Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-02-12 15:49:37 |
ಬೆಂಗಳೂರು : ಇಂದಿನಿಂದ 10 ದಿನಗಳವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು.ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.
ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ.
ಬರಗಾಲವಿದ್ದರೂ ರಸ್ತೆ ನೀರು ಶಿಕ್ಷಣ ಆರೋಗ್ಯ ಕೃಷಿ ತೋಟಗಾರಿಕೆ ಹೈನುಗಾರಿಕೆ ಕೈಗಾರಿಕೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆದಿದ್ದಾಗಿದ್ದು ಬಜೆಟ್ ನಲ್ಲಿ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿದೆ. ಬರಪೀಡಿತ ಪ್ರದೇಶಗಳ ನೆರವಿಗೆ ಸರ್ಕಾರ ಅನುದಾನ ನೀಡಿದೆ ಸರ್ಕಾರ ಕೊಬ್ಬರಿಗೆ ಬೆಂಬಲ ಬೆಲೆಯನ್ನು ಘೋಷಿಸಿದೆ ಅಲ್ಲದೆ ಬೆಳೆ ಹಾನಿಗೆ ಕೂಡ ಪರಿಹಾರ ನೀಡಿದೆ ಎಂದು ತಿಳಿಸಿದರು.
ಕರ್ನಾಟಕ ಉದಯವಾಗಿ ಐವತ್ತು ವರ್ಷಗಳಾಗಿವೆ ಕರ್ನಾಟಕ ಸಂಭ್ರಮ 50 ಆಚರಣೆ ಮಾಡಲಾಗುತ್ತಿದೆ ನಮ್ಮ ಭಾಷೆ ಸಂಸ್ಕೃತಿಯ ಮೇಲೆ ದಾಳಿಯನ್ನು ಸಹಿಸುವುದಿಲ್ಲ ಕನ್ನಡ ಸಂಸ್ಕೃತಿ ಕಾಪಾಡಲು ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಿಕ್ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ರಾಜ್ಯಪಾಲ ಗೆಹ್ಲೋಟ್ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು
Posted by Vidyamaana on 2023-12-16 07:34:09 |
ಕಡಬ : ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹೇಳಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.
ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಎಸ್ಪಿ ಸೈಮನ್ ಅವರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ, ಸೌಮ್ಯ ಕಳೆದ ಎಂಟು ವರ್ಷಗಳಿಂದ ನಮ್ಮ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡದೆ ವಿನಾಕಾರಣ ಸತಾಯಿಸುತ್ತಿದ್ದಾರೆ. ಕಳೆದ ವರ್ಷ ಕುಟ್ರುಪ್ಪಾಡಿಯಲ್ಲಿ ನಡೆದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ನಾವು ದೂರು ನೀಡಿದಾಗ ಒಂದು ವಾರದೊಳಗೆ ಕಡತ ವಿಲೇವಾರಿ ಮಾಡಿ ಹಕ್ಕು ಪತ್ರ ನೀಡಬೇಕೆಂದು ಕಂದಾಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದರು.ಆದರೆ ಈವರೆಗೆ ಯಾವ ಪ್ರಕ್ರಿಯೆಯೂ ನಡೆದಿಲ್ಲ ಎಂದು ಅಳಲು ತೋಡಿಕೊಂಡರು.ತನಗೆ ಕಳೆದ ಎಂಟು ವರ್ಷಗಳಿಂದ ಅನ್ಯಾಯ ಮಾಡಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ಎದುರು ಕಣ್ಣೀರಿಟ್ಟು ಸೌಮ್ಯ ತನ್ನ ಸಮಸ್ಯೆಯನ್ನು ಹೇಳಿಕೊಂಡರು.
ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಅಧಿಕಾರಿಗಳು ಸ್ಥಳದಲ್ಲಿದ್ದ ತಹಶೀಲ್ದಾರ್, ಉಪತಹಶೀಲ್ದಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, 15 ದಿನಗಳ ಒಳಗೆ ಆ ಕಡತ ವಿಲೇವಾರಿ ಮಾಡಿಕೊಡುವಂತೆ ಸೂಚನೆ ನೀಡಿದರು. ಕಡತ ವಿಲೇವಾರಿ ಆಗದಿದ್ದರೆ ತಮ್ಮ ಗಮನಕ್ಕೆ ತರುವಂತೆ ಸೌಮ್ಯ ಅವರಿಗೆ ಅಭಯ ನೀಡಿದರು.ಇದೇ ಸಮಯದಲ್ಲಿ, ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸಿದರೆ, ಸರ್ಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ, ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರಿ ಕೆಲಸದಲ್ಲಿ ತೊಂದರೆ ನೀಡಿದರೆ, ಲೋಕಾಯುಕ್ತಕ್ಕೆ ದೂರು ನೀಡಬಹುದು. ದೂರು ಯೋಗ್ಯವಾಗಿದ್ದಲ್ಲಿ ವಿಚಾರಣೆಗೆ ಒಳಪಡಿಸಲಗುವುದು ಎಂದು ಹೇಳಿದರು. ಅದೇ ರೀತಿ ಜನರು ಕೂಡಾ ಹೆಚ್ಚಿನ ಸ್ಪಂದನೆ ಕೊಡಬೇಕು. ಈ ಕಾರ್ಯಕ್ರಮದಲ್ಲಿ ಕೇವಲ ಐದು ದೂರುಗಳು ಮಾತ್ರ ಬಂದಿವೆ. ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿ ಮುಂದಿನ ಕ್ರಮ ಕೈಗೊಳ್ಳಗಾವುದು ಎಂದು ಹೇಳಿದರು.ಇನ್ಮುಂದೆ ಯಾವುದೇ ಅಧಿಕಾರಿಯಿಂದ ತೊಂದರೆಯಾದರೆ ಸಾರ್ವಜನಿಕರು ತಕ್ಷಣ ಲೋಕಾಯುಕ್ತಕ್ಕೆ ನೇರವಾಗಿ ದೂರು ನೀಡಬಹುದು, ಎಲ್ಲಾ ದೂರುಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿ ಮುಂದೆ ಸೂಕ್ತ ಕ್ರಮ ಜರಗಿಸಲು ಲೋಕಾಯುಕ್ತ ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದರು.
ಸೀತಾರಾಮ ನಾಯ್ಕ್ ಹಾಗೂ ವೆಂಕಟ್ರಾಜ್ ಕೋಡಿಬೈಲು ದೂರು ನೀಡಿ, ಕಡಬದಲ್ಲಿ ಕೆರೆ ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ನಡೆದಾಡಲು ದಾರಿ ಇಲ್ಲದಂತೆ ಮಾಡಲಾಗಿದೆ. ನಮಗೆ ನ್ಯಾಯ ಒದಗಿಸಬೇಕೆಂದು ವಿನಂತಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಕೆರೆ ಒತ್ತುವರಿ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದರು.ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿಗಳಾದ ಗಾನಾ ಪಿ.ಕುಮಾರ್, ಚೆಲುವರಾಜ್, ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಉಪತಹಶೀಲ್ದಾರ್ಗಳಾದ ಮನೋಹರ್ ಕೆ.ಟಿ, ಗೋಪಾಲ್ ಕಲ್ಲುಗುಡ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಭವಾನಿಶಂಕರ್, ಕಡಬ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ, ಕಂದಾಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Posted by Vidyamaana on 2023-12-26 21:58:49 |
ಬೆಂಗಳೂರು: 2023-24ನೇ ಸಾಲಿನ 5,8 ಮತ್ತಿ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲಾತ್ಮಕ ಮೌಲ್ಯಂಕನ (ಎಸ್ಎ-2)ದ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತು ಪ್ರಕಟಿಸಿದೆ. ಮಾ.11ರಿಂದ 18ರ ವರೆಗೆ ಪರೀಕ್ಷೆಗಳು ನಡೆಯಲಿವೆ.
5ನೇ ತರಗತಿಗೆ:
ಮಾ.11ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಮಾ.11- ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ಪರಿಷರ ಅಧ್ಯಯನ ಮತ್ತು ಮಾ.14ರಂದು ಗಣಿತ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಲಿವೆ.
8 ಮತ್ತು 9ನೇ ತರಗತಿ:
ಮಾ.11 ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ತೃತೀಯ ಭಾಷೆ ಹಿಂದಿ, ಮಾ.14 ಗಣಿತ, ಮಾ.15 ವಿಜ್ಞಾನ, ಮಾ.16 ಸಮಾಜ ವಿಜ್ಞಾನ ಮತ್ತು ಮಾ.18ರಂದು ದೈಹಿಕ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಪ್ರಕಟಣೆ ಹೊರಡಿಸಿದೆ.
ಎಲ್ಲ ವಿದ್ಯಾರ್ಥಿಗಳಿಗೆ ಆಯಾ ಶಾಲಾ ಹಂತದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ತಾಲ್ಲೂಕು ಹಂತದಲ್ಲಿ ಮೌಲ್ಯಮಾಪನ ನಡೆಸಲಾಗುತ್ತದೆ.
Posted by Vidyamaana on 2024-06-21 20:26:33 |
ಹಾಸನ, (ಜೂನ್ 21): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್. ಪ್ರಜ್ವಲ್ ಅಣ್ಣ, ಎಚ್ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ (Suraj Revanna) ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ (sexual assault ) ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.
ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
Posted by Vidyamaana on 2023-11-13 21:40:41 |
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಬಂಧಿತ.ಆರೋಪಿ ಬಾಲಕಿಯ ಮನೆಯವರಿಗೆ ಪರಿಚಯಸ್ಥನಾಗಿದ್ದ.ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Posted by Vidyamaana on 2023-09-19 21:51:51 |
ವಿದ್ಯಮಾನದ ಗ್ರೂಪಿಗೆ ಸೇರಲು ಈ ಲಿಂಕ್ ಒತ್ತಿ*
ಬೆಂಗಳೂರು: ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ.ಈ ಮೂಲಕ ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇನ್ನು ಜನ ಸಂಪರ್ಕ ಸಾಧನೆಯ ನಿಟ್ಟಿನಲ್ಲಿ ಮುಂದಡಿಯಿಟ್ಟವರು ಸಿಎಂ ಸಿದ್ದರಾಮಯ್ಯ ಅವರ ನಡೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ವಾಟ್ಸಪ್ ಚಾನೆಲ್ನಲ್ಲಿ ಏನೆಲ್ಲಾ ಸಿಗುತ್ತದೆ?
ಈ ಚಾನೆಲ್ನಲ್ಲಿ ಸಿಎಂ ದೈನಂದಿನ ಚಟುವಟಿಕೆ, ತೆಗೆದುಕೊಂಡ ಮಹತ್ವದ ನಿರ್ಧಾರಗಳು, ಸಭೆಗಳ ಪ್ರಮುಖ ಅಂಶಗಳು, ಹೊಸ ಯೋಜನೆ ಮಾಹಿತಿ, ಆರೋಪ ಅಥವಾ ಪ್ರಚಲಿತ ಘಟನೆಗಳಿಗೆ ಪ್ರತಿಕ್ರಿಯೆಗಳು ಸೇರಿದಂತೆ ಸಾಕಷ್ಟು ಮಾಹಿತಿಯ ನೇರವಾಗಿ ಸಿಗಲಿದೆ. ಇನ್ನು ಚಾನೆಲ್ಗಳಲ್ಲಿ ಬಂದ ಸಂದೇಶಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ಇಮೋಜಿ ಬಳಸಿ ನೀಡುವ ಅವಕಾಶ ಇದೆ.
Readmore.....
ವಾಟ್ಸಾಪ್ ಚಾನೆಲ್ ಸೇರಿದ ಪ್ರಧಾನಿ ಮೋದಿ : ನಮೋ ಸಂಪರ್ಕಿಸೋದು ಈಗ ಇನ್ನಷ್ಟು ಸುಲಭ
ಚಾನೆಲ್ ಸೇರುವುದು ಹೇಗೆ?
ಸಿಎಂ ವಾಟ್ಸಪ್ ಚಾನೆಲ್ ಸೇರಬೇಕು ಎಂಬುವವರು ನಿಮ್ಮ ವಾಟ್ಸಪ್ ಚಾನಲ್ ಸೆಕ್ಷನ್ನಲ್ಲಿ Chief Minister of Karnataka ಎಂದು ಸರ್ಚ್ ಮಾಡಬೇಕು. ಬಳಿಕ ಸಿಎಂ ಅಧಿಕೃತ ಚಾನೆಲ್ ಕಾಣಿಸಲಿದೆ. ಅದರ ಮೇಲೆ ಕ್ಲಿಕ್ ಮಾಡುವ ಮೂಲಕ ಮುಖ್ಯಮಂತ್ರಿಗಳ ಅಧಿಕೃತ ಚಾನಲ್ ಅನ್ನು ಸೇರಬಹುದು.
ಸದ್ಯ ವಾಟ್ಸಪ್ ಪರಿಚಯ ಮಾಡಿರುವ " ಚಾನೆಲ್ ಎಂಬ ಹೊಸ ಆಯ್ಕೆ ಸಿಗಬೇಕು ಎಂದರೆ ನಿಮ್ಮ ವಾಟ್ಸಪ್ ಅಪ್ಲೇಟ್ ಮಾಡಿಕೊಳ್ಳಬೇಕು. ಆ ಬಳಿಕ ಸ್ಟೇಟಸ್ ನೋಡುವ ಆಯ್ಕೆ ಬಳಿ ಬಂದರೆ ಅಲ್ಲಿಯೇ ಚಾನೆಲ್ಗಳು ಸಿಗುತ್ತವೆ. ಈಗಾಗಲೇ ಬಾಲಿವುಡ್ ತಾರೆಯರು, ಕ್ರಿಕೆಟ್ ಪಡುಗಳು ಸೇರಿದಂತೆ ಪ್ರಮುಖ ಸೆಲಿಬ್ರಿಟಿಗಳು ತಮ್ಮ ವ್ಯಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಇನ್ನು ಯಾರು ಬೇಕಾದರೂ ತಮ್ಮ ಹೆಸರಿನಲ್ಲಿ ಚಾನೆಲ್ ಆರಂಭಿಸುವ ಸೌಲಭ್ಯವನ್ನು ಮೇಟಾ ಕಂಪನಿ ನೀಡಿದೆ
*ವಿದ್ಯಮಾನದ ಗ್ರೂಪಿಗೆ ಸೇರಲು ಈ ಲಿಂಕ್ ಒತ್ತಿ*