ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

Posted by Vidyamaana on 2024-04-20 16:57:34 |

Share: | | | | |


ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

Posted by Vidyamaana on 2024-05-17 07:19:54 |

Share: | | | | |


ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

ಚಿತ್ರದುರ್ಗ, ಮೇ.17: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ (Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.

ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, 5 ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತತೆಯಲ್ಲಿತ್ತು. ಕೂಡಲೇ ಎಫ್‌ಎಸ್‌ಎಲ್ ಟೀಂ ಕರೆಸಿ ಸೂಕ್ತ ತನಿಖೆಗೆ ಆದೇಶ ನೀಡಲಾಯಿತು.

ತನಿಖಾ ತಂಡ ಹಾಗೂ FSL ತಂಡ ಸೇರಿ ಆ ಮನೆಯಿಂದ 71 ಸಾಕ್ಷ್ಯಗಳನ್ನು ಕಲೆ ಹಾಕಲಾಗಿತ್ತು. ಎಲ್ಲಾ ಸ್ಯಾಂಪಲ್ಸ್​ಗಳನ್ನು ದಾವಣಗೆರೆ, ಬೆಂಗಳೂರು ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಇದು ತುಂಬಾ ಸೆನ್ಸಿಬಲ್ ಕೇಸ್ ಆಗಿದ್ದರಿಂದ ರಿಪೋರ್ಟ್ ತಡವಾಗಿ ಬಂದಿದೆ.

ನೇತ್ರಾವತಿ ನದಿಗೆ ಹಾರಿದ್ದ ಚಿಕ್ಕಮಗಳೂರಿನ ಉದ್ಯಮಿಯ ಮೃತದೇಹ ಪತ್ತೆ

Posted by Vidyamaana on 2023-10-31 15:40:15 |

Share: | | | | |


ನೇತ್ರಾವತಿ ನದಿಗೆ ಹಾರಿದ್ದ ಚಿಕ್ಕಮಗಳೂರಿನ ಉದ್ಯಮಿಯ ಮೃತದೇಹ ಪತ್ತೆ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಿಂದ ಸೋಮವಾರ ನದಿಗೆ ಹಾರಿದ್ದ ಚಿಕ್ಕಮಗಳೂರಿನ ಉದ್ಯಮಿಯ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಮಂಗಳೂರಿನ ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪು ಪೂರೈಸುತ್ತಿದ್ದ ಚಿಕ್ಕಮಗಳೂರು ಮುಗುಳವಳ್ಳಿ ಗೋಕುಲ್‌ ಫಾರ್ಮ್ಸ್ ನಿವಾಸಿ, ಕೃಷಿ ಉದ್ಯಮಿ ಪ್ರಸನ್ನ ಬಿ.ಎಸ್‌ (37) ಅವರು ನದಿಗೆ ಹಾರಿ ಮೃತಟಪಟ್ಟವರು.


ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ತೋಟಬೇಂಗ್ರೆ ಬಳಿಯಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ಪ್ರಸನ್ನ ಬಿ.ಎಸ್‌ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಮೀನುಗಾರರ ಸಹಕಾರದಿಂದ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.


ಆರ್ಥಿಕ ಸಮಸ್ಯೆಯಿಲ್ಲ


ಚಿಕ್ಕಮಗಳೂರಿನ ರೈತರಿಂದ ಕೊತ್ತಂಬರಿ ಸೊಪ್ಪು ಸಂಗ್ರಹಿಸಿ ಮಂಗಳೂರಿನ ಗ್ಲೋಬಲ್‌ ಮಾರು ಕಟ್ಟೆಯ ತರಕಾರಿ ವ್ಯಾಪಾರಿ ಗಳಿಗೆ ಪೂರೈಸುತ್ತಿದ್ದ ಪ್ರಸನ್ನ ಅವರಿಗೆ ಆರ್ಥಿಕವಾಗಿ ಯಾವುದೇ ಸಮಸ್ಯೆಯಿಲ್ಲದಿದ್ದರೂ, ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ನದಿಗೆ ಹಾರಿದ ಘಟನೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಪ್ರಸನ್ನ ಅವರ ಕುಟುಂಬದ ಸದಸ್ಯರು ಆಗಮಿಸಿದ್ದರು.

12 ವರ್ಷಗಳಿಂದ ವ್ಯವಹಾರ

ಚಿಕ್ಕಮಗಳೂರಿನಲ್ಲಿ ಸುಮಾರು 12 ವರ್ಷಗಳಿಂದ ತರಕಾರಿ, ಕೊತ್ತಂಬರಿ ಸೊಪ್ಪು ವ್ಯವಹಾರ ಮಾಡುತ್ತಿದ್ದ ಪ್ರಸನ್ನ ಅ. 27ರಂದು ತನ್ನ ಸಹಾಯಕ ಸುಮನ್‌ ನೊಂದಿಗೆ ಮಂಗಳೂರಿಗೆ ಕೊತ್ತಂಬರಿ ಸೊಪ್ಪು ಮಾರುಕಟ್ಟೆಗೆ ತಂದು ಬಳಿಕ ನಗರದ ಹೊಟೇಲ್‌ನಲ್ಲಿ ತಂಗಿದ್ದರು. ಸೋಮವಾರ ಮಾರುಕಟ್ಟೆಯಿಂದ ಹಣವನ್ನು ಸಂಗ್ರಹಿಸಿದ ಬಳಿಕ ಕಂಕನಾಡಿ ಫಾದರ್‌ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಿ ಹಣ ನೀಡಿ ಬಂದಿದ್ದರು. ಬಳಿಕ ಸುಮನ್‌ ಅವರನ್ನು ಅಲ್ಲೇ ನಿಲ್ಲುವಂತೆ ತಿಳಿಸಿ ಕಾರಿನಲ್ಲಿ ವಾಪಸ್‌ ನೇತ್ರಾವತಿ ಸೇತುವೆಯ ಬಳಿಗೆ ಬಂದು ನದಿಗೆ ಹಾರಿದ್ದಾರೆ.

ಪೈಪ್‌ ಮೂಲಕ ತೆರಳಿ ಆತ್ಮಹತ್ಯೆ

ಪ್ರಸನ್ನ ಮಂಗಳೂರಿನಿಂದ ಕಲ್ಲಾಪುವಿನವರೆಗೆ ಆಗಮಿಸಿ ಬಳಿಕ ಯೂ ಟರ್ನ್ ತೆಗೆದುಕೊಂಡು ವಾಪಸ್‌ ಮಂಗಳೂರು ಕಡೆ ಸಂಚರಿಸಿದ್ದು, ಸೇತುವೆ ಬಳಿ ಕಾರನ್ನು ನಿಲ್ಲಿಸಿ ಪರ್ಸ್‌, ಮೊಬೈಲ್‌ ಅನ್ನು ಕಾರಿನಲ್ಲೇ ಇಟ್ಟು ಸೇತುವೆಯ ಒಂದು ಬದಿಯಿಂದ ಪೈಪ್‌ ಮೂಲಕ ತೆರಳಿ ಅಲ್ಲಿಂದ ನದಿಗೆ ಹಾರಿದ್ದರೆನ್ನಲಾಗಿದೆ.


ಈ ಘಟನೆಯನ್ನು ಸ್ಥಳೀಯವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ನೋಡಿದ್ದು, ಹತ್ತಿರ ಬಂದಾಗ ನದಿಗೆ ಹಾರಿ ಮುಳುಗೇಳುತ್ತಿದ್ದರು. ನದಿಯಲ್ಲಿ ಮುಳುಗುತ್ತಿರುವ ದೃಶ್ಯವನ್ನು ಪ್ರಸನ್ನ ಅವರು ಬಂದಿದ್ದ ಕಾರು. ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆ ಸಂದರ್ಭ ಸ್ಥಳೀಯವಾಗಿ ಈಜುಗಾರರು ಇಲ್ಲದೆ ರಕ್ಷಣೆಗೆ ಸಾಧ್ಯವಾಗಿಲ್ಲ.

ಕನಿಕರವಿಲ್ಲದ ಸಾವೂ ಒಂದು ಕ್ಷಣ ಮರುಗಿರಲಾರದೇ

Posted by Vidyamaana on 2023-06-02 09:45:03 |

Share: | | | | |


ಕನಿಕರವಿಲ್ಲದ ಸಾವೂ ಒಂದು ಕ್ಷಣ ಮರುಗಿರಲಾರದೇ

ಕೈಚಾಚಿ ಕೇಳಿದವರಿಗೆ ಇಲ್ಲ ಎಂದಿದ್ದೇ ಇಲ್ಲ… ಅದೆಷ್ಟು ಹಣ ನೀಡಿದರೋ, ಅದೆಷ್ಟು ದಾನ ಮಾಡಿದರೋ, ಅದೆಷ್ಟು ಮಂದಿ ಇವರಿಂದ ಪ್ರಯೋಜನ ಪಡೆದುಕೊಂಡರೋ… ಪಡಕೊಂಡವರಿಗಷ್ಟೇ ಗೊತ್ತು...

ಬಡವರೆಂದರೆ ಮಮ್ಮಲ ಮರುಗುವ ಹಾರೀಸ್, ಸೌದಿಯಲ್ಲಿ ಕಂಪೆನಿಯೊಂದನ್ನು ನಡೆಸುತ್ತಿದ್ದರು. ತನಗೆ ಬರುತ್ತಿದ್ದ ವರಮಾನದಲ್ಲಿ ಅದೇಷ್ಟೋ ಪಾಲನ್ನು ಸಮಾಜಕ್ಕಾಗಿಯೇ ಮೀಸಲಿಟ್ಟವರು. ಕಷ್ಟದಲ್ಲಿದ್ದ ಅಸಹಾಯಕರಿಗೆ ಧರ್ಮ, ಜಾತಿ ನೋಡದೇ ನೆರವು ನೀಡಿದ್ದಾರೆ. ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರಗಳಿಗೆ ಎಷ್ಟೋ ಹಣವನ್ನು ಲೆಕ್ಕವಿಲ್ಲದೇ ನೀಡಿದ್ದಾರೆ. ಆದರೆ ಈ ವಿಚಾರ ಪಡೆದುಕೊಂಡವರಿಗೆ ಬಿಟ್ಟು, ಬೇರಾರಿಗೂ ಗೊತ್ತೇ ಇಲ್ಲ. ‘ಬಲಗೈಯಲ್ಲಿ ನೀಡಿದ ದಾನ, ಎಡಗೈಗೂ ತಿಳಿಯಬಾರದು’ ಎಂಬ ಸಂತವಾಣಿಯನ್ನು ಚಾಚೂ ತಪ್ಪದೇ ಪಾಲಿಸಿದವರು. ಇದೇ ಕಾರಣಕ್ಕೆ ಹಾರೀಸ್ ಮೇಲ್ಮಟ್ಟದಲ್ಲಿ ನಿಲ್ಲುತ್ತಾರೆ. ಅವರ ಸಾವು ಸಾವಿರಾರು ಮಂದಿಯ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. 

ದೂರದ ಸೌದಿಯಲ್ಲಿದ್ದರೂ, ಭಾರತದ ಅದರಲ್ಲೂ ಕರುನಾಡಿನ ಅನೇಕ ಯುವಕರಿಗೆ ಉದ್ಯೋಗ ನೀಡಿದ ಉದ್ಯೋಗದಾತ ಹಾರೀಸ್. ಇದರೊಂದಿಗೆ ತನ್ನ ದೇಶದ ಬಡವರ ಬಗ್ಗೆ ಕಳಕಳಿ. ತನ್ನ ಮನೆಯವರಿಂದ ಬಳುವಳಿಯಾಗಿ ಬಂದ ನಿಷ್ಕಲ್ಮಷ ನಗುವಿನ ಈ ಸರದಾರ, ತನ್ನ ಸಮಾಜ ಪ್ರೇಮವನ್ನು ಮೆರೆದ ಬಗೆ ಹೀಗಿದೆ ನೋಡಿ.

ಬದುಕಿದ್ದ ಅಷ್ಟೂ ದಿನ ಪರೋಪಕಾರಿಯಾಗಿ ಜೀವನ ಸಾಗಿಸಿದರು. ಧರ್ಮ ತೋರಿಸಿದ ಹಾದಿಯನ್ನು ತನ್ನ ಜೀವನದಲ್ಲಿ ಪಾಲಿಸಿಕೊಂಡು ಬಂದರು. ನಗುನಗುತ್ತಲೇ, ಇತರರ ಬಾಳಿನಲ್ಲೂ ನಗು ತರಿಸಲು ಪ್ರಯತ್ನಿಸಿದರು. ಸಾವು ಎದುರು ಬಂದು ನಿಂತಾಗಲೂ ಮುಖದ ನಗು ಮಾಸಲಿಲ್ಲ. ಆದರೆ ಇವರ ಸಾವನ್ನು ಕಂಡು ಅದೆಷ್ಟು ಮಂದಿ ಮರುಕ ಪಟ್ಟರೋ, ಅದೆಷ್ಟು ಮಂದಿಯ ಕಣ್ಣಂಚು ಒದ್ದೆಯಾಯಿತೋ, ಅದೆಷ್ಟು ಮಂದಿ ಭಿಕ್ಕಿ ಭಿಕ್ಕಿ ಅತ್ತರೋ…

ಮೇ 27ರಂದು ವಿಧಿಯ ಮುಂದೆ ಮಂಡಿಯೂರಿ ಕುಳಿತುಬಿಟ್ಟರು ಹಾರೀಸ್...!!

         ಸಾವಿಗೂ ಪ್ರಿಯವೆನ್ನಿಸಿರಬೇಕು ಇವರು. ಸಾವು ಬಂದು ಬಿಗಿದಪ್ಪಿಕೊಂಡೇ ಬಿಟ್ಟಿತು, ಹಾರೀಸ್ ದೇಹ ಬಿಟ್ಟು ಸಾವಿನ ನಂತರದ ಪಯಣ ಶುರು ಮಾಡಿದರು. ಜೂನ್ 1ರಂದು ಬೆಳಿಗ್ಗೆ ಹಾರೀಸ್ ಮೃತದೇಹ ಹುಟ್ಟೂರು ಪುತ್ತೂರಿಗೆ ಆಗಮಿಸಿತು. ಸೌದಿಯಿಂದ ಅವರ ಅಭಿಮಾನಿಗಳೇ ಅನೇಕ ಮಂದಿ ಮೃತದೇಹದ ಜೊತೆಗೆ ವಿಮಾನ ಏರಿ ಜೊತೆಯಲ್ಲೇ ಬಂದಿದ್ದರು. ಇದೇ ನೋಡಿ ಅವರು ಸಂಪಾದಿಸಿದ ಪ್ರೀತಿ, ಗೌರವ, ಸ್ನೇಹ.

ಹಾರೀಸ್ ತಂದೆ, ತಾಯಿ, ಪತ್ನಿ, ನಾಲ್ವರು ಮಕ್ಕಳು,ಸಹೋದರಿ,ಸಹೋದರನನ್ನು ಅಗಲಿದ್ದಾರೆ.

ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

Posted by Vidyamaana on 2023-09-18 15:46:31 |

Share: | | | | |


ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ತೆಗಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ಪಡೆದುಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಟಟ್ಟಿರುವ ಹಿಂದು ನಾಯಕಿ ಮತ್ತು ವಾಗ್ಮಿ ಚೈತ್ರ ಕುಂದಾಪುರ ಮತ್ತು ಆಕೆಯ ಸಹಚರರ ತೀವ್ರ ವಿಚಾರಣೆ ನಡೆಯುತ್ತಿದೆ.

ಈ ನಡುವೆ ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದ ಚೈತ್ರಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಚೈತ್ರಾ ಕುಂದಾಪುರ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಇಂದು (ಸೆ.18) ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮತ್ತೆ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಇನ್ನು ಅವರ ಅಸಲಿ ವಿಚಾರಣೆ ಪ್ರಾರಂಭಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಚೈತ್ರಾಳ ದೇಹಾರೋಗ್ಯ ಸ್ಥಿತಿ ನಾರ್ಮಲ್ ಆಗಿದ್ದು ಮಾಡಲಾಗಿರುವ ಎಲ್ಲಾ ಟೆಸ್ಟ್ ಗಳಲ್ಲಿಯೂ ಆಕೆಗೆ ಯಾವುದೇ ರೀತಿಯ ಗಂಭೀರ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಚೈತ್ರಾ ಆಡಿರುವ ಮಹಾ ಡ್ರಾಮಾ ಎಂಬ ಅಂಶವೂ ಇದೀಗ ಖಚಿತಗೊಂಡಿದ್ದು, ಇದೀಗ ಆಸ್ಪತ್ರೆಯಿಂದ ನೇರವಾಗಿ ವಿಚಾರಣಾ ಸ್ಥಳಕ್ಕೆ ಆಕೆಯನ್ನು ಅಧಿಕಾರಿಗಳು ಕರೆದೊಯ್ದಿರುವ ಕಾರಣ, ಸಿಸಿಬಿ ಪೊಲೀಸರ ಅಸಲೀ ವಿಚಾರಣೆ ಇನ್ನು ಶುರುವಾಗಲಿದೆ!

ಚೈತ್ರಾಳ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದು, ‘ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಎಲ್ಲವೂ ನಾರ್ಮಲ್ ಆಗಿದೆ..’ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ನೀಡಿರುವ ವೈದ್ಯರು, ‘ಅದು ಫಂಕ್ಷನಲ್ ಆಗಿ ಆಗಿರುವಂತದ್ದು, ಅವರೇ ಅದನ್ನು ಮಾಡಿಕೊಂಡಿದ್ದಾರೆ. ಫಿಟ್ಸ್ ಸ್ಥಿತಿ ಏನೂ ಕಂಡುಬಂದಿಲ್ಲ, ಬಹುಷಃ ಅದು ಸಾಬೂನು ನೊರೆಯಾಗಿರಬಹುದು..’ ಎಂದು ಹೇಳಿದ್ದಾರೆ.

‘ಆಕೆಯಲ್ಲಿ ಫಿಟ್ಸ್ ಸಮಸ್ಯೆ ಪತ್ತೆಗಾಗಿ ಎಂ.ಆರ್.ಐ ಸ್ಕ್ಯಾನಿಂಗ್ ನಡೆಸಲಾಗಿದೆ ಮಾತ್ರವಲ್ಲದೇ ಇಸಿಜಿ  ಕೂಡ ಮಾಡಲಾಗಿದೆ. ಈ ಎಲ್ಲಾ ಟೆಸ್ಟ್ ರಿಪೋರ್ಟ್ ನಾರ್ಮಲ್ ಆಗಿದೆ. ಆದರೆ ನ್ಯೂರಾಲಜಿಸ್ಟ್ ಕೆಲವೊಂದು ಮಾತ್ರೆಗಳನ್ನು ಕೊಟ್ಟಿದ್ದಾರೆ..’ ಎಂದು ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಚೈತ್ರಾ ಅವರನ್ನು ಸಿಸಿಬಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯ ಹಿಂಬಾಗಿಲಿನ ಮೂಲಕ ಕರೆದೊಯ್ದಿದ್ದಾರೆ. ಇದೀಗ ಆಕೆಯ ವಿಚಾರಣೆ ಮತ್ತೆ ಪ್ರಾರಂಭಗೊಳ್ಳಲಿದ್ದು, ಯಾರಿಗೆಲ್ಲಾ ಹಣ ವರ್ಗಾವಣೆಯಾಗಿದೆ ಮತ್ತು ಈ ಪ್ರಕರಣದಲ್ಲಿ ಯಾರ್ಯಾರ ಕೈವಾಡ ಇದೆ ಎನ್ನುವ ವಿಚಾರಗಳಿಗೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಶಾಸಕರ ಇಂದಿನ ಕಾರ್ಯಕ್ರಮ ಆ 9

Posted by Vidyamaana on 2023-08-08 23:09:12 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 9

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 9 ರಂದು


ಬೆಳಿಗ್ಗೆ 10 ಗಂಟೆಗೆ ಅಜಲಡ್ಕದಲ್ಲಿ ಕೆರೆ ಉದ್ಘಾಟನೆ

11 ರಿಂದ ಅಧಿಕಾರಿಗಳ ಸಭೆ

ಸಂಜೆ 3ಕ್ಕೆ ನೆಟ್ಟಣಿಗೆ ಮುಡ್ನೂರು ಸರಕಾರಿ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ 

ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ



Leave a Comment: