ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಫೋನ್ ಪೇ ಸ್ಕ್ಯಾನರ್ ಪ್ರಭಾವ ಎಷ್ಟಿದೆ ನೋಡಿ, ಇವರು ಡಿಜಿಟಲ್ ಭಿಕ್ಷುಕ

Posted by Vidyamaana on 2024-02-07 16:28:37 |

Share: | | | | |


ಫೋನ್ ಪೇ ಸ್ಕ್ಯಾನರ್ ಪ್ರಭಾವ ಎಷ್ಟಿದೆ ನೋಡಿ, ಇವರು ಡಿಜಿಟಲ್ ಭಿಕ್ಷುಕ

     ಹೆಚ್ಚಾಗಿ ದೇವಸ್ಥಾನಗಳ ಬಳಿ, ರೈಲ್ವೇ ಸ್ಟೇಷನ್, ಬಸ್ ನಿಲ್ದಾಣಗಳ ಬಳಿ ಅದೇ ಕೊಳೆಯಾದ ಹರಕಲು ಬಟ್ಟೆಗಳನ್ನು ಧರಿಸಿ ಭಿಕ್ಷುಕರು ಭಿಕ್ಷೆ ಬೇಡುತ್ತಾ ಅಲ್ಲೇ ಬೀದಿ ಬೀದಿ ಸುತ್ತುತ್ತಿರುತ್ತಾರೆ. ಇವರ ಈ ಅಸಹಾಯಕ ಸ್ಥಿತಿಯನ್ನು ಕಂಡು ಒಂದು ಹೊತ್ತಿನ ಊಟವಾದರೂ ಮಾಡಲಿ ಎಂದು ಕೆಲವೊಬ್ಬರು ಒಂದಷ್ಟು ಚಿಲ್ಲರೆ ಹಣವನ್ನು ಭಿಕ್ಷುಕರಿಗೆ ನೀಡುತ್ತಾರೆ.ಇನ್ನೂ ಕೆಲವರು ನನ್ನ ಬಳಿ ಚಿಲ್ಲರೆ ಹಣವಿಲ್ಲವೆಂದು ಹಣವನ್ನು ನೀಡದೆಯೇ ಹೋಗಿ ಬಿಡುತ್ತಾರೆ. ಅದಕ್ಕಾಗಿಯೇ ಈ ಚಿಲ್ಲರೆ ಹಣದ ಸಮಸ್ಯೆಯೇ ಬೇಡವೆಂದು ಇಲ್ಲೊಬ್ಬ ಮಾಡ್ರನ್ ಭಿಕ್ಷುಕ ಫೋನ್ ಪೇ ಸ್ಕ್ಯಾನರ್ ಹಿಡಿದು ಭಿಕ್ಷೆ ಬೇಡಲು ನಿಂತಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನಮ್ಮ ದೇಶವು ನಿಜವಾಗಿಯೂ ಡಿಜಿಟಲ್ ಆಗುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ದೇವಸ್ಥಾನಗಳ ಬಳಿ, ರೈಲ್ವೇ ಸ್ಟೇಷನ್, ಬಸ್ ನಿಲ್ದಾಣಗಳ ಬಳಿ ಅದೇ ಕೊಳೆಯಾದ ಹರಕಲು ಬಟ್ಟೆಗಳನ್ನು ಧರಿಸಿ ಒಂದಷ್ಟು ಭಿಕ್ಷುಕರು ಬಿಕ್ಷೆ ಬೇಡುತ್ತಿರುತ್ತಾರೆ. ಅದರಲ್ಲಿ ಬಹುತೇಕರು ಒಂದು ಸ್ಥಳದಲ್ಲಿ ಸುಮ್ಮನೆ ಕುಳಿತು ಭಿಕ್ಷೆ ಬೇಡುತ್ತಿದ್ದರೆ, ಇನ್ನೂ ಕೆಲವು ಭಿಕ್ಷುಕರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡು ಊಟಕ್ಕೆ ದುಡ್ಡುಕೊಡಿ ಅಂತ ಬೀದಿ ಬೀದಿ ಅಲೆಯುತ್ತಾ ಭಿಕ್ಷೆ ಬೇಡುತ್ತಿರುತ್ತಾರೆ. ಮತ್ತೆ ಕೆಲವು ಭಿಕ್ಷುಕರು ಮಗುವನ್ನು ಕಂಕುಳ ಜೋಳಿಗೆಯಲ್ಲಿ ಹಾಕಿಕೊಂಡು ಹಾಡುಗಳನ್ನು ಹಾಡುತ್ತಾ ಭಿಕ್ಷೆ ಬೇಡುತ್ತಿರುತ್ತಾರೆ. ಇವರ ಅಸಹಾಯಕತೆಯನ್ನು ನೋಡಲಾರದೆ ಕೆಲವೊಬ್ಬರು ಚಿಲ್ಲರೆ ಹಣವನ್ನು ಭಿಕ್ಷುಕರಿಗೆ ನೀಡುತ್ತಾರೆ. ಇನ್ನೂ ಕೆಲವರು ನನ್ನ ಬಳಿ ಚಿಲ್ಲರೆ ಹಣವಿಲ್ಲ ಅಂತ ಹೇಳಿ ಹಣ ಕೊಡದೆಯೇ ಹೊರಟು ಹೋಗುತ್ತಾರೆ. ಈ ಚಿಲ್ಲರೆ ಹಣದ ಸಮಸ್ಯೆಯೇ ಬೇಡವೆಂದು ಇಲ್ಲೊಬ್ಬ ಭಿಕ್ಷುಕ ಫೋನ್ ಪೇ ಸ್ಕ್ಯಾನರ್ ಹಿಡಿದು ಭಿಕ್ಷೆ ಬೇಡಲು ನಿಂತಿದ್ದಾನೆ. ಈ ಫೋಟೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಭಾರತ ನಿಜವಾಗಿಯೂ ಡಿಜಿಟಲ್ ಆಗುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.


ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಹಲವು ವಿಷಯಗಳು ವೈರಲ್ ಆಗುತ್ತಿರುತ್ತವೆ, ಅದೇ ರೀತಿ ಇದೀಗ ಡಿಜಿಲಟ್ ಭಿಕ್ಷುಕನ ಫೋಟೊ ವೈರಲ್ ಆಗಿದೆ. ಈ ವೈರಲ್ ಪೋಸ್ಟ್ ಅನ್ನು ಸರ್ದಾರ್ ಲಕ್ಕಿ ಸಿಂಗ್ (@luckyschawla) ಎಂಬವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ಫೋಟೋದಲ್ಲಿ ಯಾವುದೋ ನಗರದ ಜನ ನಿಬಿಡ ಪ್ರದೇಶದಲ್ಲಿ ಭಿಕ್ಷುಕನೊಬ್ಬ ಭಿಕ್ಷೆ ಬೇಡುತ್ತಾ ನಿಂತಿರುವುದನ್ನು ಕಾಣಬಹುದು. ಆತ ಒಂದು ಕೈಯನ್ನು ಚಾಚಿ ಭಿಕ್ಷೆ ಹಾಕಿ ಅಂತ ಕೇಳುತ್ತಿದ್ದರೆ, ಇನ್ನೊಂದು ಕೈಯಲ್ಲಿ ಫೋನ್ ಪೇ ಸ್ಕ್ಯಾನರ್ ಹಿಡಿದು ನಿಂತಿರುವುದನ್ನು ಕಾಣಬಹುದು. ಈ ಪೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನಾವು ಎಂತೆಂತಹ ಭಿಕ್ಷುಕರನ್ನು ನೋಡಿದ್ದೇವೆ ಆದ್ರೆ ಈ ಡಿಜಿಟಲ್ ಭಿಕ್ಷುಕನನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಹಲವರು ಹೇಳಿದ್ದಾರೆ.ಫೆಬ್ರವರಿ 06 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 11 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವನ್ಯಾರಪ್ಪಾ ಡಿಜಿಟಲ್ ಭಿಕ್ಷುಕʼ ಅಂತ ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಡಿಜಿಟಲ್ ಇಂಡಿಯಾʼ ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼದೇಶದ ಜನರಿಗೆ ಉಚಿತ ರೇಷನ್ ಲಭ್ಯವಿರುವಾಗ ಇತನಿಗೆ ಭಿಕ್ಷೆ ಬೇಡುವ ಅವಶ್ಯಕತೆ ಏನಿದೆʼ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಅನೇಕರು ಈ ಡಿಜಿಟಲ್ ಭಿಕ್ಷುಕನನ್ನು ಕಂಡು ಫುಲ್ ಶಾಕ್ ಆಗಿದ್ದಾರೆ.


ಮುಗಿಯದ ಜಂಗಿಕುಸ್ತಿ; ರಾಷ್ಟ್ರೀಯ ಕುಸ್ತಿ ಫೆಡರೇಶನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ

Posted by Vidyamaana on 2023-12-24 14:51:32 |

Share: | | | | |


ಮುಗಿಯದ ಜಂಗಿಕುಸ್ತಿ; ರಾಷ್ಟ್ರೀಯ ಕುಸ್ತಿ ಫೆಡರೇಶನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ

ಹೊಸದಿಲ್ಲಿ: ರಾಷ್ಟ್ರೀಯ ಕುಸ್ತಿ ಫೆಡರೇಶನ್ ನ ಜಂಗಿ ಕುಸ್ತಿ ಮುಂದುವರಿದಿದೆ. ಇತ್ತೀಚೆಗಷ್ಟೇ ಚುನಾವಣೆ ನಡೆದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಗೆಲುವು ಸಾಧಿಸಿದ್ದರು. ಇದರ ಬೆನ್ನಲ್ಲೇ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ಮಾಡಿದ್ದ ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದರು. ಇದೀಗ ಕೇಂದ್ರ ಕ್ರೀಡಾ ಸಚಿವಾಲಯವು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ.ಸಂಜಯ್ ಸಿಂಗ್ ನೇತೃತ್ವದ ಹೊಸ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಕುಸ್ತಿ ಫೆಡರೇಶನ್ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ಭಾನುವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ.


ಕ್ರೀಡಾ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ, ರಾಷ್ಟ್ರೀಯ ಸ್ಪರ್ಧೆಗಳ ಪ್ರಕಟಣೆಯು ತರಾತುರಿಯಲ್ಲಿತ್ತು ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ ಎಂದು ಹೇಳಿದೆ.ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತ

Posted by Vidyamaana on 2024-03-13 07:28:48 |

Share: | | | | |


ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತ

ಮೈಸೂರು, ಮಾ 13: ಯದುವೀರ್  ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.


ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ:


ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.


ಮುಖಂಡರಿಗೆ ಸಿಂಹ ಧನ್ಯವಾದ:


ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು.


ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ನನ್ನಷ್ಟು ಹಿಂದೂತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದೂತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಯಾರು ಆಗಲ್ಲ ಎಂದರು.


ಬ್ಯಾನರ್, ಬಂಟಿಂಗ್ ಕಟ್ಟಲೂ ಸಿದ್ಧ:


ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ?. ಮೈಸೂರು – ಕೊಡಗು ಅಭಿವೃದ್ಧಿ ಗೆ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ?. ನನಗೆ ಪಕ್ಷ ನಿಷ್ಠೆ ನನಗೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೆ ದುಡಿಯುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

Posted by Vidyamaana on 2024-06-26 20:07:03 |

Share: | | | | |


ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ದೆಹಲಿ ಜೂನ್ 26: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಾಡಿದ ಹೇಳಿಕೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಓವೈಸಿ ಅವರು ಪ್ಯಾಲೆಸ್ತೀನ್‌ನ ಯುದ್ಧ ಪೀಡಿತ ಪ್ರದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ.

ಐದು ಬಾರಿ ಹೈದರಾಬಾದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಓವೈಸಿ ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದರು. ಈ ಘೋಷಣೆಗೆ ಆಕ್ರೋಶ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ, ಓವೈಸಿ ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೂ ಸಂವಿಧಾನದ ಬಗ್ಗೆ ಸ್ವಲ್ಪ ತಿಳಿದಿದೆ, ಈ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ಟ್ವೀಟ್

ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?

Posted by Vidyamaana on 2024-06-26 13:03:34 |

Share: | | | | |


ಡೆಂಘೀ ಕೇಸ್ ಹೆಚ್ಚಳ.. ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣ ಎಷ್ಟು ಗೊತ್ತಾ!?

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 1230 ಪ್ರಕರಣಗಳು ವರದಿಯಾಗಿರೋ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ‌ಅಗತ್ಯ ಚಿಕಿತ್ಸೆ, ಚುಚ್ವು ಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಲೂ ಸೂಚಿಸಿದರು.

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

Posted by Vidyamaana on 2023-09-15 17:18:43 |

Share: | | | | |


ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ - ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಆಡಳಿತಾಧಿಕಾರಿ ಡಿ.ಸಿಗೆ ಮನವಿ

ಪುತ್ತೂರು: ಶಾಸಕ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ ೨ ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ಮನವಿ ಮಾಡಿದ್ದಾರೆ.


ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.೧೫ ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ. ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಅಲ್ಲಿಂದ ತೆರವುಗೊಳಿಸಿ ತಮ್ಮ ಶಾಸಕರ ಕೊಠಡಿಯನ್ನಾಗಿ ತಮ್ಮ ಮೂಲಕ ಪರಿವರ್ತಿಸಿರುತ್ತಾರೆ, ಅಲ್ಲದೆ ಸದ್ರಿ ಕಚೇರಿಯ ನವೀಕರಣಕ್ಕೆ, ಸುಮಾರು 31 ಲಕ್ಷ ರೂಪಾಯಿಗಳನ್ನು ಸಾರ್ವಜನಿಕರ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ನೀಡುವಂತೆ ತಮ್ಮ ಮೂಲಕ ಆದೇಶ ನೀಡಲಾಗಿದೆ. ಈ ರೀತಿ ನಾಗರಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ನಗರಸಭಾ ನಿಧಿಯಿಂದ ಶಾಸಕರ ಐಷಾರಾಮಿ ಕಚೇರಿಯ ಅಭಿವೃದ್ಧಿಗೆ ನೀಡಲು ಚುನಾಯಿತ ಸದಸ್ಯರುಗಳಾದ ನಮ್ಮ ಆಕ್ಷೇಪವಿರುತ್ತದೆ. ಅದಲ್ಲದೇ ಈ ಹಿಂದಿನ ಅವಧಿಯಲ್ಲಿ ಮಂಜೂರಾದ ಅಮೃತ ನಗರೋತ್ಥಾನದ ಕಾಮಗಾರಿಗಳು ಆರಂಭವಾಗಿರುವುದಿಲ್ಲ. ನಗರಸಭೆಯ ಎರಡನೆಯ  ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ತೊಡಕು ಇನ್ನೂ ನಿವಾರಣೆಯಾಗಿರುವುದಿಲ್ಲ. ಆದ್ದರಿಂದ ತಾವು ಈ ಎಲ್ಲಾ ವಿಚಾರಗಳ ಬಗ್ಗೆ ವರಿಶೀಲಿಸಿ ಚುನಾಯಿತ ಸದಸ್ಯರಾದ ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಪಿ ಜಿ ಜಗನ್ನಿವಾಸ ರಾವ್, ಭಾಮಿ ಅಶೋಕ್ ಶೆಣೈ, ಮನೋಹರ್ ಕಲ್ಲಾರೆ, ನವೀನ್ ಪೆರಿತ್ತೋಡಿ, ಪ್ರೇಮ್, ಸಂತೋಷ್ ಬೊಳುವಾರು, ಸುಂದರ ಪೂಜಾರಿ ಬಡಾವು, ಶೀನಪ್ಪ ನಾಯ್ಕ್, ಪದ್ಮನಾಭ ಪಡೀಲ್ , ವಸಂತ ಕಾರೆಕ್ಕಾಡು, ಬಾಲಚಂದ್ರ, ಶಶಿಕಲಾ ಸಿ.ಎಸ್, ಪ್ರೇಮಲತಾ ನಂದಿಲ, ಮೋಹಿನಿ ವಿಶ್ವನಾಥ್, ಮಮತಾ ರಂಜನ್, ಯಶೋದಾ ಹರೀಶ್, ಗೌರಿ ಬನ್ನೂರು, ಲೀಲಾವತಿ, ದೀಕ್ಷಾ ಪೈ, ಇಂದಿರಾ, ರೋಹಿಣಿ ಈ ಸಂದರ್ಭ ಉಪಸ್ಥಿತರಿದ್ದರು.

Recent News


Leave a Comment: