ಲಡ್ಡು ಬಂದು ಬಾಯಿಗೆ ಬಿತ್ತು..! ಆರ್ಡರ್ ಮಾಡಿದ್ದು ಫುಡ್ ಪಾರ್ಸೆಲ್ ಬಂದಿದ್ದು ಕ್ಯಾಶ್!!

ಸುದ್ದಿಗಳು News

Posted by vidyamaana on 2024-07-21 15:34:53 |

Share: | | | | |


ಲಡ್ಡು ಬಂದು ಬಾಯಿಗೆ ಬಿತ್ತು..! ಆರ್ಡರ್ ಮಾಡಿದ್ದು ಫುಡ್ ಪಾರ್ಸೆಲ್ ಬಂದಿದ್ದು ಕ್ಯಾಶ್!!

ಕೊಪ್ಪಳ: ಗ್ರಾಹಕನಿಗೆ ಆಹಾರ ಪಾರ್ಸಲ್​ ಕವರ್​ ನೀಡುವ ಬದಲಿಗೆ ಹೋಟೆಲ್ ಮಾಲಿಕ 50 ಸಾವಿರ ರೂ. ಹಣವಿದ್ದ ಕವರ್​ ನೀಡಿದ ಘಟನೆ ನಡೆದಿದ್ದು, ಗ್ರಾಹಕ ಪಾರ್ಸಲ್​ ತೆಗೆದುಕೊಂಡು ಹೋಗಿ ಮನೆಯಲ್ಲಿ ನೋಡಿದಾಗ ತಿಂಡಿ ಬದಲಿಗೆ 50 ಸಾವಿರ ರೂ. ಇರುವುದು ಕಂಡಿದೆ.

ರಸೂಲ್ ಸಾಬ ಸೌದಾಗರ್ ಎಂಬುವರು ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ಅವರು ಬ್ಯಾಂಕ್​ಗೆ ಕಟ್ಟಲು ಎಂದು ಮನೆಯಿಂದ 49,625 ರೂಪಾಯಿ ಇದ್ದ ಹಣದ ಕವರ್​ನ್ನು ಹೋಟೆಲ್ ನಲ್ಲಿಟ್ಟಿದ್ದರು.



ಮುಂಜಾನೆ ಕುಷ್ಟಗಿ ಪಟ್ಟಣದ ನಿವಾಸಿಯಾಗಿರುವ ಸರ್ಕಾರಿ ಶಾಲೆ ಶಿಕ್ಷಕ ಶ್ರೀನಿವಾಸ್ ದೇಸಾಯಿ, ಸೌದಾಗರ್ ಹೋಟೆಲ್​ಗೆ ಬಂದಿದ್ದರು. ತನಗೆ ಇಡ್ಲಿ, ವಡೆ, ದೋಸೆಯನ್ನು ಪಾರ್ಸಲ್ ಕೊಡಿ ಅಂತ ಹೇಳಿದ್ದರು. ಆದರೆ ಸೌದಾಗರ್ ಆಹಾರವಿದ್ದ ಕವರ್ ನೀಡುವ ಬದಲು ಹಣವಿದ್ದ ಕವರ್ ನೀಡಿ, ನಿಮ್ಮ ಪಾರ್ಸಲ್ ತೆಗೆದುಕೊಂಡು ಹೋಗಿ ಅಂತ ಹೇಳಿದ್ದರು. ಹೀಗಾಗಿ ಶ್ರೀನಿವಾಸ ದೇಸಾಯಿ ಅವರು ಕವರ್​​ ಅನ್ನು ಮನೆಗೆ ತೆಗೆದುಕೊಂಡು ಹೋಗಿದ್ದರು. ಆದರೆ ಆ ಹಣವನ್ನು ಹೋಟೆಲ್​ ಮಾಲಿಕನಿಗೆ ಗ್ರಾಹಕ ​ ಶಿಕ್ಷಕ ಮರಳಿಸಿದ್ದಾರೆ.

 Share: | | | | |


ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

Posted by Vidyamaana on 2023-09-02 05:48:16 |

Share: | | | | |


ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

ಆದಿಲಾಬಾದ್​: ಮದುವೆಯಾದ ಮೂರ್ನಾಲ್ಕು ತಿಂಗಳಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಆತನು ಸಹ ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್’ನಲ್ಲಿ ನಡೆದಿದೆ.


ಪತ್ನಿ ದೀಪಾಳನ್ನು ಕೊಲೆಗೈದು ಬೈಕಿನಲ್ಲಿ ಠಾಣೆಗೆ ತೆರಳಿದ ಅರುಣ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಈ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಪೊಲೀಸ್​ ಅಧಿಕಾರಿ ಎಂ.ಅಶೋಕ್ ಹಾಗೂ ಸ್ಥಳೀಯರ ಪ್ರಕಾರ, ಮೇ 11ರಂದು ನಿಜಾಮಾಬಾದ್ ಜಿಲ್ಲೆಯ ಬಾಲ್ಕೊಂಡದ ಚೌಹಾಣ್ ಲಕ್ಷ್ಮಿ ಮತ್ತು ಗೋಪಿಚಂದ್ ಅವರ ಕಿರಿಯ ಪುತ್ರಿ ದೀಪಾ ಅವರು ಆದಿಲಾಬಾದ್ ಉಪನಗರ ಬಂಗಾರಗುಡ್ಡದ ಮೋಹಿತೆ ಅರುಣ್ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ ಒಂದು ವಾರದ ಬಳಿಕ ಅರುಣ್ ಪತ್ನಿಗೆ ಅನುಮಾನದಿಂದ ಕಿರುಕುಳ ನೀಡಲಾರಂಭಿಸಿದ್ದ. ಆಗಾಗ ಜಗಳ ಮಾಡುತ್ತಿದ್ದರು. ದೀಪಾ ತನ್ನ ತಂದೆಗೆ ಕರೆ ಮಾಡಿ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಹೀಗಾಗಿ ಅವರ ತಂದೆ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆಗಸ್ಟ್​ 28ರಂದು ಅರುಣ್ ತನ್ನ ಅತ್ತೆ ಮನೆಗೆ ತೆರಳಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿ ಆದಿಲಾಬಾದ್‌ಗೆ ಕರೆತಂದಿದ್ದ.ಶುಕ್ರವಾರ ಬೆಳಗ್ಗೆ ಅರುಣ್ ತನ್ನ ಪತ್ನಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ. ಆಕೆಯ ಕುತ್ತಿಗೆ ಕೊಯ್ದು, ತಲೆಯನ್ನು ಮಂಚಕ್ಕೆ ಜಜ್ಜಿದ್ದರಿಂದ ಗೃಹಿಣಿ ಸಾವನ್ನಪ್ಪಿದ್ದಾಳೆ. ಬಳಿಕ ಅರುಣ್​ ಅದಿಲಾಬಾದ್ ಗ್ರಾಮಾಂತರ ಪೊಲೀಸರಿಗೆ ಶರಣಾಗಲು ತೆರಳಿದ್ದನು. ಅರುಣ್​ ತಂದೆ ಜೈವಂತ್ ರಾವ್ ತನ್ನ ಮಗನ ಬೈಕ್ ಪತ್ತೆಯಾಗದ ಕಾರಣ ಮಗನಿಗೆ ಕರೆ ಮಾಡಿದ್ದಾರೆ. ಆಗ ಅರುಣ್​ ನಾನು ನನ್ನ ಪತ್ನಿಯನ್ನು ಕೊಂದಿದ್ದು, ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ತಂದೆ ಜೈವಂತ್ ರಾವ್​ಗೆ ತಿಳಿಸಿದ್ದಾನೆ. ಕೂಡಲೇ ನೀನು ಮನೆಗೆ ಬರುವಂತೆ ಜೈವಂತ್ ರಾವ್ ಮಗನಿಗೆ ಸೂಚಿಸಿದ್ದಾರೆ. ಅಪ್ಪನ ಮಾತಿನಂತೆ ಮಗ ಅರುಣ್​ ಮನೆಗೆ ಹಿಂತಿರುಗುವಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಅರುಣ್​ ತಂದೆ ಜೈವಂತ್​ ರಾವ್​ಗೆ ತಿಳಿಸಿದ್ದಾರೆ. ನಂತರ ಜೈವಂತ್ ರಾವ್ ತನ್ನ ಸೊಸೆಯನ್ನು ನನ್ನ ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಮೃತ ಗೃಹಿಣಿ ದೀಪಾ ಅವರ ತಾಯಿ ಲಕ್ಷ್ಮಿ ಅವರ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸರು ಮೃತ ಅರುಣ್ ಅವರ ತಂದೆ ಜೈವಂತ್ ರಾವ್ ಮತ್ತು ತಾಯಿ ಪದ್ಮಾ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅದಿಲಾಬಾದ್ ಎರಡನೇ ನಗರ ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಂಚನೆ ಆರೋಪದಲ್ಲಿ ನಿರ್ಮಾಪಕ ರವೀಂದರ್ ಜೈಲುಪಾಲು – ನಟಿ ಮಹಾಲಕ್ಷ್ಮಿ ಸಖತ್ ಗೋಳು

Posted by Vidyamaana on 2023-09-30 22:44:32 |

Share: | | | | |


ವಂಚನೆ ಆರೋಪದಲ್ಲಿ ನಿರ್ಮಾಪಕ ರವೀಂದರ್ ಜೈಲುಪಾಲು – ನಟಿ ಮಹಾಲಕ್ಷ್ಮಿ ಸಖತ್ ಗೋಳು

    ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮತ್ತು ನಟಿ ಮಹಾಲಕ್ಷ್ಮೀ ಶಂಕರ್ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಬ್ಬರಿಗೆ ಇದು ಎರಡನೇ ಮದುವೆಯಾಗಿತ್ತು. ತನಗಿಂತ ಎತ್ತರವಾದ ಮಗನಿದ್ದರೂ ನಟಿ ಮಹಾಲಕ್ಷ್ಮೀ ದಡೂತಿ ದೇಹವನ್ನು ಹೊಂದಿರುವ ನಿರ್ಮಾಪಕ ರವೀಂದರ್ ಅವರನ್ನು ಪ್ರೀತಿಸಿ ಮದುವೆಯಾದರು. ಇವರಿಬ್ಬರ ಮದುವೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.ಇವರಿಬ್ಬರ ಜೋಡಿ ನೋಡಿದವರು ಈಕೆ ಹಣದ ಆಸೆಗೆ ರವೀಂದರ್ ಅವರನ್ನು ಮದುವೆಯಾಗಿರುವುದು. ಹೆಚ್ಚೇನು ಈ ಜೋಡಿ ಒಟ್ಟಿಗೆ ಸಂಸಾರ ಮಾಡಲ್ಲ ಎಂದು ಟ್ರೋಲ್ ಮಾಡಲಾಗಿತ್ತು. ಇದಕ್ಕೆಲ್ಲ ಕ್ಯಾರೇ ಅನ್ನದೆ ಈ ಜೋಡಿ ಒಟ್ಟಿಗೆ ಸುತ್ತಾಡುತ್ತಿರುವ ಹಾಗೂ ರೋಮ್ಯಾಂಟಿಕ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.ಇದೀಗ ರವೀಂದರ್ ಅವರು ವಂಚನೆ ಪ್ರಕರಣ ಸಂಬಂಧ ಜೈಲು ಸೇರುತ್ತಿದ್ದ ಹಾಗೇ ಮಹಾಲಕ್ಷ್ಮೀ ತಮ್ಮ ವರಸೆ ಬದಲಿಸಿಕೊಂಡಿದ್ದಾರೆ. ನಾನು ರವೀಂದರ್‌ನಿಂದ ಮೋಸ ಹೋದೆ. ಇದೆಲ್ಲ ನನಗೆ ಗೊತ್ತಿರಲಿಲ್ಲ ಎಂದು ತಮ್ಮ ಆಪ್ತ ವಲಯಗಳಲ್ಲಿ ಹೇಳಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.ಮಹಾಲಕ್ಷ್ಮೀ ಹೇಳಿಕೆ ಹೀಗಿದೆ:

"ಮದುವೆಗೂ ಮುನ್ನವೇ ನನಗೆ ಇದ್ಯಾವುದೂ ಗೊತ್ತಿರಲಿಲ್ಲ. ಈ ವಿಚಾರಗಳನ್ನೂ ರವೀಂದರ್‌ ನನ್ನ ಮುಂದೆ ಹೇಳಿಕೊಂಡಿರಲಿಲ್ಲ. ನನ್ನನ್ನು ಮೋಸ ಮಾಡಿ ಮದುವೆಯಾಗಿದ್ದಾನೆ" ಎಂದು ಮಹಾಲಕ್ಷ್ಮೀ, ಪತಿ ರವೀಂದರ್‌ ಬಗ್ಗೆ ತಮ್ಮ ಆಪ್ತ ವಲಯದ ಮುಂದೆ ಹೇಳಿಕೊಂಡಿದ್ದಾರೆ.

ಏನಿದು ರವೀಂದರ್ ವಂಚನೆ ಪ್ರಕರಣ?

ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ಚೆನ್ನೈನ ಬಾಲಾಜಿ ಗಾಬಾ ತಮ್ಮ ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಎಂಬುವವರಿಗೆ ರವೀಂದರ್‌ ನಂಬಿಸಿದ್ದರು. ಅವರಿಂದ 16 ಕೋಟಿ ಹಣವನ್ನು ಹೂಡಿಕೆ ಸಹ ಮಾಡಿಸಿದ್ದರು. ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಹೇಳಿ ನಕಲಿ ದಾಖಲೆಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದರು ಎಂದು ಉದ್ಯಮಿ ಬಾಲಾಜಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ರವೀಂದರ್‌ ಅವರನ್ನು ಚೆನ್ನೈ ಪೊಲೀಸರು ಸೆ. 7ರಂದೇ ಬಂಧಿಸಿದ್ದರು.ಪತಿ ರವೀಂದರ್‌ ಜೈಲು ಪಾಲಾಗಿದ್ದರೆ, ಇತ್ತ ಮಹಾಲಕ್ಷ್ಮೀ ಪತಿಗೆ ಜಾಮೀನು ಕೊಡಿಸುವ ಕಾರ್ಯದಲ್ಲಿ ನಿರತರಾಗಿದ್ದರೂ, ಅರ್ಜಿ ತಿರಸ್ಕೃತಗೊಂಡಿದೆ. ಮತ್ತೊಂದೆಡೆ ಪತಿ ಜೈಲು ಸೇರಿದ ಮೇಲಿಂದ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಸಹ ಹಂಚಿಕೊಳ್ಳದ ಮಹಾಲಕ್ಷ್ಮೀ ಕಳೆದ ನಾಲ್ಕೈದು ದಿನಗಳಿಂದ ಎಂದಿನಂತೆ, ನಿತ್ಯ ನಾಲ್ಕೈದು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದಲ್ಲದೆ ಮಾಧ್ಯಮಗಳ ಬಳಿ ತಮ್ಮ ಪತಿ ರವಿಂದರ್‌ ಬಂಧನದ ಬಗ್ಗೆ ಮೌನ ಮುರಿದಿದ್ದಾರೆ

ಸುಳ್ಯ ತಾಲೂಕಿನಾದ್ಯಂತ ನಾಳೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Posted by Vidyamaana on 2023-07-24 12:49:01 |

Share: | | | | |


ಸುಳ್ಯ ತಾಲೂಕಿನಾದ್ಯಂತ ನಾಳೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ: ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ

ಮಂಗಳೂರು ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ

Posted by Vidyamaana on 2024-08-19 14:05:53 |

Share: | | | | |


ಮಂಗಳೂರು  ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.

ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.

SDPI ಸಾಲ್ಮರ ವಾರ್ಡ್ ಸಮಿತಿ ಯಿಂದ ಮನೆಮನೆಗೆ ತೆರಳಿ ಶಾಫಿ ಬೆಳ್ಳಾರೆ ಪರ ಮತಯಾಚನೆ.

Posted by Vidyamaana on 2023-04-30 10:58:16 |

Share: | | | | |


    SDPI ಸಾಲ್ಮರ ವಾರ್ಡ್ ಸಮಿತಿ ಯಿಂದ  ಮನೆಮನೆಗೆ ತೆರಳಿ ಶಾಫಿ ಬೆಳ್ಳಾರೆ ಪರ ಮತಯಾಚನೆ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ  ಪರವಾಗಿ ಸಾಲ್ಮರ ವಾರ್ಡ್ ನ ಸುಮಾರು 50  ಮನೆಗಳಿಗೆ ತೆರಳಿ  ಮತಯಾಚನೆ ಮಾಡಿದರು.

ಅಂಜಲಿ-ಗಿರೀಶ್ ಮೊದಲೇ ಮದುವೆಯಾಗಿತ್ತಾ? - ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Posted by Vidyamaana on 2024-05-17 12:35:57 |

Share: | | | | |


ಅಂಜಲಿ-ಗಿರೀಶ್ ಮೊದಲೇ ಮದುವೆಯಾಗಿತ್ತಾ? - ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ (Hubli Crime) ಅಂಜಲಿಯನ್ನು ಕೊಲೆ (Anjali Murder Case) ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ ಸಾವಂತ್ (Anjali Murder suspect) ಬಂಧನ ಪ್ರಕರಣ ಅನಿರೀಕ್ಷಿತ, ರೋಚಕ ರೀತಿಯಲ್ಲಿ ಸಂಭವಿಸಿದೆ. ರೈಲಿನಲ್ಲಿ ಇತರ ಪ್ರಯಾಣಿಕರಿಂದ (Co passengers) ಥಳಿತಕ್ಕೊಳಗಾದ ಗಿರೀಶ್‌, ಕೊಲೆ ಆರೋಪಿ ಎಂದು ಥಳಿಸಿದವರಿಗೆ ಗೊತ್ತೇ ಇರಲಿಲ್ಲ!


ಇದು ನಡೆದದ್ದು ಹೀಗೆ: ಕೊಲೆ ಆರೋಪಿ ಗಿರೀಶ್ ಸಾವಂತ್ ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ಬರುತ್ತಿದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.


ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆ ಆರೋಪಿ ಎಂದು ಆರಂಭದಲ್ಲಿ ತಿಳಿದಿರಲಿಲ್ಲ. ಬಳಿಕ ಆರೋಪಿಯ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸರು, ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಈತನನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಕಿಮ್ಸ್‌ಗೆ ಆಗಮಿಸಿ ಆರೋಪಿಯನ್ನು ಪರಿಶೀಲಿಸಿದ್ದಾರೆ.

Recent News


Leave a Comment: