ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ನಕಲಿ ದಾಖಲೆ ಸೃಷ್ಟಿ ವಂಚನೆ ಬೆಳಕಿಗೆ

Posted by Vidyamaana on 2023-07-11 10:40:21 |

Share: | | | | |


ನಕಲಿ ದಾಖಲೆ ಸೃಷ್ಟಿ ವಂಚನೆ ಬೆಳಕಿಗೆ

ಪುತ್ತೂರು: ಸರ್ಕಾರಿ ದಾಖಲೆಗಳ ನಕಲಿ ಜಾಲವನ್ನು ಬೇಧಿಸಿರುವ ಪುತ್ತೂರು ತಾಪಂ ಇಓ ನೇತೃತ್ವದ ತಂಡ, ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬವರಿಗೆ ಸೇರಿದ ಬಿ.ಬಿ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಸೆಂಟರಿನಲ್ಲಿ ಅಕ್ರಮ ಜಾಲವನ್ನು ಪತ್ತೆ ಹಚ್ಚಲಾಗಿದೆ. ಸರ್ಕಾರದಿಂದ ಅನುಮತಿ‌ ಪಡೆದ ಗುತ್ತಿಗೆದಾರರು ಇವರಾಗಿದ್ದು, ಮೆಸ್ಕಾಂನ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು.


ವಿದ್ಯುತ್ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದ ಈ ಅಂಗಡಿಯಲ್ಲಿ, ಪುತ್ತೂರು ನಗರಸಭೆ, ಕಡಬ ತಾಲೂಕು ಪಂಚಾಯತ್ ಹಾಗೂ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಗಳ ಸೀಲ್ ಗಳನ್ನೇ ಹೋಲುವ ನಕಲಿ ಸೀಲ್ ಗಳು‌ ಪತ್ತೆಯಾಗಿವೆ.

ದಾಖಲೆ ಪತ್ರಗಳಿಗೆ ಫೋರ್ಜರಿ ಸಹಿ‌ ಹಾಕಿ, ಅದಕ್ಕೆ ನಕಲಿ ಸೀಲ್ ಗಳನ್ನು ಹಾಕಲಾಗುತ್ತಿತ್ತು. ಸಾರ್ವಜನಿಕ ದೂರಿನ‌ ಮೇರೆಗೆ ತಾಪಂ ಇಓ ನವೀನ್ ಭಂಡಾರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲಿಸಿದಾಗ ವಂಚನೆ ಜಾಲ ಬೆಳಕಿಗೆ ಬಂದಿದೆ.

ಸುಪ್ರೀಂ ಕೋರ್ಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿ

Posted by Vidyamaana on 2023-09-26 09:59:36 |

Share: | | | | |


ಸುಪ್ರೀಂ ಕೋರ್ಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿ

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನು ದಾಖಲು ಮಾಡಲಾಗಿದೆ.ಹೌದು ಭಾರತದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರಿದ್ದ ನ್ಯಾಯಪೀಠವು ವರ್ಚುವಲ್ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ಮೂಕ ವಕೀಲೆ ತಮ್ಮ ವ್ಯಾಖ್ಯಾನಕಾರ ಸೌರಭ್ ರಾಯ್ ಚೌಧರಿ ಮೂಲಕ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮುಂದೆ ಮಂಡಿಸಿದ್ದಾರೆ.ಸಾರಾ ಅವರ ಸಂಕೇತ ಭಾಷೆಯನ್ನು ಸೌರಭ್ ಅವರು ಬಾಯಿ ಮಾತಿನಲ್ಲಿ ಹೇಳುವ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ತಿಳಿಸಿಕೊಟ್ಟಿದ್ದಾರೆ. ಈ ಪ್ರಯತ್ನವನ್ನು ಅನೇಕ ಗಣ್ಯರು, ಹಿರಿಯ ವಕೀಲರು ಶ್ಲಾಘಿಸಿದ್ದಾರೆ.


ನಡೆದಿದ್ದೇನು.?


ಅರ್ಜಿಯೊಂದರ ವಿಚಾರಣೆಯ ಆರಂಭದ ವೇಳೆ ವರ್ಚುವಲ್ ವಿಚಾರಣೆಯ ತಾಂತ್ರಿಕ ತಂಡವು ಸಾರಾಗೆ ಸ್ಕ್ರೀನ್ ಮೇಲೆ ಬರಲು ಅನುತಿ ನೀಡದೇ ಕೇವಲ ವ್ಯಾಖ್ಯಾನಕಾರ ಸೌರಭ್ ಗೆ ಅನುಮತಿ ನೀಡಿತು. ಹೀಗಾಗಿ ಮೊದಲಿಗೆ ಸ್ಕ್ರೀನ್ ನಲ್ಲಿ ಸೌರಭ್ ಮಾತ್ರ ಕಾಣಿಸಿಕೊಂಡು ಸಾರಾ ತರೆಯ ಹಿಂದೆ ಸಂಜ್ಞೆಯ ಮೂಲಕ ಹೇಳುತ್ತಿದ್ದ ವಿವರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಯಿ ಮಾತಿನ ಮೂಲಕ ತಿಳಿಸಿದರು.ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರು, ವಕೀಲೆ ಸಾರಾ ಅವರಿಗೂ ಸ್ಕ್ರೀನ್ ಮೇಲೆ ಅವಕಾಶ ನೀಡಿ ಅಂತ ಆದೇಶಿಸಿದರು. ಆಗ ಸಾರಾ ಅವರು ಒಂದು ಸ್ಕ್ರೀನ್ ನಲ್ಲಿ ತಮ್ಮ ಸಂಜ್ಞೆ ವಾದವನ್ನು ಮಂಡಿಸಿದರು. ಅವರ ವ್ಯಾಖ್ಯಾನಕಾರ ಸೌರಭ್, ಅವರ ಸಂಜ್ಞೆಗಳನ್ನು ಬಾಯಿ ಮಾತಿನಲ್ಲಿ ನ್ಯಾಯಪೀಠದ ಗಮಕ್ಕೆ ತಿಳಿಸಿದರು.


ನ್ಯಾಯಮೂರ್ತಿ ಚಂದ್ರ ಚೂಡ ಅವರು ಮೊದಲಿನಿಂದಲೂ ನ್ಯಾಯಕ್ಕೆ ಸಮಾನ ನ್ಯಾಯದಾನ ಪ್ರತೀಕರಾಗಿದ್ದಾರೆ. ಇಬ್ಬರು ಅಂಗವಿಕಲ ಬಾಲಕಿಯರ ದತ್ತು ತಂದೆಯೂ ಹೌದು. ವರ್ಷಾರಂಭದಲ್ಲಿ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ್ನು ತಮ್ಮ ಕಚೇರಿಗೆ ಪ್ರವಾಸಕ್ಕೆಂದು ಕರೆತಂದು ಎಲ್ಲರನ್ನು ಚಕಿತಗೊಳಿಸಿದ್ದರು.


ನ್ಯಾಯಾಲಯವು ಹೇಗೆ ಕೆಲಸ ಮಾಡುತ್ತದೆ. ಅಲ್ಲಿ ತಮ್ಮ ಕೆಲಸ ಏನು ಎಂಬುದನ್ನು ಅವರು ತಮ್ಮ ಹೆಣ್ಣುಮಕ್ಕಳಿಗೆ ವಿವರಿಸಿದ್ದರು. ಇಂತಹ ಅವರು ದೇಶದ ಇತಿಹಾಸದಲ್ಲಿಇದೇ ಮೊದಲು ಎನ್ನುವಂತೆ ಮೂಕ ವಕೀಲೆಯೊಬ್ಬರಿಗೆ ವಾದ ಮಂಡಿಸೋದಕ್ಕೆ ಅವಕಾಶ ಮಾಡಿಕೊಟ್ಟು, ಹೊಸ ಇತಿಹಾಸವನ್ನು ಇದೀಗ ಬರೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ಸುಳ್ಯದ ತಾಯಿ, ಮಗಳು ಉತ್ತೀರ್ಣ

Posted by Vidyamaana on 2023-04-21 11:26:30 |

Share: | | | | |


ದ್ವಿತೀಯ ಪಿಯುಸಿ ಫಲಿತಾಂಶ: ಸುಳ್ಯದ ತಾಯಿ, ಮಗಳು ಉತ್ತೀರ್ಣ

ಸುಳ್ಯ: ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ.

ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು.

ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಉತ್ತೀರ್ಣರಾಗಿದ್ದಾರೆ.

ಮಗಳು ತೃಷಾ ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. 25 ವರ್ಷದ ಹಿಂದೆ ಗೀತಾ ಅವರ ಹೈಸ್ಕೂಲ್ ವಿದ್ಯಾಭ್ಯಾಸ ಮೊಟಕುಗೊಂಡಿತ್ತು. ಎರಡು ವರ್ಷಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಗೊಂಡಿದ್ದರು. ಈ ವರ್ಷ ಪಿಯುಸಿ ಪರೀಕ್ಷೆಯನ್ನು ಸುಳ್ಯದ ಗಾಂಧಿನಗರ ಕಾಲೇಜಿನಲ್ಲಿ ಪರೀಕ್ಷೆ ಕಟ್ಟಿ, ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು.

ಗೃಹ ರಕ್ಷಕ ದಳದ ಸಿಬ್ಬಂದಿಯಾಗಿರುವ ಇವರು ಕರ್ತವ್ಯ, ಮನೆಗೆಲಸದ ಬಿಡುವಿನ ವೇಳೆ ಅಭ್ಯಾಸ ನಡೆಸಿದ್ದಾರೆ. ಅಲ್ಲದೆ ಇವರ ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರೂ ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ. ಅವರಿಗೆ ಗೀತಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ.

ಅಕ್ಷಯ ಕಾಲೇಜಿನಲ್ಲಿ ವೈವಿಧ್ಯಮಯ ಓಣಂ ಶ್ರಾವಣೋತ್ಸವ ಹಬ್ಬ ಆಚರಣೆ

Posted by Vidyamaana on 2023-08-31 10:28:45 |

Share: | | | | |


ಅಕ್ಷಯ ಕಾಲೇಜಿನಲ್ಲಿ ವೈವಿಧ್ಯಮಯ ಓಣಂ ಶ್ರಾವಣೋತ್ಸವ ಹಬ್ಬ ಆಚರಣೆ


ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ.30 ರಂದು IQAC ಮತ್ತು ಸಾಂಸ್ಕೃತಿಕ ಸಂಘದ ಜಂಟಿ ಆಶ್ರಯದಲ್ಲಿ ಓಣಂ ‘ಶ್ರಾವಣೋತ್ಸವ’ ಹಬ್ಬವನ್ನು ಆಚರಿಸಲಾಯಿತು.  ಕಾರ್ಯಕ್ರಮವನ್ನು ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷ  ಗೋಕುಲ್‌ನಾಥ್ ದೀಪಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಬಳಿಕ  ಮಾತನಾಡಿ ಎಲ್ಲಾ ಹಬ್ಬಗಳನ್ನು ಆಚರಿಸುವ ಮೂಲಕ ವಿದ್ಯಾಸಂಸ್ಥೆಯಲ್ಲಿ ಆಚರಿಸಿ ಸೌಹಾರ್ಧತೆಯ ಸಂದೇಶವನ್ನು ಸಾರಬಹುದು. ವೃತ್ತಿಪರ ಕೋರ್ಸ್‌ಗಳ ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆಶಾಕಿರಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಜಯಕುಮಾರ್ ಆರ್ ನಾಯಕ್, ಕಾಲೇಜಿನ ಆಡಳಿತ ನಿದೇಶಕಿ ಕಲಾವತಿ ನಡುಬೈಲು, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರಕೃತಿ ಪ್ರಾರ್ಥಿಸಿ, ಉಪನ್ಯಾಸಕಿ ರಶ್ಮಿ ಕೆ ಇವರು ಸ್ವಾಗತಿಸಿ, ಉಪನ್ಯಾಸಕರಾದ ರೋಶನ್ ಅಂಟೋನಿ ವಂದಿಸಿದರು. ಉಪನ್ಯಾಸಕ ರಾಕೇಶ್ ಕುಲದಪಾರೆ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಮೆರಗು:

ಕೇರಳದ ವಿವಿಧ ಬಗೆಯ ನೃತ್ಯ ರೂಪಕಗಳು ವಿದ್ಯಾರ್ಥಿಗಳಿಂದ ಮೂಡಿಬಂದವು.

ಕಾರ್ಯಕ್ರಮದ ನಂತರ ಕೇರಳದ ಓಣಂ ‘ಸದ್ಯ’ ಏರ್ಪಡಿಸಿದ್ದು, ಎಲ್ಲಾ ವಿದ್ಯಾರ್ಥಿಗಳು, ನೆಲದಲ್ಲಿ ಕುಳಿದು ಬಾಳೆಯಲ್ಲಿ ಓಣಂ ‘ಸದ್ಯವನ್ನು ಸವಿದರು. 

ಕಲಾರೂಪದೊಂದಿಗೆ ಆಕರ್ಷಣೀಯ ಮೆರವಣಿಗೆ:

ಅಕ್ಷಯ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಅಕ್ಷಯ ಕಾಲೇಜಿನಿಂದ ಸಂಪ್ಯ ಪೊಲೀಸ್ ಸ್ಟೇಷನ್‌ವರೆಗೆ ಕೇರಳ ಶೈಲಿಯ ಉಡುಗೆಯಲ್ಲಿ ಚೆಂಡೆ- ಸಿಂಗಾರಿ ಮೇಳದೊಂದಿಗೆ ವೈಭವೇತವಾಗಿ ಮೆರವಣಿಗೆ ನಡೆಯಿತು.

ವಾಮನ ಮತ್ತು ಮಹಾಬಲಿ ಚಕ್ರವರ್ತಿ, ಮೋಹಿಣಿಯಾಟ್ಟಂ ಮೊದಲಾದ ಕಲಾರೂಪದೊಂದಿಗೆ ಆಕರ್ಷಣೀಯ ಮೆರವಣಿಗೆ ನಡೆಯಿತು.

ಆಶೀರ್ವಾದ ತಂದಿದೆ ತುಳುನಾಡಿನ ಮನೆ ಮನೆಗೆ ಸಂತಸದ ಸುದ್ದಿ!

Posted by Vidyamaana on 2024-02-08 16:48:29 |

Share: | | | | |


ಆಶೀರ್ವಾದ ತಂದಿದೆ ತುಳುನಾಡಿನ ಮನೆ ಮನೆಗೆ ಸಂತಸದ ಸುದ್ದಿ!

ಪುತ್ತೂರು: ಸ್ವಂತ ಮನೆ ಹೊಂದುವ ನಿಮ್ಮ ಕನಸನ್ನು ನನಸು ಮಾಡುವ ಆಶೀರ್ವಾದ ಲಕ್ಕಿ ಸ್ಕೀಂನ ಮೊದಲ ಕಂತಿನ ಡ್ರಾ ಇಂದು (ಗುರುವಾರ) ಸಂಜೆ ನಡೆಯಲಿದೆ.

ವಿದ್ಯಮಾನ ಈ ಡ್ರಾ ಫಲಿತಾಂಶದ ನೇರ ಪ್ರಸಾರ ನಡೆಸಿಕೊಡಲಿದೆ.


ಹೌದು,ಸ್ವಂತ ಮನೆ, ಕಾರು ,ಎಲೆಕ್ಟ್ರಾನಿಕ್ಸ್ ವಸ್ತುಗಳು ಇದೆಲ್ಲವನ್ನೂ  ಅತೀ ಕಡಿಮೆ  ಕಂತಿನಲ್ಲಿ ಪಡೆಯುವ ಆಶೀರ್ವಾದ ಲಕ್ಕಿ ಸ್ಕೀಂ,ಕೈಗೆಟುಕುವ ಕಂತಿನಲ್ಲಿ ಪ್ರತಿ ತಿಂಗಳು ಮನೆಗೆ ಬೇಕಾಗುವ ವಸ್ತುಗಳನ್ನು ಗೆಲ್ತಾ ಇರಿ, ಇನ್ನು

ವಿಜೇತರಲ್ಲದವರು ತಲೆಗೆ ಕೈ ಹೊತ್ತು ಕುಳಿತುಕೊಳ್ಳುವ ಮಾತೇ ಇಲ್ಲ,ಯಾಕೆಂದರೆ , ಪ್ರತೀ ಸದಸ್ಯರಿಗೂ ಖಚಿತ ಉಡುಗೊರೆಯಾಗಿ, ಇನ್ವರ್ಟರು,ಸೋಫಾ ಸೆಟ್,ಟಿವಿ,ಫ್ರಿಡ್ಜ್, ವಾಷಿಂಗ್ ಮೆಷಿನ್ ಇನ್ನೂ ಅನೇಕ ಬಹುಮಾನಗಳು ಖಂಡಿತ..

ಇಷ್ಟು ಮಾತ್ರವಲ್ಲ,ಪ್ರತೀ ತಿಂಗಳು 50 ಸರ್ಪ್ರೈಸ್ ಚಿನ್ನದ ನಾಣ್ಯಗಳನ್ನು 50 ಸದಸ್ಯರಿಗೆ ನೀಡಲಾಗುತ್ತದೆ.


ಇದೀಗ ಆಶೀರ್ವಾದ 1,500 ಕ್ಕಿಂತಲೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿದ್ದು ಪ್ರತಿಯೊಬ್ಬ ಗ್ರಾಹಕರಿಗೂ 24/7 ಗ್ರಾಹಕ ಸೇವೆಯನ್ನು ಕೂಡ ಒದಗಿಸುತ್ತಾ ಬಂದಿದೆ.

ನಿಮ್ಮ ತಿಂಗಳ ದುಡಿಮೆಯ ಕೇವಲ ಒಂದು ಸಾವಿರ ರೂ ಹೂಡಿಕೆ ಮಾಡಿ ತಿಂಗಳ ಪ್ರತಿ ಡ್ರಾ ವಿಜೇತರಾಗಿ ಹಾಗೂ ಕನಸಿನ ಮನೆಯನ್ನು ಜೊತೆಗೆ ಎಲ್ಲಾ ಬಹುಮಾನಗಳನ್ನು ಗೆಲ್ಲಿ....ಹಾಗಾದರೆ ಇನ್ಯಾಕೆ ತಡ,ಒಂದು ಕೈ ನೋಡೇ ಬಿಡೋಣ ,ಏನಂತೀರಿ.....


ಹೆಚ್ಚಿನ ಮಾಹಿತಿಗಾಗಿ ಪುತ್ತೂರಿನಲ್ಲಿರುವ ಆಶೀರ್ವಾದ ಸಂಸ್ಥೆಗೆ ಭೇಟಿ ನೀಡಿ ಮತ್ತು ಮಾಹಿತಿಗಳನ್ನು ತಿಳಿದುಕೊಳ್ಳಿ


7022645143

7022646143


*⚡ಜೈ ತುಳುನಾಡ್ ❤️⚡*

*🚩ಮಾತ ತುಳುವಪ್ಪೆನ ಜೋಕುಳೆಗ್ ಉಡಲ್ ದಿಂಜಿ ಸೋಲ್ಮೇಲು*


*🙏🏻ಆತ್ಮೀಯರೇ,ಗೌರವ ಸೂಚಕವಾಗಿ ಮೊದಲ ಪತ್ರವನ್ನು ನಿಮ್ಮ ಮಡಿಲಿಗೆ ಅರ್ಪಿಸಿದ್ದೇನೆ ❤️*


*⚡ತುಳುನಾಡಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮನೆ ಮಾತಾಗಿರುವ ಆಶೀರ್ವಾದ⚡*


⚡ಕೊನೆಯ *3 ಬಂಪರ್ ಡ್ರಾ ಗಳಲ್ಲಿ 2bhkಯ 3 ಮನೆಗಳನ್ನು* ಗೆಲ್ಲುವ ಸುವರ್ಣಾವಕಾಶ...

⚡ಕನಸಿನ ಕಾರು *ಮಹೀಂದ್ರ ಥಾರ್ ಗೆಲ್ಲಿ...*

⚡ಚಿನ್ನದ *ನೆಕ್ಲೆಸ್* ನಿಮ್ಮದಾಗಿಸಿಕೊಳ್ಳಿ

⚡ಹಿಮಾಲಯನ್ ಬೈಕ್ ಮತ್ತು ಡಾಮಿನಾರ್ ಕೂಡ ನಿಮ್ಮದಾಗಿಸಿ


🤩 ಪ್ರತೀ ಸದಸ್ಯರಿಗೂ ಕೊನೆಯ ಖಚಿತ ಉಡುಗೊರೆಯಾಗಿ, *ಇನ್ವರ್ಟರು,ಸೋಫಾ ಸೆಟ್,ಟಿವಿ,ಫ್ರಿಡ್ಜ್, ವಾಷಿಂಗ್ ಮೆಷಿನ್* ಇನ್ನೂ ಅನೇಕ ಬಹುಮಾನಗಳು ಖಂಡಿತ..


📢ಇಷ್ಟು ಮಾತ್ರವಲ್ಲ,ಪ್ರತೀ ತಿಂಗಳು 50 ಸರ್ಪ್ರೈಸ್ ಚಿನ್ನದ ನಾಣ್ಯಗಳನ್ನು 50 ಸದಸ್ಯರಿಗೆ ನೀಡಲಾಗುತ್ತದೆ.


*📡ಫೆಬ್ರವರಿ 15 ಕ್ಕೆ ಮೊದಲ ಡ್ರಾ ,ನಿಮ್ಮ ಸ್ಥಳೀಯ ನ್ಯೂಸ್ ಚಾನೆಲ್ ನಲ್ಲಿ ನೇರ ಪ್ರಸಾರ ಇರುತ್ತದೆ📡*


*📍ನಮ್ಮ ಸಂಪೂರ್ಣ ವಿಳಾಸ ಇಲ್ಲಿದೆ,*

Opposite Shubha book store,1st floor,moideen complex Darbe,PUTTUR,D.K

574202


*ಹೆಸರು ಮತ್ತು ವಿಳಾಸ ಇಂದೇ ನೀಡಿ,*

*ನಿಮ್ಮ ಒಳ್ಳೆಯತನಕ್ಕೆ ಅದೃಷ್ಟ,* *ಇಂದಲ್ಲಾ ನಾಳೆ ಬಂದೇ ಬರುತ್ತದೆ....ಅದು ಖಂಡಿತ...*

💥ಆಶೀರ್ವಾದ ವಾಟ್ಸಪ್ ಗ್ರೂಪ್ ಸೇರಲು ಕ್ಲಿಕ್ ಮಾಡಿ 

https://chat.whatsapp.com/EQZfSXbJ3Z2CjEcoHGk8ax

ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

Posted by Vidyamaana on 2024-04-10 11:38:40 |

Share: | | | | |


ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

ಪುತ್ತೂರು, ಎ.9: ನಿಮ್ಮೆಲ್ಲರ ಕೈ ಕೊಯ್ದರೆ ರಕ್ತ ಕೆಂಪಿನದ್ದಿಲ್ಲ, ಕೇಸರಿ ಇರೋದು ಅಂತ ಗೊತ್ತಿದೆ. ನಿಮ್ಮವರಿಗೆ ಬಿಜೆಪಿ ಬಗ್ಗೆ, ಹಿಂದುತ್ವದ ಬಗ್ಗೆ ಪಾಠ ಹೇಳಲು ಬಂದಿಲ್ಲ. ಆದರೆ ನಾಡಿದ್ದು ಎಪ್ರಿಲ್ 26ರಂದು ಮದುವೆ ಇದೆ, ಮೋದಿ ಹೇಗೂ ಗೆಲ್ಲುತ್ತಾರೆಂದು ನಿರ್ಲಕ್ಷ್ಯ ಮಾಡಬೇಡಿ. ಮೋದಿಯವರು ಈ ದೇಶದ ಮಹಿಳೆಯರಿಗೆ ಶಕ್ತಿ ಕೊಟ್ಟಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಎಷ್ಟೆಲ್ಲಾ ಯೋಜನೆ ಮಾಡಿದ್ದಾರೆ. ಅದಕ್ಕಾಗಿ ನಾವು ಹಿಂತಿರುಗಿ ಕೊಡೋದು, ಒಂದು ಮತವಷ್ಟೇ. ಅದನ್ನು ತಪ್ಪದೆ ಮಾಡಬೇಕು ಎಂದು ಬಿಜೆಪಿ ನಾಯಕಿ, ಚಿತ್ರನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ಪುತ್ತೂರಿನಲ್ಲಿ ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ನಮಗೆ ಮೋದಿ ಗೆಲ್ಲುವ ಬಗ್ಗೆ ಸಂಶಯ ಇಲ್ಲ. ಇಲ್ಲಿ ಬೃಜೇಶ್ ಗೆಲ್ಲುವುದರಲ್ಲೂ ಸಂಶಯ ಇಲ್ಲ. ಗೆಲ್ಲೋದು ಖಚಿತ. ಆದರೆ ಇಲ್ಲಿ ಎಷ್ಟು ಅಂತರದಿಂದ ಗೆಲ್ಲಿಸಿ ಕಳಿಸುತ್ತೇವೆ ಅನ್ನುವುದು ಮುಖ್ಯ. ಮೂರು ಲಕ್ಷನಾ, ನಾಲ್ಕು ಲಕ್ಷನಾ ಎಂದು ನಾವು ಈಗಲೇ ಸಂಕಲ್ಪ ಮಾಡಬೇಕು. ನಿಮಗೆಲ್ಲ ಗೊತ್ತಿದೆ, ಪರೀಕ್ಷೆಯಲ್ಲಿ ರಿವಿಶನ್ ಮಾಡೋದಕ್ಕಷ್ಟೇ ನಾನು ಬಂದಿದ್ದೇನೆ ಎಂದರು.



Leave a Comment: