ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

Posted by Vidyamaana on 2024-01-06 08:05:45 |

Share: | | | | |


ಇಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

ಪುತ್ತೂರು: ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆ ಮಂಗಳೂರು ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆ ಪುತ್ತೂರು ಇವರ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ 14, 17 ಮತ್ತು 19 ವರ್ಷ ವಯೋಮಾನದ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಜ.6ರಂದು ಸುದಾನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಈ ಹಿಂದಿನ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ್ದು ಜಿಲ್ಲೆಯ 47 ತಂಡಗಳು ಭಾಗವಹಿಸಿತ್ತು. ಈ ಭಾರಿ 24 ತಂಡಗಳು ಈಗಾಗಲೇ ನೋಂದಾವಣೆ ಮಾಡಿಕೊಂಡಿವೆ. ಇನ್ನೂ ನೋಂದಾವಣೆಗೆ ಅವಕಾಶವಿದೆ ಎಂದು ಹೇಳಿದರು. ಜ.6ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದ‌ರ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧ‌ರ್ ಜೈನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನ್ಯಾಕ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ನ ಅಧ್ಯಕ್ಷ ಜಗದೀಶ್ ಶೆಟ್ಟಿ, ಡಿಎಫ್‌ಒ ಶ್ರೀಧರ್ ಅವರು ಭಾಗವಹಿಸಲಿದ್ದಾರೆ.


ಸಂಜೆ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ನ್ಯಾಯವಾದಿ ಜಯಪ್ರಕಾಶ್ ರೈ ಸುಳ್ಯ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿ, ಉದ್ಯಮಿ ಸಹಜ್ ರೈ, ಸುದಾನ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಪುತ್ತೂರು ಯುವ ಸಬಲೀಕರಣ ಮತ್ತು ಯುವಜನ ಸೇವಾ ಕ್ರೀಡಾಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು, ಬಿ.ಎಸ್.ಎನ್.ಎಲ್‌ನ ಗಣೇಶ್ ರೈ, ದ.ಕ. ಜಿಲ್ಲಾ ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.


ಪಂದ್ಯಾಟದಲ್ಲಿ ಆಯ್ಕೆಗಳು ನಡೆಯಲಿದೆ: ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ಆಯ್ಕೆ ಮಾಡಿ ಅವರಿಗೆ ವಿಶೇಷ ತರಬೇತಿ ನೀಡಲಿದ್ದೇವೆ. ದಕ್ಷಿಣ ಕನ್ನಡದ ವಾಲಿಬಾಲ್ ಆಟಗಾರರಿಗೆ ಉತ್ತಮ ಹೆಸರಿದೆ. ಇದರ ಜೊತೆಗೆ ತೀರ್ಪುಗಾರರಿಗೂ ತರಬೇತಿ ನೀಡುತ್ತೇವೆ. ಈ ಎಲ್ಲಾ ಚಟುವಟಿಕೆಗಳು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ಹೆಚ್ಚಿಸಲಿದೆ. ಮುಂದಿನ ದಿನ ಮಕ್ಕಳಲ್ಲಿ ಎಲ್ಲಾ ರೀತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ವಾಲಿಬಾಲ್ ಸಂಸ್ಥೆಯ ಗೌರವಾಧ್ಯಕ್ಷರಾಗಿರುವ ಸುದಾನ ವಸತಿಯುತ ಶಾಲೆಯ ಸಂಚಾಲಕರಾದ ರೇ. ವಿಜಯ ಹಾರ್ವಿನ್ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ತಾಲೂಕು ಸಂಸ್ಥೆಯ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಕಾರ್ಯದರ್ಶಿ ಬಾಬು ಮಾಸ್ತರ್ ಉಪಸ್ಥಿತರಿದ್ದರು.

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

Posted by Vidyamaana on 2024-06-03 08:28:45 |

Share: | | | | |


ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಪೂರೈಸಲು ಮುಂದಾಗಿದೆ.

ಹೌದು, ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ.

ಪುತ್ತೂರು ನಗರ ಸಭೆ ಬೈ ಎಲೆಕ್ಷನ್ ಮುಕ್ತಾಯ - ಎರಡು ವಾರ್ಡ್ ಗಳಲ್ಲಿ ಎಷ್ಟು ವೋಟಿಂಗ್ ಆಯ್ತು

Posted by Vidyamaana on 2023-12-27 18:23:46 |

Share: | | | | |


ಪುತ್ತೂರು ನಗರ ಸಭೆ ಬೈ ಎಲೆಕ್ಷನ್ ಮುಕ್ತಾಯ - ಎರಡು ವಾರ್ಡ್ ಗಳಲ್ಲಿ ಎಷ್ಟು ವೋಟಿಂಗ್ ಆಯ್ತು

ಪುತ್ತೂರು : ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆದ ಚುನಾವಣೆಯು ಮುಕ್ತಾಯಗೊಂಡಿದ್ದು, ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯಿತು.ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡ ಮತದಾನ ಸಂಜೆ 5 ಗಂಟೆಯ ತನಕ ನಡೆಯಿತು.


ವಾರ್ಡ್1ರಲ್ಲಿ ಒಟ್ಟು 1304 ಮತದಾರರಲ್ಲಿ 449 ಪುರುಷರು ಹಾಗೂ 509 ಮಹಿಯರು ಸೇರಿದಂತೆ ಒಟ್ಟು 958 ಮತ ಚಲಾವಣೆಯಾಗಿದೆ. ಶೇ.73.45 ಮತ ಚಲಾವಣೆಯಾಗಿದೆ.ವಾರ್ಡ್ 11 ರಲ್ಲಿ ಒಟ್ಟು 1724 ಮತದಾರರಲ್ಲಿ 525 ಪುರುಷರು, 528 ಮಹಿಳೆಯರು ಸೇರಿದಂತೆ 1053 ಮಂದಿ ಮತ ಚಲಾಯಿಸಿದ್ದು ಶೇ.61.07 ಮತದಾನವಾಗಿದೆ.

ಭ್ರೂಣಹತ್ಯೆ ಪ್ರಕರಣ ದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡ: ಮೈಸೂರು DHO THO ಅಮಾನತು

Posted by Vidyamaana on 2023-12-02 08:23:14 |

Share: | | | | |


ಭ್ರೂಣಹತ್ಯೆ ಪ್ರಕರಣ ದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡ: ಮೈಸೂರು DHO THO ಅಮಾನತು

ಬೆಂಗಳೂರು : ಮೈಸೂರು ಜಿಲ್ಲೆಯಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಪ್ರಕರಣ ಸಂಬಂಧ, ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಮೈಸೂರು ಜಿಲ್ಲೆಯ ಈ ಹಿಂದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ.ಪಿ ಹಾಗೂ ಹಾಲಿ ಮೈಸೂರು ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿ ಡಾ.ರಾಜೇಶ್ವರಿ.ಎಸ್ ಅವರುಗಳ ವಿರುದ್ಧ ಕರ್ತವ್ಯಲೋಪ ಆರೋಪದ ಬಗ್ಗೆ ಶಿಸ್ತುಕ್ರಮ ಬಾಕಿ ಇರಿಸಿ, ಈ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾತನುಗೊಳಿಸಿ ಆದೇಶಿಸಿದ್ದಾರೆ.


ಇನ್ನೂ ಡಾ.ರವಿ. ಪಿ ಹಾಗೂ ಡಾ.ರಾಜೇಶ್ವರಿ.ಪಿ ಇವರುಗಳಿಗೆ ಅಮಾನತ್ತಿನ ಅವಧಿಯಲ್ಲಿ ಜೀವನಾಂಶ ಭತ್ಯೆಯನ್ನು ಪಡೆಯುವ ಸಲುವಾಗಿ ಲೀನ್ ಅನ್ನು ರಾಮನಗ ಜಿಲ್ಲಾ ಆಸ್ಪತ್ರೆ ಇಲ್ಲಿನ ಖಾಲಿ ಇರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ. ಈ ಮೂಲಕ ಭ್ರೂಣಹತ್ಯೆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.

ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

Posted by Vidyamaana on 2024-01-02 11:22:43 |

Share: | | | | |


ಸ್ನೇಹಿತರ ಜತೆ ಪಾರ್ಟಿಗೆ ಹೋಗ್ತೇನೆ.. ಎಂದು ಹೋದವಳ ಶವ ರೈಲು ಹಳಿ ಮೇಲೆ ಪತ್ತೆ

ಚಿಕ್ಕಮಗಳೂರು: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ. 


ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. 


ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.‌

Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

Posted by Vidyamaana on 2024-09-07 08:52:50 |

Share: | | | | |


Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

ಬಾಗಲಕೋಟೆ: ಬೈಕುಗಳು ಭೀಕರವಾಗಿ ಡಿಕ್ಕಿಯಾದ (Bagalakote Ro

non

Accident) ಪರಿಣಾಮ, ಗಣೇಶೋತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ (Software Engineer) ಸೇರಿ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ (bagalakote news) ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ.

ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಇನ್ನೊಬ್ಬ ಸವಾರ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Recent News


Leave a Comment: