BREAKING : ಮೈಸೂರಲ್ಲಿ ಮಹಿಳೆಯ ಭೀಕರ ಕೊಲೆ : ಪತಿಯ ವಿಮೆ ಹಣಕ್ಕಾಗಿ ಸಂಬಂಧಿಕರಿಂದಲೇ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-21 22:04:16 |

Share: | | | | |


BREAKING : ಮೈಸೂರಲ್ಲಿ ಮಹಿಳೆಯ ಭೀಕರ ಕೊಲೆ : ಪತಿಯ ವಿಮೆ ಹಣಕ್ಕಾಗಿ ಸಂಬಂಧಿಕರಿಂದಲೇ ಬರ್ಬರ ಹತ್ಯೆ

ಮೈಸೂರು : ಪತಿ ತೀರಿಹೋದ ಬಳಿಕ ಆಕೆಗೆ ಪತಿಯ ವಿಮೆಯಿಂದ ಲಕ್ಷಾಂತರ ರೂಪಾಯಿ ಹಣ ಬಂದಿತ್ತು. ಇದೆ ಆಕೆಯ ಸಂಬಂಧಿಕರ ನಿದ್ದೆಗೆಡಿಸಿದೆ. ಹಾಗಾಗಿ ಮಾರಕಾಸ್ತ್ರಗಳಿಂದ ಮಹಿಳೆಯನ್ನು ಭೀಕರವಾಗಿ ಸಂಬಂಧಿಕರೇ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌಥಿ ಗ್ರಾಮದಲ್ಲಿ ನಡೆದಿದೆ.

ಹೌದು ಭಾಗ್ಯವತಿ(32) ಮೃತ ಮಹಿಳೆ. ಚೌಥಿ ಗ್ರಾಮದ ಬಸವರಾಜು ಹಾಗೂ ಯಶೋಧಮ್ಮ ದಂಪತಿ ಪುತ್ರಿಯಾದ ಇವರಿಗೆ ಸಂಪತ್ ಕುಮಾರ್ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು. ಇಬ್ಬರು ಗಂಡು ಮಕ್ಕಳು ಕೂಡ ಇದ್ದರು. ಎಲ್ಲವೂ ಚೆನ್ನಾಗಿತ್ತು. ಆದ್ರೆ, 5 ವರ್ಷದ ಹಿಂದೆ ಪತಿ ಸಂಪತ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಪತಿಯನ್ನು ಕಳೆದುಕೊಂಡ ಆಕೆ ಧೈರ್ಯ ಕಳೆದುಕೊಳ್ಳದೆ ಇದ್ದ ಎರಡೂವರೆ ಕೃಷಿ ಜಮೀನಿನಲ್ಲಿ ಕಷ್ಟಪಟ್ಟು ದುಡಿದು ತನ್ನ ಕಾಲುಗಳ ಮೇಲೆ ನಿಂತುಕೊಂಡಿದ್ದಳು.ಜೊತೆಗೆ ಲಕ್ಷಾಂತರ ರೂ. ಹಣ ಸಂಪಾದಿಸಿದ್ದರು. ಇದರ ಜೊತೆಗೆ ಇತ್ತೀಚೆಗೆ ಪತಿಯ ವಿಮೆ ಹಣ ಸುಮಾರು 12 ಲಕ್ಷ ರೂಪಾಯಿ ಬರುವುದಿತ್ತು. ಇದು ಸಹಜವಾಗಿ ಆಕೆಯ ಸಂಬಂಧಿಕರ ಕಣ್ಣು ಕುಕ್ಕಿದೆ.

ಮಹಿಳೆಯ ಏಳಿಗೆಯನ್ನು ಸಹಿಸದೆ ಆಕೆಯ ಸಂಬಂಧಿಕರಾದ ಮುತ್ತುರಾಜ್ ಹಾಗೂ ಇತರರು ಸೇರಿಕೊಂಡು ಭಾಗ್ಯವತಿಯನ್ನು ಬರ್ಬರವಾಗಿ ಕತ್ತರಿಸಿ‌ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುತ್ತುರಾಜ್ ಹಾಗೂ ಇತರ ಸಂಬಂಧಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 Share: | | | | |


ಪುತ್ತೂರು :ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಠಾಣೆಯ ಹೆಚ್.ಸಿ.ಅದ್ರಾಮ ಎನ್ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

Posted by Vidyamaana on 2024-08-15 13:51:35 |

Share: | | | | |


ಪುತ್ತೂರು :ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಠಾಣೆಯ ಹೆಚ್.ಸಿ.ಅದ್ರಾಮ ಎನ್ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಪುತ್ತೂರು:ದ.ಕ.ಜಿಲ್ಲೆಯ ಪೊಲೀಸ್ ಅಧೀಕ್ಷಕ ಯತೀಶ್ ಎನ್.ಹಾಗೂ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅದ್ರಾಮ ಎನ್. ಸೇರಿದಂತೆ ರಾಜ್ಯದ 126 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಯತೀಶ್ ಎನ್: 2016ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಯತೀಶ್ ಎನ್. ಅವರು ಶಿವಮೊಗ್ಗದಲ್ಲಿ ಎ ಎಸ್ ಪಿ ಯಾಗಿ ಬಳಿಕ ಗದಗ, ಮಂಡ್ಯದಲ್ಲಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೆ ಮಂಡ್ಯದಿಂದ ವರ್ಗಾವಣೆಗೊಂಡು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಇವರು ಬೆಂಗಳೂರು ನಿವಾಸಿಯಾಗಿದ್ದಾರೆ. ತನ್ನ ಕರ್ತವ್ಯದ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿರುವ ಆದ್ರಾಮ ಎನ್.ಅವರು

ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

Posted by Vidyamaana on 2023-11-17 20:00:56 |

Share: | | | | |


ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

ಪ್ರೀತಿಸುವ ಗಂಡ, ಮುದ್ದಾದ ಮಕ್ಕಳು, ಜೀವನವನ್ನು ಸಾಗಿಸಲು ಬೇಕಾದಷ್ಟು ಸಂಪಾದನೆ ಇನ್ನೇನು ಬೇಕು ಹೇಳಿ ಬದುಕಲ್ಲಿ. ಆದರೆ ಅಂತಹ ಸುಂದರ ಬದುಕಲ್ಲಿ ಕ್ಯಾನ್ಸರ್​ ಎನ್ನುವ ಬಿರುಗಾಳಿ ಬೀಸಿದಾಗ ಅದನ್ನು ತಡೆದುಕೊಳ್ಳುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ ಈ ಮಹಿಳೆ ತನ್ನ ಸಾವಿನ ಸುದ್ದಿಯನ್ನು ತಾನೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.


ಎಂದೂ ತನಗೆ ಇಂಥಾ ಪರಿಸ್ಥಿತಿ ಬಂದುಬಿಡ್ತಲ್ಲಾ ಎಂದು ದೇವರನ್ನು ಶಪಿಸಿಲ್ಲ, ಇರುವಷ್ಟು ದಿನ ಇದ್ದ ಜೀವನವನ್ನು ಖುಷಿಯಿಂದಲೇ ಕಳೆದಿದ್ದಾರೆ ಈ ಮಹಿಳೆ. ಈ ಮಹಿಳೆ ಹೆಸರು ಕೇಸಿ ಮ್ಯಾಕ್​ಇಂಟೈರ್​ ಆಕೆ ಅಂಡಾಶಯದ ಕ್ಯಾನ್ಸರ್​ನಿಂದ ಭಾನುವಾರ ನಿಧನರಾಗಿದ್ದಾರೆ. ಆಕೆ ಸಾಯುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಾವನ್ನು ಘೋಷಿಸಿ ಬಳಿಕ ಪ್ರೀತಿಪಾತ್ರರಿಗೆ ಕೊನೆಯ ವಿದಾಯವನ್ನು ಬರೆದಿದ್ದಳು.ನೀವು ಈ ಪೋಸ್ಟ್​ ಅನ್ನು ಓದುತ್ತಿದ್ದರು ನಾನು ಈ ಜಗತ್ತಿನಲ್ಲಿ ಇಲ್ಲ ಎಂದರ್ಥ, ನನಗೆ ಅಂಡಾಶಯ ಕ್ಯಾನ್ಸರ್​ ಇತ್ತು ಅದನ್ನು ನಾಲ್ಕನೇ ಹಂತವನ್ನು ತಲುಪಿತ್ತು. ಚಿಕಿತ್ಸೆ ಪಡೆದ ಬಳಿಕವೂ ಪುನರಾವರ್ತನೆಯಾಗಿದೆ.


ಈ ಐದು ತಿಂಗಳು ವರ್ಜೀನಿಯಾ, ರೋಡ್​ ಐಲೆಂಡ್​ ಹಾಗೂ ನ್ಯಾಯಾರ್ಕ್​ನಲ್ಲಿ ನನ್ನ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಜತೆ ಕಳೆಯಲು ಅವಕಾಶ ದೊರೆತಿರುವುದಕ್ಕೆ ನಾನು ಧನ್ಯ.


ಆಸ್ಪತ್ರೆಗೆ ತೆರಳಿ ಯಾರಿಗೂ ತಿಳಿಯದಂತೆ ಬೇರೆಯವರ ವೈದ್ಯಕೀಯ ಸಾಲವನ್ನು ತಾವು ಪಾವತಿಸಲು ಚಾರಿಟಿಯನ್ನು ತೆರೆಯುವುದು ಆಕೆಯ ಕನಸಾಗಿತ್ತು, ಆ ಕನಸನ್ನು ಸಾಕಾರಗೊಳಿಸುತ್ತೇನೆ ಎಂದು ಮಹಿಳೆಯ ಪತಿ ತಿಳಿಸಿದ್ದಾರೆ. ಶುಕ್ರವಾರದವರೆಗೆ 1.09 ಕೋಟಿ ರೂ. ಸಂಗ್ರಹವಾಗಿದೆ.

ಕೇಸಿ ಅವರು ಮಕ್ಕಳು ಹಾಗೂ ವಯಸ್ಕರಿಗೆ ಪುಸ್ತಕಗಳನ್ನು ಪ್ರಕಟಿಸುವ ಪೆಂಗ್ವಿನ್ ರಾಂಡಮ್​ ಹೌಸ್​ನಲ್ಲಿ ಪ್ರಕಾಶಕರಾಗಿದ್ದರು.ಕೇಸಿ ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ, ನಾವು ನಿಮ್ಮನ್ನು ಕಳೆದುಕೊಂಡುಬಿಟ್ಟೆವು, ನೀನೆಲ್ಲೇ ಇದ್ದರೂ ನಮ್ಮೊಂದಿಗೆ ಇದ್ದೀಯ ಎನ್ನುವ ಭಾವನೆ ನಮ್ಮದು ಎಂದು ಪತಿ ಬರೆದುಕೊಂಡಿದ್ದಾರೆ.

ಚಂದ್ರಯಾಣ 3: ಭಾರತಕ್ಕೆ ಐತಿಹಾಸಿಕ ಯಶಸ್ಸು

Posted by Vidyamaana on 2023-08-23 12:56:29 |

Share: | | | | |


ಚಂದ್ರಯಾಣ 3: ಭಾರತಕ್ಕೆ ಐತಿಹಾಸಿಕ ಯಶಸ್ಸು

ಬೆಂಗಳೂರು : ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ.


ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿ ಯಾಗಿದ್ದವು.


ಇಸ್ರೋ ವಿಜ್ಞಾನಿಗಳು ಚಂದ್ರಯಾನ-3 ನ್ನು ಚಂದ್ರನ ಮೇಲ್ಮೈ ಮೇಲೆ ಮೃದುವಾಗಿ ಇಳಿಸಲು ಸಾಕಷ್ಟು ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದರು.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ

Posted by Vidyamaana on 2023-11-08 16:58:52 |

Share: | | | | |


ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಶವ ಪಡೀಲ್ ರನ್ನು ಕೊಲೆ ಪ್ರಕರಣದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ.


ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ತಿಳಿಸಿದರು.

ಬಂಟ್ವಾಳ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಪ್ರಜ್ವಲ್ ಮೃತ್ಯು

Posted by Vidyamaana on 2024-01-18 20:55:48 |

Share: | | | | |


ಬಂಟ್ವಾಳ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಪ್ರಜ್ವಲ್ ಮೃತ್ಯು

ಬಂಟ್ವಾಳ: ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ.


ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ


ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.


ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದು, ಅದಾಗಲೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಪುತ್ತೂರಿನಲ್ಲಿ ಕರ್ನಾಟಕ ಪೊಲೀಸ್ ರನ್ - ಮಾದಕ ದ್ರವ್ಯಗಳ ದುಷ್ಪರಿಣಾಮ ಜಾಗೃತಿ

Posted by Vidyamaana on 2024-03-11 04:38:21 |

Share: | | | | |


ಪುತ್ತೂರಿನಲ್ಲಿ ಕರ್ನಾಟಕ ಪೊಲೀಸ್ ರನ್ - ಮಾದಕ ದ್ರವ್ಯಗಳ ದುಷ್ಪರಿಣಾಮ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ


ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ - 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ಮಾ. 10 ರಂದು ಬೆಳಿಗ್ಗೆ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್‌ ರನ್‌ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಯುವ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಸಹಿತ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಉಪ ವಿಭಾಗ ಎಲ್ಲಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಮತ್ತು ವಿವೇಕಾನಂದ ಹಾಗು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಪೊಲೀಸ್ ರನ್ ನಲ್ಲಿ ಪಾಲ್ಗೊಂಡರು.


Recent News


Leave a Comment: