Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23
ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”
ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.
ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.
ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.
ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!
ಡಾ. ಶಿವರಾಮ ಭಟ್ ಗುರು:
ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ. ಶಿವರಾಮ ಭಟ್ ಎಂದು ನಂಬಿದ್ದರು.
ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!
ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.
Posted by Vidyamaana on 2023-09-02 05:48:16 |
ಆದಿಲಾಬಾದ್: ಮದುವೆಯಾದ ಮೂರ್ನಾಲ್ಕು ತಿಂಗಳಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಂದು ಪೊಲೀಸ್ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಆತನು ಸಹ ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್’ನಲ್ಲಿ ನಡೆದಿದೆ.
ಪತ್ನಿ ದೀಪಾಳನ್ನು ಕೊಲೆಗೈದು ಬೈಕಿನಲ್ಲಿ ಠಾಣೆಗೆ ತೆರಳಿದ ಅರುಣ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಪೊಲೀಸ್ ಅಧಿಕಾರಿ ಎಂ.ಅಶೋಕ್ ಹಾಗೂ ಸ್ಥಳೀಯರ ಪ್ರಕಾರ, ಮೇ 11ರಂದು ನಿಜಾಮಾಬಾದ್ ಜಿಲ್ಲೆಯ ಬಾಲ್ಕೊಂಡದ ಚೌಹಾಣ್ ಲಕ್ಷ್ಮಿ ಮತ್ತು ಗೋಪಿಚಂದ್ ಅವರ ಕಿರಿಯ ಪುತ್ರಿ ದೀಪಾ ಅವರು ಆದಿಲಾಬಾದ್ ಉಪನಗರ ಬಂಗಾರಗುಡ್ಡದ ಮೋಹಿತೆ ಅರುಣ್ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ ಒಂದು ವಾರದ ಬಳಿಕ ಅರುಣ್ ಪತ್ನಿಗೆ ಅನುಮಾನದಿಂದ ಕಿರುಕುಳ ನೀಡಲಾರಂಭಿಸಿದ್ದ. ಆಗಾಗ ಜಗಳ ಮಾಡುತ್ತಿದ್ದರು. ದೀಪಾ ತನ್ನ ತಂದೆಗೆ ಕರೆ ಮಾಡಿ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಹೀಗಾಗಿ ಅವರ ತಂದೆ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆಗಸ್ಟ್ 28ರಂದು ಅರುಣ್ ತನ್ನ ಅತ್ತೆ ಮನೆಗೆ ತೆರಳಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿ ಆದಿಲಾಬಾದ್ಗೆ ಕರೆತಂದಿದ್ದ.ಶುಕ್ರವಾರ ಬೆಳಗ್ಗೆ ಅರುಣ್ ತನ್ನ ಪತ್ನಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ. ಆಕೆಯ ಕುತ್ತಿಗೆ ಕೊಯ್ದು, ತಲೆಯನ್ನು ಮಂಚಕ್ಕೆ ಜಜ್ಜಿದ್ದರಿಂದ ಗೃಹಿಣಿ ಸಾವನ್ನಪ್ಪಿದ್ದಾಳೆ. ಬಳಿಕ ಅರುಣ್ ಅದಿಲಾಬಾದ್ ಗ್ರಾಮಾಂತರ ಪೊಲೀಸರಿಗೆ ಶರಣಾಗಲು ತೆರಳಿದ್ದನು. ಅರುಣ್ ತಂದೆ ಜೈವಂತ್ ರಾವ್ ತನ್ನ ಮಗನ ಬೈಕ್ ಪತ್ತೆಯಾಗದ ಕಾರಣ ಮಗನಿಗೆ ಕರೆ ಮಾಡಿದ್ದಾರೆ. ಆಗ ಅರುಣ್ ನಾನು ನನ್ನ ಪತ್ನಿಯನ್ನು ಕೊಂದಿದ್ದು, ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ತಂದೆ ಜೈವಂತ್ ರಾವ್ಗೆ ತಿಳಿಸಿದ್ದಾನೆ. ಕೂಡಲೇ ನೀನು ಮನೆಗೆ ಬರುವಂತೆ ಜೈವಂತ್ ರಾವ್ ಮಗನಿಗೆ ಸೂಚಿಸಿದ್ದಾರೆ. ಅಪ್ಪನ ಮಾತಿನಂತೆ ಮಗ ಅರುಣ್ ಮನೆಗೆ ಹಿಂತಿರುಗುವಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಅರುಣ್ ತಂದೆ ಜೈವಂತ್ ರಾವ್ಗೆ ತಿಳಿಸಿದ್ದಾರೆ. ನಂತರ ಜೈವಂತ್ ರಾವ್ ತನ್ನ ಸೊಸೆಯನ್ನು ನನ್ನ ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತ ಗೃಹಿಣಿ ದೀಪಾ ಅವರ ತಾಯಿ ಲಕ್ಷ್ಮಿ ಅವರ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸರು ಮೃತ ಅರುಣ್ ಅವರ ತಂದೆ ಜೈವಂತ್ ರಾವ್ ಮತ್ತು ತಾಯಿ ಪದ್ಮಾ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅದಿಲಾಬಾದ್ ಎರಡನೇ ನಗರ ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Posted by Vidyamaana on 2023-11-03 18:35:01 |
ಬೆಳ್ತಂಗಡಿ : ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸರು ಪತಿ ಸುಧಾಕರ್ ನಾಯ್ಕ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಜ್ಯೋತಿನಗರದ ನಿವಾಸಿ ಟ್ಯಾಪಿಂಗ್ ಕೆಲಸ ಮಾಡುತ್ತಿರುವ ಪತಿ ಸುಧಾಕರ್ ಮತ್ತು ಪತ್ನಿ ಶಶಿಕಲಾ ನಡುವೆ ಗಲಾಟೆ ನಡೆದು ನಂತರ ಶಶಿಕಲಾ ವನ್ನು ಕೊಲೆ ಮಾಡಿ ಬಾವಿಗೆ ಹಾಕಿರುವ ಆರೋಪ ಪತ್ನಿ ಕುಟುಂಬದವರಿಂದ ಕೇಳಿಬರುತ್ತಿದೆ.
ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-10-20 12:16:13 |
ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ಆರೋಪಿಗಳಾದ ಕುಲಾಯಿಯ ಗಿರಿಧರ್, ಕೈಕಂಬದ ದೀಕ್ಷಿತ್’ಗೆ ಜಾಮೀನು ಮಂಜೂರಾಗಿದೆ.
ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು
Posted by Vidyamaana on 2024-03-12 17:07:16 |
ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು ಒದಗಿಸಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.
ದೇವಸ್ಥಾನಕ್ಕೆ ತೆರಳುವ ಪ್ರಮುಖ ಪ್ರವೇಶದ್ವಾಋದ ಬಳಿ ಜಾಗದ ತಕರಾರು ಇರುವ ಕಾರಣ ರಸ್ತೆ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಜಾಗದ ಮಾಲಕರಾದ ಸದಾನಂದ ಎಂಬವರನ್ನು ಕರೆಸಿ ಮಾತುಕತೆ ನಡೆಸಿದ ಶಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಗೆ ಸಹಕಾರ ಮಾಡುವಂತೆ ಮತ್ತು ಈ ಹಿಂದೆ ಇದೇ ವಿಚಾರದಲ್ಲಿ ಮಾಡಲಾಗಿರುವ ಕೇಸುಗಳನ್ನು ಹಿಂಪಡೆದು ಭಕ್ತರಿಗೆ ನೆರವಾಗಲು ರಸ್ತೆ ವಿವಾದವನ್ನು ಇತ್ಯರ್ಥ ಪಡಿಸಬೇಕು ಮತ್ತು ಈ ವಿಚಾರದಲ್ಲಿ ಸಹಕಾರ ನೀಡುವಂತೆ ಶಾಸಕರು ಕೇಳಿಕೊಂಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಜಾಗದ ಮಾಲಿಕ ಸದಾನಂದ ರವರು ಪುತ್ತೂರು ಶಾಸಕರು ಹೇಳುವುದಾದರೆ ನಾನು ಏನು ಮಾಡಲು ಬೇಕಾದರೂ ಸಿದ್ದ ಎಂದು ಹೇಳಿ ಅನೇಕ ವರ್ಷಗಳಿಂದ ತಕರಾರಿನಿಂದ ಬಾಕಿಯಾಗಿದ್ದ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕಂತಾಗಿದೆ.
ಪುಣಚಾ ಗ್ರಾಮಕ್ಕೆ ಒಟ್ಟು ೧. ೯೫ ಕೋಟಿ ರೂ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಯಾಗದೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ವಿವಾದ ಇತ್ಯರ್ಥಪಡಿಸಿ ರಸ್ತೆ ಅಭಿವೃದ್ದಿಗೂ ಅನುದಾನ ಇರಿಸಿದ್ದೇನೆ, ಅದೇ ರೀತಿ ಪುಣಚಾ ಗ್ರಾಮದ ವಿವಿಧ ವಾರ್ಡುಗಳ ರಸ್ತೆಗೂ ಅನುದಾನವನ್ನು ನೀಡಿದ್ದೇನೆ ಎಂದು ಹೇಳಿದ ಶಾಸಕರು ಗ್ಯಾರಂಟಿ ಯೋಜನೆ ಹೇಗೆ ಜನರ ಮನೆ ಮನೆಗೆ ತಲುಪಿದೆಯೋ ಅದೇ ರೀತಿ ಅಭಿವೃದ್ದಿ ಕೆಲಸಗಳು ಪ್ರತೀ ಗ್ರಾಮಗಳಿಗೂ ತಲುಪಿದೆ ಎಂದು ಹೇಳಿದರು.
ದೇವಳದ ರಸ್ತೆಗೆ ಮೊದಲ ಬಾರಿಗೆ ಹಣ ಇಟ್ಟದ್ದು ನಾನು: ಎಂ ಎಸ್ ಮಹಮ್ಮದ್
ನಾನು ಜಿಪಂ ಉಪಾಧ್ಯಕ್ಷನಾಗಿದ್ದ ವೇಳೆ ಈ ದೇವಳದ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಇಟ್ಟಿದ್ದೆ ಆ ಬಳಿಕ ಇಲ್ಲಿಗೆ ಯಾರೂ ಅನುದಾನವನ್ನು ನೀಡಿಲ್ಲ. ಅನುದಾನ ಕೊಟ್ಟ ನನ್ನನ್ನು ದೇವಳದ ವತಿಯಿಂದ ಸನ್ಮಾನವನ್ನು ಮಾಡಿದ್ದರು. ಇದೀಗ ಈ ರಸ್ತೆ ಸಂಪೂರ್ಣ ದುರಸ್ಥಿ ಯಾಗಲಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟ ಸದಾನಂದ ಅವ ರಿಗೆ ಅಭಿನಂದನೆ ಸಲ್ಲಿಸುವುದಾಗಿ ಎಂ ಎಸ್ ಮಹಮ್ಮದ್ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾಟ. ರಾಜಾರಾಂ ಕೆ.ಬಿ, ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಲ್ವಾ, ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಪರಿಯಾಲ್ತಡ್ಕ ಶಾಲಾ ನಿವೃತ್ತ ಮುಖ್ಯ ಗುರು ಹರ್ಷಶಾಸ್ತ್ರಿ ಮಣಿಲ, ರಮಾನಾಥ್ ವಿಟ್ಲ, ರಶೀದ್ ವಿಟ್ಲ, ನವೀನ್ ರೈ ಚೆಲ್ಯಡ್ಕ, ಅಶ್ರಫ್, ರೈತ ಸೇನಾ ಮುಖಂಡ ಶ್ರೀಧರ ಶೆಟ್ಟಿ ಬೈಲುಗುತ್ತು, ವಲಯ ಕಾರ್ಯದರ್ಶಿ ಮಹಮ್ಮದ್ ಸಿರಾಜ್ ಮನಿಲ, ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಸದಸ್ಯರಾದ ಲಲಿತಾ, ಗಿರಿಜ, ಹರೀಶ್, ಪ್ರಮುಖರಾದ ಪ್ರತಿಭಾ ಶ್ರೀಧರ್ ಶೆಟ್ಟಿ, ರಾಜೇಂದ್ರ ರೈ ಬೈಲುಗುತ್ತು, ನಾರಾಯಣ ಪೂಜಾರಿ ನೀರುಮಜಲು, ಜಯರಾಂ ಶಾಸ್ತ್ರೀ ಮಣಿಲ, ನಾರಾಯಣ ನಾಯ್ಕ, ಅಲ್ಬರ್ಟ್ ಡಿಸೋಜಾ, ಕ್ಷೇವಿಯರ್ ಡಿಸೋಜಾ, ವೆಂಕಪ್ಪ ಗೌಡ ಅಜೇರು ಮಜಲು, ಕುಂಞಣ್ಣ ರೈ, ಸೀತಾರಾಮ ಪಟಿಕಲ್ಲು, ಮಹಾಲಿಂಗ ನಾಯ್ಕ, ಕರೀಂ ಕುದ್ದುಪದವು, ಮೌರಿಸ್ಟೆಲ್ಲಿಸ್, ದಿವಾಕರ ತೋರಣಕಟ್ಟೆ, ಮೋಹನ ಎಚ್, ಶಿವರಾಮ ನಾಯ್ಕ ಪಾವಳುಮೂಲೆ, ಪೂವಪ್ಪ ಎರ್ಮೆತೊಟ್ಟಿ, ಗೋವಿಂದ ನಾಯ್ಕ ಆಜೇರು, ಹಮೀದ್ ಎಂ.ಎಸ್, ಇಸ್ಮಾಯಿಲ್ ಪಾಲಸ್ತಡ್ಕ, ಮುಸ್ತಫ ಗರಡಿ, ಅಬ್ದುಲ್ಲ ಕೆಪಿ, ವಾಮನ ನಾಯ್ಕ, ಹರೀಶ್ ಕುಮಾರ್ ಆಜೇರುಮಜಲು, ಶರೀಫ್ ಕೊಲ್ಲಪದವು, ರಮೇಶ್ ದಂಬೆ, ಶ್ರೀನಿವಾಸ ನಾರ್ಣಡ್ಕ ಸೇರಿದಂತೆ ಹಲವು ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪುಣಚ ವಲಯಾದ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು ಸ್ವಾಗತಿಸಿ, ವಂದಿಸಿದರು.
Posted by Vidyamaana on 2023-05-02 04:31:44 |
ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತುಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Posted by Vidyamaana on 2024-05-17 14:22:09 |
ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಅನಾವರಣಗೊಂಡಿದೆ.
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.