ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪುತ್ತೂರಿನಲ್ಲಿ ಗೃಹಜ್ಯೋತಿಗೆ ಹೆಸರು ನೋಂದಾಯಿಸಿದವರೆಷ್ಟು ಗೊತ್ತೇ?

Posted by Vidyamaana on 2023-07-29 02:59:38 |

Share: | | | | |


ಪುತ್ತೂರಿನಲ್ಲಿ ಗೃಹಜ್ಯೋತಿಗೆ ಹೆಸರು ನೋಂದಾಯಿಸಿದವರೆಷ್ಟು ಗೊತ್ತೇ?

ಪುತ್ತೂರು: ರಾಜ್ಯ ಸರ್ಕಾರದ ಕೊಡುಗೆಯಾಗಿ ಸಿಕ್ಕಿರುವ ಗೃಹಜ್ಯೋತಿ ಯೋಜನೆಗೆ ಪುತ್ತೂರಿನ ಮೆಸ್ಕಾಂ ಉಪವಿಭಾಗದಲ್ಲಿ 28200 ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಮೆಸ್ಕಾಂನ ಪುತ್ತೂರು ಉಪವಿಭಾಗದಲ್ಲಿ ಯೋಜನೆಗೆ ಒಳಪಡುವ 37000 ಮಂದಿ ಮನೆ ಬಳಕೆದಾರರಿದ್ದಾರೆ. ಇದರಲ್ಲಿ 28200 ಮಂದಿ ತಮ್ಮ ಹೆಸರನ್ನು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಅಂದರೆ ಇನ್ನೂ ಕೂಡ 8800 ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಬಾಕಿ ಉಳಿದಿದ್ದಾರೆ ಎಂದಾಯಿತು. ಇವರು ಇನ್ನೂ ಕೂಡ ನೋಂದಣಿ ಮಾಡಿಸಿಕೊಳ್ಳಬಹುದು.

ಗೃಹಜ್ಯೋತಿಗೆ ಹೆಸರು ನೋಂದಾಯಿಸಲು ಜುಲೈ 26 ಕೊನೆ ದಿನವಾಗಿತ್ತು. ಅದರಂತೆ ಜುಲೈ 26ರೊಳಗೆ ಇಷ್ಟು ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳುವವರಿಗೆ ಆಗಸ್ಟ್ ತಿಂಗಳ ಉಚಿತ ವಿದ್ಯುತ್ ಸಿಗುವುದಿಲ್ಲ. ಮುಂದಿನ ತಿಂಗಳ ಉಚಿತ ವಿದ್ಯುತಿನ ಫಲಾನುಭವಿಗಳು ಅವರಾಗಲಿದ್ದಾರೆ.

ಸುಮಾರು 1 ಸಾವಿರದಷ್ಟು ಬಳಕೆದಾರರು ತಿಂಗಳಿಗೆ 200 ಯೂನಿಟ್’ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವುದರಿಂದ, ಅವರು ಯೋಜನೆಯ ಒಳಗಡೆ ಬರುವುದಿಲ್ಲ.

200 ಯೂನಿಟ್ ಬಳಕೆಯ ಗುಟ್ಟು:

ರಾಜ್ಯ ಸರ್ಕಾರ ಘೋಷಿಸಿದಂತೆ 200 ಯೂನಿಟ್ ಬಳಕೆವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಆದರೆ ಇಲ್ಲಿಯೂ ಕೆಲ ಗೊಂದಲಗಳು ಸೃಷ್ಟಿಯಾಗಿತ್ತು. ಅದಕ್ಕೆ ಪರಿಹಾರವನ್ನು ಮೆಸ್ಕಾಂ ಎಇಇ ರಾಮಚಂದ್ರ ಅವರು ನೀಡಿದ್ದಾರೆ.

ತಿಂಗಳಲ್ಲಿ ಸರಾಸರಿ ಬಳಕೆ ಮಾಡುವ ಯೂನಿಟಿಗಿಂತ ಶೇ. 10ರಷ್ಟು ಹೆಚ್ಚು ಯೂನಿಟ್ ಅನ್ನು ಗ್ರಾಹಕರು ಬಳಕೆ ಮಾಡಬಹುದು. ಅಲ್ಲಿವರೆಗೆ ಪೂರ್ಣ ಉಚಿತ. ನಂತರದ ಯೂನಿಟ್’ಗಳಿಗಷ್ಟೇ ಶುಲ್ಕ ಪಾವತಿಸಿದರಾಯಿತು. ಅಂದರೆ 120 ಯೂನಿಟ್ ಸರಾಸರಿ ಬಳಕೆದಾರರು ನೀವಾಗಿದ್ದರೆ, ಇದರ ಮೇಲೆ ಶೇ. 10 ಯೂನಿಟ್’ವರೆಗೂ ಪೂರ್ಣ ಉಚಿತ. ನಂತರದ ಯೂನಿಟ್’ಗಳಷ್ಟೇ ಲೆಕ್ಕಕ್ಕೆ ಸೇರುತ್ತದೆ. ಅವಷ್ಟನ್ನು ಪಾವತಿಸಿದರಾಯಿತು.

ಒಂದು ವೇಳೆ, ನೀವು 200 ಯೂನಿಟ್’ಗಿಂತ ಹೆಚ್ಚು ಬಳಕೆ ಮಾಡಿದರೆ ಆಗ ಪೂರ್ಣ ಮೊತ್ತವನ್ನು ಪಾವತಿ ಮಾಡಬೇಕು. ಉದಾಹರಣೆಗೆ 210 ಯೂನಿಟ್ ವಿದ್ಯುತ್ ಖರ್ಚು ಮಾಡಿದ್ದರೆ, ಆಗ 210 ಯೂನಿಟ್’ನ ಮೊತ್ತವನ್ನು ನೀವು ಪಾವತಿ ಮಾಡಬೇಕಾಗುತ್ತದೆ.

ಗುಂಡು ಹಾರಿಸಿ ನಟೋರಿಯಸ್ ರೌಡಿ ರೋಹಿದಾಸ್‌ ಕೆ. ಆಲಿಯಾಸ್‌ ಆಕಾಶಭವನ ಶರಣ್‌ ಬಂಧನ

Posted by Vidyamaana on 2024-01-10 04:29:14 |

Share: | | | | |


ಗುಂಡು ಹಾರಿಸಿ ನಟೋರಿಯಸ್ ರೌಡಿ ರೋಹಿದಾಸ್‌ ಕೆ. ಆಲಿಯಾಸ್‌ ಆಕಾಶಭವನ ಶರಣ್‌ ಬಂಧನ

ಮಂಗಳೂರು, ಜ.10: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಬೆನ್ನು ಬಿದ್ದಿದ್ದ ಮಂಗಳೂರಿನ ಸಿಸಿಬಿ ಪೊಲೀಸರು ಆತನನ್ನು ಕಡೆಗೂ ಬಲೆಗೆ ಹಾಕಿದ್ದು ರೋಚಕ ಮಿಸ್ಟರಿ. ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆಯೇ ಕಾರು ಹಾಯಿಸಿದ್ದ ರೌಡಿಯನ್ನು ಬಂಧಿಸಲೇಬೇಕೆಂದು ಪೊಲೀಸರು ಬೆನ್ನು ಬಿದ್ದಿದ್ದರು. ಕೊನೆಗೆ, ಮಲ್ಪೆಯಲ್ಲಿ ಅಡಗಿದ್ದಾನೆಂಬ ಮಾಹಿತಿ ಪಡೆದು ಅಲ್ಲಿಂದ ಚೇಸಿಂಗ್ ಮಾಡಿಕೊಂಡು ಬಂದು ಕಡೆಗೂ ಮಂಗಳೂರಿನಲ್ಲಿ ಅಡ್ಡಹಾಕಿ ಬಂಧಿಸಿದ್ದಾರೆ.


ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಒಟ್ಟು ಪ್ರಕರಣದ ಪಿನ್ ಟು ಪಿನ್ ಮಾಹಿತಿಯನ್ನು ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ಎರಡು ಜಿಲ್ಲೆಯಲ್ಲಿ ಆತನ ಮೇಲೆ ಸುಮಾರು 25ಕ್ಕೂ ಹೆಚ್ಚು ಕೇಸುಗಳಿವೆ. ಜೈಲಿನಲ್ಲಿ ಕೊಲೆಯತ್ನ, ಸುಳ್ಯದ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ ಸೇರಿ 20ಕ್ಕೂ ಹೆಚ್ಚು ಪ್ರಕರಣ ಮಂಗಳೂರಿನಲ್ಲೇ ಇವೆ. ಹಲವಾರು ಪ್ರಕರಣಗಳಲ್ಲಿ ಅರೆಸ್ಟ್ ವಾರೆಂಟ್ ಇತ್ತು. ಹೀಗಾಗಿ 15 ದಿನಗಳಿಂದ ಶರಣ್ ಬಂಧನ ಮಾಡುವುದಕ್ಕಾಗಿ ನಮ್ಮ ಪೊಲೀಸರು ಹಿಂದೆ ಬಿದ್ದಿದ್ದರು.ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಅಪಾರ್ಟ್ಮೆಂಟ್ ನಲ್ಲಿದ್ದ ಮಾಹಿತಿ ಅರಿತು ಬಂಧನಕ್ಕೆ ಬಲೆ ಬೀಸಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಕಾರು ಹಾಯಿಸಿ ಪರಾರಿಯಾಗಿದ್ದ ಬಗ್ಗೆ ಕಾವೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ, ಆತನಿಗೆ ಯಾರೆಲ್ಲ ಸಪೋರ್ಟ್ ಮಾಡಿದ್ದಾರೆಂದು ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಶರತ್ ಭಂಡಾರಿ, ಮಯೂರಿ, ನೀಲಾ ಮತ್ತಿತರರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯಲಾಗಿತ್ತು. ಮಲ್ಪೆಯಲ್ಲಿ ಮನೆಯೊಂದರಲ್ಲಿ ಅಡಗಿದ್ದಾನೆಂದು ಮಾಹಿತಿ ತಿಳಿದು ಇಂದು ಬೆಳಗ್ಗೆ ಸಿಸಿಬಿ ಎಸ್ಐ ಸುದೀಪ್ ಮತ್ತು ಶರಣಪ್ಪ ಅವರ ತಂಡ ಉಡುಪಿಗೆ ತೆರಳಿತ್ತು.ಪೊಲೀಸರು ಮಲ್ಪೆ ತಲುಪಿದಾಗ ಶರಣ್ ತಪ್ಪಿಸಿಕೊಂಡಿದ್ದ. ಆಶ್ರಯ ಕೊಟ್ಟಿದ್ದ ಮಂಜೇಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬಿಳಿ ಐ20 ಕಾರಿನಲ್ಲಿ ಪರಾರಿಯಾಗಿರುವುದು ತಿಳಿದುಬಂದಿತ್ತು. ಟೋಲ್ ಗೇಟ್ ನಲ್ಲಿ ಚೆಕ್ ಮಾಡಿದಾಗ ಮಂಗಳೂರಿಗೆ ಬಂದಿರುವುದು ತಿಳಿದು ಪೊಲೀಸರು ಬೆನ್ನತ್ತಿ ಬಂದಿದ್ದರು. ಪಂಪ್ವೆಲ್ ನಲ್ಲಿ ಐ20 ಕಾರಿನಲ್ಲಿ ಒಬ್ಬಂಟಿಯಾಗಿ ಕಂಕನಾಡಿ ಕಡೆಗೆ ಎಸ್ಕೇಪ್ ಆಗಿರುವುದು ತಿಳಿದು ಚೇಸ್ ಮಾಡಲಾಗಿತ್ತು. ಜೆಪ್ಪು ಕುದ್ಪಾಡಿಯಲ್ಲಿ ನಮ್ಮ ಪೊಲೀಸ್ ತಂಡ ಖಾಸಗಿ ಕಾರಿನಲ್ಲಿ ಆತನನ್ನು ಅಡ್ಡಹಾಕಿತ್ತು. ಕುದ್ಪಾಡಿಯಲ್ಲಿ ಡೆಡ್ ಎಂಡ್ ಆಗಿದ್ದರಿಂದ ಯು ಟರ್ನ್ ಪಡೆಯುತ್ತಲೇ ಪೊಲೀಸರು ಸುತ್ತುವರಿದಿದ್ದಾರೆ. ಅಷ್ಟರಲ್ಲಿ ತನ್ನ ಕೈಲಿದ್ದ ಚೂರಿಯನ್ನು ತೋರಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಮ್ಮ ತಂಡದ ಪ್ರಕಾಶ್ ಎಂಬ ಪೇದೆಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸಿಸಿಬಿ ಎಸ್ಐ ಸುದೀಪ್ ಅವರು ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಅವರನ್ನೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಶರಣ್ ಕಾಲಿಗೆ ಗಾಯಗೊಂಡಿದ್ದು ಅಪಾಯ ಏನೂ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.ಆಕಾಶಭವನ್ ಶರಣ್ ಮಂಗಳೂರಿನ ನಟೋರಿಯಸ್ ರೌಡಿಯಾಗಿದ್ದು, 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದಾನೆ. ಹಲವು ಕೇಸುಗಳಲ್ಲಿ ಅರೆಸ್ಟ್ ವಾರೆಂಟ್ ಇದ್ದರೂ ಒಂಟಿ ತೋಳದ ರೀತಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಸುಳ್ಯದ ಕೆವಿಜಿ ಆಡಳಿತಾಧಿಕಾರಿಯ ಕೊಲೆ ಪ್ರಕರಣದಲ್ಲಿ ಈತನ ಮೇಲಿನ ಆರೋಪ ಸಾಬೀತಾಗಿದ್ದು, ದೋಷಿಯೆಂದು ಕೋರ್ಟ್ ತೀರ್ಪು ನೀಡಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆಯಿಂದ ಪಾರಾಗಿದ್ದಾನೆ. ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಪರವಾಗಿ ಹಫ್ತಾ ವಸೂಲಿ ಮಾಡುತ್ತಿದ್ದಾನೆ ಎಂದು ಹೇಳಲಾಗಿತ್ತು. ಈ ಬಗ್ಗೆ ಕಮಿಷನರ್ ಬಳಿ ಕೇಳಿದಾಗ, ಅಂಡರ್ ವರ್ಲ್ಡ್ ಸಂಪರ್ಕ ಇರುವ ಮಾಹಿತಿ ಇದೆ. ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.

ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-01 20:05:52 |

Share: | | | | |


ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ಸೊಂದರ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮಹೇಶ್ ಬಸ್ ಮಾಲಕ ಪ್ರಕಾಶ್ (40) ಮೃತರು.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.


ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್ ನೂರಾರು ಬಸ್ ಗಳನ್ನು ಹೊಂದಿದೆ.


ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್‌ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



ಸೈಕಲ್​ನಲ್ಲಿ ಓಡಾಡುತ್ತ ಮನೆಗಳ್ಳತನ, ಬಂಧಿತನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶ

Posted by Vidyamaana on 2024-02-28 21:37:12 |

Share: | | | | |


ಸೈಕಲ್​ನಲ್ಲಿ ಓಡಾಡುತ್ತ ಮನೆಗಳ್ಳತನ, ಬಂಧಿತನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು, ಫೆ.28: ದಿಢೀರ್ ಶ್ರೀಮಂತನಾಗೊ ಕನಸು ಕಂಡಿದ್ದ ಪ್ರದೀಪ್ ಮಂಡಲ್ ಎಂಬ ವ್ಯಕ್ತಿ ಸೈಕಲ್​ನಲ್ಲಿ ರೌಂಡ್ಸ್ ಹಾಕುತ್ತಲೇ ಕಳ್ಳತನಕ್ಕೆ (Theft) ಪ್ಲಾನ್ ಮಾಡ್ತಿದ್ದ. ಸೈಕಲ್‌ ನಲ್ಲಿ ಬಂದು 2 ಕೆಜಿ ಚಿನ್ನಾಭರಣದ (Jewels) ಜೊತೆ ಎಸ್ಕೇಪ್ ಆಗಿದ್ದ. ಸದ್ಯ ಈಗ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ (Sesh

non

ripuram Police). ಮಧ್ಯರಾತ್ರಿ ಕೈಯಲ್ಲೊಂದು ಕೋಲು ಹಿಡಿದುಕೊಂಡು ಅತ್ತಿಂದ ಇತ್ತ, ಇತ್ತಿಂದ ಅತ್ತ ಓಡಾಡ್ಕೊಂಡು ದೊಡ್ಡ ಕುಳ‌ ಇರೊ ಮನೆಯನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿನ ಚಿನ್ನಾಭರಣ ದೋಚಿ ಹೆಗಲಮೇಲೆ ಬ್ಯಾಗ್ ಏರಿಸಿಕೊಂಡು ಈತ ಕಳ್ಳತನ ಮಾಡಿದ್ದ.


ಶೇಷಾದ್ರಿಪುರಂ ನಲ್ಲಿ ವಾಸವಿರುವ ಮಂಜುಳಾ ದೇವಿ ಹಾಗೂ ಕುಟುಂಬಸ್ಥರು ಜನವರಿ 17 ರಂದು ಹುಟ್ಟೂರು ರಾಜಸ್ಥಾನಕ್ಕೆ ತೆರಳಿದ್ರು. ವಾಪಸ್ಸು ಫೆಬ್ರವರಿ 4 ರಂದು ಬಂದು ನೋಡಿದಾಗ ಶಾಕ್ ಆಗಿತ್ತು. ಯಾಕಂದ್ರೆ ಮನೆಯಲ್ಲಿ‌ ಇಟ್ಟಿದ್ದ ಎರಡು ಕೆಜಿ ಚಿನ್ನಾಭರಣ ಕಾಣೆಯಾಗಿತ್ತು. ತಕ್ಷಣ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ರು. ಅಲರ್ಟ್ ಆದ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಲ್ಲಿಗೆ ಕಳ್ಳತನ ಆಗಿದೇ ಅನ್ನೋದು ಕನ್ಫರ್ಮ್ ಆಗಿತ್ತು. ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಳ್ಳನ ಅಸಲಿ ಆಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರದೀಪ್ ಮಂಡಲ್ ಎಂಬ ಅಸ್ಸಾಂ ಮೂಲದ ವ್ಯಕ್ತಿ ಕಳ್ಳತನ ಮಾಡಿರೋದು ಬಯಲಾಗಿದೆ.


23 ರ ಮಧ್ಯರಾತ್ರಿ ಸೈಕಲ್ ನಲ್ಲಿ ಬಂದ ಕಳ್ಳ ಸೈಕಲ್ ಬಿಟ್ಟು ನಡೆದುಕೊಂಡೇ ಬಂದಿದ್ದ. ಹೀಗೆ ಬಂದವನಿಗೆ ಮನೆ ಲೈಟ್ ಆಫ್ ಆಗಿರೋದು ಕಂಡಿದೆ. ಹಾಗಾಗಿ ಮನೆಗಳ್ಳತನಕ್ಕೆ ನಿರ್ಧಾರ ಮಾಡಿಬಿಟ್ಟಿದ್ದ. ಮನೆ ಮೇಲೆ ಹತ್ತಿದ್ದ ಆರೋಪಿ ಕಿಟಕಿ ಸರಳುಗಳನ್ನು ಮುರಿದು ರೂಮಿನೊಳಗೆ ಪ್ರವೇಶಿಸಿದ್ದ. ಲಾಕರ್ ಮುರಿದು ನೋಡಿದವ್ನಿಗೆ ಅಪಾರ ಪ್ರಮಾಣದ ಚಿನ್ನಾಭರಣ ಕಂಡಿದೆ. ಎಲ್ಲವನ್ನು ಬ್ಯಾಗ್ ನಲ್ಲಿ‌ ತುಂಬಿಕೊಂಡವನೇ ಹೆಗಲ‌ ಮೇಲೇರಿಸಿಕೊಂಡು ಹುಟ್ಟೂರು ಅಸ್ಸಾಂಗೆ ತೆರಳಿದ್ದ. ಅಲ್ಲದೇ ಸ್ವಲ್ಪ ಪ್ರಮಾಣದ ಚಿನ್ನ ಮಾರಿ ಒಂದು ಸ್ವಿಫ್ಟ್ ಡಿಜೈರ್ ಕಾರು ಕೂಡ ಖರೀದಿ ಮಾಡಿದ್ದ. ಆತನಿಗಾಗಿ ಬಲೆ ಬೀಸಿದ್ದ ಪೊಲೀಸರು ಅಸ್ಸಾಂ ನಿಂದ ಬಂಧಿಸಿ ಕರೆತಂದಿದ್ದಾರೆ. ಬಂಧಿತನಿಂದ 1 ಕೋಟಿ 29 ಲಕ್ಷದ 35 ಸಾವಿರ ಮೌಲ್ಯದ 2141 ಗ್ರಾಂ ಚಿನ್ನ, 1313 ಗ್ರಾಂ ಬೆಳ್ಳಿ 70 ಸಾವಿರ ನಗದು ಹಣ ಹಾಗೂ ಒಂದು ಸ್ವಿಫ್ಟ್ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.


ಸದ್ಯ ಪೊಲೀಸರ ಉತ್ತಮ‌ ಕೆಲಸದಿಂದ ಮಾಲೀಕ ನಿಟ್ಟುಸಿರು ಬಿಟ್ರೆ. ಬೇಗ ಶ್ರೀಮಂತನಾಗೊ ಆಸೆಗೆ ಕಳ್ಳತನ ಮಾಡಿದ್ದ ಖದೀಮ‌ ಜೈಲು ಪಾಲಾಗಿದ್ದಾನೆ. ಮನೆಯಿಂದ ಹೊರಗೆ ಹೋಗಬೇಕಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿಹೋದ್ರೆ ಒಳ್ಳೆಯದು. ಇಲ್ಲದಿದ್ರೆ ನಿಮ್ಮ ಮನೆಗೂ ಇಂತಹ ಕಳ್ಳರು ಕನ್ನ ಹಾಕಬಹುದು.

ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

Posted by Vidyamaana on 2023-12-31 16:45:19 |

Share: | | | | |


ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

ನವದೆಹಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಸಂಬಂಧ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ಹೇಳಿದೆ.ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ಹೆಸರಿನಲ್ಲಿ ಜನರನ್ನು ಮೋಸ ಮಾಡಲು ಪ್ರಯತ್ನಿಸಲಾಗುತ್ತಿದೆ. ಅವರ ಬಲೆಗೆ ಬೀಳದಂತೆ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಜನರನ್ನು ಎಚ್ಚರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶ ಪೊಲೀಸರಿಗೆ ನೀಡಿದ ದೂರಿನ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರ ಪ್ರತಿಯನ್ನು ಸಿಎಂ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್‌ ಮಾಡಿದ್ದಾರೆ.ಎಚ್ಚರ! ಕೆಲವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬನ್ಸಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.


ಈ ಬಗ್ಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ, ಲಖನೌ ವಲಯ ಐಜಿಗೆ ಔಪಚಾರಿಕ ದೂರು ನೀಡಿದ್ದೇವೆ ಎಂದು ಬನ್ಸಾಲ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.


ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯುವ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹಣವನ್ನು ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಇತ್ತೀಚೆಗೆ ಹೇಳಿತ್ತು.


ಶ್ರೀರಾಮ ದೇಗುಲದಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ನಿಧಿ ಸಂಗ್ರಹಿಸಲು, ಪ್ರತ್ಯೇಕ ಸಮಿತಿ ರಚಿಸಲು ಮತ್ತು ರಶೀದಿಗಳನ್ನು ಮುದ್ರಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.

ವೋಟಿಂಗ್ ಮುಗಿಸಿದ ಮತದಾರ ನಿರಾಳ

Posted by Vidyamaana on 2023-05-12 06:22:32 |

Share: | | | | |


ವೋಟಿಂಗ್ ಮುಗಿಸಿದ ಮತದಾರ ನಿರಾಳ

ಬೆಂಗಳೂರು: ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ ಅವರ ಹೃದಯಬಡಿತ ಹೆಚ್ಚಾಗಿದೆ. ಮತ ಎಣಿಕೆ ನಡೆಯುವ ಶನಿವಾರದವರೆಗೂ ಅವರ ತಲೆಯಲ್ಲಿ ಸೋಲು- ಗೆಲುವಿನ ಲೆಕ್ಕಾಚಾರದ ಅಂಶಗಳೇ ಓಡುತ್ತಿರುತ್ತವೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಈಗ ಬೂತ್‌ಮಟ್ಟದಲ್ಲಿ ನಡೆದಿರುವ ಶೇಕಡವಾರು ಮತ ಚಲಾವಣೆಯ ಲೆಕ್ಕವಿಟ್ಟುಕೊಂಡು ತಾಳೆ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇಡೀ ದಿನ ಕ್ಷೇತ್ರದ ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ಮತದಾರರನ್ನೇ ನೋಡಿ ಲೆಕ್ಕ ಹಾಕುವ ಕೆಲಸವೂ ನಡೆದಿದೆ.ತಮ್ಮ ಪಕ್ಷದ ಮತದಾರರೆಂದು ಗುರುತಿಸಿಕೊಂಡಿರುವ ರಾಜಕೀಯ ಪಕ್ಷಗಳಿಗೆ ಶೇ.60 ರಿಂದ 70 ರಷ್ಟು ಲೆಕ್ಕ ಸಿಗುವುದೇ ಇಲ್ಲಿಂದ. ಇನ್ನುಳಿದ ಲೆಕ್ಕವನ್ನು ಚಲಾವಣೆಯಾದ ಮತಗಳ ಆಧಾರದ ಮೇಲೆ ಹಾಕುತ್ತಾರೆ.

ಹೀಗಾಗಿ ಬೂತ್‌ಮಟ್ಟದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಮತದಾರರ ಪಟ್ಟಿ ಹಿಡಿದು ಕುಳಿತಿದ್ದ ಪಕ್ಷದ ಕಾರ್ಯಕರ್ತರು ಕೊಡುವ ಲೆಕ್ಕದ ಮೇಲೆ ಅ ರ್ಥಿಗಳು ಸೋಲು-ಗೆಲುವಿನ ಲೆಕ್ಕ ಹಾಕುತ್ತಾರೆ. ಜತೆಗೆ ತಟಸ್ಥ ಮತದಾರರೆಂದು ಗುರುತಿಸಿಕೊಂಡಿರು ರ ಸ್ಪಂದನೆ ಯಾವ ಪಕ್ಷ, ಯಾವ ಅಭ್ಯರ್ಥಿ ಪರವಾಗಿತ್ತೆಂಬುದನ್ನು ಅವರದೇ ಆದ ಮೂಲಗಳು ಕೊಡುವ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳು ಲೆಕ್ಕಾಚಾರ ಮಾಡುತ್ತಾರೆ. ಈ ರೀತಿ ನಾನಾ ಲೆಕ್ಕಾಚಾರಗಳು ಗುರುವಾರ, ಶುಕ್ರವಾರದವರೆಗೂ ನಡೆಯುತ್ತಲೇ ಇರುತ್ತವೆ.ಭರ್ಜರಿ ಬೆಟ್ಟಿಂಗ್‌ ಶುರು

ಒಂದೆಡೆ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಗೆಲ್ಲುವ ಪಕ್ಷ ಯಾವುದು? ಸಿಎಂ ಯಾರಾಗುತ್ತಾರೆ? ಹಾಗೂ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದರ ಮೇಲೆ ಬೆಟ್ಟಿಂಗ್‌ ಕಟ್ಟುವುದು ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಈ ಮೂರು ಪಕ್ಷಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಮೇಲೂ ಬೆಟ್ಟಿಂಗ್‌ ನಡೆದಿದೆ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಬಹುದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಎಚ್‌.ಡಿ.ಕುಮಾರಸ್ವಾಮಿ ಈ ಮೂವರಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದರ ಮೇಲೆ ಭರ್ಜರಿ ಬೆಟ್ಟಿಂಗ್‌ ನಡೆದಿದೆ.ಚಿನ್ನಾಭರಣ, ಬೈಕ್‌, ಕಾರು, ಟ್ರ್ಯಾಕ್ಟರ್‌, ಹೊಲ, ಗದ್ದೆ, ಕುರಿ, ಕೋಳಿ ಜತೆಗೆ ಇಂತಿಷ್ಟು ಹಣವೆಂದು ಬೆಟ್ಟಿಂಗ್‌ ಮಾಡಲಾಗುತ್ತಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಅತಂತ್ರ ಫ‌ಲಿತಾಂಶವೆಂದು ಹೇಳುತ್ತಿದ್ದರೂ ಕಾಂಗ್ರೆಸ್‌ ಪಕ್ಷ ಅತ್ಯಧಿಕ ಸ್ಥಾನಗಳಿಸಿ ಅಧಿಕಾರಕ್ಕೆ ಬರುತ್ತದೆ ಎಂಬುದು ಕಾಂಗ್ರೆಸ್‌ ಪರ ಬೆಟ್ಟಿಂಗ್‌ ಕಟ್ಟುತ್ತಿರುವವರ ವಾದ.


Recent News


Leave a Comment: