Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2023-10-14 18:59:44 |
ಮಂಗಳೂರು : ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.
ಹಮಾಸ್ ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.
Posted by Vidyamaana on 2023-11-28 11:45:29 |
ಬೆಳ್ತಂಗಡಿ : ಕುಟುಂಬವೊಂದು ತನ್ನ ಪತ್ನಿ ಮನೆಗೆ ಬಂದು ಉಜಿರೆ ಶಾಪಿಂಗ್ ಹೋಗಿ ವಾಪಸ್ ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಮೂರು ಮಕ್ಕಳು ಸೇರಿ ಐದು ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನ.27 ರಂದು ರಾತ್ರಿ 8:30 ರ ಸಮಯಕ್ಕೆ ನಡೆದಿದೆ.
*ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಇಬ್ಬರು:* ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಮನೆಯ ಅಬ್ದುಲ್ ರಹಮಾನ್(40) ತಲೆಗೆ ಹಾಗೂ ಎಡಕಾಲು ಮುರಿದಿದ್ದು. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಹಿಟ್ಟಾಡಿ ಮನೆಯ ಅಬ್ದುಲ್ ರಹಮಾನ್ ಪತ್ನಿಯ ತಂಗಿ ನಾಸಿಯಾ(30) ಎಡಕಾಲು ಮುರಿದಿದ್ದು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
*ಆನೆ ದಾಳಿ ವೇಳೆ ಕಾರಿನದಲ್ಲಿದ್ದವರ ಮಾಹಿತಿ:* ಕಾರಿನಲ್ಲಿ ಅಬ್ದುಲ್ ರಹಮಾನ್ (40) ಪತ್ನಿ ಫೌಸಿಯಾ(35) , ನಾಸಿಯಾ ತಾಯಿ ಜುಬೈದಾ (50), ನಾಸಿಯಾ ಚಿಕ್ಕಮ್ಮ ಅಯಿಷಾ (45), ನಾಸಿಯಾ ಮಕ್ಕಳಾದ ಫಾತಿಮಾ ಅಲ್ಫಾ(1) , ಅಯಿಷಾ ವಾಫಾ(4) ,ಅಬ್ದುಲ್ ರಹಮಾನ್ ಮಗಳು ಮಹಮ್ಮದ್ ಮೋಹಜ್(4) ಸೇರಿ ಒಟ್ಟು 7 ಜನರು ಇದ್ದವರು ಎಂದು ಗಾಯಗೊಂಡ ಅಬ್ದುಲ್ ರಹಮಾನ್ ಮಾಹಿತಿ ನೀಡಿದ್ದಾರೆ.
*ಘಟನೆಯ ವಿವರ:* ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ನೆರಿಯ ಪತ್ನಿ ಮನೆಗೆ ಹೋಗಿ ಉಜಿರೆ ಶಾಪಿಂಗ್ ಮುಗಿಸಿಕೊಂಡು ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಂಡಿದ್ದು ತಕ್ಷಣ ಕಾರನ್ನು ಬಯಲು ಬಳಿ ನಿಲ್ಲಿಸಿದ್ದು ಆನೆ ಕಾರಿನ ಮೇಲೆ ದಾಳಿ ಮಾಡಿ ಕಾರನ್ನು ಪಲ್ಟಿ ಮಾಡಿದ್ದು ಈ ವೇಳೆ ಕಾರಿನಲ್ಲಿದ್ದವರು ಜರಿದ್ದರಿಂದ ದಂತದಿಂದ ಕಾರಿನ ಡೋರ್ ಮತ್ತು ಚಾಲಕನ ಸೀಟ್ ಸಿಲಿ ಪ್ರಾಣ ಉಳಿದಿದ್ದು ಬಳಿಕ ಆನೆ ವಾಪಸ್ ಹೋಗಿದೆ ಇದರಿಂದ ಇಬ್ಬರ ಕಾಲು ಮುರಿದಿದ್ದು. ಮೂರು ಮಕ್ಕಳು ಯಾವುದೆ ಗಾಯವಾಗದೆ ಒಟ್ಟು ಐದು ಜನ ಪ್ರಾಣಾ ಉಳಿಸಿಕೊಂಡಿದ್ದಾರೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಗೊಂಡ ಇಬ್ಬರನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಅರಣ್ಯಾ ಇಲಾಖೆ ತಂಡ ಗಾಯಗೊಂಡವರನ್ನು ಭೇಟಿ ಮಾಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆನೆ ಹೋದ ಸ್ಥಳಕ್ಕೆ ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ.
*ಒಂಟಿ ಸಲಗ ಬಗ್ಗೆ ಎಚ್ಚರಿಕೆ ನೀಡಿದ ಆರ್.ಎಫ್.ಓ:* ಒಂಟಿ ಸಲಗ ನೆರಿಯ ಸುತ್ತಮುತ್ತ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮತ್ತಿ ಸಿಬ್ಬಂದಿ ರಾತ್ರಿ ಹೊತ್ತು ಸಂಚಾರಿಸುವ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಒಂಟಿ ಸಲಗದ ಬಗ್ಗೆ ನಿಗಾ ಇಡಲು ನೇಮಿಸಲಾಗಿದೆ ಎಂದು ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ , ಡಿ.ಆರ್.ಎಫ್.ಓ ಯತೀಂದ್ರ ಮತ್ತು ರಾಜ್ ಶೇಖರ್ , ಅರಣ್ಯ ಗಸ್ತು ಪಾಲಕ ಪಾಂಡುರಂಗ ಕಮತಿ ಮತ್ತು ಅಖಿಲೇಶ್, ಅರಣ್ಯ ಕವಾಲುಗಾರ ಕಿಟ್ಟಣ್ಣ ಮತ್ತು ವಿನಯಚಂದ್ರ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Posted by Vidyamaana on 2023-02-16 15:01:32 |
ಪುತ್ತೂರು: ಹೊಸ ರಸ್ತೆಯ ಕಾಮಗಾರಿ ನಡೆಸುವಾಗ, ಹಳೆಯ ರಸ್ತೆಯನ್ನು ಹಾಳು ಮಾಡಬಾರದು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇಂತಹ ಕನಿಷ್ಠ ಜ್ಞಾನವೂ ಇಲ್ಲದ ಆಡಳಿತದ ವೈಖರಿಗೆ ಸಾಕ್ಷಿಯಾಗಿ ನಿಂತಿದೆ ನಾಣಿಲ ಜಂಕ್ಷನ್.
ಬೈತಡ್ಕ - ನಾಣಿಲ - ಗುಜ್ಜರ್ಮೆ ರಸ್ತೆಯನ್ನು ಇತ್ತೀಚೆಗೆ ಅಭಿವೃದ್ಧಿಗೊಳಿಸಲಾಯಿತು. ಈ ಮೂರು ರಸ್ತೆಗಳು ಸೇರುವ ಜಂಕ್ಷನ್ ಅನ್ನು ಬಿಟ್ಟು, ಉಳಿದಂತೆ ಮೂರು ಪ್ರದೇಶದ ರಸ್ತೆಗಳಿಗೂ ಕಾಂಕ್ರೀಟಿಕರಣ ಮಾಡಲಾಯಿತು. ಹೀಗೆ ಕಾಂಕ್ರೀಟಿಕರಣ ಮಾಡುವಾಗ, ಕಾಂಕ್ರೀಟ್ ಮಿಕ್ಸ್ ಮಾಡಲು ಬಳಸಿದ್ದು ಮಾತ್ರ ಜಂಕ್ಷನ್ನಲ್ಲಿದ್ದ ಡಾಂಬರು ರಸ್ತೆಯನ್ನು!
ಡಾಂಬರು ರಸ್ತೆಯನ್ನು ಕಾಂಕ್ರೀಟ್ ಮಿಕ್ಸ್ ಮಾಡಲು ಬಳಸಿದ್ದೇ ಮೊದಲ ತಪ್ಪು. ಹೋಗಲಿ ಬಿಡಿ. ಕೆಲಸವಾದ ಬಳಿಕವಾದರೂ, ಕಾಂಕ್ರೀಟ್ನ ತುಣುಕುಗಳನ್ನು ಡಾಂಬರು ರಸ್ತೆಯಿಂದ ತೆರವು ಮಾಡಬೇಕಲ್ಲವೇ? ಅದೂ ಮಾಡಿಲ್ಲ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಿಂದ ಸಾಗಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ.
ಮೂರು ರಸ್ತೆ ಸೇರುವ ಜಾಗದಲ್ಲಿ ಸಣ್ಣ ವೃತ್ತ ಇದೆ. ಈ ವೃತ್ತದ ಸುತ್ತಮುತ್ತ ಸುಮಾರು 100 ಮೀಟರ್ ಅಂತರದಲ್ಲಿ ಈ ಡಾಂಬರು ರಸ್ತೆ ಹರಡಿದೆ. ಉಳಿದೆಲ್ಲವೂ ಕಾಂಕ್ರೀಟಿಕರಣ ಆಗಿದೆ. ಈ 100 ಮೀಟರ್ ಡಾಂಬರು ರಸ್ತೆಯನ್ನು ಹಾಳುಮಾಡಿದ ಶ್ರೇಯಸ್ಸು ಆಡಳಿತಕ್ಕೆ, ಗುತ್ತಿಗೆದಾರರಿಗೆ ಸಲ್ಲುತ್ತದೆ!
ಸ್ಥಳೀಯರು ಮೌನ:
2022ರ ಅಕ್ಟೋಬರ್ 27ರಂದು ಈ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟನೆ ಮಾಡಲಾಗಿದೆ. ಘಟಾನುಘಟಿ ನಾಯಕರು ಸ್ಥಳಕ್ಕೆ ಆಗಮಿಸಿದ್ದರೂ ಕೂಡ. ಅಲ್ಲಿಂದ ಇಲ್ಲಿವರೆಗೆ ಅಂದರೆ ಸುಮಾರು 4 ತಿಂಗಳುಗಳ ಕಾಲ ಡಾಂಬರು ರಸ್ತೆ ದೈನವೀ ಸ್ಥಿತಿಯಲ್ಲೇ ಇದೆ. ಸ್ಥಳೀಯರು, ದ್ವಿಚಕ್ರ ಸವಾರರು ಇದೇ ರಸ್ತೆಯಲ್ಲಿ ಹರಸಾಹಸ ಪಟ್ಟುಕೊಂಡು ಹೋಗುತ್ತಿದ್ದಾರೆ. ಆದರೆ ಯಾರೂ ಕೂಡ, ಇದನ್ನು ಸರಿಪಡಿಸಿ ಎಂದು ಆಗ್ರಹ ಪಡಿಸಿಲ್ಲ. ಆದ್ದರಿಂದ ಡಾಂಬರು ರಸ್ತೆ ಇನ್ನೂ ಹಾಗೇ ಉಳಿದುಕೊಂಡಿದೆ. ಚೆನ್ನಾಗಿದ್ದ ರಸ್ತೆಯನ್ನು ಹಾಳುಗೆಡವಿದರ ಬಗ್ಗೆ ಪ್ರಶ್ನಿಸುವ ಗೋಜಿಗೆ ಹೋಗದ ಸ್ಥಳೀಯರ ಮೌನವೇ, ಸಮಸ್ಯೆ ಪರಿಹಾರಕ್ಕೆ ದೊಡ್ಡ ತೊಡಕಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ.
Posted by Vidyamaana on 2023-08-01 09:37:27 |
ಪುತ್ತೂರು: ಇಲ್ಲಿನ ksrtc ಬಸ್ ನಿಲ್ದಾಣ ಮುಂಭಾಗ ನಿಲ್ಲಿಸುತ್ತಿದ್ದ ವಾಹನಗಳಿಗೆ ಸಂಚಾರಿ ಠಾಣೆ ಎಸ್.ಐ. ಉದಯರವಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿ, ದಂಡ ವಿಧಿಸಿದ್ದಾರೆ.
ಬಸ್ ನಿಲ್ದಾಣಕ್ಕೆ ಕೋಟಿ - ಚೆನ್ನಯ ಹೆಸರು ನಾಮಕರಣ ಮಾಡುವ ದಿನದಂದು ಬಸ್ ನಿಲ್ದಾಣ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು. ಇದರಿಂದಾಗಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತರುವ ವಾಹನಗಳು ರಸ್ತೆಯಲ್ಲೇ ನಿಲ್ಲಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಇದರ ಜೊತೆಗೆ ಬಸ್ ನಿಲ್ದಾಣದ ಮುಂಭಾಗದ ನೋ ಪಾರ್ಕಿಂಗ್ ಜಾಗದಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ತೆರಳುತ್ತಿದ್ದರು. ಇದು ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಬಸ್ ನಿಲ್ದಾಣ ಮುಂಭಾಗ ಪ್ರತಿದಿನ ಸಮಸ್ಯೆಗೆ ಕಾರಣವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತ ಸಂಭವಿಸಿದ ನಿದರ್ಶನವೂ ಇದೆ.
ಈ ಎಲ್ಲಾ ಕಾರಣಗಳಿಂದ ಕಾರ್ಯಾಚರಣೆ ನಡೆಸಿದ ಸಂಚಾರಿ ಠಾಣೆ ಪೊಲೀಸರು, ನಿಲ್ದಾಣದ ಮಿಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ.
Ksrtc ಬಸ್ ನಿಲ್ದಾಣ ಮುಂಭಾಗ ನಿರಂತರವಾಗಿ ಟ್ರಾಫಿಕ್ ದಟ್ಟಣೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಆಗುತ್ತಿತ್ತು. ಇದನ್ನು ವಿದ್ಯಮಾನ ಹಲವು ಬಾರಿ ವರದಿ ಮಾಡಿ, ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿತ್ತು. ಜೊತೆಗೆ, ವಾಣಿಜ್ಯ ಕೈಗಾರಿಕಾ ಸಂಘವೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿತ್ತು.
ನೋ ಪಾರ್ಕಿಂಗ್ ಪ್ರದೇಶ:
ಬಸ್ ನಿಲ್ದಾಣ ಮುಂಭಾಗದ ಪ್ರದೇಶ ನೋ ಪಾರ್ಕಿಂಗ್ ಏರಿಯಾ. ಇಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸುವಂತಿಲ್ಲ. ಮುಂದಿನ ದಿನಗಳಲ್ಲಿ ಇದು ಮುಂದುವರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Posted by Vidyamaana on 2024-01-11 06:30:18 |
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪೂಜೆ, ಭಜನೆ ಮಾಡಿದ್ದಾರೆ. ಪೂಜೆಯ ಬಳಿಕ ಕಾಶಿಂ ಕುಟುಂಬದಿಂದ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆಯೂ ನಡೆದಿದೆ.
ಈ ಕುರಿತು ಮಾತನಾಡಿದ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.
ಕಾಶಿಂ ಅವರ ಈ ನಡೆಯು ಮತ ಸೌಹಾರ್ದತೆಯ ಜ್ವಲಂತ ಉದಾಹರಣೆಯೆಂದು ಊರಿನ ಜನರು ಪ್ರಶಂಸಿದ್ದಾರೆ ಎನ್ನಲಾಗಿದೆ.
Posted by Vidyamaana on 2024-08-29 18:05:55 |
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಶಸ್ಸಿನ ರುಚಿ ಸಿಕ್ಕಿದ್ದು, ಹೊಸ ಹೊಸ ರಾಜಕೀಯ ತಂತ್ರಗಾರಿಕೆಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಂಸದೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಹೇಳಿದರು.
ಟಾಪ್ ಆಯಂಗಲ್ ಪಾಡ್ಕಾಸ್ಟ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಮೃತಿ ಇರಾನಿ, ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವುದು, ಪ್ರಚೋದಕಾರಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಅವರ ಹೊಸ ತಂತ್ರಗಾರಿಕೆಯ ಭಾಗವಾಗಿದೆ ಎಂದರು.