ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ಭಾರತ ಸೇರಿ 6 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ಘೋಷಿಸಿದ ಶ್ರೀಲಂಕಾ

Posted by Vidyamaana on 2023-10-24 20:24:03 |

Share: | | | | |


ಭಾರತ ಸೇರಿ 6 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ಘೋಷಿಸಿದ ಶ್ರೀಲಂಕಾ

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.



ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.



ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಭವಾನಿ ರೇವಣ್ಣರ ಕೋಟಿ ಬೆಲೆಯ ಆ ಕಾರು ಯಾವುದು? ಅದರ ವಿಶೇಷತೆಗಳೇನು?

Posted by Vidyamaana on 2023-12-05 07:11:18 |

Share: | | | | |


ಭವಾನಿ ರೇವಣ್ಣರ ಕೋಟಿ ಬೆಲೆಯ ಆ ಕಾರು ಯಾವುದು? ಅದರ ವಿಶೇಷತೆಗಳೇನು?

  ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ದುಬಾರಿ ಕಾರಿಗೆ ಸಾಲಿಗ್ರಾಮದ ಬಳಿ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಗರಂ ಆದರು. ಈ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡಿದೆ. ಈ ವೇಳೆ ಹೆಚ್ಚು ಚರ್ಚೆಗೆ ಬಂದಿರುವುದು ಅವರು ಪ್ರಯಾಣಿಸುತಿದ್ದ ಐಷಾರಾಮಿ ಟೊಯೊಟಾ ವೆಲ್‌ಫೈರ್ (Toyota Vellfire) ಕಾರ್ ಆಗಿದೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ (Bhavani Revanna) ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗದ ನಂಬರ್ ಪ್ಲೇಟ್ ಮತ್ತು ಮುಂಭಾಗದಲ್ಲಿ ಬಂಪರ್ ಡ್ಯಾಮೇಜ್ ಆಗಿದೆ. ಈ ಕಾರು ಅಪಘಾತ ರಾಜ್ಯದಲ್ಲಿ ಭಾರೀ ಸದ್ದು ಮಾಡಿದೆ. ಹೀಗಾಗಿ ಇದು ಯಾವ ಕಾರು ಎಂಬ ಕುತೂಹಲ ಮೂಡಿದೆ. ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಯಾವುದು ಮತ್ತು ಇದರ ವಿಶೇಷತೆಗಳ ಬಗ್ಗೆ ಮಾಹಿತಿ ಇಲ್ಲಿದೆ.


ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಟೊಯೊಟಾ ವೆಲ್‌ಫೈರ್ ಆಗಿದೆ. ಈ ಕಾರಿಗೆ ಪ್ರಸ್ತುತ ಆನ್ ರೋಡ್ ಬೆಲೆಯು ರೂ.1,48,58,511 ಆಗಿದ್ದು, ಈ ಕಾರಿನ ಟಾಪ್ ವೆರಿಯೆಂಟ್ ಮಾದರಿಯ ಆನ್ ರೋಡ್ ಬೆಲೆಯು ರೂ.1.61 ಕೋಟಿಯಾಗಿದೆ. ಇದು ಸ್ಟ್ಯಾಂಡ್ ಹೈಬ್ರಿಡ್ ಎಲೆಕ್ಟ್ರಿಕ್ ವಾಹನವು 2.5-ಲೀಟರ್ ಇನ್‌ಲೈನ್ 4-ಸಿಲಿಂಡರ್ DOHC (ಡಬಲ್ ಓವರ್‌ಹೆಡ್ ಕ್ಯಾಮ್‌ಶಾಫ್ಟ್) ಎಂಜಿನ್ ಅನ್ನು ಹೊಂದಿದೆ.ಇದು 142 kW (@ 6000 rpm) ಮತ್ತು ಗರಿಷ್ಠ 240 Nm ಟಾರ್ಕ್ ಅನ್ನು ಹೊರಹಾಕುತ್ತದೆ. ಇದು ಎಲೆಕ್ಟ್ರಿಕ್ ಮೋಟಾರು ಮತ್ತು ಹೈಬ್ರಿಡ್ ಬ್ಯಾಟರಿಯೊಂದಿಗೆ ಕಡಿಮೆ ಕಾರ್ಬನ್ ಹೊರಸೂಸುವಿಕೆಯನ್ನು ಖಾತ್ರಿಪಡಿಸುತ್ತದೆ. ಟೊಯೊಟಾದ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ ಸಿಸ್ಟಮ್ ಅತ್ಯುತ್ತಮ ಮೈಲೇಜ್ ಕೂಡ ಒದಗಿಸುತ್ತದೆ. ಕಂಪನಿಯ ಪ್ರಕಾರ ಹೊಸ ಕಾರು ಪ್ರತಿ ಲೀಟರ್‌ಗೆ 19.28 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.


ಇಂಟೀರಿಯರ್ ಬಗ್ಗೆ ಹೇಳುವುದಾದರೆ, ಹೆಚ್ಚಿದ ಆಸನ ಅಂತರದೊಂದಿಗೆ ಹೊಸ ಸುಧಾರಿತ ಆಂತರಿಕ ಸ್ಥಳವನ್ನು ಆಪ್ಟಿಮೈಸ್ ಮಾಡಲಾಗಿದೆ. ಡ್ರೈವರ್ ಸೀಟ್ ಮಾರ್ಪಾಡುಗಳ ಮಾಸ್ಟರ್‌ಫುಲ್ ಆರ್ಕೆಸ್ಟ್ರೇಶನ್ ಮತ್ತು ಎರಡನೇ ಸಾಲಿನ ಆಸನಗಳ ಅತ್ಯಾಧುನಿಕ ನಿರ್ಮಾಣದ ಮೂಲಕ, ಮುಂಭಾಗ ಮತ್ತು ಎರಡನೇ ಸಾಲಿನ ಆಸನಗಳ ನಡುವಿನ ಅಂತರವನ್ನು ಈಗ ಯಶಸ್ವಿಯಾಗಿ ಹೆಚ್ಚಿಸಲಾಗಿದೆ.ಹೊಸ ಸೂಪರ್-ಲಾಂಗ್ ಓವರ್‌ಹೆಡ್ ಕನ್ಸೋಲ್ ಸೀಲಿಂಗ್‌ನ ಮಧ್ಯದಲ್ಲಿ ಅಗತ್ಯ ವಸ್ತುಗಳನ್ನು ಕೇಂದ್ರೀಕರಿಸುತ್ತದೆ. ಕಂಫರ್ಟ್ ಝೋನ್ ಅನ್ನು ಕಸ್ಟಮೈಸ್ ಮಾಡಲು ಪವರ್ ಕಂಟ್ರೋಲ್‌ಗಳಂತಹ ಡಿಟ್ಯಾಚೇಬಲ್ ಸ್ಮಾರ್ಟ್ ಫೋನ್ ಅನ್ನು ಒದಗಿಸುವ ಮೂಲಕ ಸವಾರಿ ಸೌಕರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. 2 ನೇ ಸಾಲಿನ ಸೀಟುಗಳು ಮಸಾಜ್ ಕಾರ್ಯವನ್ನು ಸಕ್ರಿಯಗೊಳಿಸಲಿವೆ.


ಟೊಯೋಟಾ ಕಾರುಗಳಲ್ಲಿ ಸುರಕ್ಷತೆಯು ಅತ್ಯುನ್ನತ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಟೊಯೋಟಾ ಸೇಫ್ಟಿ ಸೆನ್ಸ್‌ನೊಂದಿಗೆ, ಹೊಸ ವೆಲ್‌ಫೈರ್ ಪ್ರಯಾಣಿಕರಿಗೆ ಮತ್ತು ಪಾದಚಾರಿಗಳಿಗೆ ಸಮಗ್ರ ರಕ್ಷಣೆಯನ್ನು ಒದಗಿಸಲು ಅತ್ಯಾಧುನಿಕ ಸೇಫ್ಟಿ ಫೀಚರ್‌ಗಳನ್ನು ಹೊಂದಿದೆ. ಇದರಲ್ಲಿ ಪ್ರೀ-ಕೊಲಿಷನ್ ಸೇಫ್ಟಿ, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಟ್ರೇಸ್ ಅಸಿಸ್ಟ್, ಅಡಾಪ್ಟಿವ್ ಹೈ ಬೀಮ್ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರ್‌ನಂತಹ ಪ್ರೊಆಕ್ಟಿವ್ ಡ್ರೈವಿಂಗ್ ಅಸಿಸ್ಟ್ ವೈಶಿಷ್ಟ್ಯಗಳು ಟೊಯೋಟಾ ಸೇಫ್ಟಿ ಸೆನ್ಸ್ ಭಾಗವಾಗಿ ವೆಲ್‌ಫೈರ್‌ನಲ್ಲಿ ಬರುತ್ತವೆ.


ಈ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳು ಐಷಾರಾಮಿ ವಿಭಾಗದಲ್ಲಿ ಸುರಕ್ಷತೆ ಮತ್ತು ಚಾಲನಾ ಸಹಾಯದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಸುಧಾರಿತ ತಂತ್ರಜ್ಞಾನಕ್ಕೆ ಅನುಗುಣವಾಗಿ, ವೆಲ್‌ಫೈರ್ ಈಗ ರಿಮೋಟ್ ಡೋರ್ ಲಾಕ್/ಅನ್‌ಲಾಕ್, ಹವಾನಿಯಂತ್ರಣ, ತುರ್ತು ಸೇವೆಗಳು, ವೆಹಿಕಲ್ ಡಯಾಗ್ನೋಸ್ಟಿಕ್, ಚಾಲಕ ಮಾನಿಟರಿಂಗ್ ಎಚ್ಚರಿಕೆಗಳಂತಹ 60 ಕ್ಕೂ ಹೆಚ್ಚು ಸಂಪರ್ಕಿತ ಫಿಚರ್ಸ್ ಗಳನ್ನು ಹೊಂದಿವೆ.


ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.

ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

Posted by Vidyamaana on 2024-01-15 15:49:05 |

Share: | | | | |


ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

ಪುತ್ತೂರು: ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಕಬಕ ಗ್ರಾಮದ ಕಲ್ಲಂದಡ್ಕಕ್ಕೆ ರೂ. ೨೦ ಲಕ್ಷ ಅನುದಾನವನ್ನು ನೀಡಿದ್ದೇನೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚುನಾವಣಾ ಬಹಿಷ್ಕಾರ ಮಾಡುವುದಾಗಿ ನೀವು ಹೆಳದಿದೀರಿ ನಾನು ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸಿದ್ದೇನೆ ಎಂದು ಶಾಶಕರಾದ ಅಶೋಕ್ ರೈ ಹೇಳಿದರು.


ಅವರು ಕಲ್ಲಂದಡ್ಕದಲ್ಲಿ ರೂ. ೨೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ನಾನು ಸುಳ್ಳು ಭರವಸೆಗಳನ್ನು ನೀಡಿ ಹೋಗಿಲ್ಲ, ಕೊಟ್ಟ ಮಾತಿನಂತೆ ಇಲ್ಲಿಗೆ ಬಂದು ನಿಮಗೆ ರಸ್ತೆ ಮಾಡಿಸಿಕೊಟ್ಟಿದ್ದೇನೆ ಮುಂದಿನ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಶಾಸಕರು ಮನವಿ ಮಾಡಿದರು.


ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಡಿ ಕಲ್ಲಂದಡ್ಕದಲ್ಲಿ ರಸ್ತೆ ಇಲ್ಲದೆ ಹಲವಾರು ವರ್ಷಗಳಿಂದ ಜನತೆ ತೊಂದರೆಯಲ್ಲಿದ್ದರು. ರಾಜಕೀಯ ದುರುದ್ದೇಶದಿಂದ ಇಲ್ಲಿ ರಸ್ತೆ ಕಾಮಗಾರಿ ಮಾಡಿರಲಿಲ್ಲ. ಚುನಾವಣೆ ಬಹಿಷ್ಕಾರ ಮಾಡುವುದಾಗಿ ಘೋಷಣೆ ಮಡಿದ್ದ ಇಲ್ಲಿನ ಸುಮಾರು ೪೦ ಕುಟುಂಬಗಳಿಗೆ ಈಗ ಸಂತಸವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ ಸಹಿಸಲು ಸಾಧ್ಯವಾಗದೆ ಕಿರುಚಾಡುತ್ತಿದ್ದಾರೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವ ಅರಂಭವಾಗಿದೆ. ಜನರ ನಿರೀಕ್ಷೆಗೂ ಮೀರಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಹಂಚಿಕೆ ಮಾಡುವ ಮೂಲಕ ರಾಜಧರ್ಮ ಪಾಲನೆ ಮಡುತ್ತಿರುವ ಶಾಸಕರಿಗೆ ಅಭಿನಂದಿಸುವುದಾಗಿ ಹೇಳಿದರು.


ಅಕ್ರಮಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಢರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Posted by Vidyamaana on 2024-06-22 11:31:59 |

Share: | | | | |


ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.

ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.

ಪತ್ನಿಗೆ ಊಟದಲ್ಲಿ ನಿದ್ದೆಮಾತ್ರೆ ಬೆರೆಸಿ, ಕಿಲಾಡಿ ಗಂಡ ಕೆಲಸದವಳೊಂದಿಗೆ ರಾಸಲೀಲೆ!

Posted by Vidyamaana on 2024-01-08 21:09:48 |

Share: | | | | |


ಪತ್ನಿಗೆ ಊಟದಲ್ಲಿ ನಿದ್ದೆಮಾತ್ರೆ ಬೆರೆಸಿ, ಕಿಲಾಡಿ ಗಂಡ ಕೆಲಸದವಳೊಂದಿಗೆ ರಾಸಲೀಲೆ!

ಬೆಂಗಳೂರು : ನಿತ್ಯ ಪತ್ನಿಗೆ ನಿದ್ರೆ ಮಾತ್ರೆ ಹಾಕಿ ಮಲಗಿಸಿ ಬಳಿಕ ಕೆಲಸದವಳ ಜೊತೆ ಸರಸದಲ್ಲಿ ತೊಡಗುತ್ತಿದ್ದ ಪತಿಯ ವಿರುದ್ದ ಪತ್ನಿ ಕೊಲೆಯತ್ನ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.ಪತಿ ಸುನೀಲ್​, ವಿರುದ್ದ ಚಂದ್ರಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಆರೋಪಿ ಪತಿ ವಿಪರೀತ ಬೆಟ್ಟಿಂಗ್ ಚಟಕ್ಕೆ ಬಿದ್ದು ನಿತ್ಯ ಕುಡಿದು ಬಂದು ಮನಸೋ ಇಚ್ಚೆ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಅಷ್ಟೆ ಅಲ್ಲದೆ ಕೆಲಸದವಳೊಂದಿಗೆ ಸೇರಿ ಊಟದಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ ತಿನ್ನಿಸಿ ಮಲಗಿಸುತ್ತಿದ್ದ. ಬಳಿಕ ಕೆಲಸದವಳೊಂದಿಗೆ ರಾಸಲೀಲೆಯಲ್ಲಿ ತೊಡಗುತ್ತಿದ್ದ ಈ ದೃಶ್ಯಗಳನ್ನು ತಾನೇ ಕಣ್ಣಾರೆ ಕಂಡಿರುವುದಾಗಿ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಜ.3 ರಂದು ಪತಿ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ತಿನ್ನಿಸಿದ್ದಾರೆ. ಪ್ರಜ್ಞೆ ಬಂದು ಎದ್ದು ನೋಡಿದಾಗ ಪತಿ ಹಾಗೂ ಮನೆಕೆಲಸದವಳು ಒಂದೇ ಹಾಸಿಗೆಯಲ್ಲಿ ಅಶ್ಲೀಲವಾಗಿದ್ದನ್ನ ಕಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಪತಿ ಕೆಲಸದವಳೊಂದಿಗೆ ಸೇರಿ ಅಮಾನಷವಾಗಿ ಹಲ್ಲೆ ಮಾಡಿದ್ದಾರೆ. ಭಯದಿಂದ ಇಲ್ಲಿನ ಚಂದ್ರಾ ಲೇಔಟ್​ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪತಿಯ ವಿರುದ್ದ ವರದಕ್ಷಿಣೆ ಕಿರುಕುಳ, ಕೊಲೆಯತ್ನ ಹಾಗು ಮನೆ ಕೆಲಸದಾಕೆ ವಿರುದ್ದ ಜೀವಬೆದರಿಕೆ ಅರಿ ಪತ್ನಿ FIR ದಾಖಲಿಸಲಾಗಿದೆ.

ಮುಂದಿನ ಪ್ರಧಾನಿ ಆಗುವ ಅವಕಾಶ ಮಹಿಳೆಯ ಪಾಲಿಗೆ – ಕಾಲಜ್ಞಾನ ಭವಿಷ್ಯದಲ್ಲೇನಿದೆ

Posted by Vidyamaana on 2023-08-09 12:50:25 |

Share: | | | | |


ಮುಂದಿನ ಪ್ರಧಾನಿ ಆಗುವ ಅವಕಾಶ ಮಹಿಳೆಯ ಪಾಲಿಗೆ – ಕಾಲಜ್ಞಾನ ಭವಿಷ್ಯದಲ್ಲೇನಿದೆ

     ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಭವಿಷ್ಯವೊಂದು ಹೊರಬಿದ್ದಿದ್ದು ದೇಶದ ಮುಂದಿನ ಪ್ರಧಾನಿ ಆಗುವ ಯೋಗ ಒಬ್ಬ ಮಹಿಳೆಯ ಪಾಲಾಗಿದೆಯಂತೆ. ಹೌದು, ನೊಣವಿನಕೆರೆಯಲ್ಲಿ ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ಅವರು ಈ ಸ್ಪೋಟಕ ಭವಿಷ್ಯ ನುಡಿದಿದ್ದು, ಮುಂದಿನ ಬಾರಿ ಒಂದು ‘ಸ್ತ್ರೀ ಶಕ್ತಿ’ ಅಂದರೆ ಮಹಿಳೆಯೊಬ್ಬರಿಗೆ ದೇಶದ ಪ್ರಧಾನಿ ಆಗುವ ಯೋಗ ಒದಗಿ ಬರಲಿದೆಯಂತೆ.


ಈ ಭವಿಷ್ಯ ನಿಜವೇ ಆದಲ್ಲಿ ರಾಷ್ಟ್ರರಾಜಕಾರಣದಲ್ಲಿ ಇಂದಿರಾ ಗಾಂಧಿ ಬಳಿಕ ಸದ್ಯದಲ್ಲೇ ಮತ್ತೊಬ್ಬ ಮಹಿಳೆಗೆ ಪ್ರಧಾನಿ ಹುದ್ದೆಗೇರುವ ಆಗುವ ಯೋಗ ಒದಗಿಬರಲಿದೆ.


ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ನುಡಿದಿರುವ ಭವಿಷ್ಯದ ಪ್ರಕಾರ, ಮುಂದಿನ ಮಹಾಶಿವರಾತ್ರಿ ಬಳಿಕ ಒಬ್ಬಾಕೆ ಮಹಿಳೆ ಈ ದೇಶವನ್ನು ಆಳ್ತಾರೆ. ಮಹಾಶಿವರಾತ್ರಿ ಬಳಿಕ ರಾಷ್ಟ್ರರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆ ನಿಶ್ಚಿತ ಎನ್ನಲಾಗಿದೆ.


ಕಾಲಜ್ಞಾನ ಭವಿಷ್ಯದ ಪ್ರಕಾರ ಮುಂದಿನ ಬಾರಿ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರಕ್ಕೇರಲು ಸಾಧ್ಯವಿಲ್ಲವಂತೆ. ಆದರೆ ಮಹಾಶಿವರಾತ್ರಿ ಒಳಗೆ ಲೋಕಸಭೆ ಚುನಾವಣೆ ನಡೆದಲ್ಲಿ ಪ್ರಧಾನಿ ಮೋದಿಗೆ ಮತ್ತೆ ಅಧಿಕಾರಕ್ಕೇರುವ ಯೋಗ ಇದೆ ಎಂದು ಇದೇ ಸಂದರ್ಭದಲ್ಲಿ ಗುರೂಜಿ ತಿಳಿಸಿದ್ದಾರೆ.


ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿದೆ ಎಂದು ಈ ಹಿಂದೆ ಡಾ. ಯಶ್ವಂತ ಗುರೂಜಿ ನುಡಿದಿದ್ದ ಭವಿಷ್ಯ ನಿಜವಾಗಿತ್ತು.


ಪ್ರಧಾನಿ ಹುದ್ದೆಗೇರಲಿರುವ ಆ ಮಹಿಳೆ ಯಾರು ಮತ್ತು ಅವರು ಯಾವ ಪಕ್ಷಕ್ಕೆ ಸೇರಿದವರು ಎಂಬ ಗುಟ್ಟನ್ನು ಮಕರ ಸಂಕ್ರಮಣದ ಪರ್ವಕಾಲದಲ್ಲಿ ಹೇಳಲಾಗುತ್ತದೆ ಎಂದು ಗುರೂಜಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Recent News


Leave a Comment: