ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 23

Posted by Vidyamaana on 2023-07-22 23:25:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 23

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 23 ರಂದು.

ಬೆಳ್ಳಗೆ 10:30 ಯುವ ಬಂಟರ ಸಂಘ ಇದರ ವತಿಯಿಂದ ತುಳುನಾಡ ಬಂಟರ ಪರ್ಬ  ಕಾರ್ಯಕ್ರಮ


ಮದ್ಯಾಹ್ನ 12:00 ಕುಲಾಲ ಸಮಾಜ ಸೇವಾ ಸಂಘ ಇವರಿಂದ ಶಾಸಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ 


ಸಂಜೆ  5 :00

ಬಲ್ನಾಡುವಿನಲ್ಲಿ ಕೆಸರು ಗದ್ಧೆ ಕಾರ್ಯಕ್ರಮ 

ಇತರೆ ಖಾಸಗಿ ಕಾರ್ಯಕ್ರಮಗಳು


ಬೆಳ್ಳಗ್ಗೆ ನಿಡ್ಪಳ್ಳಿ ಹಾಗು ಆರ್ಯಪುವಿನಲ್ಲಿ ಚುನುವನ ಮತ ಗಟ್ಟೆಗೆ ಭೇಟಿ ಮಾಡಲಿದ್ದಾರೆ

ಭೀಕರ ಅಪಘಾತ: ಸಾವಿಗೀಡಾದ ಹತ್ತೂ ಮಂದಿ ಒಂದೇ ಕುಟುಂಬದವರು; ಮನ ಕಲಕುವ ಪರಿಸ್ಥಿತಿಯಲ್ಲಿ ಮಗು

Posted by Vidyamaana on 2023-05-30 06:11:09 |

Share: | | | | |


ಭೀಕರ ಅಪಘಾತ: ಸಾವಿಗೀಡಾದ ಹತ್ತೂ ಮಂದಿ ಒಂದೇ ಕುಟುಂಬದವರು; ಮನ ಕಲಕುವ ಪರಿಸ್ಥಿತಿಯಲ್ಲಿ ಮಗು

ಮೈಸೂರು: ಇಂದು ಮೈಸೂರಿನಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಮಧ್ಯೆ ಸಂಭಮೈವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದವರ ಕುರಿತು ಹೆಚ್ಚಿನ ಮಾಹಿತಿ ಬಹಿರಂಗವಾಗಿದ್ದು, ಸತ್ತ ಹತ್ತೂ ಮಂದಿ ಒಂದೇ ಕುಟುಂಬದವರು ಎಂಬುದು ತಿಳಿದುಬಂದಿದೆ.ಮೈಸೂರಿನ ಕೊಳ್ಳೆಗಾಲದ ಬಳಿ ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರೆಲ್ಲರೂ ಬಳ್ಳಾರಿ ತಾಲೂಕಿನ ಸಂಗನಕಲ್ಲ ಗ್ರಾಮಸ್ಥರು.

ಬಡಗನ್ನೂರು ಅಡಿಕೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Posted by Vidyamaana on 2023-10-31 18:09:30 |

Share: | | | | |


ಬಡಗನ್ನೂರು ಅಡಿಕೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ,  ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ, ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, ಸುಮಾರು 23 ಗೋಣಿ ಸುಲಿಯದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳವಾರ (ಅ 31) ನಾಲ್ಕು  ಮಂದಿ ಅರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 1,55,925/- ರೂಪಾಯಿ ಮೌಲ್ಯದ ಅಡಿಕೆ ಸಹಿತ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಅಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 


ಬಂಧಿತ ಆರೋಪಿಗಳನ್ನು ಬಡಗನ್ನೂರು ನಿವಾಸಿಗಳಾದ ಶ್ರವಣ್ ಕೆ (20), ಜಯಚಂದ್ರ (21), ನಿಡ್ಪಳ್ಳಿ ನಿವಾಸಿಗಳಾದ ಅಶೋಕ (24), ಪುನೀತ್ (20) ಎಂದು ಗುರುತಿಸಲಾಗಿದೆ. ಬಂಧಿತರದಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 4,15,925/- ರೂಪಾಯಿ ಎಂದು ಅಂದಾಜಿಸಲಾಗಿದೆ.


ಆರೋಪಿಗಳು ಬಡಗನ್ನೂರು ಗ್ರಾಮದ ಕೊಯ್ದ ಎಂಬಲ್ಲಿರುವ ನವೀನ್ ಕುಮಾರ್ ರೈ ಎಂಬವರಿಗೆ ಸೇರಿದ ಹಳೇ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಎನ್ ಕೆ ಆರ್ ಎಂದು ಮಾರ್ಕ್ ಮಾಡಿ ಇಟ್ಟಿದ್ದ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಲಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಪ್ರಕರಣವನ್ನು ಬೇಧಿಸುವಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯತ್ ಮತ್ತು ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ಅವರ ನಿರ್ದೇಶನದಲ್ಲಿ ಪುತ್ತೂರು ಉಪಾಧೀಕ್ಷಕಿ ಡಾ.ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರವಿ.ಬಿ.ಎಸ್, ರವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಧನಂಜಯ್ ಬಿ.ಸಿ ರವರ ನೇತೃತ್ವದಲ್ಲಿ ಎಎಸ್‌ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ, ಪ್ರವೀಣ್ ರೈ, ಹರೀಶ್ ಗೌಡ, ದಯಾನಂದ, ಸುಂದರ್, ವೆಂಕಪ್ಪ, ಸಲೀಂ, ನಾಗೇಶ್ ಕೆ ಸಿ, ಮುನಿಯ ನಾಯ್ಕ ಕಾರ್ತಿಕ್, ಯುವರಾಜ ನಾಯ್ಕ, ಚಾಲಕ ಯೋಗೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾಗಿ ಡಾ. ದಿನಕರ ಅಡಿಗ

Posted by Vidyamaana on 2022-12-15 13:47:24 |

Share: | | | | |


ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾಗಿ ಡಾ. ದಿನಕರ ಅಡಿಗ

ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾಗಿ ಡಾ. ಜೆ. ದಿನಕರ ಅಡಿಗ ನೇಮಕಗೊಂಡಿದ್ದಾರೆ.

ಡಿಸಿಆರ್‌ನ ಪ್ರಧಾನ ವಿಜ್ಞಾನಿಯಾಗಿದ್ದ ಅವರು, ಇದೀಗ ಪದೋನ್ನತಿಗೊಂಡು ನಿರ್ದೇಶಕರಾಗಿ ನೇಮಕವಾಗಿದ್ದಾರೆ. ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ತೋಟಗಾರಿಕಾ ವಿಷಯದಲ್ಲಿ ೩ ಚಿನ್ನದ ಪದಕದೊಂದಿಗೆ ಸ್ನಾತಕೋತ್ತರ ಪದವಿ ಪೂರೈಸಿದ್ದ ಡಾ. ಅಡಿಗರು, ತನ್ನ ಪ್ರೌಢ ಪ್ರಬಂಧವನ್ನು ಉನ್ನತ ಶ್ರೇಣಿಯೊಂದಿಗೆ ಪೂರೈಸಿದ್ದರು. ಬಳಿಕ ಸೆಂಟ್ರಲ್ ಕಾಫಿ ರೀಸರ್ಚ್ ಇನ್‌ಸ್ಟಿಟ್ಯೂಟ್, ಕಿತ್ತೂರು ರಾಣಿ ಚೆನ್ನಮ್ಮ ಕಾಲೇಜ್ ಆಫ್ ಹಾರ್ಟಿಕಲ್ಚರ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ, ೨೦೦೭ರಲ್ಲಿ ಪುತ್ತೂರಿನ ಮೊಟ್ಟೆತ್ತಡ್ಕ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಹಿರಿಯ ವಿಜ್ಞಾನಿಯಾಗಿ ನೇಮಕಗೊಂಡು, ೨೦೧೫ರಲ್ಲಿ ಬೆಂಗಳೂರು ಫ್ರೂಟ್ ಸೈನ್ಸ್ ಅಟ್ ಕಾಲೇಜ್ ಆಫ್ ಹಾರ್ಟಿಕಲ್ಚರ್‌ನಲ್ಲಿ ಪ್ರೊಫೆಸರ್ ಆಗಿಯೂ ಕರ್ತವ್ಯ ನಿರ್ವಹಿಸಿದರು. ಐಎಸ್‌ಓನ ಸದಸ್ಯರಾಗಿ ಹಾಗೂ ನರ್ಸರಿಯ ಪ್ರಭಾರ ವಿಜ್ಞಾನಿಯಾಗಿ ಕೆಲಸ ನಿರ್ವಹಿಸಿದರು. ಇದುವರೆಗೆ ಡಿಸಿಆರ್‌ನ ಪ್ರಧಾನ ವಿಜ್ಞಾನಿಯಾಗಿದ್ದ ಡಾ. ದಿನಕರ ಅಡಿಗ ಅವರು, ಇದೀಗ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಉಡುಪಿಯ ಜಂಬೂರಿನಲ್ಲಿ ಹುಟ್ಟಿದ ಇವರು, ಪುತ್ತೂರಿನ ಚೇತನಾ ಆಸ್ಪತ್ರೆಯ ಖ್ಯಾತ ವೈದ್ಯ ಡಾ. ಜೆ.ಸಿ. ಅಡಿಗ ಅವರ ಸಹೋದರ. ತಂದೆ ದಿ. ಜಂಬೂರು ಶಂಕರನಾರಾಯಣ ಅಡಿಗ, ತಾಯಿ ದಿ. ವೇದಾವತಿ ಅಡಿಗ. ಪತ್ನಿ ಸವಿತಾ ದಿನಕರ ಅಡಿಗ. ಪುತ್ರಿ ಶಚಿ ಅಡಿಗ, ಪುತ್ರ ಶುಭಂಕರ ಅಡಿಗ. ಸದ್ಯ ಪುತ್ತೂರಿನ ಮರೀಲಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

Posted by Vidyamaana on 2023-07-23 16:38:04 |

Share: | | | | |


ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

ಉಳ್ಳಾಲ : ಸ್ಟೇಟ್ ಬ್ಯಾಂಕ್ -ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.


ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ.


ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ.

ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್‌ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

Posted by Vidyamaana on 2023-12-23 19:31:54 |

Share: | | | | |


ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್‌ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

ಬಂಟ್ವಾಳ : ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಮಂಗಳೂರು ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಡಿ.14 ರಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದಕ್ಕೆ ಬಂದ ಆರೋಪಿಗಳು ಅಂಗಡಿ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ಅವರ ನಿರ್ದೇಶನದಂತೆ ಇನ್ಸ್‌ ಪೆಕ್ಟರ್ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಮತ್ತವರ ಸಿಬ್ಬಂದಿ ಇರ್ಷಾದ್‌, ರಾಜೇಶ್, ಗಣೇಶ್, ಮೋಹನ, ವಿವೇಕ್ ಅವರು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ.


ಈ ಕೃತ್ಯಕ್ಕೆ ಸಂಬಂಧಿಸಿ ಅರೋಪಿಗಳ ಯಾವುದೇ ಸುಳಿವು ಇರಲಿಲ್ಲ, ಘಟನಾ ಸ್ಥಳದಲ್ಲಿ ಸಿ.ಸಿ ಕ್ಯಾಮರ ಕೂಡ ಇರದಿದ್ದು, ವಾರದೊಳಗೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಹಾಗೂ ತಂಡಕ್ಕೆ ಪೊಲೀಸ್‌ ಅಧೀಕ್ಷಕರು ನಗದು ಬಹುಮಾನ ಘೋಷಿಸಿದ್ದಾರೆ.



Leave a Comment: