ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

Posted by Vidyamaana on 2023-11-18 20:00:07 |

Share: | | | | |


ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ  ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣವನ್ನು ಕ್ಷಿಪ್ರವಾಗಿ ಪತ್ತೆ ಮಾಡಿದ ಉಡುಪಿ ಪೊಲೀಸ್ ಇಲಾಖೆಯನ್ನು ಮೃತರ ಕುಟುಂಬ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರನ್ನು ಭೇಟಿಯಾಗಿ ಅಭಿನಂದಿಸಿತು.


ನೇಜಾರಿನ ನೂರ್ ಮುಹಮ್ಮದ್, ಅವರ ಮಗ ಅಸಾದ್,ಮೃತ ಹಸೀನಾರ ಸಹೋದರ ಅಶ್ರಫ್, ಇವರ ಮಗಳು ಫಾತಿಮಾ ಅಸ್ಟಾ ಸಂಬಂಧಿಕ ಯಾಸೀನ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಅವರು ಎಸ್ಪಿಯವರನ್ನು ಭೇಟಿಯಾಗಿ ಅಭಿನಂದಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎ.ಗಫೂರ್, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ನೂರ್ ಮುಹಮ್ಮದ್ ತಮ್ಮ ಕುಟುಂಬದ ಜೊತೆ ಬೆರೆತು ಸಮಯ ಕಳೆಯುವಂತೆ ಮತ್ತು ಮಗನಿಗೆ ಭವಿಷ್ಯದ ಕುರಿತು ಕೆಲವು ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು.


ಅದೇ ರೀತಿ ಸಮಾಜದ ಸುರಕ್ಷತೆ, ಸೌಹಾರ್ದತೆ ಬಗ್ಗೆಯೂ ಎಸ್ಪಿಯವರ ಜೊತೆ ಚರ್ಚೆ ಮಾಡಿದ್ದೇವೆ.


ಸಮಾಜದಲ್ಲಿ ಶಾಂತಿ ಸಾಮರಸ್ಯ ನಿರ್ಮಾಣವಾಗಿ, ಜನ ಭಯಭೀತಿಯಿಂದ ಹೊರಬರಬೇಕು. ಮಹಿಳೆಯರು ಸುರಕ್ಷಿತವಾಗಿ ಕೆಲಸಕ್ಕೆ ಹೋಗುವಂತೆ ಮಾಡಬೇಕು ಎಂಬುದರ ಕುರಿತು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದರು

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

Posted by Vidyamaana on 2024-05-17 07:19:54 |

Share: | | | | |


ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ, FSL ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ

ಚಿತ್ರದುರ್ಗ, ಮೇ.17: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಹಾಗೂ ನರೇಂದ್ರರೆಡ್ಡಿ ಸೇರಿದಂತೆ ಐವರ ಅಸ್ಥಿಪಂಜರ (Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ.

ಎಸ್ಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, 5 ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತತೆಯಲ್ಲಿತ್ತು. ಕೂಡಲೇ ಎಫ್‌ಎಸ್‌ಎಲ್ ಟೀಂ ಕರೆಸಿ ಸೂಕ್ತ ತನಿಖೆಗೆ ಆದೇಶ ನೀಡಲಾಯಿತು.

ತನಿಖಾ ತಂಡ ಹಾಗೂ FSL ತಂಡ ಸೇರಿ ಆ ಮನೆಯಿಂದ 71 ಸಾಕ್ಷ್ಯಗಳನ್ನು ಕಲೆ ಹಾಕಲಾಗಿತ್ತು. ಎಲ್ಲಾ ಸ್ಯಾಂಪಲ್ಸ್​ಗಳನ್ನು ದಾವಣಗೆರೆ, ಬೆಂಗಳೂರು ಲ್ಯಾಬೋರೇಟರಿಗೆ ಕಳುಹಿಸಲಾಗಿತ್ತು. ಇದು ತುಂಬಾ ಸೆನ್ಸಿಬಲ್ ಕೇಸ್ ಆಗಿದ್ದರಿಂದ ರಿಪೋರ್ಟ್ ತಡವಾಗಿ ಬಂದಿದೆ.

ಆಯಿಷತ್ ರಸ್ಮಾ – ಮೊಹಮ್ಮದ್ ಸಿನಾನ್ ನಾಪತ್ತೆ ಪ್ರಕರಣ ಸುಖಾಂತ್ಯ

Posted by Vidyamaana on 2023-11-30 20:15:44 |

Share: | | | | |


ಆಯಿಷತ್ ರಸ್ಮಾ – ಮೊಹಮ್ಮದ್ ಸಿನಾನ್ ನಾಪತ್ತೆ ಪ್ರಕರಣ ಸುಖಾಂತ್ಯ

ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.


ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 26

Posted by Vidyamaana on 2023-07-25 23:17:13 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 26

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 26 ರಂದು


ಬೆಳ್ಳಗ್ಗೆ 9 ಗಂಟೆಗೆ ಕಾರ್ಗಿಲ್* *ದಿನಾಚರಣೆ*

ಕಿಲ್ಲೆ ಮೈದಾನ


11 ಗಂಟೆಗೆ CET ಕೋಚಿಂಗ್ ಕ್ಲಾಸ್ ಇನ್ಸ್ಟಾಲೇಷನ್ ಕೊಂಬೆಟ್ಟು ಜೂನಿಯರ್ ಕಾಲೇಜು


ಸಂಜೆ 6 ಗಂಟೆಗೆ 

ಪುತ್ತೂರು ಬಸ್ ನಿಲ್ದಾಣ ಬಳಿ*ಕಾರ್ಗಿಲ್ ದಿನಾಚರಣೆ*ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ಬೆಳ್ಳಾರೆ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

Posted by Vidyamaana on 2023-07-01 10:39:15 |

Share: | | | | |


ಬೆಳ್ಳಾರೆ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ : ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಪರಾರಿಯಾದ ಆರೋಪಿಗಳಿಗೆ ಶರಣಾಗಲು ಎನ್‌ಐಎ ಕೋರ್ಟ್ ಜೂನ್ 30 ರಂದು ಕೊನೆಯ ಡೆಡ್ ಲೈನ್ ನೀಡಲಾಗಿತ್ತು.ಆದ್ರೆ ನ್ಯಾಯಾಲಯಕ್ಕೆ ಯಾವ ಆರೋಪಿಗಳು ಕೂಡ ಹಾಜರಾಗಿಲ್ಲ ಎಂದು ಎನ್‌ಐಎ ಮೂಲಗಳಿಂದ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ದೊರಕಿದೆ.

ಪ್ರಮುಖ ಆರೋಪಿಗಳು ಶರಣಾಗಲು ಡೆಡ್ ಲೈನ್:

ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್.ಐ.ಎಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಆರೋಪಿಗಳಾಗಿದ್ದು. ಕೊಡಗಿನ ತುಫೈಲ್ ಎಮ್.ಹೆಚ್ ಈ ನಾಲ್ಕು ಜನ ಆರೋಪಿಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ನಾಲ್ಕು ಜನ ಆರೋಪಿಗಳ ಪತ್ತೆಗೆ ಒಟ್ಟು 14 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫಾ ಸುಳಿವಿಗೆ ತಲಾ 5 ಲಕ್ಷ, ಉಮರ್ ಫಾರುಕ್, ಅಬುಬಕರ್ ಸಿದ್ದಿಕ್ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇನ್ನೂ ಈ ಪ್ರಕರಣದಲ್ಲಿ ಒಟ್ಟು 8 ಜನ ಆರೋಪಿಗಳ ಬಂಧನಕ್ಕೆ ಬಾಕಿಯಿದ್ದು. ಈ ಎಲ್ಲಾ ಆರೋಪಿಗಳು ಕೋರ್ಟ್‌ ಗೆ ಶರಣಾಗತಿಯಾಗಲು ಜೂನ್ 30 ರಂದು ಡೆಡ್‌ಲೈನ್ ನೀಡಲಾಗಿತ್ತು.ಆರೋಪಿಗಳು ಒಂದು ವೇಳೆ ಎನ್.ಐ.ಎ ಕೋರ್ಟ್ ಗೆ ಹಾಜರಾಗದೆ ಇದ್ದಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಿ ನ್ಯಾಯಾಲಯದ ಆದೇಶದ ಪ್ರತಿಗಳನ್ನು ಆರೋಪಿಗಳ ಮನೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಹಚ್ಚಿದ್ದರು ಅದಲ್ಲದೆ ಮೈಕ್ ಮೂಲಕ ಆರೋಪಿಗಳ ಬಗ್ಗೆ ಎನ್‌ಐಎ ಅಧಿಕಾರಿಗಳು ಪ್ರಚಾರ ಮಾಡಿದ್ದರು.

ವಿದೇಶಕ್ಕೆ ಪರಾರಿಯಾಗಿರುವ ಶಂಕೆ:

ಮೋಸ್ಟ್ ವಾಂಟೆಡ್ ಆರೋಪಿಗಳು ಎನ್‌ಐಎ ಅಧಿಕಾರಿಗಳ ತನಿಖೆಯ ಪ್ರಕಾರ ವಿದೇಶಕ್ಕೆ ಪರಾರಿಯಾಗಿ ಆಶ್ರಯ ಪಡೆದಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಆರೋಪಿಗಳ ಬಗ್ಗೆ ಎನ್‌ಐಎ ಅಧಿಕಾರಿಗಳು ರಾ ಎಜೆಸ್ಸಿ ಯನ್ನು ಸಂಪರ್ಕಿಸಿ ಪ್ರಕರಣದ ದಾಖಲೆಗಳನ್ನು ನೀಡಿದ್ದು ಈ ಮೂಲಕ ರಾ ಏಜೆನ್ಸಿ ವಿದೇಶದಲ್ಲಿ ಅಡಗಿರುವ ಆರೋಪಿಗಳನ್ನು ಕಾರ್ಯಾಚರಣೆ ನಡೆಸಿ ಭಾರತಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣ : ಆರೋಪಿ ಖುಲಾಸೆ

Posted by Vidyamaana on 2023-09-24 09:31:09 |

Share: | | | | |


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ   ಆರೋಪದ ಪ್ರಕರಣ : ಆರೋಪಿ ಖುಲಾಸೆ

ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಪ್ರಕರಣ : ಆರೋಪಿ ಖುಲಾಸೆ


 ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.ದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.



Leave a Comment: