ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿಗಳು News

Posted by vidyamaana on 2024-07-08 17:22:55 |

Share: | | | | |


ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 Share: | | | | |


ಲೀಲಣ್ಣೆ ದಾಯೆ ಇಂಚ ಮಲ್ತೊಂಡೆರ್..? ಎಲ್ಲರಲ್ಲೂ ಇದೊಂದೇ ಪ್ರಶ್ನೆ

Posted by Vidyamaana on 2023-12-15 08:30:29 |

Share: | | | | |


ಲೀಲಣ್ಣೆ ದಾಯೆ ಇಂಚ ಮಲ್ತೊಂಡೆರ್..? ಎಲ್ಲರಲ್ಲೂ ಇದೊಂದೇ ಪ್ರಶ್ನೆ

ಉಡುಪಿ: ಹೆಸರಾಂತ ರಂಗಕರ್ಮಿ, ಸಮಾಜ ಸೇವಕರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ತಮ್ಮ ಪತ್ನಿ ವಸುಂಧರಾ ಶೆಟ್ಟಿ(58) ಜೊತೆಗೆ ದಿಢೀರ್ ಸಾವಿಗೆ ಶರಣಾಗಿರುವುದಕ್ಕೆ ಕಾಪು ಭಾಗದಲ್ಲಿ ಮತ ಭೇದ ಇಲ್ಲದೆ ಜನಸಾಮಾನ್ಯರು ಕಣ್ಣೀರು ಸುರಿಸಿದ್ದಾರೆ. ಜನರ ಜೊತೆಗೆ ಲೀಲಾಧರ ಶೆಟ್ಟಿ ಎಷ್ಟು ಬಾಂಧವ್ಯ ಇಟ್ಟುಕೊಂಡಿದ್ದರು ಎನ್ನುವುದಕ್ಕೆ ಬುಧವಾರ ಸಂಜೆ ಅಂತ್ಯಕ್ರಿಯೆ ಸಂದರ್ಭದಲ್ಲಿ ಸೇರಿದ ಜನಸ್ತೋಮವೇ ಸಾಕ್ಷಿ.


ಇಬ್ಬರ ಮೃತದೇಹಗಳನ್ನೂ ತೆರೆದ ವಾಹನದಲ್ಲಿರಿಸಿ ಕಾಪು ಪೇಟೆಯಿಂದ ಮೆರವಣಿಗೆ ಮೂಲಕ ತಂದು ಕರಂದಾಡಿಯ ಶ್ರೀರಾಮ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಮಂದಿ ಸೇರಿದ್ದಲ್ಲದೆ, ಎಲ್ಲರೂ ಕಣ್ಣಲ್ಲಿ ನೀರು ಸುರಿಸಿಕೊಂಡೇ ಹೆಜ್ಜೆ ಹಾಕಿದರು. ಕಾಪು ಪೇಟೆಯಲ್ಲಿ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ ಗೌರವ ಸೂಚಿಸಿದರು. ಇಡೀ ಕಾಪು ಪೇಟೆಯೇ ಸ್ಮಶಾನ ಮೌನಕ್ಕೆ ಜಾರಿತ್ತು. ಬಳಿಕ ಕರಂದಾಡಿಯ ಮನೆಯ ಆವರಣದಲ್ಲಿ ಲೀಲಾಧರ ಶೆಟ್ಟಿ ದಂಪತಿ ಶವಗಳನ್ನು ಒಂದೇ ಚಿತೆಯಲ್ಲಿಟ್ಟು ಅಗ್ನಿಸ್ಪರ್ಶ ಮಾಡಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಲಾಲಾಜಿ ಮೆಂಡನ್, ಐಕಳ ಹರೀಶ್ ಶೆಟ್ಟಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸೇರಿದ್ದರು.ಮರ್ಯಾದೆಗೆ ಅಂಜಿ ಸಾವಿಗೆ ಶರಣು


ಲೀಲಾಧರ ಶೆಟ್ಟಿ ಸಾವಿನ ಸುದ್ದಿ ಬರುತ್ತಲೇ, ದಿಢೀರ್ ಯಾಕೆ ಈ ರೀತಿ ಮಾಡಿಕೊಂಡರು, ಅವರು ಆತ್ಮಹತ್ಯೆ ಮಾಡಿಕೊಳ್ಳುವ ಜನವೇ ಅಲ್ಲ ಅನ್ನುವುದೇ ಎಲ್ಲರ ಮಾತಾಗಿತ್ತು. ಯಾಕಂದ್ರೆ, ಸಾವಿನ ದಾರಿ ಹಿಡಿದ ಹಲವಾರು ಮಂದಿಗೆ ಲೀಲಾಧರ ಶೆಟ್ಟಿ ಅವರೇ ದಿಕ್ಕು ತೋರಿಸಿದ್ದರು. ಎಷ್ಟೋ ಮಂದಿಗೆ ಉದ್ಯೋಗ, ಸಹಾಯ ಒದಗಿಸಿ ಜನರ ಪಾಲಿಗೆ ಕರುಣಾಮಯಿ ಆಗಿದ್ದರು. ಜಾತಿ ಭೇದ ಇಲ್ಲದೆ, ಸಮಾಜದಲ್ಲಿ ಸೇವೆಯನ್ನೇ ವೃಥವನ್ನಾಗಿಸಿಕೊಂಡಿದ್ದರು. ಈಗ ತಿಳಿದುಬರುತ್ತಿರುವ ಮಾಹಿತಿ ಪ್ರಕಾರ, ಲೀಲಾಧರ ಶೆಟ್ಟಿ ದಂಪತಿ ತಮ್ಮ ಸಾವಿನ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಮರ್ಯಾದೆ ಹೋದ ಕಾರಣಕ್ಕೆ ಇಂತಹ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ.   ಇದೇ ವಿಚಾರದಲ್ಲಿ ಲೀಲಾಧರ ಶೆಟ್ಟಿ ಅವರ ಅಕ್ಕನ ಮಗ ಮೋಹನ್ ಕುಮಾರ್ ಶೆಟ್ಟಿ ಕಾಪು ಠಾಣೆಗೆ ನೀಡಿರುವ ದೂರಿನಲ್ಲಿ ಮಾಹಿತಿಗಳನ್ನು ಉಲ್ಲೇಖಿಸಿದ್ದಾರೆ. ಲೀಲಾಧರ ಶೆಟ್ಟಿ ದಂಪತಿ ಮಕ್ಕಳಿಲ್ಲದ ಕಾರಣ 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದರು. ಬೆಳೆದು ದೊಡ್ಡವಳಾಗಿದ್ದ ಆಕೆ ಪಿಯುಸಿ ಓದುತ್ತಿದ್ದಳು. ಇತ್ತೀಚೆಗೆ ಮನೆಯ ದುರಸ್ತಿ ಕಾರ್ಯಕ್ಕೆ ತಮಿಳುನಾಡು ಮೂಲದ ಯುವಕನೊಬ್ಬ ಬಂದಿದ್ದು ಆತನ ಜೊತೆಗೆ ಯುವತಿಗೆ ಪ್ರೀತಿಯಾಗಿತ್ತು. ಎರಡು ದಿನಗಳ ಹಿಂದೆ ಆಕೆ ಮನೆ ಬಿಟ್ಟು ಹೋಗಿದ್ದು, ತನ್ನನ್ನು ಹುಡುಕುವುದು ಬೇಡ. ತನ್ನ ಸ್ವಇಚ್ಛೆಯಿಂದ ತೆರಳುತ್ತಿರುವುದಾಗಿ ಪತ್ರ ಬರೆದಿಟ್ಟಿದ್ದಳು. ಆಕೆ, ತಮಿಳುನಾಡಿನ ಯುವಕನ ಜೊತೆಗೆ ತೆರಳಿರುವ ಶಂಕೆ ಇದೆ. ಮಗಳು ನಾಪತ್ತೆಯಾದ ಬಗ್ಗೆ ಲೀಲಾಧರ ಶೆಟ್ಟಿ ದಂಪತಿ ಹುಡುಕಾಡಿದ್ದು, ಸಿಗದೇ ಇದ್ದಾಗ ಮಾನಸಿಕವಾಗಿ ಕುಗ್ಗಿದ್ದರಿಂದ ಬದುಕು ಕೊನೆಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.


ದತ್ತು ಪುತ್ರಿ ಮನೆ ಬಿಟ್ಟು ಹೋಗಿದ್ದರಿಂದ ಮರ್ಯಾದೆಗೆ ಅಂಜಿ, ಸಮಾಜಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯಗಳಿಲ್ಲ ಎಂದು ಮೋಹನ್ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಯುವತಿ ಕಾಣೆಯಾದ ಬಗ್ಗೆ ಮತ್ತು ದಂಪತಿ ಆತ್ಮಹತ್ಯೆ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು : ತೆರಿಗೆ ಹಣ ಶಾಸಕರ ಕಚೇರಿ ನವೀಕರಣಕ್ಕೆ ದುರುಪಯೋಗ ಸಹಿತ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಆರೋಪ : ಬಿಜೆಪಿ ನಗರ ಮಂಡಲದ ವತಿಯಿಂದ ಪ್ರತಿಭಟನೆಗೆ ಸಿದ್ದತೆ

Posted by Vidyamaana on 2023-09-12 16:09:47 |

Share: | | | | |


ಪುತ್ತೂರು : ತೆರಿಗೆ ಹಣ ಶಾಸಕರ ಕಚೇರಿ ನವೀಕರಣಕ್ಕೆ ದುರುಪಯೋಗ ಸಹಿತ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಆರೋಪ : ಬಿಜೆಪಿ ನಗರ ಮಂಡಲದ ವತಿಯಿಂದ ಪ್ರತಿಭಟನೆಗೆ ಸಿದ್ದತೆ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮಂಡಲ ವತಿಯಿಂದ ಬಿಜೆಪಿ ಕಚೇರಿಯಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರ ಅಧ್ಯಕ್ಷತೆಯಲ್ಲಿ ನಗರಸಭಾ ಸದಸ್ಯರುಗಳ ಸಭೆ ನಡೆಯಿತು.


ನಗರಸಭೆಯ ತೆರಿಗೆ ಹಣವನ್ನು ಶಾಸಕರ ಕಚೇರಿ ನವೀಕರಣಕ್ಕೆ ದುರುಪಯೋಗ, ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಅನುಷ್ಠಾನ ವಿಳಂಬ, ನಗರಸಭಾ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವಿಳಂಬ ಮೊದಲಾದ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಕುರಿತು ಶೀಘ್ರದಲ್ಲೇ ನಗರಸಭಾ ಸದಸ್ಯರುಗಳಿಂದ ಪ್ರತಿಭಟನೆ ನಡೆಸುವುದರ ಕುರಿತು ಚರ್ಚಿಸಲಾಯಿತು.


ನಿಕಟ ಪೂರ್ವ ಶಾಸಕ ಸಂಜೀವ ಮಠಂದೂರು, ನಿಕಟ ಪೂರ್ವ ನಗರ ಸಭಾಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಮಂಗಳೂರು ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಹಿರಿಯರಾದ ಅಪ್ಪಯ್ಯ ಮಣಿಯಾಣಿ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ಹಾಗೂ ಎಲ್ಲಾ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು

ಸತ್ತ ಹೆಂಡತಿಗೆ ವರ್ಷಗಳ ಕಾಲ ಗಂಡ ಮೆಸ್ಸೆಜ್ ಕಳಿಸುತ್ತಲೇ ಇದ್ದ : ಕೊನೆಗೆ ಒಂದು ದಿನ ರಿಪ್ಲೆ ಬಂದೆ ಬಿಟ್ಟಿತು!

Posted by Vidyamaana on 2023-10-22 21:10:36 |

Share: | | | | |


ಸತ್ತ ಹೆಂಡತಿಗೆ ವರ್ಷಗಳ ಕಾಲ ಗಂಡ ಮೆಸ್ಸೆಜ್ ಕಳಿಸುತ್ತಲೇ ಇದ್ದ : ಕೊನೆಗೆ ಒಂದು ದಿನ ರಿಪ್ಲೆ ಬಂದೆ ಬಿಟ್ಟಿತು!

   ಈ ಜಗತ್ತನ್ನು ತೊರೆದ ತನ್ನ ಹೆಂಡತಿಯನ್ನು ನೆನಪಿಟ್ಟುಕೊಳ್ಳಲು ಈ ಪತಿ ಆಕೆ ಜೀವಂತ ಇದ್ದಾಗ ಬಳಸುತ್ತಿದ್ದ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸುವ ವಿಧಾನವನ್ನು ಅಳವಡಿಸಿಕೊಂಡ!!! ರಿಪ್ಲೆ ಬರಲ್ಲ ಅಂತ ಗೊತ್ತಿದ್ದೂ ಕಳಿಸುತ್ತಿದ್ದ, ಆದರೆ ಕೊನೆಗೂ ಒಂದು ದಿನ ಆತ ಆ ಸಂದೇಶಗಳಿಗೆ ಉತ್ತರವನ್ನು ಪಡೆದೇಬಿಟ್ಟ! ಪ್ರೀತಿಪಾತ್ರರ ಸಾವಿನ ಆಘಾತವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ. ಅನೇಕ ಜನರು ಅದನ್ನು ಮರೆಯಲು ವರ್ಷಗಳನ್ನು ತೆಗೆದುಕೊಳ್ಳುತ್ತಾರೆ.


ಅದೇ ರೀತಿ ಬ್ರಿಟನ್ನಿನ ಈ ವ್ಯಕ್ತಿ ಹೆಂಡತಿಯ ಮರಣದ ನಂತರ ತುಂಬಾ ದುಃಖಿತನಾದನು, ಹೆಂಡತಿ ಇನ್ನು ಮುಂದೆ ಈ ಜಗತ್ತಿನಲ್ಲಿ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆತನಿಗೆ ಆಗಲೇ ಇಲ್ಲ. ತನ್ನ ಹೆಂಡತಿಯ ನೆನಪಿಗಾಗಿ ಅವನು ಅವಳ ಮೊಬೈಲ್ ಸಂಖ್ಯೆಗೆ ಸಂದೇಶಗಳನ್ನು ಕಳುಹಿಸತೊಡಗಿದನು. ವರ್ಷಗಳ ಕಾಲ ಕಳಿಸಿದರೂ ಯಾವುದೇ ರಿಪ್ಲೆ ಬರಲಿಲ್ಲ, ಬರುವುದಾದರೂ ಹೇಗೆ!


ಆದರೆ ಒಂದು ದಿನ ಅವರು ತಮ್ಮ ಹೆಂಡತಿಯ ಸಂಖ್ಯೆಯಿಂದ ರಿಪ್ಲೆ ಪಡೆದರು ಮತ್ತು ಆ ವ್ಯಕ್ತಿಗೆ ಶಾಕ್ ಆಯಿತು!  ಈ ವ್ಯಕ್ತಿ ತನ್ನ ಹೆಂಡತಿಯನ್ನು ನೆನಪಿಟ್ಟುಕೊಳ್ಳುವ ಮಾರ್ಗವೆಂದರೆ, ಪ್ರತಿವರ್ಷ ತಾಯಂದಿರ ದಿನದಂದು ಅವನು ತನ್ನ ಹೆಂಡತಿಯ ಸಂಖ್ಯೆಗೆ "ಹ್ಯಾಪಿ ಮದರ್ಸ್ ಡೇ" ಸಂದೇಶವನ್ನು ಕಳುಹಿಸುತ್ತಿದ್ದನು.


ಆರಂಭದಲ್ಲಿ ಕೆಲವು ವರ್ಷ ಯಾವುದೇ ಉತ್ತರವನ್ನು ಪಡೆಯಲಿಲ್ಲ, ನಂತರ ಒಂದು ದಿನ ಅವರು ಆ ಸಂಖ್ಯೆಯಿಂದ ಉತ್ತರವನ್ನು ಪಡೆದರು. ಈ ಘಟನೆ ಅವನಿಗೆ  ಆಶ್ಚರ್ಯವನ್ನುಂಟು ಮಾಡಿತು. ತನ್ನ ತೀರಿ ಹೋದ ಹೆಂಡತಿಯೇ ರಿಪ್ಲೆ ಮಾಡಿದಷ್ಟು ಖುಷಿಯಾಯಿತು.

ತಾಯಿಯ ದಿನದಂದು ಒಂದು ಮುದ್ದಾದ ಸಂದೇಶವನ್ನು ಸ್ವೀಕರಿಸಿದ ನಂತರ ತನ್ನ ಹೆಂಡತಿಯ ಸಂಖ್ಯೆಯಿಂದ ರಿಪ್ಲೆ ಬಂತು, ಅದು “ನೀವು ಯಾರು?” ಎಂಬುದಾಗಿತ್ತು. ಅದು ಆ ವ್ಯಕ್ತಿಗೆ ಸ್ವಲ್ಪ ಆಘಾತಕಾರಿಯಾಗಿತ್ತಾದರೂ, ಮೊದಲ ಬಾರಿಗೆ ಯಾರಾದರೂ ನನ್ನ ಸಂದೇಶಕ್ಕೆ ಉತ್ತರವನ್ನು ಕಳುಹಿಸಿದ್ದಾರಲ್ಲ ಎಂದು ಖುಷಿಯಾಯಿತು. ವಾಸ್ತವದಲ್ಲಿ ಅವರ ಸಂಖ್ಯೆಯನ್ನು ಬೇರೆಯವರಿಗೆ ಅಲಾಟ್ ಮಾಡಲಾಗಿತ್ತು, ಅವರೇ ರಿಪ್ಲೆ ಮಾಡಿದ್ದರು.ತಕ್ಷಣ ಆತ ಅವರಿಗೆ ರಿಪ್ಲೆ ಮಾಡಿದ “ಕ್ಷಮಿಸಿ, ಇದು ನನ್ನ ದಿವಂಗತ ಪತ್ನಿಯ ಸಂಖ್ಯೆ, ಅವಳ ನೆನಪಿಗಾಗಿ ನಾನು ಸಂದೇಶ ಕಳಿಸುತ್ತಿದ್ದೆ, ಯಾರೂ ರಿಪ್ಲೆ ಮಾಡಲ್ಲ ಅಂದುಕೊಂಡಿದ್ದೆ, ಕ್ಷಮಿಸಿ, ನಾನು ಇನ್ನು ಮುಂದೆ ಸಂದೇಶ ಕಳಿಸುವುದಿಲ್ಲ, ದೇವರು ನಿಮಗೆ ಒಳ್ಳೆದು ಮಾಡಲಿ” ಎಂಬರ್ಥದಲ್ಲಿ ಉತ್ತರಿಸಿದ.


ಸೋಶಿಯಲ್ ಮೀಡಿಯಾದಲ್ಲಿ ಜನರ ಭಾವುಕರಾದರು :

ಈ ಕಥೆಯನ್ನು ರೆಡ್ಡಿಟ್ ನಲ್ಲಿ ಓದಿದ ನಂತರ ಜನರು ಬಗ್ಗೆ ಸಾಕಷ್ಟು ಪ್ರತಿಕ್ರಿಯಿಸಿದ್ದಾರೆ. ತನ್ನ ಸೋದರ ಸಂಬಂಧಿಯ ಮರಣದ ನಂತರ ಅವನು ಸ್ವತಃ ಅದೇ ರೀತಿ ಮಾಡುತ್ತಿದ್ದನು ಎಂದು ಯಾರೋ ಬರೆದಿದ್ದಾರೆ, ಅವರು ತುಂಬಾ ಕೆಟ್ಟ ರಿಪ್ಲೆ ಪಡೆದಿದ್ದರು. ಅನೇಕ ಜನರು ತಮ್ಮ ಕಥೆಯನ್ನು ಹಂಚಿಕೊಂಡರು ಮತ್ತು ಅವರು ಅದೇ ರೀತಿ ಮಾಡುತ್ತಿದ್ದರಂತೆ.

ಉಪ್ಪಿನಂಗಡಿ ;ವಿದ್ಯಾರ್ಥಿ ಇರ್ಫಾನ್ ಹೃದಯಾಘಾತದಿಂದ ನಿಧನ

Posted by Vidyamaana on 2023-11-08 07:57:04 |

Share: | | | | |


ಉಪ್ಪಿನಂಗಡಿ ;ವಿದ್ಯಾರ್ಥಿ ಇರ್ಫಾನ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.


ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18 )ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.


ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.


ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Posted by Vidyamaana on 2023-07-18 01:50:33 |

Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.


ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

Posted by Vidyamaana on 2023-09-23 20:22:34 |

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

Recent News


Leave a Comment: