಿ ವ್ಯಗ್ರವಾಗಿ ವರ್ತಿಸುತ್ತಾರೆ. ಯುವತಿಗೆ ಹಾಗೆ ಆಗಿರಬಹುದೇ ಎಂದು ಪೊಲೀಸರಲ್ಲಿ ಕೇಳಿದರೆ, ಇಲ್ಲ ಎನ್ನುತ್ತಾರೆ. ಆಕೆಯ ಸಮಸ್ಯೆ ಏನು ? ಯಾಕಾಗಿ ಅವಳು ಒಬ್ಬಂಟಿಯಾಗಿ ಅಂದು ಬೆಳಗ್ಗೆ ಪಂಪ್ವೆಲ್ ಬಂದಿದ್ದಳು. ಚಿಕಿತ್ಸೆಯಲ್ಲಿದ್ದರೆ, ಬೆಳ್ಳಂಬೆಳಗ್ಗೆ ಮೆಡಿಕಲ್ ಬಂದಿದ್ದು ಹೇಗೆ.. ವಿದ್ಯಾರ್ಥಿನಿಯೇ ಎಂದು ಕೇಳಿದರೆ, ಅದಕ್ಕೂ ಪೊಲೀಸರಲ್ಲಿ ಮಾಹಿತಿಯಿಲ್ಲ.

ಕೆಎಸ್‌ಆರ್‌ಟಿಸಿಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

Posted by Vidyamaana on 2023-08-18 02:52:08 |

Share: | | | | |


ಕೆಎಸ್‌ಆರ್‌ಟಿಸಿಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

ಪುತ್ತೂರು : ಕೆಎಸ್‌ಆರ್‌ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು.


ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ ತೇರ್ಗಡೆಹೊಂದಿದ್ದರು, ಈ ಪೈಕಿ 49 ಮಂದಿಗೆ ಮೊದಲ ಹಂತದಲ್ಲಿ ಚಾಲಕ ಹುದ್ದೆಗೆ ನೇಮಕವಾಗಿದ್ದು ಶಾಸಕರು ಪಟ್ಟ ಶ್ರಮ ಸಾರ್ಥಕವಾಗಿದೆ.



ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಶಾಸಕರು ತನ್ನ ಸ್ವಂತ ಖರ್ಚಿನಿಂದ ಎಲ್ಲಾ ಚಾಲಕ ಆಕಾಂಕ್ಷಿಗಳನ್ನು ಹಾಸನಕ್ಕೆ ಕರೆದೊಯ್ದು ಅಲ್ಲಿ ತರಬೇತಿಯನ್ನು ಕೊಡಿಸಿದ್ದರು. ಮೊದಲ ಹಂತದ ತರಬೇತಿಯಲ್ಲಿ ೨೭ ಮಂದಿ ಮತ್ತು ಎರಡನೆ ತಂಡದಲ್ಲಿ ೨೮ ಮಂದಿಗೆ ತರಬೇತಿಯನ್ನು ನೀಡಲಾಗಿತ್ತು. ಈ ಪೈಕಿ ಕೆಲವು ಮಂದಿ ತರಬೇತಿಯಲ್ಲಿ ಅನುತ್ತೀರ್ಣರಾದ ಕಾರಣ ಅವರನ್ನು ಮುಂದಿನ ತರಬೇತಿ ಅವಧಿಗೆ ಕಾಯ್ದಿರಿಸಲಾಗಿತ್ತು.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಆ.10 ರಂದು ಪ್ರಾದೇಶಿಕ ತರಬೇತಿ ಕೇಂದ್ರ ಹಾಸದಲ್ಲಿ ಚಾಲಕರ ಆಯ್ಕೆ ಯನ್ನು ಮಾಡಿರುತ್ತಾರೆ. ಇದರಲ್ಲಿ ಟ್ರಸ್ಟ್ ಮೂಲಕ ತರಬೇತಿ ಪಡಕೊಂಡ ೪೬ ಮಂದಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಠೆಯ ಹೊರಗುತ್ತಿಗೆ ಆಧಾರದಲ್ಲಿ ಬಸ್ ಚಾಲಕರಾಗಿ ಆಯ್ಕೆಯಾಗಿರುತ್ತಾರೆ.


ನಮ್ಮ ಜನರಿಗೆ ಕೆಎಸ್‌ಆರ್‌ಟಿಸಿಯಲ್ಲಿ ಹುದ್ದೆ ದೊರೆಯಬೇಕೆಂಬ ಉದ್ದೇಶದಿಂದ ನಾನು ಚಾಲಕ ಹುದ್ದೆಗೆ ಅರ್ಜಿ ಹಾಕುವಂತೆ ಪತ್ರಿಕೆಯಲ್ಲಿ ಜಾಹಿರಾತು ನೀಡಿ, ಹುದ್ದೆ ಆಕಾಂಕ್ಷಿಗಳನ್ನು ಆಯ್ಕೆ ಮಾಡಿ ಅವರನ್ನು ತನ್ನ ಸ್ವಂತ ಖರ್ಚಿನಲ್ಲೇ ಹಾಸಕನಕ್ಕೆ ಕರೆದೊಯ್ದು ಚಾಲನಾ ತರಬೇತಿಯನ್ನು ಕೊಡಿಸಿದ್ದು ಮೊದಲ ಆಯ್ಕೆ ಪ್ರಕ್ರಿಯೆಯಲ್ಲಿ ೪೬ ಮಂದಿ ಚಾಲಕ ಹುದ್ದೆಗೆ ನೇಮಕವಾಗಿದ್ದಾರೆ.


ಸರಕಾರಿ ಹುದ್ದೆಗೆ ಈ ಭಾಗದವರು ಅರ್ಜಿ ಹಾಕುವುದು ಬಹಳ ಕಡಿಮೆ. ನಮ್ಮವರಿಗೂ ಸರಕಾರಿ ಹುದ್ದೆ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಶಾಸನೆಂಬ ನೆಲೆಯಲ್ಲಿ ಪ್ರಯತ್ನ ಪಟ್ಟಿದ್ದೆ ಅದಕ್ಕೆ ಪೂರಕ ಎಂಬಂತೆ ಚಾಲಕರು ಸಹಕಾರ ನೀಡಿದ್ದು ಇದೀಗ ೪೭ ಮಂದಿಗೆ ಉದ್ಯೋಗ ಲಭಿಸಿದ್ದು ನನಗೆ ಅತೀವ ಸಂತೋಷವನ್ನು ತಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

Posted by Vidyamaana on 2023-10-09 21:08:02 |

Share: | | | | |


ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಏಕಾಏಕಿ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.ಕೊನೆಗೆ ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ನಾಡಿನ ಶಿಕ್ಷಕರಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ನಮನ

Posted by Vidyamaana on 2023-09-04 23:00:18 |

Share: | | | | |


ನಾಡಿನ ಶಿಕ್ಷಕರಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವರ್ಣ ನಮನ

ಪುತ್ತೂರು: ಸದಾ ಹೊಸತನಗಳನ್ನು, ವಿನೂತನ ಆಫರ್ ಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸುವಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸ್ಪೆಷಲ್ ಆಫರ್ ಒಂದನ್ನು ಪರಿಚಯಿಸಲಾಗಿದೆ.

ಸೆ.05 ರಿಂದ ಸೆ.12ರವರೆಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಪುತ್ತೂರು, ಸುಳ್ಯ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಶಿಕ್ಷಕರು ಖರೀದಿಸುವ ಚಿನ್ನಾಭರಣದ ಮೇಲೆ ಪ್ರತೀ ಗ್ರಾಂಗೆ 100 ರೂಪಾಯಿ ರಿಯಾಯಿತಿ, ಬೆಳ್ಳಿ ಎಂ.ಆರ್.ಪಿ. ಆಭರಣಗಳ ಮೇಲೆ ಶೇ.5ರ ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ ಶೇ.3ರ ರಿಯಾಯಿತಿ ಸಿಗಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ. 

ಸೆ. 5ರಿಂದ 12ರವರೆಗೆ ಶಿಕ್ಷಕರಿಗಾಗಿ ಈ ವಿಶೇಷ ಕೊಡುಗೆಗಳು ಲಭ್ಯವಿರಲಿದೆ. ಇದಕ್ಕಾಗಿ ಶಿಕ್ಷಕರು ಮಾಡಬೇಕಾಗಿರುವುದಿಷ್ಟೇ..

- ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡನ್ನು ತಮ್ಮೊಂದಿಗೆ ತರತಕ್ಕದ್ದು

- ಈ ಕೊಡುಗೆ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಅನ್ವಯವಾಗುವುದಿಲ್ಲ.

- ಈ ಕೊಡುಗೆಗಳು ಇನ್ನಿತರ ಯಾವುದೇ ಯೋಜನೆಗಳು ಮಾಸಿಕ ಕಂತಿನ ಯೋಜನೆಯೊಂದಿಗೆ ಸೇರಿಸಲಾಗುವುದಿಲ್ಲ

ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

Posted by Vidyamaana on 2023-08-24 12:42:34 |

Share: | | | | |


ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸನ್ವಿರುದ್ಧ ಸೋಲು ಕಂಡಿದ್ದಾರೆ.



ಆದರೆ ಸೋತರೂ ಕೊಟ್ಯಂತರ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.


ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.



ಗುರುವಾರ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ಮೊದಲ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ ಅವರು ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದರು. ಆದರೆ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್ ಕಾರ್ಲ್ ಸನ್ ಗೆದ್ದು 6ನೇ ಬಾರಿ ವಿಶ್ವ ಕಿರೀಟ ಗೆದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದಾರೆ

Recent News


Leave a Comment: