2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

Posted by Vidyamaana on 2023-12-25 20:23:26 |

Share: | | | | |


ಮುಂಬೈ ಗ್ಯಾರೇಜ್‌ ನಲ್ಲಿ ವಾಸವಿದ್ದ ನಟ; ಈಗ ದುಬೈ ಲಂಡನ್‌ ಅಮೆರಿಕಾದಲ್ಲೂ ಮನೆ, ಹತ್ತು ಕಾರುಗಳ ಒಡೆಯ

ಬಾಲಿವುಡ್ ಜಗತ್ತಿನಲ್ಲಿ 80 ಹಾಗೂ 90ರ ದಶಕಗಳಲ್ಲಿ ಬಹುಬೇಡಿಕೆಯ ಸ್ಟಾರ್ ನಟರಾಗಿದ್ದವರ ಕಥೆಯಿದು. ಅವರಿನ್ನೂ ಆಗತಾನೇ ಇಂಡಸ್ಟ್ರಿಗೆ ಬಂದ ದಿನಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡಿಕೊಂಡು ಜೀವನೋಪಾಯಕ್ಕಾಗಿ ಭಾರಿ ಕಷ್ಟಪಡುತ್ತಿದ್ದರು. ಅದರೆ, ಇಂದು ಬಾಲಿವುಡ್‌ನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅವರ ಹೆಸರೂ ಕೂಡ ಕಾಣಿಸುತ್ತಿದೆ.ಅವರು ಯಾರು ಬಲ್ಲಿರೇನು?


ಈ ಸ್ಟಾರ್ ನಟರ ಇಂದಿನ ಒಟ್ಟೂ ಅಸ್ತಿಯ ಮೌಲ್ಯ ಬರೋಬ್ಬರಿ 134 ಕೋಟಿ ರೂಪಾಯಿಗಳು. ಪ್ರತಿ ವರ್ಷ ಸಿನಿಮಾ ಹಾಗು ಬಿಸಿನೆಸ್‌ಗಳಿಂದ 12 ಕೋಟಿಗೂ ಹೆಚ್ಚು ಸಂಪಾದನೆ ಮಾಡುತ್ತಾರಂತೆ. ಒಂದು ಸಿನಿಮಾಗೆ ಈಗ 2-4 ಕೋಟಿ ರೂಪಾಯಿಗಳವರೆಗೆ ಸಂಭಾವನೆ ಪಡೆಯುವ ಇವರು, ಸ್ಟಾರ್ ಆಗಿದ್ದ ಕಾಲದಲ್ಲಿ ಅಂದಿನ ಲೆಕ್ಕದಲ್ಲಿ ಚೆನ್ನಾಗಿಯೇ ಸಂಪಾದಿಸುತ್ತಿದ್ದರು. ಇವರು ಬ್ರಾಂಡ್ ಎಂಡಾರ್ಸ್‌ಮೆಂಟ್‌ಗೆ 55 ಲಕ್ಷ ರೂ ಚಾರ್ಜ್ ಮಾಡುತ್ತಾರೆ. ಇನ್ನು ಮುಂಬೈನ ಜುಹುದಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದು, ಇದರ ಮೌಲ್ಯ 30 ಕೋಟಿ ರೂಪಾಯಿಗಳು.


ಕಳೆದ ನಾಲ್ಕು ದಶಕಗಳಿಂದ ತಮ್ಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಆದರೆ ಈ ಹಂತವನ್ನು ತಲುಪಲು ಅವರ ಪಟ್ಟ ಪಾಡು ಅಂತಿಂಥದಲ್ಲ. ಕಳೆದ ದಿನವಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಈ ಬಾಲಿವುಡ್ ನಟ. ಹಾಗಿದ್ದರೆ ಇವರು ಯಾರು? ಅವರು ಬೇರಾರೂ ಅಲ್ಲ, ಬೇಟಾ (Beta)ಖ್ಯಾತಿಯ ಅನಿಲ್ ಕಪೂರ್.ಮುಂಬೈಗೆ ಬಂದ ಹೊಸದರಲ್ಲಿ ನಟ ಅನಿಲ್ ಕಪೂರ್ ಹಾಗೂ ಅವರ ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಕೂಡ ಇರಲಿಲ್ಲ. ಇ ಟೈಮ್ಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಮುಂಬೈನ ಪೃಥ್ವಿರಾಜ್ ಕಪೂರ್ ಅವರ ಗ್ಯಾರೇಜ್‌ನಲ್ಲಿ ಅನಿಲ್ ಕಪೂರ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ವೃತ್ತಿಜೀವನದ ಆರಂಭದಲ್ಲಿ ಮನೆಯ ಖರ್ಚುಗಳನ್ನು ನಿಭಾಯಿಸಲೆಂದು ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅನಿಲ್, 1979 ರಲ್ಲಿ ಹಮಾರೆ ತುಮ್ಹಾರೆ ಮೂಲಕ ತಮ್ಮ ವೃತ್ತಿಜೀವನವನ್ನು ಶುರು ಮಾಡಿದರು. ಬಳಿಕ, 1980 ರಲ್ಲಿ ತೆಲುಗು ಚಿತ್ರ ವಂಶ ವೃಕ್ಷಂನಲ್ಲಿ ಕೆಲಸ ಮಾಡಿದರು.1983 ರಲ್ಲಿ ಅನಿಲ್ ಕಪೂರ್ ಅವರ ವೋ ಸಾತ್ ದಿನ್ ಚಿತ್ರ ಬಿಡುಗಡೆಯಾಯಿತು. ಇದರಲ್ಲಿ ಅವರು ಮೊದಲ ಬಾರಿಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಬಳಿಕ, ಅನಿಲ್ ಕಪೂರ್ ಹಿಂತಿರುಗಿ ನೋಡಲೇ ಇಲ್ಲ. ಬೇಟಾ, ಮಿಸ್ಟರ್ ಇಂಡಿಯಾ, ಮೇರಿ ಜಂಗ್, ಕರ್ಮ, ತೇಜಾಬ್, ಕಸಂ, ರಾಮ್ ಲಖನ್, ಹಮಾರಾ ದಿಲ್ ಆಪ್ಕೆ ಪಾಸ್ ಹೈ, ಲಾಡ್ಲಾ, ಮತ್ತು ನಾಯಕ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ, ಹಾಲಿವುಡ್ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.ನಟ ಅನಿಲ್ ಕಪೂರ್ ಸಿನಿಮಾ ಪಟ್ಟಿಯಲ್ಲಿ ಸ್ಲಮ್‌ ಡಾಗ್ ಮಿಲಿಯನೇರ್ ಮತ್ತು ಮಿಷನ್ ಇಂಪಾಸಿಬಲ್ ಹಾಗೂ ಘೋಸ್ಟ್ ಪ್ರೋಟೋಕಾಲ್ ಸಹ ಸೇರಿವೆ. ಈ ಸಿನಿಮಾಗಳ ಮೂಲಕ ಅನಿಲ್ ಕಪೂರ್ ತಮ್ಮ ಹೆಸರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.ನಟ ಅನಿಲ್ ಕಪೂರ್ ದುಬೈನಲ್ಲಿ 2 ಬೆಡ್ ರೂಂ ಅಪಾರ್ಟ್ ಮೆಂಟ್ ಹೊಂದಿದ್ದು, ಲಂಡನ್‌ ನಲ್ಲಿಯೂ ಒಂದು ಮನೆಯನ್ನು ಹೊಂದಿದ್ದಾರೆ. ಕ್ಯಾಲಿಪೋರ್ನಿಯಾದಲ್ಲೂ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅನಿಲ್ ಕಪೂರ್ ಅವರು BMW, Bentley,Jaguar, Audi Mercedes Benz S Class ಮುಂತಾದ ದುಬಾರಿ ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಒಟ್ಟಿನಲ್ಲಿ, ಅಂದು ಜೀವನೋಪಾಯಕ್ಕೆ ಗ್ಯಾರೇಜ್ ಆಶ್ರಯಿಸಿದ್ದ ನಟ ಇಂದು ಕೋಟ್ಯಾಧಿಪತಿಯಾಗಿ ಬಾಳುತ್ತಿದ್ದಾರೆ.

BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

Posted by Vidyamaana on 2024-06-07 11:19:08 |

Share: | | | | |


BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

ಬೆಂಗಳೂರು  : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೂನು ಮಂಜೂರಾಗಿದೆ. 

2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು

ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

Posted by Vidyamaana on 2024-09-05 07:53:48 |

Share: | | | | |


ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ಮಂಗಳೂರು, ಸೆ.5: ನಗರದ ಎಯ್ಯಾಡಿಯ ದಂಡಕೇರಿ ಎಂಬಲ್ಲಿನ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಎಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

Posted by Vidyamaana on 2023-12-24 16:34:55 |

Share: | | | | |


ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಚಂದ್ರಿಕಾ (20) ಆಯ್ಕೆಯಾಗಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ದಿ.ಮೋಹನ್ ಮತ್ತು ಯಶೋಧ ದಂಪತಿಗಳ ಮೊದಲ ಪುತ್ರಿ ಚಂದ್ರಿಕಾ‌ ಹಲವು ಕ್ರೀಡಾಕುಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ವಾಲ್ ಪಂದ್ಯಾಟದಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ಸೌತ್‌ ಜೋನ್‌ ಆಡಿದ್ದಾರೆ‌.2022-23 ಸಾಲಿನ ಬೆಂಗಳೂರಿನಲ್ಲಿ ನಡೆದ ಅಮೇಚೂರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾಳೆ.2022-23ಸಾಲಿನ ಉಡುಪಿಯಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ ಗೇಮ್ ನಲ್ಲಿ  400 ಮೀಟರ್ hardals ನಲ್ಲಿ ದ್ವಿತೀಯ ಸ್ಥಾನ ಮತ್ತು 4.400 ಮೀಟರಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.2022-23 ಸಾಲಿನಲ್ಲಿ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24ಸಾಲಿನಲ್ಲಿ ನಡೆದ ಮಂಗಳೂರುನಲ್ಲಿ ನಡೆದ  ರಾಜ್ಯ ಮಟ್ಟದ ಅಮೇಚುರ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24 ಸಾಲಿನಲ್ಲಿ  ಮಂಗಳೂರಿನಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ  ರೇಸಿಂಗ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಹೃದಯಾಘಾತದಿಂದ ನಿಧನ

Posted by Vidyamaana on 2024-06-30 10:36:16 |

Share: | | | | |


ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಹೃದಯಾಘಾತದಿಂದ ನಿಧನ

ವಿಟ್ಲ :ವಿಟ್ಲ ನಿವಾಸಿ, ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ, ವಿಠಲ್‌ ಎಜ್ಯುಕೇಶನ್‌ ಸೊಸೈಟಿ ಸಂಚಾಲಕ ಎಲ್ ಎನ್ ಕೂಡೂರು ನಿಧನರಾದರು.

ಇವರು ಕೃಷಿಕರಾಗಿದ್ದು, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಹಲವು ವರ್ಷಗಳ ವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-10-31 17:32:07 |

Share: | | | | |


ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು, ಅ.31: ಪುತ್ತೂರು ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಒಂದು ಸಾವಿರದ ಹತ್ತು ಕೋಟಿ ಅನುದಾನ ಬಂದಿದೆ. ಅದರ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರು ಮಾಡುತ್ತೇವೆ. ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ 24 ಕೋಟಿ ಅನುದಾನ ಬಂದಿದ್ದು, ಮುಂದಿನ ವರ್ಷದಿಂದಲೇ ಕಾಲೇಜು ಆರಂಭಿಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ. 


ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದು ಐದು ವರ್ಷಗಳಲ್ಲಿ ಬಿಜೆಪಿ ಸರಕಾರ ಇತ್ತು. ಪಶು ವೈದ್ಯಕೀಯ ಕಾಲೇಜಿಗೆ ಕಳೆದ ಸಿದ್ದರಾಮಯ್ಯ ಸರಕಾರ ಇದ್ದಾಗಲೇ ಅನುದಾನ ಬಿಡುಗಡೆಗೊಂಡು ಕಟ್ಟಡ ರೆಡಿಯಾಗಿತ್ತು. ಐದು ವರ್ಷ ಕಾಲ ಅದನ್ನು ಆರಂಭಿಸಲು ಆಗಿರಲಿಲ್ಲ. ಧೂಳು ತಿನ್ನುತ್ತಿದ್ದ ಕಟ್ಟಡದಲ್ಲಿ ನವೀಕರಣ ಕೈಗೊಂಡು ಮುಂದಿನ ವರ್ಷದಲ್ಲೇ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು. 


ಸುಳ್ಯ, ಪುತ್ತೂರಿನಿಂದ ಹಾಲನ್ನು ಮಂಗಳೂರಿಗೆ ತಂದು ಸಂಸ್ಕರಣೆ ಮಾಡುವುದರ ಬದಲು ಕೆಎಂಎಫ್ ಸಂಸ್ಥೆಯ ಇನ್ನೊಂದು ಪ್ಲಾಂಟನ್ನು ಪುತ್ತೂರಿನಲ್ಲೇ ಸ್ಥಾಪಿಸಲು ಯೋಜನೆ ಹಾಕಿದ್ದೇವೆ. ಅದಕ್ಕಾಗಿ ಹತ್ತು ಎಕರೆ ಜಾಗ ನೋಡಿದ್ದು ಹಾಲು ಸಂಸ್ಕರಣಾ ಕೇಂದ್ರ ಮಾಡುತ್ತೇವೆ ಎಂದು ಅಶೋಕ್ ರೈ ಹೇಳಿದರು. ಇದಲ್ಲದೆ, ಬೆಂಗಳೂರಿನಲ್ಲಿ ತುಳು ಭವನ ನಿರ್ಮಿಸಲಾಗುವುದು. ಕರಾವಳಿ ಭಾಗದ ಬಹಳಷ್ಟು ಮಂದಿ ಬೆಂಗಳೂರಿನಲ್ಲಿದ್ದಾರೆ. ಇಲ್ಲಿನವರು ತತ್ಕಾಲಕ್ಕೆ ಉಳಿದುಕೊಳ್ಳಲು ತುಳು ಭವನ ಸ್ಥಾಪನೆ ಮಾಡಲಾಗುವುದು. ತುಳು ಭಾಷೆಯನ್ನು ದ್ವಿತೀಯ ರಾಜ್ಯಭಾಷೆಯನ್ನಾಗಿ ಮಾನ್ಯತೆ ಕೊಡಲು ಯಾವುದೇ ಅನುದಾನ ಬೇಕಿಲ್ಲ. ನಮ್ಮವರ ಇಚ್ಛಾಶಕ್ತಿ ತೋರದೆ ಇರುವುದೇ ಸಮಸ್ಯೆ ಆಗಿದ್ದು. ತುಳು ಭಾಷೆಯ ಬಗ್ಗೆ ಮುತುವರ್ಜಿ ವಹಿಸಿದ್ದು, ಇನ್ನು ನಾಲ್ಕು ಇಲಾಖೆಗಳ ಎನ್ಓಸಿ ಬರಬೇಕಿದೆ. ನಾಲ್ಕೈದು ತಿಂಗಳಲ್ಲಿ ತುಳುವನ್ನು ದ್ವಿತೀಯ ಭಾಷೆಯನ್ನಾಗಿ ಮಾಡಿಸುತ್ತೇನೆ ಎಂದು ಹೇಳಿದರು. 


ಬಿಜೆಪಿಯವರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಏನೇನು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯಿಂದ 15 ಕಿಮೀ ಆಸುಪಾಸಿನ ನಗರಗಳಿಗೆ ಆ ರಸ್ತೆ ವಿಸ್ತರಣೆ ಮಾಡಲು ಅವಕಾಶ ಇದೆ. ಮಾಣಿಯಿಂದ 18 ಕಿಮೀ ದೂರ ಇರುವ ಪುತ್ತೂರಿಗೆ ಚತುಷ್ಪಥ ರಸ್ತೆ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಹೆದ್ದಾರಿ ಇಲಾಖೆಯ ಜೊತೆಗೆ ಪ್ರಸ್ತಾಪ ಕೊಟ್ಟಿದ್ದು, ಅದನ್ನು ಮಾಡಿಸುತ್ತೇನೆ ಎಂದರು. 


ಕಲ್ಲಡ್ಕ- ಉಪ್ಪಿನಂಗಡಿ ಹೆದ್ದಾರಿ ದುರವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾಡೋದು. ರಾಜ್ಯ ಸರಕಾರಕ್ಕೆ ಯಾವುದೇ ಹಸ್ತಕ್ಷೇಪ ಮಾಡಲಾಗದು. ಆದರೂ ಹೆದ್ದಾರಿ ಕೆಲಸ ಶೀಘ್ರಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಲಾಗಿದೆ. ಇದನ್ನೆಲ್ಲ ಆಯಾ ಭಾಗದ ಸಂಸದರು ಮಾಡಬೇಕು. ಕೇರಳದಲ್ಲಿ ಒಳ್ಳೆಯ ರಸ್ತೆ ಆಗ್ತಾ ಇದೆ, ಅದಕ್ಕಾಗಿ ಅಭಿನಂದಿಸಬೇಕು. ಇಲ್ಲಿನ ಸಂಸದರು ಮುತುವರ್ಜಿ ವಹಿಸಿದರೆ ಹೆದ್ದಾರಿ ದುರವಸ್ಥೆ ಆಗುತ್ತಿರಲಿಲ್ಲ ಎಂದರು

Recent News


Leave a Comment: