2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ತನ್ನ ಕಾರು ಚಾಲಕನಿಗೆ ದೀಪಾವಳಿಯ ಬಂಪರ್ ಉಡುಗೋರೆ ಕೊಟ್ಟ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ

Posted by Vidyamaana on 2023-11-16 14:16:22 |

Share: | | | | |


ತನ್ನ ಕಾರು ಚಾಲಕನಿಗೆ ದೀಪಾವಳಿಯ ಬಂಪರ್ ಉಡುಗೋರೆ ಕೊಟ್ಟ  ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ತನ್ನ ಕಾರು ಚಾಲಕನಿಗೆ ದೀಪಾವಳಿ ಪ್ರಯುಕ್ತ ಸುಮಾರು ೧,೩೦೦೦೦ ರೂ ಮೌಲ್ಯದ ಟಿವಿಎಸ್ ರೈಡರ್ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ.


ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿರುವ ಪಾಣಾಜೆ ನಿವಾಸಿ ದಿನೇಶ್ ಉಡುಗೋರೆ ಪಡೆದುಕೊಂಡ ಚಾಲಕ.


ದೀಪಾವಳಿ ಸಂದರ್ಭದಲ್ಲಿ ತಮ್ಮ ಸಿಬಂದಿಗಳಿಗೆ ಬೋನಸ್, ಸಿಹಿತಿಂಡಿ ಅಥವಾ ಊಟೋಪಚಾರಗಳನ್ನು ನೀಡುವುದು ಸಾಮಾನ್ಯವಾಗಿದೆ. ಆದರೆ ಪ್ರಾಮಾಣಿಕವಾಗಿ ಚಾಲನಾ ಕೆಲಸ ಮಾಡುತ್ತಿರುವ ದಿನೇಶ್ ತನ್ನ ಮಾಲಕರಿಂದ ಭಾರೀ ಮೊತ್ತದ ಬೈಕನ್ನು ಉಡುಗೋರೆಯಾಗಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೇಮನಾಥ ಶೆಟ್ಟಿಯವರನ್ನು ಕೇಳಿದರೆ ದೀಪಾವಳಿ ಪ್ರಯುಕ್ತ ಸಣ್ಣ ಗಿಫ್ಟ್ ನೀಡಿದ್ದೇನೆ ಎಂದಷ್ಟೇ ಹೇಳಿದರು.

ನಾನು ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಅವರ ಕುಟುಂಬದ ಎಲ್ಲರೂ ನನ್ನನ್ನು ಅವರ ಕುಟುಂಬದ ಸದಸ್ಯನಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಕಷ್ಟದ ಸಮಯದಲ್ಲಿ ನೆರವಾಗುತ್ತರೆ. ನನಗೆ ಮನೆ ಕಟ್ಟಲು ನೆರವಾಗಿದ್ದಾರೆ. ಈ ಬಾರಿ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ. ಇದು ನನ್ನ ಜೀವನದಲ್ಲಿ ಮರೆಯಲಾರದ ದಿನವಾಗಿದೆ

ದಿನೇಶ್ ಪಾಣಾಜೆ, ಕಾರು ಚಾಲಕ

ಕಾಂಕ್ರೀಟ್ ರಸ್ತೆಗಾಗಿ ಡಾಂಬರು ರಸ್ತೆಯ ದುರುಪಯೋಗ ಕೆಲಸದ ಬಳಿಕವೂ ಸರಿಪಡಿಸುವ ಗೊಡವೇ ಇಲ್ಲ ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ

Posted by Vidyamaana on 2023-02-16 15:01:32 |

Share: | | | | |


ಕಾಂಕ್ರೀಟ್ ರಸ್ತೆಗಾಗಿ ಡಾಂಬರು ರಸ್ತೆಯ ದುರುಪಯೋಗ  ಕೆಲಸದ ಬಳಿಕವೂ ಸರಿಪಡಿಸುವ ಗೊಡವೇ ಇಲ್ಲ  ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ

ಪುತ್ತೂರು: ಹೊಸ ರಸ್ತೆಯ ಕಾಮಗಾರಿ ನಡೆಸುವಾಗ, ಹಳೆಯ ರಸ್ತೆಯನ್ನು ಹಾಳು ಮಾಡಬಾರದು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇಂತಹ ಕನಿಷ್ಠ ಜ್ಞಾನವೂ ಇಲ್ಲದ ಆಡಳಿತದ ವೈಖರಿಗೆ ಸಾಕ್ಷಿಯಾಗಿ ನಿಂತಿದೆ ನಾಣಿಲ ಜಂಕ್ಷನ್.

ಬೈತಡ್ಕ - ನಾಣಿಲ - ಗುಜ್ಜರ್ಮೆ ರಸ್ತೆಯನ್ನು ಇತ್ತೀಚೆಗೆ ಅಭಿವೃದ್ಧಿಗೊಳಿಸಲಾಯಿತು. ಈ ಮೂರು ರಸ್ತೆಗಳು ಸೇರುವ ಜಂಕ್ಷನ್ ಅನ್ನು ಬಿಟ್ಟು, ಉಳಿದಂತೆ ಮೂರು ಪ್ರದೇಶದ ರಸ್ತೆಗಳಿಗೂ ಕಾಂಕ್ರೀಟಿಕರಣ ಮಾಡಲಾಯಿತು. ಹೀಗೆ ಕಾಂಕ್ರೀಟಿಕರಣ ಮಾಡುವಾಗ, ಕಾಂಕ್ರೀಟ್ ಮಿಕ್ಸ್ ಮಾಡಲು ಬಳಸಿದ್ದು ಮಾತ್ರ ಜಂಕ್ಷನ್‌ನಲ್ಲಿದ್ದ ಡಾಂಬರು ರಸ್ತೆಯನ್ನು!

ಡಾಂಬರು ರಸ್ತೆಯನ್ನು ಕಾಂಕ್ರೀಟ್ ಮಿಕ್ಸ್ ಮಾಡಲು ಬಳಸಿದ್ದೇ ಮೊದಲ ತಪ್ಪು. ಹೋಗಲಿ ಬಿಡಿ. ಕೆಲಸವಾದ ಬಳಿಕವಾದರೂ, ಕಾಂಕ್ರೀಟ್‌ನ ತುಣುಕುಗಳನ್ನು ಡಾಂಬರು ರಸ್ತೆಯಿಂದ ತೆರವು ಮಾಡಬೇಕಲ್ಲವೇ? ಅದೂ ಮಾಡಿಲ್ಲ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಿಂದ ಸಾಗಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ.

ಮೂರು ರಸ್ತೆ ಸೇರುವ ಜಾಗದಲ್ಲಿ ಸಣ್ಣ ವೃತ್ತ ಇದೆ. ಈ ವೃತ್ತದ ಸುತ್ತಮುತ್ತ ಸುಮಾರು 100 ಮೀಟರ್ ಅಂತರದಲ್ಲಿ ಈ ಡಾಂಬರು ರಸ್ತೆ ಹರಡಿದೆ. ಉಳಿದೆಲ್ಲವೂ ಕಾಂಕ್ರೀಟಿಕರಣ ಆಗಿದೆ. ಈ 100 ಮೀಟರ್ ಡಾಂಬರು ರಸ್ತೆಯನ್ನು ಹಾಳುಮಾಡಿದ ಶ್ರೇಯಸ್ಸು ಆಡಳಿತಕ್ಕೆ, ಗುತ್ತಿಗೆದಾರರಿಗೆ ಸಲ್ಲುತ್ತದೆ!

ಸ್ಥಳೀಯರು ಮೌನ:

2022ರ ಅಕ್ಟೋಬರ್ 27ರಂದು ಈ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟನೆ ಮಾಡಲಾಗಿದೆ. ಘಟಾನುಘಟಿ ನಾಯಕರು ಸ್ಥಳಕ್ಕೆ ಆಗಮಿಸಿದ್ದರೂ ಕೂಡ. ಅಲ್ಲಿಂದ ಇಲ್ಲಿವರೆಗೆ ಅಂದರೆ ಸುಮಾರು 4 ತಿಂಗಳುಗಳ ಕಾಲ ಡಾಂಬರು ರಸ್ತೆ ದೈನವೀ ಸ್ಥಿತಿಯಲ್ಲೇ ಇದೆ. ಸ್ಥಳೀಯರು, ದ್ವಿಚಕ್ರ ಸವಾರರು ಇದೇ ರಸ್ತೆಯಲ್ಲಿ ಹರಸಾಹಸ ಪಟ್ಟುಕೊಂಡು ಹೋಗುತ್ತಿದ್ದಾರೆ. ಆದರೆ ಯಾರೂ ಕೂಡ, ಇದನ್ನು ಸರಿಪಡಿಸಿ ಎಂದು ಆಗ್ರಹ ಪಡಿಸಿಲ್ಲ. ಆದ್ದರಿಂದ ಡಾಂಬರು ರಸ್ತೆ ಇನ್ನೂ ಹಾಗೇ ಉಳಿದುಕೊಂಡಿದೆ. ಚೆನ್ನಾಗಿದ್ದ ರಸ್ತೆಯನ್ನು ಹಾಳುಗೆಡವಿದರ ಬಗ್ಗೆ ಪ್ರಶ್ನಿಸುವ ಗೋಜಿಗೆ ಹೋಗದ ಸ್ಥಳೀಯರ ಮೌನವೇ, ಸಮಸ್ಯೆ ಪರಿಹಾರಕ್ಕೆ ದೊಡ್ಡ ತೊಡಕಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ.

ಬೆಳ್ಳಾರೆ : ಅಟೋರಿಕ್ಷಾ ತಂಗುದಾಣ ಲೋಕಾರ್ಪಣೆ

Posted by Vidyamaana on 2024-03-10 09:48:48 |

Share: | | | | |


ಬೆಳ್ಳಾರೆ : ಅಟೋರಿಕ್ಷಾ ತಂಗುದಾಣ ಲೋಕಾರ್ಪಣೆ

*ಬೆಳ್ಳಾರೆ* : ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ನಿರ್ಮಿಸಿದ ಅಟೋರಿಕ್ಷಾ ತಂಗುದಾಣವನ್ನು ಮಾ.8 ರಂದು ಉದ್ಘಾಟಿಸಿ ಅವರು ಮಾತನಾಡಿದರು. ಸಂಸದನಾಗಿದ್ದ ಮೊದಲ ಅವಧಿಯಲ್ಲಿ 4 ಸಾವಿರ ಕೋಟಿ ರೂ., ಪ್ರಧಾನಿ ಮೋದಿ ಆಡಳಿತದ ಉಳಿದ ಎರಡು ಅವಧಿಯಲ್ಲಿ 1 ಲಕ್ಷ ಕೋ.ರೂ. ಅನುದಾನಗಳು ಜಿಲ್ಲೆಗೆ ಬಂದಿದೆ. ಇದನ್ನು ಅಂಕಿ ಅಂಶ ಸಹಿತ ಜನರ ಮುಂದಿಡಲಾಗಿದೆ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ ಹೀಗೆ ಜಿಲ್ಲೆಯ ಭವಿಷ್ಯದ ಹಿತ ದೃಷ್ಟಿಗೆ ಪೂರಕವಾಗಿ ಹತ್ತಾರು ಯೋಜನೆಗಳನ್ನು ಅನುಷ್ಟಾನಿಸಲಾಗಿದೆ ಎಂದರು.

ಆದರ್ಶ ಗ್ರಾಮಕ್ಕೆ 60 ಕೋ.ರೂ.

ದೇಶದಲ್ಲಿ ಆದರ್ಶ ಗ್ರಾಮವೊಂದಕ್ಕೆ ಅತಿ ಹೆಚ್ಚಿನ ಅನುದಾನವನ್ನು ಒದಗಿಸಿದ್ದು ಅದು ಬಳ್ಪ ಗ್ರಾಮಕ್ಕೆ. ಇಲ್ಲಿ ಸುಮಾರು 60 ಕೋ.ರೂ.ವೆಚ್ಚದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇಷ್ಟೆಲ್ಲಾ ಕೆಲಸ ಕಾರ್ಯ ನಡೆದರೂ ಟೀಕೆಗಳು ಬರುತ್ತವೆ. ರಾಜಕಾರಣದಲ್ಲಿ ಟೀಕೆಗಳು ಸಹಜ ಎಂದು ಸ್ವೀಕರಿಸಿದ್ದೇನೆ. ಜಿಲ್ಲೆಗೋಸ್ಕರ ನಾನು ಮಾಡಬೇಕಾದ ಕೆಲಸವನ್ನು ಮಾಡಿದ್ದೇನೆ ಎಂದರು.

*ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ,* ಬೆಳ್ಳಾರೆಯ ಅಟೋ ರಿಕ್ಷಾ ಚಾಲಕರ ತಂಡ ಉತ್ತಮ ಸಾಮಾಜಿಕ ಕೆಲಸ ಕಾರ್ಯಗಳ ಮೂಲಕ ತನ್ನ ಇರುವಿಕೆಯನ್ನು ತೋರ್ಪಡಿಸಿದೆ. ಸಂಸದರ ಅನುದಾನದಲ್ಲಿ ಸುಸಜ್ಜಿತ ಅಟೋ ತಂಗುದಾನ ನಿರ್ಮಾಣವಾಗಿದೆ. ಇನ್ನೂ ಕೆಲ ದಿನಗಳಲ್ಲಿ ಬೆಳ್ಳಾರೆ ತಡಗಜೆ ಸಂಪರ್ಕ ರಸ್ತೆ 20 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದರು.

ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ನಮಿತಾ ಎಲ್ ರೈ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಬೆಳ್ಳಾರೆ ಗ್ರಾ.ಪಂ.ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ಗ್ರಾ.ಪಂ.ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ವಿಠಲದಾಸ್ ಎನ್‍ಎಸ್‍ಡಿ, ದಿನೇಶ್ ಹೆಗ್ಡೆ, ಜಯಶ್ರೀ ಪಡ್ಪು, ಶ್ವೇತಾ ನೆಟ್ಟಾರು, ಗುತ್ತಿಗೆದಾರ ಮಾಧವ ಮಾವೆ, ಬೆಳ್ಳಾರೆ ಮೇಲಿನ ಪೇಟೆ ಅಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಹರೀಶ್ ಕಲ್ಲಪಣೆ ಮೊದಲಾದವರಿದ್ದರು.

ಗೌರವಾರ್ಪಣೆ

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭಾಗೀರಥಿ, ಅಟೋ ನಿಲ್ದಾಣದ ಅನುದಾನಕ್ಕೆ ಶ್ರಮಿಸಿದ ಸಚಿನ್ ರೈ ಪೂವಾಜೆ, ಗುತ್ತಿಗೆದಾರ ಮಾಧವ ಮಾವೆ, ಸಾಮಾಜಿಕ ಸೇವೆಗಾಗಿ  ಕೊರಗಪ್ಪ ಪಾಟಾಜೆ, ಸೀತಾರಾಮ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ಯಶಸ್ವಿ ಮತ್ತು ಅಶ್ವಿನಿ ಪ್ರಾರ್ಥಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ನಿರೂಪಿಸಿದರು.

ದ.ಕ. ಜಿಲ್ಲೆಯಲ್ಲಿ ಮಳೆಯ ಅಬ್ಬರ: ಇಂದು (ಜು.19) ರಂದು ರೆಡ್ ಅಲರ್ಟ್

Posted by Vidyamaana on 2024-07-19 04:07:45 |

Share: | | | | |


ದ.ಕ. ಜಿಲ್ಲೆಯಲ್ಲಿ ಮಳೆಯ ಅಬ್ಬರ: ಇಂದು (ಜು.19) ರಂದು ರೆಡ್ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ.

ನಕಲಿ ಮಂಗಳಮುಖಿಯ ಬಟ್ಟೆ ಬಿಚ್ಚಿ ಧರ್ಮದೇಟು

Posted by Vidyamaana on 2023-10-15 08:59:07 |

Share: | | | | |


ನಕಲಿ ಮಂಗಳಮುಖಿಯ ಬಟ್ಟೆ ಬಿಚ್ಚಿ ಧರ್ಮದೇಟು

ಅಂಕೋಲಾ: ಯುವತಿಯಂತೆ ವೇಷ ಹಾಕಿಕೊಂಡು, ಜನರ ಮೈ ಮುಟ್ಟಿ, ಅಸಭ್ಯವಾಗಿ ವರ್ತಿಸಿ ಹಣ ಕೇಳುತ್ತಿದ್ದ ವ್ಯಕ್ತಿಯನ್ನು ಅಸಲಿ ಮಂಗಳಮುಖಿಯರು ಹಿಡಿದು ಬಟ್ಟೆ ಬಿಚ್ಚಿಸಿ ಧರ್ಮದೇಟು ನೀಡಿದ ಘಟನೆ ಅಂಕೋಲಾದಲ್ಲಿ ನಡೆದಿದೆ.



ಕಾರವಾರ ಹಾಗೂ ಅಂಕೋಲಾ ಪಟ್ಟಣದಲ್ಲಿ ಸೂರಜ್‌ ಎನ್ನುವ ವ್ಯಕ್ತಿ ಮಂಗಳಮುಖೀ ವೇಷ ಧರಿಸಿ ಭಿಕ್ಷೆ ಬೇಡುತ್ತಾ ಹಣ ವಸೂಲಿ ಮಾಡುತ್ತಿದ್ದ. ಈ ವಿಷಯವನ್ನು ಅಸಲಿ ಮಂಗಳಮುಖಿಯರ ಅಂತರಂಗ ಸಂಘಟನೆ ಸದಸ್ಯೆ ಆಯಿಷಾ ಹೊನ್ನಾವರ ಅವರ ಗಮನಕ್ಕೆ ಸಾರ್ವಜನಿಕರು ತಂದಿದ್ದರು.


ಕೂಡಲೇ ಅಂಕೋಲಾ ಹಾಗೂ ಕಾರವಾರದಲ್ಲಿ ಕಾರ್ಯಾಚರಣೆಗೆ ಇಳಿದ ಮಂಗಳಮುಖಿಯರಾದ ಸಂಧ್ಯಾ ಉಡುಪಿ, ಉ.ಕ. ಅಂತರಂಗ ಸಂಘಟನೆ ಉಪಾಧ್ಯಕ್ಷೆ ಆಯಿಷಾ ಹೊನ್ನಾವರ, ಸುಹಾನಾ ಹಾಗೂ ಪಾರ್ವತಿ ಅವರು ಮಂಗಳಮುಖಿ ವೇಷದಲ್ಲಿದ್ದ ಪುರುಷನನ್ನು ಹಿಡಿದಿದ್ದಾರೆ.

ಚೂಡಿದಾರ ಧರಿಸಿ ಹೆಣ್ಣಿನಂತೆ ವಯ್ಯಾರ ಪ್ರದರ್ಶಿಸುತ್ತ ನಾಗರಿಕರಿಂದ ಹಣ ಕೇಳುತ್ತಿದ್ದ ಈತನ ಚೂಡಿದಾರ ಬಿಚ್ಚಿಸಿ ಮಂಗಳಾರತಿ ಮಾಡಿದ್ದಾರೆ. ನಿಜವಾದ ಮಂಗಳಮುಖಿಯರು ನಿಷ್ಠಾವಂತರಿದ್ದಾರೆ. ಆದರೆ ಇಂಥ ನಕಲಿ ಮಂಗಳಮುಖಿ ವೇಷಧಾರಿಗಳಿಂದ ನಿಜವಾದ ಮಂಗಳಮುಖೀಯರು ತಲೆ ತಗ್ಗಿಸುವಂತಾಗಿದೆ. ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ನಾಗರಿಕರು ಆಗ್ರಹಿದ್ದಾರೆ.


ಸದ್ಯ ನವರಾತ್ರಿ ಹಾಗೂ ದೀಪಾವಳಿ ಹಬ್ಬ ಬರುತ್ತಿದ್ದು ಹೊರ ಜಿಲ್ಲೆಯಿಂದ ಕಾರವಾರ ಹಾಗೂ ಅಂಕೋಲಾಕ್ಕೆ ಮಂಗಳಮುಖಿಯರು ಬಂದು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಇಂಥ ಮಂಗಳಮುಖಿಯರಿಗೆ ಅಂಜದೆ, ನಿರ್ಭೀತವಾಗಿ ಪೊಲೀಸ್‌ ಅಥವಾ ಅಂತರಂಗ ಸಂಘಟನೆ ಗಮನಕ್ಕೆ ತನ್ನಿ ಎಂದು ಆಯಿಷಾ ಹೊನ್ನಾವರ ತಿಳಿಸಿದ್ದಾರೆ.ಚೂಡಿದಾರ ಧರಿಸಿ ಮಂಗಳಮುಖಿ ವೇಷ ಹಾಕಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯ ಅಸಲಿ ಮುಖವನ್ನು ಬಯಲು ಮಾಡಿದ್ದೇವೆ. ಈ ರೀತಿಯ ಘಟನೆಗಳು ಉ.ಕ. ಜಿಲ್ಲೆಯಲ್ಲಿ ಅನೇಕ ಕಡೆ ಕಂಡು ಬರುತ್ತಿದೆ. ಎಸ್ಪಿ ಅವರು ಈ ಬಗ್ಗೆ ವಿಶೇಷವಾಗಿ ಗಮನಹರಿಸಿ ಕಾರ್ಯಪ್ರವೃತ್ತರಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ.

-ಆಯಿಷಾ ಹೊನ್ನಾವರ, ಉಪಾಧ್ಯಕ್ಷೆ ಅಂತರಂಗ ಸಂಘಟನೆ

ಕೈಗೆ ರೈ ಫಿಕ್ಸ್ | ಪುತ್ತೂರು ಮಹಿಳಾ ಕಾಂಗ್ರೆಸಿನ ನಿಗೂಢ ನಡೆ

Posted by Vidyamaana on 2023-03-21 16:40:15 |

Share: | | | | |


ಕೈಗೆ ರೈ ಫಿಕ್ಸ್ | ಪುತ್ತೂರು ಮಹಿಳಾ ಕಾಂಗ್ರೆಸಿನ ನಿಗೂಢ ನಡೆ

ಪುತ್ತೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ ಎಂಬ ಸುದ್ದಿ ಲಭ್ಯವಾಗಿದೆ.

ಇದರ ನಡುವೆ ಪುತ್ತೂರು ಮಹಿಳಾ ಕಾಂಗ್ರೆಸ್ ಘಟಕ ಪತ್ರಿಕಾಗೋಷ್ಠಿ ನಡೆಸಿದ್ದು, ನಿಗೂಢ ಹೆಜ್ಜೆಯೊಂದನ್ನು ಮುಂದಿಟ್ಟಿದೆ. ಇದು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆ ನೀಡಿದೆ.

ಅಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಸೇರ್ಪಡೆಯ ಬಳಿಕ ವಿಧಾನಸಭಾ ಕ್ಷೇತ್ರದ ತುಂಬಾ ಓಡಾಡುತ್ತಿದ್ದಾರೆ. ಇದಕ್ಕಾಗಿ ಸಾಕಷ್ಟು ಸಮಯವನ್ನು ನೀಡುತ್ತಿದ್ದಾರೆ. ಇದರ ಹಿಂದಿನ ಮರ್ಮ ಪಕ್ಷದ ಆಕಾಂಕ್ಷಿ ಅಭ್ಯರ್ಥಿಗಳಿಗೆ ತಿಳಿಯದ ವಿಚಾರವೇನಲ್ಲ. ಈ ನಡುವೆ ಮಂಗಳವಾರ ಪುತ್ತೂರು ಮಹಿಳಾ ಕಾಂಗ್ರೆಸ್ ಘಟಕ ಪತ್ರಿಕಾಗೋಷ್ಠಿ ನಡೆಸಿ, ಶಕುಂತಳಾ ಶೆಟ್ಟಿ ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಿ ಎಂದು ಆಗ್ರಹಿಸಿದೆ. ಅಶೋಕ್ ಕುಮಾರ್ ರೈ ಅಭ್ಯರ್ಥಿಯಾಗಿ ಆಯ್ಕೆ ಅಂತಿಮ ಎಂಬ ಸುದ್ದಿ ಅದರ ಬೆನ್ನಲ್ಲೇ ಹೊರಬಿದ್ದಿರುವ ಕಾರಣ, ಮಹಿಳಾ ಕಾಂಗ್ರೆಸಿನ ಆಗ್ರಹದ ಹಿಂದಿನ ನಿಗೂಢ ನಡೆ ಬೇರೆಯೇ ಹೊಳಹನ್ನು ತೋರಿಸುವಂತಿದೆ.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಖಜಾಂಜಿ ಶುಭ ಮಾಲಿನಿ ಮಲ್ಲಿ, ಕೆಪಿಸಿಸಿ ಕಾರ್ಯದರ್ಶಿ ಸಾಹಿರಾ ಬಾನು, ವಿಲ್ಮಾ ಗೋನ್ಸಾಲ್ವಿಸ್ ಅವರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪರ ಬ್ಯಾಟಿಂಗ್ ಬೀಸಿದ್ದಾರೆ.

ಶಕುಂತಳಾ ಶೆಟ್ಟಿ ಅವರಿಗೆ ಮುಂದೆ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಇಲ್ಲ. ಆದ್ದರಿಂದ ಈ ಬಾರಿ ಟಿಕೇಟ್ ನೀಡುವಂತೆ ಕೇಳಿಕೊಳ್ಳುತ್ತಿದ್ದೇವೆ. ಮಹಿಳಾ ಮತದಾರರ ಒಲವು ಶಕುಂತಳಾ ಶೆಟ್ಟಿ ಅವರ ಪರವಾಗಿ ಇರುವುದರಿಂದ, ಗೆಲುವು ನಿಶ್ಚಿತ ಎಂದಿದ್ದಾರೆ.

ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು. ಅವರು ಶಾಸಕ ಅಭ್ಯರ್ಥಿಯಾದರೆ ಖಂಡಿತಾ ಜಯ ದೊರಕುತ್ತದೆ. ಆದ್ದರಿಂದ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವಂತೆ ಆಗ್ರಹಿಸಿದ್ದಾರೆ.







Leave a Comment: