ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

Posted by Vidyamaana on 2023-12-26 11:53:42 |

Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

ಬೆಂಗಳೂರು : ಕರ್ನಾಟಕಸರಕಾರ ಪಂಚ ಗ್ಯಾರಂಟಿ ಯೋಜನೆಯ ಪೈಕಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇಂದಿನಿಂದ ಜಾರಿಗೊಳಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಅನಭಾಗ್ಯ ಯೋಜನೆಯನ್ನು ಜಾರಿಗೊಳಿಸಿರುವ ಸರಕಾರ ಇದೀಗ ಯುವನಿಧಿ ಯೋಜನೆ ಜಾರಿಗೆ ಮುಂದಾಗಿದೆ.ಡಿಸೆಂಬರ್‌ 26 ರಿಂದ ಯುವನಿಧಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬರಲಿದೆ. ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದೇ ಇರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದು ಯುವನಿಧಿ ಯೋಜನೆಯ ಉದ್ದೇಶವಾಗಿದೆ.ಯುವನಿಧಿ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. sevasindhugs.Karnataka.gov.in ವೆಬ್‌ಸೈಟ್‌ಗೆ ಲಾಗಿನ್‌ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಎನ್ ಎಡಿ ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು n

non

.karnataka.gov.in/#/YuvaNidhi ಜಾಲತಾಣದಲ್ಲಿ ಲಾಗಿನ್ ಮಾಡಬೇಕು.


ಯುವನಿಧಿ ಯೋಜನೆಗೆ (Yuva Nidhi Scheme) ಯಾರೆಲ್ಲಾ ಅರ್ಹರು ?


ಕಳೆದ ಆರು ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು

ಕರ್ನಾಟಕದಲ್ಲಿಯೇ ಪದವಿ ಅಥವಾ ಡಿಪ್ಲೋಮಾ ಹಾಗೂ ತತ್ಸಮಾನ ಶಿಕ್ಷಣವನ್ನು ಪಡೆದಿರಬೇಕು.

ಕರ್ನಾಟಕ ನಿವಾಸಿ ಪ್ರಮಾಣ ಪತ್ರಕ್ಕಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿ ಹೊಂದಿರಬೇಕು.

ಡಿಪ್ಲೊಮಾ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ೮ ಅಥವಾ ೯ನೇ ತರಗತಿ ಅಂಕಪಟ್ಟಿ ಅಥವಾ ರೇಷನ್‌ ಕಾರ್ಡ್‌ ಹೊಂದಿರಬೇಕು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಕಡ್ಡಾಯ


Yuva Nidhi Scheme : ಎಲ್ಲಿ ಅರ್ಜಿ ಸಲ್ಲಿಸಬಹುದು ?


ಯುವನಿಧಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಸಲು ಕರ್ನಾಟಕ ಸರಕಾರ ಅವಕಾಶವನ್ನು ಕಲ್ಪಿಸಿದೆ. ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್‌ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಯುವನಿಧಿ ಯೋಜನೆ ಅರ್ಜಿ ಸಲ್ಲಿಸಲು ಅವಕಾಶವಿದೆ.


Yuva Nidhi Scheme : ಏನಿದು ಯುವನಿಧಿ ಯೋಜನೆ ?


ಸಿಎಂ ಸಿದ್ದರಾಮಯ್ಯ ಸರಕಾರ ನೇತೃತ್ವದ ಕಾಂಗ್ರೆಸ್‌ ಸರಕಾರ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದೆ. ಯುವನಿಧಿ ಯೋಜನೆ ಡಿಸೆಂಬರ್‌ ೨೬ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಮೂಲಕ ಪದವೀಧರರಿಗೆ ಮಾಸಿಕ 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿಯನ್ನು ನೀಡಲಾಗುತ್ತದೆ.


ಡಿಪ್ಲೋಮಾ ಅಥವಾ ಪದವಿ ಶಿಕ್ಷಣವನ್ನು ಪಡೆದು 180 ದಿನಗಳು ಕಳೆದರೂ ಕೂಡ ಉದ್ಯೋಗ ಸಿಗದೇ ಇರುವವರು ಮಾತ್ರವೇ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಒಂದೊಮ್ಮೆ ಪದವಿ, ಡಿಪ್ಲೊಮಾ ಶಿಕ್ಷಣ ಪಡೆದ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದ್ರೆ ಅಂತಹ ಅಭ್ಯರ್ಥಿಗಳು ಯೋಜನೆಗೆ ಅರ್ಹತೆ ಪಡೆಯುವುದಿಲ್ಲ.


ಯೋಜನೆಗೆ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವವರೆಗೆ ಮಾತ್ರವೇ ಈ ಯೋಜನೆಯ ಲಾಭ ದೊರೆಯಲಿದೆ. ಅಲ್ಲದೇ ಅರ್ಜಿ ಸಲ್ಲಿಸಿದ ದಿನದಿಂದ ಗರಿಷ್ಠ 2 ವರ್ಷಗಳ ಅವಧಿಗೆ ಮಾತ್ರವೇ ಯುವನಿಧಿ ಯೋಜನೆಯ ಭತ್ಯೆ ದೊರೆಯಲಿದೆ.

ಸುಳ್ಯ: ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಇನೋವಾ ಕಾರು: ಓರ್ವನ ಕಾಲಿಗೆ ಗಂಭೀರ ಗಾಯ

Posted by Vidyamaana on 2023-01-24 01:27:49 |

Share: | | | | |


ಸುಳ್ಯ: ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಇನೋವಾ ಕಾರು: ಓರ್ವನ ಕಾಲಿಗೆ ಗಂಭೀರ ಗಾಯ

ಸುಳ್ಯ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದ ಪರಿವಾರಕಾನದ ಬಳಿ ನಡೆದಿದೆ.ಮಣಿಪಾಲ ಮೂಲದ ಸಮೃದ್ಧಿ ಸೊಸೈಟಿ ಸಂಸ್ಥೆಗೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಇನ್ನು ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದಿಂದ ಕಾರಿನಲ್ಲಿದ್ದ ಓರ್ವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ದ.ಕ. ಲೋಕಸಭಾ ಚುನಾವಣಾ ಕಾಂಗ್ರೆಸ್‌ ಪ್ರಚಾರ ಸಮಿತಿಗೆ ಈಶ್ವರ ಭಟ್ ಪಂಜಿಗುಡ್ಡೆ,ಮುರಳಿಧರ ರೈ ಮಠಂತಬೆಟ್ಟು ಆಯ್ಕೆ

Posted by Vidyamaana on 2024-04-05 17:12:57 |

Share: | | | | |


ದ.ಕ. ಲೋಕಸಭಾ ಚುನಾವಣಾ ಕಾಂಗ್ರೆಸ್‌ ಪ್ರಚಾರ ಸಮಿತಿಗೆ ಈಶ್ವರ ಭಟ್ ಪಂಜಿಗುಡ್ಡೆ,ಮುರಳಿಧರ ರೈ ಮಠಂತಬೆಟ್ಟು ಆಯ್ಕೆ

ಪುತ್ತೂರು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಬಿ. ರಮಾನಾಥ ರೈ ಅವರ ನೇತೃತ್ವದ ಚುನಾವಣಾ ಪ್ರಚಾರ ಸಮಿತಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ

ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆ ಉದ್ಘಾಟನೆ

Posted by Vidyamaana on 2023-05-28 09:07:50 |

Share: | | | | |


ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆ ಉದ್ಘಾಟನೆ

ಪುತ್ತೂರು: ಸ್ವರ್ಣೋದ್ಯಮಕ್ಕೆ ಸಮ್ಮಾನ ಮಾಡಿದಂತೆ ವ್ಯವಹಾರದಲ್ಲಿ ಯಶಸ್ಸನ್ನು ಗಿಟ್ಟಿಸಿಕೊಂಡಿರುವ ಮಾನಕ ಜ್ಯುವೆಲ್ಸ್ ಪುತ್ತೂರು ಮುಖ್ಯರಸ್ತೆಯಲ್ಲಿರುವ ಸಿಪಿಸಿ ಪ್ಲಾಜ್ಹಾದ ಮುಂಭಾಗದ ಸ್ವಂತ ಕಟ್ಟಡದಲ್ಲಿ ಶನಿವಾರ ಉದ್ಘಾಟನೆಗೊಂಡಿತು.

ಪುತ್ತೂರಿನ ಪ್ರಸಿದ್ಧ ಜವಳಿ ಮಳಿಗೆ ಸಂಜೀವ ಶೆಟ್ಟಿ ಪಾಲುದಾರರಾದ ಗಿರಿಧರ್ ಅವರು ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆಯನ್ನು ಉದ್ಘಾಟಿಸಿದರು.


ಹೆಚ್ಚು ಶಾಖೆ ತೆರೆಯುವಂತಾಗಲಿ: ವಿದ್ಯಾ ಗಿರಿಧರ್

ಸಂಜೀವ ಶೆಟ್ಟಿ ಜವಳಿ ಮಳಿಗೆಯ ವಿದ್ಯಾ ಗಿರಿಧರ್ ಮಾತನಾಡಿ, ಉದ್ಯಮ ಬೆಳೆದಂತೆ ಪಟ್ಟಣ ಬೆಳೆಯುತ್ತದೆ. ಪಟ್ಟಣದ ಬೆಳವಣಿಗೆಗೆ ತಕ್ಕಂತೆ ಉದ್ಯಮವೂ ಅಭಿವೃದ್ಧಿ ಕಡೆ ಸಾಗಬೇಕು. ಇದಕ್ಕೆ ಪೂರಕ ಎಂಬಂತೆ ಮಾನಕ ಜ್ಯುವೆಲ್ಸ್ ಸಾಗುತ್ತಿದೆ. ಮಾನಕ ಜ್ಯುವೆಲ್ಸ್ ಸಂಸ್ಥೆಯ 2ನೇ ಶಾಖೆಯನ್ನು ಸಂಜೀವ ಶೆಟ್ಟಿ ಸಂಸ್ಥೆಯ ಸಹೋದರರೇ ಉದ್ಘಾಟಿಸಿದ್ದು, ಮಾನಕ ಜ್ಯುವೆಲ್ಸ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಹೆಚ್ಚು ಶಾಖೆಗಳನ್ನು ತೆರೆಯಲಿ ಎಂದು ಶುಭಹಾರೈಸಿದರು.

ಲಾಭದಲ್ಲಿ ಸಮಾಜಕ್ಕೆ ಒಂದಿಷ್ಟು: ರಾಜೇಶ್ ಬನ್ನೂರು

ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮಾತನಾಡಿ, ವ್ಯಾಪಾರ ಎಂದರೆ ಲಾಭವೇ ಉದ್ದೇಶ. ಆದರೆ ಲಾಭದ ಜೊತೆಗೆ ಸಮಾಜಕ್ಕೆ ಒಂದಿಷ್ಟು ನೀಡುವ ಶಕ್ತಿಯನ್ನು ಮಹಾಲಿಂಗೇಶ್ವರ ದೇವರು ನೀಡಿದ್ದಾನೆ. ಆದ್ದರಿಂದ ಪುತ್ತೂರಿಗೆ ಕಲಶಪ್ರಾಯದಂತಿರುವ ಮಾನಕ ಜ್ಯುವೆಲ್ಸ್ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಹಾರೈಸಿದರು.

ಮಾನಕ ಜ್ಯುವೆಲ್ಸ್ ನ 2ನೇ ಮಳಿಗೆ : ಧೈರ್ಯವರ್ಧನ್ ಕದಮ್

ಧೈರ್ಯವರ್ಧನ್ ಕದಮ್ ಮಾತನಾಡಿ, ಕಲಾಯಿ ಕೆಲಸದಿಂದ ಪುತ್ತೂರಿನಲ್ಲಿ ಜೀವನ ಕಂಡುಕೊಂಡವರು ಶಂಕರ್ ಶೇಟ್. ಇಂದು ಅವರ ಮಕ್ಕಳು ತಾಯಿಯ ಆಶೀರ್ವಾದದಿಂದ 2ನೇ ಮಳಿಗೆಯನ್ನು ತೆರೆದಿದ್ದಾರೆ. ಕಳೆದ 18 ವರ್ಷಗಳಲ್ಲಿ ಮಾನಕ ಜ್ಯುವೆಲ್ಸ್ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದು, ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲಿ ಎಂದರು.

ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಜಾಕ್ ಮಾತನಾಡಿ, ಶುಭಹಾರೈಸಿದರು.

ಸಂಸ್ಥೆಯ ಮಾಲಕರ ಸಹೋದರ ಶಿವಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಗಣೇಶ್ ರಾವ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಉಲಾಸ್ ಪೈ, ಸಂಸ್ಥೆಯ ಮಾಲಕರ ತಾಯಿ ಮಾನಕ ಕಂದಾರೆ, ಮಾನಕ ಜ್ಯುವೆಲ್ಸ್ ಮಾಲಕರ ಸಹೋದರರಾದ ಸಿದ್ದನಾಥ್ ಕಂದಾರೆ ಹಾಗೂ ಪತ್ನಿ ಪದ್ಮಿನಿ, ಸಹದೇವ್ ಕಂದಾರೆ ಹಾಗೂ ಪತ್ನಿ ಅಪರ್ಣ, ಸನದ್ ಕುಮಾರ್ ಹಾಗೂ ಪತ್ನಿ ಮಧುರ ಮತ್ತು ಮಕ್ಕಳಾದ ಶ್ರೀವರ್ಧನ್, ಶೌರ್ಯವರ್ಧನ್, ಮನಸ್ವಿ, ಸಮರ್ಥ್ ಮೊದಲಾದವರು ಉಪಸ್ಥಿತರಿದ್ದರು.

ಅರ್ಚಕ ಜಗದೀಶ್ ಭಟ್ ಅವರು ವೈದಿಕ ವಿಧಿವಿಧಾನ ನೆರವೇರಿಸಿದರು.ಮಾನಕ ಜ್ಯುವೆಲ್ಲರ್ಸ್ ನ ನೂತನ ಸರ್ವಸುಸಜ್ಜಿತ ಶೋರೂಂ ಉದ್ಘಾಟನೆಯ ದಿನ ಬೆಳಿಗ್ಗಿನಿಂದಲೇ ಅಪಾರ ಪ್ರಮಾಣದ ಜನ ಭೇಟಿ ನೀಡಿ ಮಾಲಕರಿಗೆ ಶುಭ ಹಾರೈಸುತ್ತಿದ್ದ ದೃಶ್ಯ ಕಂಡುಬಂತು. ಬೆಳಿಗ್ಗಿನಿಂದ ಸಾಯಂಕಾಲದವರೆಗೆ ಸಾಲುಸಾಲಾಗಿ ಬರ್ತಿದ್ದ ಜನರಿಂದಾಗಿ ಜ್ಯುವೆಲ್ಲರ್ಸ್ ಶೋರೂಂ ಎದುರು ಅಪಾರ ಪ್ರಮಾಣದ ಜನಜಂಗುಳಿಯೇ ಉಂಟಾಗಿದ್ದು ವಿಶೇಷವಾಗಿತ್ತು ಮತ್ತು ತಮ್ಮ ಹೊಸ ವಿಸ್ತೃತ ಸಂಸ್ಥೆಗೆ ಸಿಕ್ಕ ಜನಬೆಂಬಲವನ್ನು ಕಂಡು ಮಾಲಕರು ಫುಲ್ ಖುಷ್ ಆಗಿದ್ದಾರೆ.


ಉದ್ಘಾಟನೆ ಹಿನ್ನೆಲೆಯಲ್ಲಿ ಆಫರ್ಗಳು:

ಮೇ 27ರಿಂದ ಜೂನ್ 31ರವರೆಗೆ 10 ಸಾವಿರ ರೂ. ಮಿಕ್ಕಿದ ಖರೀದಿಗೆ ಕೂಪನ್ ನೀಡಿ, ಅದರ ಮೂಲಕ ಬಹುಮಾನ ಘೋಷಿಸಲಾಗುವುದು. ಇದರಲ್ಲಿ ಪ್ರಥಮ ಬಹುಮಾನ ರೆಫ್ರಿಜರೇಟರ್, ದ್ವಿತೀಯ ಬಹುಮಾನ ವಾಷಿಂಗ್ಮೆಷಿನ್, ತೃತೀಯ ಬಹುಮಾನ ಸ್ಮಾರ್ಟ್ ಟಿವಿ ದೊರೆಯಲಿದೆ. ಐದು ಆಕರ್ಷಕ ಬಹುಮಾನ ಲಭ್ಯ. ಇದರೊಂದಿಗೆ ಗ್ರಾಹಕರಿಗೆ ಮಾಸಿಕ 500 ರೂ., 1000 ರೂ. ಹಾಗೂ 2000 ರೂ. ಪಾವತಿಯ ಕಂತುಗಳ ಮೂಲಕ ಚಿನ್ನ ಖರೀದಿಸುವ ಅವಕಾಶ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

Posted by Vidyamaana on 2023-12-11 21:13:30 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

ಉಡುಪಿ : ಆರೋಪಿ ಪ್ರವೀಣ್ ಚೌಗಲೆಗೆ ಸೂಕ್ತ ಭದ್ರತೆ ನೀಡಲು ಕಷ್ಟವಾದ ಕಾರಣ, ಆತನನ್ನು ಉಡುಪಿ ಸಬ್ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೂ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ಇಷ್ಟೊಂದು ಸೂಕ್ಷ್ಮವಾಗಿರುವಾಗ, ಜನರ ಸಂಯಮವನ್ನು ಗೌರವಿಸಬೇಕಾದ ಇಲಾಖೆ ನೊಟೀಸು ನೀಡಿ ಮತ್ತೊಂದು ತಲೆನೋವು ಎದುರು ಹಾಕಿಕೊಂಡಂತಿದೆ.ಉಡುಪಿಯ ನೇಜಾರಿನಲ್ಲಿ (Udupi, Nezari)ನಡೆದ ನಾಲ್ವರ ಅಮಾನುಷ ಹತ್ಯೆ (Murder) ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆಯೊಂದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಪ್ರವೀಣ್ ಚೌಗಲೆಯನ್ನು ಮಹಜರಿಗೆ ಕರೆತಂದಾಗ ಉಂಟಾದ ಗದ್ದಲ, ಲಾಠಿಚಾರ್ಜ್ ಸಂಬಂಧ 11 ಮಂದಿಗೆ ನೊಟೀಸು ನೀಡಿರುವ ಪೊಲೀಸ್ ಇಲಾಖೆ ನಡೆ ಗೊಂದಲ ಸೃಷ್ಟಿಸಿದೆ. ಈ ಪೈಕಿ ಕೊಲೆಯತ್ನ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ ಎಂಬ ವದಂತಿ ನೇಜಾರಿನ ಜನರನ್ನು (Villagers) ಮತ್ತಷ್ಟು ಆತಂಕಕ್ಕೆ (Angry) ತಳ್ಳಿದೆ.


ನೇಜಾರಿನ ಹತ್ಯಾಕಾಂಡ ಕುರಿತಂತೆ ಸಾರ್ವಜನಿಕರಲ್ಲಿ ಅದರಲ್ಲೂ ಮುಸ್ಲೀಂ ಸಮುದಾಯದಲ್ಲಿ ಇನ್ನಿಲ್ಲದ ಆಕ್ರೋಶ ಮಡುಗಟ್ಟಿದೆ. 15 ನಿಮಿಷದ ಅವಧಿಯಲ್ಲಿ ನಾಲ್ವರನ್ನು ಬಲಿ ಪಡೆದ ಪಾತಕಿ ಪ್ರವೀಣ್ ಚೌಗಲೆಗೆ ಗಲ್ಲು ಶಿಕ್ಷೆ ಆಗಬೇಕೆಂದು ಉಡುಪಿಯ ಜನತೆ ಒಕ್ಕೊರಲಿನಿಂದ ಒತ್ತಾಯಿಸುತ್ತಿದ್ದಾರೆ. ಘಟನೆ ನಡೆದು ಸಾಕಷ್ಟು ಸಮಯ ಕಳೆದರೂ ಜನರ ಕೋಪ ಮಾತ್ರ ತಣ್ಣಗಾಗಿಲ್ಲ.ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಆರೋಪಿ ಪ್ರವೀಣನನ್ನು ನವೆಂಬರ್ 16 ರಂದುಸೂಕ್ತ ಭದ್ರತೆಗಳಿಲ್ಲದೆ ಘಟನೆ ನಡೆದ ಮನೆಗೆ ಪೊಲೀಸರು ಕರೆತಂದಿದ್ದರು. ಈ ವೇಳೆ ಉದ್ರಿಕ್ತ ಜನರು ಪ್ರವೀಣನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಕೋಪಗೊಂಡಿದ್ದ ಜನರನ್ನು ಹಿಮ್ಮೆಟ್ಟಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಲಾಠಿ ಚಾರ್ಜ್ ನಡೆಸಿದ್ದರು.


ಇದೀಗ ಈ ಘಟನೆ ಸಂಬಂಧ ಹಲ್ಲೆಗೆ ಮುಂದಾದ 11 ಮಂದಿಯನ್ನು ಗುರುತಿಸಿ ಮಲ್ಪೆ ಪೊಲೀಸರು ನೊಟೀಸು ನೀಡಿದ್ದಾರೆ. ಈ ಪೈಕಿ ಮೂವರ ಮೇಲೆ 307, ಅಂದರೆ ಆರೋಪಿಯ ಕೊಲೆ ಯತ್ನ ಸಂಬಂಧ ಪ್ರಕರಣ ದಾಖಲಿಸಲು ತಯಾರಿ ನಡೆಯುತ್ತಿದೆ ಎಂಬ ವದಂತಿ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಸಂತ್ರಸ್ಥ ಕುಟುಂಬ ಮಧ್ಯಪ್ರವೇಶಿಸುವ ಮೂಲಕ ವಿವಾದ ತಿಳಿಗೊಂಡಿದೆ.ವಾಸ್ತವದಲ್ಲಿ ಪ್ರವೀಣ್ ಚೌಗಲೆಗೆ ಭದ್ರತೆ ನೀಡುವುದು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಕೋರ್ಟ್ ಗೆ ಹಾಜರುಪಡಿಸುವಾಗಲೂ ಹತ್ತಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ ಮಹಜರು ವೇಳೆ ಮಾತ್ರ ಸೂಕ್ತ ರಕ್ಷಣೆ ಇಲ್ಲದೆ ಕರೆತರಲಾಗಿತ್ತು. ಸಹಜವಾಗಿಯೇ ಕೋಪದಲ್ಲಿದ್ದ ನಾಗರಿಕರು, ಆರೋಪಿಯತ್ತ ನುಗ್ಗಿ ದಾಳಿಗೆ ಮುಂದಾಗಿದ್ದರು.


ಈ ವೇಳೆ ಲಾಠಿಚಾರ್ಜ್ ನಡೆದು, ಬಳಿಕ ಸ್ಥಳೀಯರ ಪ್ರತಿಭಟನೆಯೂ ನಡೆದಿತ್ತು. ಲಾಠಿ ಚಾರ್ಜ್ ಮಾಡಿದ ಬಗ್ಗೆ ಜನರು ಕೋಪ ವ್ಯಕ್ತಪಡಿಸಿದ್ದರು. ಇದೀಗ ಈ ಗಲಾಟೆ ಸಂಬಂಧ ಹಲವರಿಗೆ ನೊಟೀಸು ನೀಡಲಾಗಿದೆ. ನಾಲ್ವರ ಹತ್ಯೆಯಾದರೂ ಸಂಯಮದಿಂದಿದ್ದ ಸ್ಥಳೀಯ ಜನತೆಯ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು, ಇದೀಗ ಪೊಲೀಸರು ಮತ್ತೆ ಕೇಸ್ ಓಪನ್ ಮಾಡಿರೋದು, ಸಹಜವಾಗಿಯೇ ಇಲಾಖೆಯ ಮೇಲೆ ಕೋಪಕ್ಕೆ ಕಾರಣವಾಗಿದೆ. ಕೊನೆಯಲ್ಲಿ ಪೊಲೀಸರು ಜನರ ಆಕ್ರೋಶ ಅರಿತು, ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೂಲಕ ಬಿಡುಗಡೆಗೊಳಿಸಿದ್ದಾರೆ.ಏನೇ ಆದರೂ ಕಾನೂನು ಕ್ರಮ ಅನಿವಾರ್ಯ ಅನ್ನೋದು ಇಲಾಖೆಯ ಧೋರಣೆಯಾಗಿದೆ.

ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

Posted by Vidyamaana on 2023-12-12 11:56:38 |

Share: | | | | |


ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ  IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಇನ್ಫೋ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌, ಗೌರಿ ಮೀಡಿಯಾ ಟ್ರಸ್ಟ್‌, ಟೈಲೈಕ್‌ ಟೆಕ್ನಾಲಜಿ ಲಿಮಿಟೆಡ್‌, ನ್ಯೂಸ್‌ ಪ್ಲಸ್‌ ಕಮ್ಯುನಿಕೇಷನ್‌ ಮತ್ತು ಒಡಬ್ಲ್ಯೂ ಡಾಟಾ ಲೀಡ್ಸ್‌ ಸಂಸ್ಥೆಗಳನ್ನು ಸುಳ್ಳು ಸುದ್ದಿ ಪತ್ತೆಗೆ ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಪೊಲೀಸ್‌ ಮಹಾನಿರ್ದೇಶಕರ ನೇತೃತ್ವದಲ್ಲಿ ಐಡಿಟಿಯು ಕಾರ್ಯನಿರ್ವಹಿಸಲಿದ್ದು, ಶೀಘ್ರವೇ ಕಾರ್ಯಾಚರಣೆ ಆರಂಭಿಸಲಿದೆ.



Leave a Comment: