ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

Posted by Vidyamaana on 2024-06-17 16:11:21 |

Share: | | | | |


ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು.

ಮಾ.18: ಉಳ್ಳಾಲದಲ್ಲಿ ಮೆಸೇಜ್-2 ಅಹ್ಲನ್ ರಮಝಾನ್.

Posted by Vidyamaana on 2023-03-16 04:02:52 |

Share: | | | | |


ಮಾ.18: ಉಳ್ಳಾಲದಲ್ಲಿ ಮೆಸೇಜ್-2 ಅಹ್ಲನ್ ರಮಝಾನ್.

ಪುತ್ತೂರು: ನ್ಯಾಷನಲ್ ಮಿಷನ್ ಕರ್ನಾಟಕ ಇದರ ಶೈಕ್ಷಣಿಕ ಅಭಿಯಾನದ ಅಂಗವಾಗಿ ಮಾ.18ರಂದು ಸಂಜೆ ಉಳ್ಳಾಲದ ಹಾಜ್ರತ್ ಮೈದಾನದಲ್ಲಿ ಮೆಸೇಜ್ -2 ಅಹ್ಲನ್ ರಮಝಾನ್ ಕಾರ್ಯಕ್ರಮ ನಡೆಯಲಿದೆ ಎಂದು ನ್ಯಾಷನಲ್ ಮಿಷನ್ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ರಶೀದ್‌ ಹಾಜಿ ಪರ್ಲಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಸೈಯದ್‌ ಮುಹಮ್ಮದ್‌ ಜಿಫ್ರಿ ಮುತ್ತುಕೋಯ  ತಂಙಳ್  , ಸೈಯದ್‌ ಸ್ವಾದಿಕಲಿ ಶಿಹಾಬ್ ತಂಙಳ್ ಪಾಣಕ್ಕಾಡ್, ಶೈಖುನಾ ಶೈಖುಲ್ ಜಾಮಿಯಾ, ಅಲಿಕುಟ್ಟಿ ಮುಸ್ಲಿಯಾರ್ ಮತ್ತಿತರರ ಧಾರ್ಮಿಕ, ಸಾಮಾಜಿಕ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪುತ್ತೂರಿನಿಂದ ಒಂದು ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಅಂದು ಸಂಜೆ 4 ಗಂಟೆಗೆ ದರ್ಬೆ ಬೈಪಾಸ್  ಪತ್ರಾವು ವೃತ್ತದಿಂದ ವಾಹನ ಹೊರಡಲಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪುತ್ತೂರು ರೇಂಜ್‌ನ ಕೋಶಾಧಿಕಾರಿ ಎಲ್.ಟಿ. ಅಬ್ದುರಝಾಕ್ ಹಾಜಿ, ಎಸ್ಕೆಎಸ್ಸೆಸ್ಸೆಫ್‌ ಯುಎಇ ಕಾರ್ಯಾಧ್ಯಕ್ಷ ಸುಲೈಮಾನ್ ಮುಸ್ಲಿಯಾರ್ ಕಲ್ಲೇಗ, ಪುತ್ತೂರು ವಲಯ ಅಧ್ಯಕ್ಷ ಹಾಜಿ ಬಾತೀಶ ಪಾಟ್ರಕೋಡಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು

Posted by Vidyamaana on 2024-01-09 21:01:47 |

Share: | | | | |


ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್: ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ಕರ್ನಾಟಕ ರಾಜ್ಯಪಾಲರಾಗಿರುವಂತ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ( Covid19 Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ತಿಳಿದು ಬಂದಿದೆ ಎಂದಿದೆ.


ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಪಾಸಿಟಿವ್ ( Covid19 Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರ್ದದುಗೊಳಿಸಿರೋದಾಗಿ ತಿಳಿಸಿದೆ.


ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಂಜಾಗ್ರತಾ ಕ್ರಮವಾಗಿ ರಾಜಭವನದಲ್ಲೇ ಕ್ವಾರಂಟೈನ್ ಆಗಲಿದ್ದಾರೆ. ಅವರು ಕೊರೋನಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಆರೋಗ್ಯವಾಗಿದ್ದಾರೆ. ಅವರಿಗೆ ಕೋವಿಡ್ ಚಿಕಿತ್ಸೆಯು ಹೋಂ ಕ್ವಾರಂಟೈನ್ ನಲ್ಲಿ ಮುಂದುವರೆಯಲಿದೆ ಅಂತ ಹೇಳಿದೆ.

ಆಶೀರ್ವಾದ್ ಸ್ಕೀಂ ಬಗ್ಗೆ ಸಂತೃಪ್ತ ಗ್ರಾಹಕರೊಬ್ಬರ ಆತ್ಮತೃಪ್ತಿಯ ಬರಹ

Posted by Vidyamaana on 2024-05-23 22:12:04 |

Share: | | | | |


ಆಶೀರ್ವಾದ್ ಸ್ಕೀಂ ಬಗ್ಗೆ ಸಂತೃಪ್ತ ಗ್ರಾಹಕರೊಬ್ಬರ ಆತ್ಮತೃಪ್ತಿಯ ಬರಹ

ಪುತ್ತೂರು : ಅವಿಭಜಿತ ದಕ್ಷಿಣ ಕನ್ನಡದಲ್ಲಿ ಸಾಕಷ್ಟು ಸ್ಕೀಮ್ ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ನಾನು ಮೆಚ್ಚಿಕೊಂಡಿರುವುದು ಹಾಗೂ ಒಪ್ಪಿಕೊಂಡಿರುವ ಏಕೈಕ ಸ್ಕೀಮ್ ವ್ಯವಸ್ಥೆ ಎಂದರೆ ಅದು ಆಶೀರ್ವಾದ್.

ದರ್ಬೆಯ ಮೊಯಿದ್ದೀನ್  ವಾಣಿಜ್ಯ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶೀರ್ವಾದ್ ಇಂದು ನನ್ನಂತಹ ನೂರಾರು, ಸಾವಿರಾರು ಗ್ರಾಹಕರಲ್ಲಿ ಯಶಸ್ವಿಯಾಗಿ ಭರವಸೆ ಮೂಡಿಸಿದೆ. ಇದಕ್ಕೆ ಕಾರಣ ಆಶೀರ್ವಾದ್ ಸಂಸ್ಥೆಯ ಕಾರ್ಯವೈಖರಿ. ಕೆಲವೇ ದಿನಗಳಲ್ಲಿ ನಮ್ಮೊಳಗೆ ಆಶೀರ್ವಾದ್ ಬಗೆಗಿನ ಭರವಸೆ ಭದ್ರವಾಗಿದೆ.

ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

Posted by Vidyamaana on 2024-05-09 07:17:06 |

Share: | | | | |


ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

ಐಪಿಎಲ್ 2024ರ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೂ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್‌ ಕಲೆಹಾಕಿತು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 9.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 165 ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಪತ್ನಿಯಿಂದಲೇ ಬೆದರಿಕೆ, ಆಕೆಯ ಹಿಸ್ಟರಿ ಕಂಡು ದಂಗಾದ ಪೊಲೀಸರು..!

Posted by Vidyamaana on 2023-11-24 07:30:53 |

Share: | | | | |


ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಪತ್ನಿಯಿಂದಲೇ ಬೆದರಿಕೆ, ಆಕೆಯ ಹಿಸ್ಟರಿ ಕಂಡು ದಂಗಾದ ಪೊಲೀಸರು..!

ಉತ್ತರಪ್ರದೇಶ : ದಿನ ಸಮಾಜದಲ್ಲಿ ಆಗಾಗ ಹನಿಟ್ಯ್ರಾಪ್ ನಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನೋಡಿರುತ್ತೇವೆ. ಪ್ರೀತಿ ಪ್ರೇಮ ಎಂದು ನಂಬಿಸಿದ ಕೆಲ ಮಹಿಳೆಯರು ಹನಿಟ್ಯ್ರಾಪ್ ಹೆಸರಿನಲ್ಲಿ ಮೋಸಮಾಡಿ ಲಕ್ಷಾಂತರ ರೂಪಾಯಿ ದೋಚುತ್ತಿರುತ್ತಾರೆ. ಆದರೆ ಉತ್ತರ ಪ್ರದೇಶದಲ್ಲಿ ಪತ್ನಿಯೇ ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ.ಆಕೆಯ ಕಥೆಯನ್ನು ಕೇಳಿದ ಪೊಲೀಸರೇ ದಂಗಾಗಿದ್ದಾರೆ ಎನ್ನಲಾಗಿದೆ.


ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಸಂಗೀತಾ ದೇವಿ ಕೆಲವು ತಿಂಗಳುಗಳ ಹಿಂದೆಯಷ್ಟೆ ಶಿವಂ ಎಂಬ ಪೊಲೀಸ್ ಪೇದೆಯನ್ನು ಮದುವೆಯಾಗಿದ್ದರು. ಶಿವಂಗೆ ಆಕೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಕಳೆದ ಜೂನ್ ಮಾಹೆಯಲ್ಲಿ ಇಬ್ಬರೂ ಮದುವೆಯಾಗಿದ್ದರು. ಕೆಲ ದಿನಗಳ ಬಳಿಕ ಆಕೆ ಬೆಡ್ ರೂಂ ನಲ್ಲಿನ ಖಾಸಗಿ ಕ್ಷಣಗಳನ್ನು ವಿಡಿಯೋ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ. ಆ ವಿಡಿಯೋಗಳನ್ನು ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ.ಆ ವಿಡಿಯೋಗಳನ್ನು ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಆರೋಪಿ ಸಂಗೀತಾ ಗೆ ಆಕೆಯ ಸಹೋದರ ಹಾಗೂ ಪೋಷಕರೂ ಸಹ ಸಾಥ್ ನೀಡಿದ್ದಾರೆ ಎನ್ನಲಾಗಿದೆ.


ಇನ್ನೂ ಮದುವೆಯಾದ ಬಳಿಕ ಶಿವಂ ಆರೋಪಿಯ ಪೋಷಕರು ಹಾಗೂ ಸಹೋದರನಿಂದ ಸಮಸ್ಯೆಗಳನ್ನು ಎದುರಿಸಿದ್ದಾರೆ. ಅವರಿಂದ ಪದೇ ಪದೇ ಹಣ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಿದ್ದಾರೆ. ಜೊತೆಗೆ ಪತ್ನಿ ಸಹ ಬೆದರಿಕೆ ಶುರು ಮಾಡಿದ್ದಾಳೆ. 30 ಲಕ್ಷ ಕೊಡದೇ ಇದ್ದರೇ ಬೆಡ್ ರೂಂನ ಖಾಸಗಿ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಹಾಗೂ ಅತ್ಯಾಚಾರ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿದ್ದಾಳಂತೆ. ಅದರಿಂದ ಬೇಸತ್ತ ಶಿವಂ ಆಕೆಯ ವಿರುದ್ದ ದೂರು ದಾಖಲಿಸಿದ್ದರು. ಪತ್ನಿ ಹಾಗೂ ಆಕೆಯ ಸಹೋದರ, ತಂದೆ ಯನ್ನು ಆರೋಪಿಗಳ ಪಟ್ಟಿಗೆ ಸೇರಿಸಿದ್ದರು.ಇನ್ನೂ ದೂರು ದಾಖಲಿಸಿಕೊಂಡ ಪೊಲೀಸರು ಸಂಗೀತಾಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಕೆಯ ಕಥೆ ಕೇಳಿದ ಪೊಲೀಸರೇ ದಂಗಾಗಿದ್ದಾರೆ. ಈ ಹಿಂದೆ ಸಂತ್ರಸ್ತೆ ಸಂಗೀತಾ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಮದುವೆಯಾಗಿ ಇದೇ ಮಾದರಿಯಲ್ಲಿ ಹಣ ವಸೂಲಿ ಮಾಡಿದ್ದಳಂತೆ. ಸೋಷಿಯಲ್ ಮಿಡಿಯಾ ಮೂಲಕ ಪರಿಚಯ ಮಾಡಿಕೊಂಡ ಈಕೆ ಮದುವೆಯಾಗಿ ಬಳಿಕ ಖಾಸಗಿ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿ ಹಣ ಪೀಕುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬೆಡ್ ರೂಂ ವಿಡಿಯೋ ತೋರಿಸಿ ಬೆದರಿಕೆ ಹಾಕು‌ತ್ತಿದ್ದ ಐನಾತಿ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.



Leave a Comment: