ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಸುದ್ದಿಗಳು News

Posted by vidyamaana on 2024-07-22 17:34:57 |

Share: | | | | |


ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಸಿಟಿವಿಗೆ ಒತ್ತಾಯ: ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಇನ್ನೂ ಪತ್ತೆಯಾಗಿಲ್ಲ.

ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

 Share: | | | | |


ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

Posted by Vidyamaana on 2023-08-21 10:11:13 |

Share: | | | | |


ಬೆದ್ರಾಳ ಎಸ್. ಇಸ್ಮಾಯಿಲ್ ಹಾಜಿ ನಿಧನ

ಪುತ್ತೂರು: ಮುಕ್ವೆ ಜಮಾಅತ್ ಗೆ ಒಳಪಟ್ಟ ಬೆದ್ರಾಳ ನಿವಾಸಿ, ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಎಸ್. ಇಸ್ಮಾಯಿಲ್ ಹಾಜಿ ಯಾನೆ ಶಿಬರ ಮೋನುಚ್ಚ (84 ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಆ. 21ರಂದು ಬೆದ್ರಾಳದ ಸ್ವಗೃಹದಲ್ಲಿ ನಿಧನರಾದರು.

ಇವರು ಹಲವಾರು ವರ್ಷಗಳ ಕಾಲ ಮುಕ್ವೆ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು, ಸಮುದಾಯ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು  ಪತ್ನಿ, ಪುತ್ರ ಅಬ್ದುಲ್ ರಹಿಮಾನ್,

 ಪುತ್ರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

Posted by Vidyamaana on 2024-01-15 09:29:14 |

Share: | | | | |


ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ (New Zealand Beat Pakistan) ನಡುವೆ ನಡೆಯುತ್ತಿರುವ ಟಿ20 ಸರಣಿಯಲ್ಲಿ ಕಿವೀಸ್ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು 21 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯರು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 173 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ವಿಡಿಯೋ ನೋಡಲು ಕ್ಲಿಕ್ ಮಾಡಿ

ವಿಡಿಯೋ ನೋಡಲು ಕ್ಲಿಕ್ ಮಾಡಿ


ಪಾಕ್ ಪರ ಬಾಬರ್ (Babar Azam) ಹಾಗೂ ಫಖರ್ ಜಮಾನ್ (Fakhar Zaman) ತಲಾ ಅರ್ಧಶತಕ ಸಿಡಿಸಿ ಗೆಲುವಿಗಾಗಿ ಹೋರಾಡಿದರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಆದರೆ ಈ ಇಬ್ಬರು ಬೌಂಡರಿ ಸಿಕ್ಸರ್​ಗಳ ಸುರಿಮಳೆಗೈಯುವ ಮೂಲಕ ಮೈದಾನದಲ್ಲಿ ನೆರೆದಿದ್ದವರಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾದರು. ಇದೇ ವೇಳೆ ಪಂದ್ಯಕ್ಕೆ ಬಳಸಿದ್ದ ಬಾಲ್ ಕಳತ್ತನವಾದ ಪ್ರಸಂಗವೂ ನಡೆಯಿತು. ಇದರಿಂದ ಆಟ ಕೊಂಚ ಸಮಯ ಸ್ಥಗಿತ ಕೂಡ ಆಯಿತು.


ಬಾಬರ್ ಮತ್ತು ಫಖರ್ ಅರ್ಧಶತಕ


ವಾಸ್ತವವಾಗಿ ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲೂ ಮೊದಲ ಪಂದ್ಯದಂತೆ ರನ್ ಮಳೆಯೇ ಹರಿಯಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಫಿನ್ ಅಲೆನ್ ಅವರ 74 ರನ್​ಗಳ ಕೊಡುಗೆಯಿಂದಾಗಿ 20 ಓವರ್‌ಗಳಲ್ಲಿ 194 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡಕ್ಕೆ ಆರಂಭದಲ್ಲೇ ಎರಡು ವಿಕೆಟ್​ಗಳ ಆಘಾತ ಎದುರಾಯಿತು. ನಂತರ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬಾಬರ್ ಮತ್ತು ಫಖರ್ ಜಮಾನ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಬ್ಯಾಟ್​ ಬೀಸಿದರು. ಒಂದೆಡೆ ಬಾಬರ್ ಬೌಂಡರಿ ಬಾರಿಸುತ್ತಿದ್ದರೆ, ಮತ್ತೊಂದೆಡೆ ಫಖರ್ ಬಿಗ್ ಬಿಗ್ ಸಿಕ್ಸರ್ ಬಾರಿಸುತ್ತಿದ್ದರು.


ಇದೇ ವೇಳೆ ಪಾಕ್ ಇನ್ನಿಂಗ್ಸ್​ ನಡೆಯುತ್ತಿದ್ದ ಸಮಯದಲ್ಲಿ ಆಟ ನೋಡಲು ಮೈದಾನಕ್ಕೆ ಬಂದಿದ್ದ ಪ್ರೇಕ್ಷಕನೊಬ್ಬ ಬಾಲ್ ಕದ್ದು ಪರಾರಿಯಾದ ಪ್ರಸಂಗವೂ ನಡೆಯಿತು. ವಾಸ್ತವವಾಗಿ ನ್ಯೂಜಿಲೆಂಡ್ ವೇಗಿ ಬೆನ್ ಸಿಯರ್ಸ್ ಬೌಲ್ ಮಾಡಿದ 6ನೇ ಓವರ್​ನಲ್ಲಿ ಫಖರ್ ಜಮಾನ್ ಬಿಗ್ ಸಿಕ್ಸರ್ ಬಾರಿಸಿದರು. ಫಖರ್ ಶಕ್ತಿಯ ಮುಂದೆ ತಲೆಬಾಗಿದ ಚೆಂಡು ನೇರವಾಗಿ ಕ್ರೀಡಾಂಗಣದ ಹೊರಗೆ ಹೋಗಿ ರಸ್ತೆಯಲ್ಲಿ ಬಿದ್ದಿತು. ಇದನ್ನು ನೋಡಿದ್ದ ಅಲ್ಲಿದ್ದ ಕೆಲವು ಅಭಿಮಾನಿಗಳು ಚೆಂಡನ್ನು ಹಿಡಿಯಲು ಓಡಿದರು.ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ


ಈ ವೇಳೆ ಒಬ್ಬ ಪ್ರೇಕ್ಷಕ ಆ ಚೆಂಡನ್ನು ಎತ್ತಿಕೊಂಡು ಮೈದಾನದೊಳಕ್ಕೆ ಎಸೆಯದೆ, ರಸ್ತೆಯಲ್ಲಿ ಓಡಲಾರಂಭಿಸಿದನು. ಎಲ್ಲರೂ ಆತ ವಾಪಸ್ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಾಲನ್ನು ಎತ್ತಿಕೊಂಡ ಆ ವ್ಯಕ್ತಿ ಮತ್ತೆ ಮೈದಾನಕ್ಕೆ ಬರಲೇ ಇಲ್ಲ. ಹೀಗಾಗಿ ಮೈದಾನದಲ್ಲಿದ್ದ ಅಂಪೈರ್ ಮತ್ತೊಂದು ಬಾಲ್‌ ತರಿಸಿಕೊಂಡು ಪಂದ್ಯವನ್ನು ಮತ್ತೆ ಪ್ರಾರಂಭಿಸಿದರು. ಇದೀಗ ಪ್ರೇಕ್ಷಕ ಬಾಲ್ ಕದ್ದು ಓಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಪಾಕ್ ತಂಡಕ್ಕೆ ಮತ್ತೊಂದು ಸೋಲು


ಪಂದ್ಯದ ಮಟ್ಟಿಗೆ ಹೇಳುವುದಾದರೆ, ಪಾಕಿಸ್ತಾನ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು. ನ್ಯೂಜಿಲೆಂಡ್ ನೀಡಿದ 195 ರನ್‌ಗಳ ಗುರಿಯನ್ನು ಸಾಧಿಸುವ ಯತ್ನದಲ್ಲಿ ಇಡೀ ತಂಡವು 19.3 ಓವರ್‌ಗಳಲ್ಲಿ ಕೇವಲ 173 ರನ್‌ಗಳಿಗೆ ಕುಸಿದು 21 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಪಾಕಿಸ್ತಾನ ಪರ ಬಾಬರ್ ಆಝಂ (66) ಮತ್ತು ಫಖರ್ ಜಮಾನ್ (50) ಅರ್ಧಶತಕ ಸಿಡಿಸಿದರು. ಆದರೆ ಅವರನ್ನು ಹೊರತುಪಡಿಸಿ ಇತರ ಬ್ಯಾಟ್ಸ್‌ಮನ್‌ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

Posted by Vidyamaana on 2023-06-03 00:44:08 |

Share: | | | | |


ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ: ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.


ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.


ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.


ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

Posted by Vidyamaana on 2024-04-14 12:55:15 |

Share: | | | | |


3 ನೇ ಮಹಾಯುದ್ಧದ ಭೀತಿ : ಇಸ್ರೇಲ್ ಮೇಲೆ ದಾಳಿಗೆ ಇರಾನ್, ಯೆಮೆನ್, ಸಿರಿಯಾ ಮತ್ತು ಇರಾಕ್ ಸಜ್ಜು

ಇಸ್ರೇಲ್ : ಇಂದು ಮುಂಜಾನೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯು ಮೂರನೇ ಮಹಾಯುದ್ಧದ ಗಂಟೆಯನ್ನು ಬಾರಿಸಿದೆ. ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಇರಾನ್ ಭಾನುವಾರ ಮುಂಜಾನೆ ಇಸ್ರೇಲ್ ಮೇಲೆ ತೀವ್ರ ದಾಳಿ ನಡೆಸಿತು. ಈ ಸಮಯದಲ್ಲಿ, ಇರಾನ್ ಇಸ್ರೇಲ್ ಮೇಲೆ ನೂರಾರು ಡ್ರೋನ್ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಕೋಲಾಹಲವನ್ನು ಸೃಷ್ಟಿಸಿತು.ಇಂದು ಮುಂಜಾನೆ, ಇರಾನ್ ಮತ್ತು ಯೆಮೆನ್, ಸಿರಿಯಾ ಮತ್ತು ಇರಾಕ್ನ ಅನುಕಂಪ ಹೊಂದಿರುವವರು ಇಸ್ರೇಲ್ನಲ್ಲಿನ ಮಿಲಿಟರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರು. ಸಂಪೂರ್ಣ ದಾಳಿಯಿಂದ ಇಸ್ರೇಲ್ ಆಘಾತಕ್ಕೊಳಗಾಗಿದೆ. ಆದಾಗ್ಯೂ, ಇಸ್ರೇಲಿ ಸೈನ್ಯವು ಈ ಹೆಚ್ಚಿನ ದಾಳಿಗಳನ್ನು ಹಿಮ್ಮೆಟ್ಟಿಸಿತು. ಇರಾನ್ ಸೇರಿದಂತೆ ಇತರ ದೇಶಗಳ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಲು ಯುಎಸ್ ಇಸ್ರೇಲ್ಗೆ ಸಹಾಯ ಮಾಡಿತು.

ತನ್ನ ಕಸ್ಟಮರ್ಸ್ ಗಳಿಗೆ ಕೈ ಎತ್ತಿಬಿಟ್ಟ ಬಿಟ್ ಕ್ವಾಂಠ್!?

Posted by Vidyamaana on 2023-09-15 18:31:28 |

Share: | | | | |


ತನ್ನ ಕಸ್ಟಮರ್ಸ್ ಗಳಿಗೆ ಕೈ ಎತ್ತಿಬಿಟ್ಟ ಬಿಟ್ ಕ್ವಾಂಠ್!?

ಪುತ್ತೂರು : ಹಣ ಎಂದರೆ ಹೆಣ ಕೂಡ ಬಾಯಿ ಬಿಡುತ್ತದೆ ಎಂಬ ಗಾದೆಯಂತೆ ಬಹುತೇಕ ಜನರು ಹಣದ ವಿಚಾರದಲ್ಲೇ ಮೋಸ ಹೋಗುತ್ತಾರೆ. ಬಿಟ್ ಕ್ವಾಂಟ್ ಎಂಬ ಮನಿ ಆ್ಯಪ್ ನಲ್ಲಿ ಹಣ ಹೂಡಿಕೆ ಮಾಡಿದ ಜನರು ಮೋಸ ಹೋಗಿದ್ದಾರೆ. ಪುತ್ತೂರು ತಾಲೂಕಿನ ಹಲವು ಮಂದಿ ಈ ಆ್ಯಪ್ ನಲ್ಲಿ ಹಣ ಹೂಡಿ ಮೋಸ ಹೋಗಿದ್ದಾರೆ ಎಂಬ ಬಗ್ಗೆ ವರದಿಯಾಗಿದೆ.


‘ಬಿಟ್ ಕ್ವಾಂಟ್’… ಇದೊಂದು ವಿದೇಶಿ ಹಣ ಹೂಡಿಕೆಯ ಆಪ್ ಆಗಿದೆ. 2018ರಲ್ಲಿ ಆರಂಭಗೊಂಡ ಲಂಡನ್ ಯುನೈಟೆಡ್ ಕಿಂಗ್ ಡಂ ಕಂಪೆನಿ ಅಂತ ಹೇಳಲಾಗಿದೆ.


ಇದೊಂದು ಕ್ರಿಪ್ಟೋಕರೆನ್ಸಿಗಳಿಗೆ ವಿನಿಮಯ ವೇದಿಕೆಯಾಗಿದೆ. ಮೊದಲಿಗೆ ಬಿಟ್ ಕ್ವಾಂಟ್ ಎಂಬ ಆ್ಯಪ್ ಅನ್ನು ನಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕಾಗಿದೆ.


ಆ್ಯಪ್ ಡೌನ್‌ಲೋಡ್ ಮಾಡಿ ಅದರಲ್ಲಿರುವ ಅಪ್ಲಿಕೇಶನ್ ಭರ್ತಿ ಮಾಡಿದ ಬಳಿಕ ನಾವು ಹಣ ಹೂಡಿಕೆ ಮಾಡಬೇಕಾಗುತ್ತದೆ. ಇದರಲ್ಲಿ 6 ಸಾವಿರದಿಂದ 5 ಲಕ್ಷದ ತನಕ ಹಣ ಹೂಡಿಕೆ ಮಾಡಬಹುದಾಗಿದೆ. ಹೀಗೆ ಹಣ ಹೂಡಿಕೆ ಮಾಡಿದ ಗ್ರಾಹಕರಿಗೆ ಆಪ್‌ನಲ್ಲಿ 10 ಕಂಪೆನಿಗಳನ್ನು ತೋರಿಸಲಾಗುತ್ತದೆ. ಪ್ರತಿದಿನ ಸಂಜೆ ಈ ಕಂಪೆನಿಗಳಲ್ಲಿ ಟ್ರೆಡಿಂಗ್ ಮಾಡುವ ವ್ಯವಸ್ಥೆ ಇರುತ್ತದೆ. ಕೆಲವು ದಿನ ಎರಡು ಟ್ರೇಡಿಂಗ್ ಇದ್ದರೆ., ಇನ್ನುಳಿದ ದಿನ ಒಂದೇ ಟ್ರೇಡಿಂಗ್ ಇರುತ್ತದೆ. ಟ್ರೇಡಿಂಗ್ ಬಗ್ಗೆ ವಾಟ್ಸಪ್ ಗ್ರೂಪ್‌ಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗುತ್ತದೆ. ಇದಲ್ಲದೆ ನಾವು ಯಾವ ಕಂಪೆನಿಗೆ ಟ್ರೇಡಿಂಗ್ ಮಾಡಬೇಕು ಎನ್ನುವ ಬಗ್ಗೆಯೂ ನಮಗೆ ವಾಟ್ಸಪ್ ಗ್ರೂಪ್‌ನಲ್ಲಿ ಮಾಹಿತಿ ಬರುತ್ತದೆ.


ನಾವು 6 ಸಾವಿರ ಹಣ ಹೂಡಿಕೆ ಮಾಡಿದ ದಿನದಿಂದಲೇ ಟ್ರೇಡಿಂಗ್ ಆರಂಭವಾಗುತ್ತದೆ. ಹೊಸದಾಗಿ ಸೇರಿದ ಗ್ರಾಹಕರ ಟ್ರೇಡಿಂಗ್ ಸಿಗ್ನಲ್ ದರ ಶೇ.6, ಅತ್ಯಧಿಕ ವಹಿವಾಟು ಸಿಗ್ನಲ್ ದರ ಶೇ.10 ಆಗಿರುತ್ತದೆ.


ನಾವು ಒಬ್ಬ ವ್ಯಕ್ತಿಯನ್ನು 6 ಸಾವಿರ ಹಣ ಹೂಡಿಕೆ ಮಾಡಿ ಆಹ್ವಾನಿಸಿದಾಗ ನಮ್ಮ ಟ್ರೇಡಿಂಗ್ ಸಿಗ್ನಲ್ ದರ ಶೇ.7 ಆಗುತ್ತದೆ. 2 ಜನರನ್ನು ಸೇರಿಸಿದರೆ ಶೇ.8 ಹಾಗೇ ಹೆಚ್ಚುತ್ತಾ ಹೋಗುತ್ತದೆ. ನಾವು 8 ಜನರನ್ನು ಸೇರಿಸಿದಾಗ ನಮ್ಮ ಟ್ರೇಡಿಂಗ್ ಸಿಗ್ನಲ್ ದರ ಶೇ.10 ಆಗುತ್ತದೆ.


ಕಂಪೆನಿಯವರು ಜನರನ್ನು ನಂಬಿಸುವ ರೀತಿಯೇ ಹಣ ಹೂಡಿಕೆ ಮಾಡಿ ಟ್ರೇಡಿಂಗ್ ಮಾಡುತ್ತಾ ಹೋದಂತೆ ತನ್ನ ಚಾಣಾಕ್ಷತನವನ್ನು ತೋರಿಸುತ್ತಾ. ಹೆಚ್ಚೆಚ್ಚು ಹಣ ಪಡೆಯುತ್ತಾ ಜನರಿಗೆ ಮೋಸ ಮಾಡುತ್ತಾ ಹೋಗುತ್ತದೆ.


ಸ್ಮಾರ್ಟ್ ಯುಗದಲ್ಲಿ ನಾವು ಬಹಳಷ್ಟು ಎಚ್ಚರಿಕೆಯಿಂದ ಹೆಜ್ಜೆ ಇರಿಸಬೇಕಾದ ಅನಿವಾರ್ಯತೆ ಇದೆ. ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ ಅದರಲ್ಲೂ ಹಣದ ವಿಚಾರದಲ್ಲಿ ನಾವು ಬಹಳ ಜಾಗರೂಕತೆಯಿಂದ ವ್ಯವಹರಿಸಬೇಕಾಗಿದೆ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಫೊಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಸಾವು!

Posted by Vidyamaana on 2024-05-27 14:28:13 |

Share: | | | | |


ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಫೊಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಸಾವು!

ಬೆಂಗಳೂರು : ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ (Sexual Assault) ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದ ದೂರುದಾರೆ ಇಂದು ಸಾವನ್ನಪ್ಪಿದ್ದಾರೆ.ಕೆಲ ತಿಂಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.



Leave a Comment: