ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

Posted by Vidyamaana on 2024-01-04 11:36:22 |

Share: | | | | |


ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿಯನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನಾಮಧೇಯ ಕರೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆಗೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್​​ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ.


ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.,ಪ್ರೇತ ಮೈಮೇಲೆ ಬರುವ ನೆಪ?: ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್​ ಅವರು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಮಹಿಳೆಯನ್ನುಅಂತರ್ಜಾತಿ ವಿವಾಹವಾಗಿದ್ದರು. ಈ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೆಟ್​ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಲಾಗಿತ್ತು. ಸುದೀರ್ಘ ಸಮಯದಿಂದ ಸ್ನಾನ ಮಾಡಿಸದ ರೀತಿ, ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ದೊರಕಿದೆ.

ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್ ಶಾಸಕರಿಗೆ ಸನ್ಮಾನ

Posted by Vidyamaana on 2023-10-01 17:55:59 |

Share: | | | | |


ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್ ಶಾಸಕರಿಗೆ ಸನ್ಮಾನ

ಪುತ್ತೂರು: ತುಳುಕೂಟ ಬೆಂಗಳೂರು ಇವರ ವತಿಯಿಂದ ಬೆಂಗಳೂರು ಅತ್ತಿಗುಪ್ಪೆ ಬಂಟರಭವನದಲ್ಲಿ ನಡೆದ ಪುದ್ವಾರ್ ವಣಸ್ದ ಗಮ್ಮತ್ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರು ಭಾಗವಹಿಸಿದರು.

ತುಳುಕೂಟದ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಹೊಸ ಅಕ್ಕಿ ಊಟ ಸವಿದು ಪುದ್ವಾರ್ ಕಾರ್ಯಕ್ರಮದಲ್ಲಿ ಜಿಲ್ಲೆಯ ತುಳು ಬಾಂಧವರು ಪುದ್ವಾರ್ ಆಚರಿಸಿದರು.ಕಾರ್ಯಕ್ರಮದಲ್ಲಿ ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ರಾಜೇಂದ್ರಕುಮಾರ್, ತುಳುಕೂಟದ ಪ್ರಮುಖರಾದ ಸುಂದರ್‌ರಾಜ್ ರೈ, ರವೀಂದ್ರನಾಥ ಮಾರ್ಲ, ಅಜಿತ್ ಹೆಗ್ಡೆ ಜಿ, ಸಹಿತಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ

Posted by Vidyamaana on 2023-11-16 13:15:42 |

Share: | | | | |


ಲಿಸ್ಟ್‌ ಫೈನಲ್‌ ಮುಜುಗರ; ಯತೀಂದ್ರ ಮೇಲೆ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ʻನನ್ನದೇ ಲಿಸ್ಟ್‌ ಫೈನಲ್‌ ಮಾಡಬೇಕುʼ ಎಂದು ನೇರ ಆದೇಶ ನೀಡುವ ಮೂಲಕ ಸುದ್ದಿಯಲ್ಲಿರುವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಗರಂ ಆಗಿದ್ದಾರೆ.


ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿದ್ದ ವೇಳೆ ಸಿದ್ದರಾಮಯ್ಯ ಅವರಿಂದ ಬಂದ ಫೋನ್‌ ಕರೆಗೆ ಉತ್ತರಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಲಿಸ್ಟ್‌ ಬಗ್ಗೆ ಮಾತನಾಡಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ಅವರು ಮಾಡಿದ ಕರೆಗೆ ಪ್ರತ್ಯುತ್ತರ ನೀಡಿದ ಯತೀಂದ್ರ ಅವರು, ಸಿಎಂ ಅವರ ವಿಶೇಷಾಧಿಕಾರಿ ಮಹದೇವ್‌ ನೀಡಿದ ಪಟ್ಟಿಯಲ್ಲಿ ವಿವೇಕಾನಂದ ಎಂಬ ಹೆಸರು ಹೇಗೆ ಸೇರಿಕೊಂಡಿತು ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಅವರ ಕೈಯಿಂದ ಮಹದೇವ್‌ ಅವರಿಗೆ ಫೋನ್‌ ಕೊಡಿಸಿ ʼಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದುʼ ಅಂತ ಪ್ರಶ್ನೆ ಮಾಡಿದ್ದಾರೆ. ʼಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿʼ ಅಂತ ಯತೀಂದ್ರ ಸೂಚಿಸಿರುವ ವಿಡಿಯೊ ಈಗ ವೈರಲ್‌ ಆಗಿದೆ.


ಇದು ವರ್ಗಾವಣೆಗೆ ಸಂಬಂಧಿಸಿದ ಪಟ್ಟಿ ಎಂದು ಸುದ್ದಿಯಾಗಿದೆ. ಯತೀಂದ್ರ ಸಿದ್ದರಾಮಯ್ಯ ಅವರು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳಿಗೂ ಈ ವಿಡಿಯೊಗೂ ತಾಳೆ ಹಾಕಲಾಗುತ್ತಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.ಕಾವೇರಿಯಲ್ಲಿ ಜತೆಯಾಗಿರುವ ಸಿದ್ದರಾಮಯ್ಯ, ಪುತ್ರ ಯತೀಂದ್ರ


ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಈ ಘಟನೆಯ ವಿಡಿಯೊ ಗುರುವಾರ ವೈರಲ್‌ ಆಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಬ್ರೇಕ್‌ ಆದಾಗ ಸಿದ್ದರಾಮಯ್ಯ ಮತ್ತು ಯತೀಂದ್ರ ಅವರು ಕಾವೇರಿ ನಿವಾಸದಲ್ಲೇ ಇದ್ದರು. ಅಲ್ಲಿ ಅವರಿಬ್ಬರು ಮುಖಾಮುಖಿಯಾದಾಗ ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳ ಸುದ್ದಿ ಪ್ರಸ್ತಾಪಿಸಿ ಏನಿದು ಎಂದು ಸಿದ್ದರಾಮಯ್ಯ ಗರಂ ಆದರೆನ್ನಲಾಗಿದೆ.


ಇದಕ್ಕೆ ಯತೀಂದ್ರ ಕೊಟ್ಟ ಸ್ಪಷ್ಟನೆ ಏನು?


ʻʻಅದು ಕ್ಷೇತ್ರ ಮತ್ತು ಜಿಲ್ಲೆಯ ಕೆಲಸಗಳ ಪಟ್ಟಿಯನ್ನು ನಾನು ಕೊಟ್ಟಿದ್ದೆ. ನಾನು ಕೊಟ್ಟಿದ್ದು ಮಾಡಿ ಎಂದು ನಿಮ್ಮ ಜತೆ ಮಾತನಾಡಿದ್ದು. ಆದರೆ ಮಾಧ್ಯಮಗಳಲ್ಲಿ ಏನೇನೋ ಸುದ್ದಿ ಬರ್ತಿದೆʼʼ ಎಂದು ಯತೀಂದ್ರ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.ʻʻನೀವು ಮಹದೇವ್‌ ಅವರು ಪಟ್ಟಿ ಫೈನಲ್ ಮಾಡಿದ್ದಕ್ಕೆ ನನಗೆ ಬೇಸರ ಆಗಿತ್ತು. ಕ್ಷೇತ್ರದ ಕೆಲಸಕ್ಕಾಗಿ ಜಿಲ್ಲೆಯ ಕಾರ್ಯಕರ್ತರನ್ನು ಪರಿಗಣಿಸುವ ಸಲುವಾಗಿ ನನ್ನ ಪಟ್ಟಿ ಫೈನಲ್ ಮಾಡಿ ಎಂದು ಹೇಳಿದ್ದೆʼʼ ಎಂದು ಯತೀಂದ್ರ ಸಮಜಾಯಿಷಿ ನೀಡಿದರು ಎನ್ನಲಾಗಿದೆ.


ಆದರೆ, ಅದನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಹೇಳ್ತಾರಾ? ಎಲ್ಲಿ ಏನು ಮಾತನಾಡಬೇಕು ಅಂತ ಗೊತ್ತಾಗಲ್ವಾ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.


ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್‌


ಇವೆಲ್ಲ ಬೆಳವಣಿಗೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಅಲ್ಲಿ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

Posted by Vidyamaana on 2023-11-15 05:38:10 |

Share: | | | | |


ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿದ ರಿಕ್ಷಾ ಡ್ರೈವರ್

ಉಳ್ಳಾಲ, ನ.15: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ. 


ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.

ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.


ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.


ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ  ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.

ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

Posted by Vidyamaana on 2024-01-17 09:31:21 |

Share: | | | | |


ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

ಹೊಸದಿಲ್ಲಿ: ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯವಾಗಲಿವೆ ಎಂದು ಈಗಾಗಲೇ ಎನ್‌ಎಚ್‌ಎಐ ಎಚ್ಚರಿಸಿದೆ. ಫಾಸ್ಟಾಗ್‌ಗೆ ಕೆವೈಸಿ ಪೂರ್ಣಗೊಂಡಿದೆಯೇ, ಇಲ್ಲವೇ ಎಂಬ ಸ್ಥಿತಿಗತಿ ತಿಳಿಯುವುದು ಹೇಗೆ ಹಾಗೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಪರಿಶೀಲನೆ ಹೇಗೆ?

ಬಳಕೆದಾರರು https://fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಲಾಗಿನ್‌ ಆಗಲು ನೋಂದಾಯಿತ ಮೊಬೈಲ್‌ ಸಂಖ್ಯೆ, ಪಾಸ್‌ವರ್ಡ್‌ ಮತ್ತು ಬಳಿಕ ಮೊಬೈಲ್‌ಗೆ ಬರುವ ಒಟಿಪಿ ಬೇಕಾಗಲಿದೆ.

ಒಮ್ಮೆ ಲಾಗಿನ್‌ ಆದ ಅನಂತರ, ಡ್ಯಾಶ್‌ಬೋರ್ಡ್‌ಗೆ ತೆರಳಿ, “ಮೈ ಪ್ರೊಫೈಲ್‌’ ವಿಭಾಗದ ಮೇಲೆ ಕ್ಲಿಕ್‌ ಮಾಡಬೇಕು.

ಇಲ್ಲಿ ನಿಮ್ಮ ಕೈವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಸ್ಥಿತಿಗತಿ ಹಾಗೂ ನೀವು ಸಲ್ಲಿಸಿರುವ ಪ್ರೊಫೈಲ್‌ ವಿವರ ಸಿಗಲಿದೆ.

ಪೂರ್ಣಗೊಳ್ಳದಿದ್ದರೆ ಏನು ಮಾಡಬೇಕು?

ಪ್ರೊಫೈಲ್‌ ವಿಭಾಗದಲ್ಲಿ, ಕೆವೈಸಿ ಎಂಬ ಉಪ ವಿಭಾಗವಿದೆ. ಅಲ್ಲಿ ಕ್ಲಿಕ್‌ ಮಾಡಿ ನೀವು ನಿಮ್ಮ ಕೆವೈಸಿ ಅಪ್‌ಡೇಟ್‌ ಮಾಡಬಹುದು.

ಬಳಕೆದಾರರು ಗುರುತು, ವಿಳಾಸದ ದಾಖಲೆಗಳನ್ನು ಸಲ್ಲಿಸಬೇಕು. ಪಾಸ್‌ಪೋರ್ಟ್‌ ಗಾತ್ರದ ಫೋಟೋ ಕೂಡ ಅಗತ್ಯ.

ಒಮ್ಮೆ ಪರಿಶೀಲಿಸಿ, ಅನಂತರ ದೃಢೀಕರಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ, “ಪ್ರೊಸೀಡ್‌’ ಕ್ಲಿಕ್‌ ಮಾಡಿ ದರೆ ಕೈವೈಸಿ ಪೂರ್ಣಗೊಳ್ಳಲಿದೆ.

ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

Posted by Vidyamaana on 2023-12-08 04:20:03 |

Share: | | | | |


ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.


ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.


ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.


ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ



Leave a Comment: