ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

Posted by Vidyamaana on 2023-09-18 15:46:31 |

Share: | | | | |


ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ತೆಗಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ಪಡೆದುಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಟಟ್ಟಿರುವ ಹಿಂದು ನಾಯಕಿ ಮತ್ತು ವಾಗ್ಮಿ ಚೈತ್ರ ಕುಂದಾಪುರ ಮತ್ತು ಆಕೆಯ ಸಹಚರರ ತೀವ್ರ ವಿಚಾರಣೆ ನಡೆಯುತ್ತಿದೆ.

ಈ ನಡುವೆ ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದ ಚೈತ್ರಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಚೈತ್ರಾ ಕುಂದಾಪುರ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಇಂದು (ಸೆ.18) ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮತ್ತೆ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಇನ್ನು ಅವರ ಅಸಲಿ ವಿಚಾರಣೆ ಪ್ರಾರಂಭಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಚೈತ್ರಾಳ ದೇಹಾರೋಗ್ಯ ಸ್ಥಿತಿ ನಾರ್ಮಲ್ ಆಗಿದ್ದು ಮಾಡಲಾಗಿರುವ ಎಲ್ಲಾ ಟೆಸ್ಟ್ ಗಳಲ್ಲಿಯೂ ಆಕೆಗೆ ಯಾವುದೇ ರೀತಿಯ ಗಂಭೀರ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಚೈತ್ರಾ ಆಡಿರುವ ಮಹಾ ಡ್ರಾಮಾ ಎಂಬ ಅಂಶವೂ ಇದೀಗ ಖಚಿತಗೊಂಡಿದ್ದು, ಇದೀಗ ಆಸ್ಪತ್ರೆಯಿಂದ ನೇರವಾಗಿ ವಿಚಾರಣಾ ಸ್ಥಳಕ್ಕೆ ಆಕೆಯನ್ನು ಅಧಿಕಾರಿಗಳು ಕರೆದೊಯ್ದಿರುವ ಕಾರಣ, ಸಿಸಿಬಿ ಪೊಲೀಸರ ಅಸಲೀ ವಿಚಾರಣೆ ಇನ್ನು ಶುರುವಾಗಲಿದೆ!

ಚೈತ್ರಾಳ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದು, ‘ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಎಲ್ಲವೂ ನಾರ್ಮಲ್ ಆಗಿದೆ..’ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ನೀಡಿರುವ ವೈದ್ಯರು, ‘ಅದು ಫಂಕ್ಷನಲ್ ಆಗಿ ಆಗಿರುವಂತದ್ದು, ಅವರೇ ಅದನ್ನು ಮಾಡಿಕೊಂಡಿದ್ದಾರೆ. ಫಿಟ್ಸ್ ಸ್ಥಿತಿ ಏನೂ ಕಂಡುಬಂದಿಲ್ಲ, ಬಹುಷಃ ಅದು ಸಾಬೂನು ನೊರೆಯಾಗಿರಬಹುದು..’ ಎಂದು ಹೇಳಿದ್ದಾರೆ.

‘ಆಕೆಯಲ್ಲಿ ಫಿಟ್ಸ್ ಸಮಸ್ಯೆ ಪತ್ತೆಗಾಗಿ ಎಂ.ಆರ್.ಐ ಸ್ಕ್ಯಾನಿಂಗ್ ನಡೆಸಲಾಗಿದೆ ಮಾತ್ರವಲ್ಲದೇ ಇಸಿಜಿ  ಕೂಡ ಮಾಡಲಾಗಿದೆ. ಈ ಎಲ್ಲಾ ಟೆಸ್ಟ್ ರಿಪೋರ್ಟ್ ನಾರ್ಮಲ್ ಆಗಿದೆ. ಆದರೆ ನ್ಯೂರಾಲಜಿಸ್ಟ್ ಕೆಲವೊಂದು ಮಾತ್ರೆಗಳನ್ನು ಕೊಟ್ಟಿದ್ದಾರೆ..’ ಎಂದು ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಚೈತ್ರಾ ಅವರನ್ನು ಸಿಸಿಬಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯ ಹಿಂಬಾಗಿಲಿನ ಮೂಲಕ ಕರೆದೊಯ್ದಿದ್ದಾರೆ. ಇದೀಗ ಆಕೆಯ ವಿಚಾರಣೆ ಮತ್ತೆ ಪ್ರಾರಂಭಗೊಳ್ಳಲಿದ್ದು, ಯಾರಿಗೆಲ್ಲಾ ಹಣ ವರ್ಗಾವಣೆಯಾಗಿದೆ ಮತ್ತು ಈ ಪ್ರಕರಣದಲ್ಲಿ ಯಾರ್ಯಾರ ಕೈವಾಡ ಇದೆ ಎನ್ನುವ ವಿಚಾರಗಳಿಗೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಮುಂಡೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ಜಾತ್ರೋತ್ಸವದ ಸಂಭ್ರಮ

Posted by Vidyamaana on 2024-02-29 11:09:09 |

Share: | | | | |


ಮುಂಡೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ಜಾತ್ರೋತ್ಸವದ ಸಂಭ್ರಮ

ಪುತ್ತೂರು: ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ದ್ವಿತೀಯ ವರ್ಷದ ಜಾತ್ರೋತ್ಸವ, ದೈವಗಳ ನೇಮೋತ್ಸವ, ನವೀಕೃತ ರಂಗಮಂಟಪದ ಉದ್ಘಾಟನೆ ಮಾ. 1 ಹಾಗೂ 2ರಂದು ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 1ರಂದು ಸಂಜೆ 3.30ಕ್ಕೆ ಹಸಿರು ಹೊರೆಕಾಣಿಕೆ, ಬಳಿಕ ಶ್ರೀ ಸತ್ಯನಾರಾಯಣ ಪೂಜೆ, ರಂಗಪೂಜೆ, ನವೀಕೃತ ರಂಗಮಂಟಪದ ಉದ್ಘಾಟನೆ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ, ಸಂಗೀತ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8.45ರಿಂದ ಬೊಳ್ಳಿಮಲೆತ ಶಿವಶಕ್ತಿಲು ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಮಾರ್ಚ್ 2ರಂದು ಬೆಳಿಗ್ಗೆ 8ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7ರಿಂದ ಮಹಾಪೂಜೆ, ದೇವರ ಬಲಿ ಹೊರಟು ಶ್ರೀ ಭೂತಬಲಿ ಮಹೋತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ದೈವಗಳಿಗೆ ನೇಮೋತ್ಸವ ಜರಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಕುದ್ಕಾಡಿ ಶೀನಪ್ಪ ರೈ ಕೊಡೆಂಕಿರಿ, ನಿಕಟಪೂರ್ವ ಅಧ್ಯಕ್ಷ  ಅರುಣ್ ಕುಮಾರ್ ಆಳ್ವ ಬೋಳೋಡಿ, ಭಾಸ್ಕರ್ ರೈ ಕೆದಂಬಾಡಿಗುತ್ತು, ವಿಶ್ವನಾಥ ರೈ ಕುಕ್ಕುಂಜೋಡು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಅಪಘಾತ : ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ್ಯು

Posted by Vidyamaana on 2024-05-30 16:54:25 |

Share: | | | | |


ಬೆಂಗಳೂರಿನಲ್ಲಿ ಅಪಘಾತ :  ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ್ಯು

ನೆಲ್ಯಾಡಿ : ಬೆಂಗಳೂರಿನ ನೆಲಮಂಗಲದಲ್ಲಿ ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ನೆಲ್ಯಾಡಿ ಎಂಜಿರ ಪರಕ್ಕಳದ ಯುವಕ ಮೃತಪಟ್ಟ ಬಗ್ಗೆ ವರದಿಯಾಗಿದೆ.

ನೆಲ್ಯಾಡಿ ಎಂಜಿರ ಪರಕ್ಕಳ ನಿವಾಸಿ ಸ್ಕೇರಿಯಾ ಎಂಬವರ ಪುತ್ರ, ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ ಯುವಕ.

ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Posted by Vidyamaana on 2024-06-26 19:19:30 |

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಆಳದ ಕಂದಕಕ್ಕೆ ಉರುಳಿದ ಕಾರು

Posted by Vidyamaana on 2023-04-10 05:39:52 |

Share: | | | | |


ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಆಳದ ಕಂದಕಕ್ಕೆ ಉರುಳಿದ ಕಾರು

ಬೆಳ್ತಂಗಡಿ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ರವಿವಾರ ರಾತ್ರಿ ಈ ಅವಘಡ ನಡೆದಿತ್ತು.ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಉಜಿರೆಯ ಎಸ್‌ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದವರು ಉಜಿರೆ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.

ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು ಕಲ್ಲಾಪು ಹೆದ್ದಾರಿಯಲ್ಲಿ ದುರ್ಘಟನೆ

Posted by Vidyamaana on 2023-09-25 16:27:29 |

Share: | | | | |


ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು ಕಲ್ಲಾಪು ಹೆದ್ದಾರಿಯಲ್ಲಿ ದುರ್ಘಟನೆ

ಉಳ್ಳಾಲ : ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. 


ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ‌ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು. 


ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರುಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.



Leave a Comment: