Posted by vidyamaana on 2024-07-05 17:03:24 |
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.
ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
Posted by Vidyamaana on 2024-05-16 16:58:06 |
ಬೆಂಗಳೂರು (ಮೇ 16): ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಯುವತಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾಳೆ. ಅದು ಕೂಡ ಕುತ್ತಿಗೆ ಹಾಗೂ ಕೈಗಳನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾಳೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದ್ದು, ಯುವತಿಯ ತಾಯಿ ಮಾತ್ರ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಯಾರೋ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
Posted by Vidyamaana on 2024-03-28 08:13:50 |
ಪುತ್ತೂರು: ಉಪ್ಪಿನಂಗಡಿ - ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಪೆ ಫೀಡರ್ ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್ನಲ್ಲಿ ಮಾ.28 ಮ ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ಇನ ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ -ರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟನೆ ತಿಳಿಸಿದೆ.
Posted by Vidyamaana on 2023-05-01 06:54:06 |
ಪುತ್ತೂರು: SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರ ಪಕ್ಷದ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಮೇ 1ರಂದು ಸಂಜೆ 4.30ಕ್ಕೆ ಉಪ್ಪಿನಂಗಡಿಯಲ್ಲಿ ಪಾದಯಾತ್ರೆ ಹಾಗೂ ಮತಯಾಚನೆ ನಡೆಯಲಿದೆ.
ಹಸಿವು ಮುಕ್ತ ಸ್ವಾತಂತ್ರ್ಯ ಹಾಗೂ ಭಯ ಮುಕ್ತ ಸ್ವಾತಂತ್ರ್ಯ ಧ್ಯೇಯ ವಾಕ್ಯದಡಿ ಕಾರ್ಯನಿರ್ವಹಿಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಓ್ ಇಂಡಿಯಾದ ಉಪ್ಪಿನಂಗಡಿ ಬ್ಲಾಕ್ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ.
ಶಾಫಿ ಬೆಳ್ಳಾರೆ ಅವರು ಆಟೋ ರಿಕ್ಷಾ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದಾರೆ ಎಂದು SDPI ಪ್ರಕಟಣೆಯಲ್ಲಿ ತಿಳಿಸಿದೆ.
Posted by Vidyamaana on 2024-02-16 08:59:27 |
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.
ಕೆ.ಎ. ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಮೃತ ಬಾಲಕಿ.
ಹಫೀಝ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಇಂದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು.
ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಹಫೀಝ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.
Posted by Vidyamaana on 2023-03-09 13:27:52 |
ಚಿಕ್ಕಮಗಳೂರು: ಹೃದಯ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿಕ್ಕಮಗಳೂರಿನ ಉಪ್ಪಳ್ಳಿಯ ಬಾಲಕ ನುಹ್ಮಾನ್ ಅವರ ಕುಟುಂಬ, ಚಿಕಿತ್ಸೆಯ ಖರ್ಚಿಗಾಗಿ ದಾನಿಗಳ ನೆರವಿಗಾಗಿ ಎದುರು ನೋಡುತ್ತಿದ್ದಾರೆ.
ಬಾಲಕ ನುಹ್ಮಾನ್ ಚುರುಕು ಹಾಗೂ ಪ್ರತಿಭಾವಂತ. ಇದ್ದಕ್ಕಿದ್ದಂತೆ ಒಂದು ದಿನ ಅನಾರೋಗ್ಯ ಕಾಡುತ್ತದೆ. ಅನಾರೋಗ್ಯ ತೀವ್ರಗೊಳ್ಳುತ್ತಿದ್ದಂತೆ, ಆಸ್ಪತ್ರೆಯ ಹಾದಿ ಹಿಡಿಯುತ್ತಾರೆ ಮನೆಯವರು. ವೈದ್ಯರು ಹೇಳಿದ ವಿಷಯ ಕೇಳಿ ದಂಗಾಗಿ ಬಿಡುತ್ತಾರೆ. ಕಾರಣ, ನುಹ್ಮಾನ್ ಏಕಕಾಲದಲ್ಲಿ ಮೆದುಳು ಹಾಗೂ ಹೃದಯದ ಕಾಯಿಲೆಗೆ ತುತ್ತಾಗಿದ್ದ. ಸದ್ಯ ನುಹ್ಮಾನ್ ಬೆಂಗಳೂರಿನ ನಿಮ್ಹಾನ್ಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಗನನ್ನೇನೋ ಆಸ್ಪತ್ರೆಗೆ ಸೇರಿಸಿದರು ಹೆತ್ತವರು. ಆದರೆ ವೈದ್ಯರು ಹೇಳಿದ 15 ಲಕ್ಷ ರೂ.ವನ್ನು ಹೊಂದಿಸಿಕೊಳ್ಳಲು ಹೆತ್ತವರ ಕೈಯಿಂದ ಆಗುತ್ತಿಲ್ಲ. ಆದ್ದರಿಂದ ದಾನಿಗಳ ನೆರವಿಗಾಗಿ ಮನವಿ ಮಾಡಿದ್ದಾರೆ. ಸಂಪರ್ಕಕ್ಕಾಗಿ 7892938854,
Posted by Vidyamaana on 2024-01-23 15:50:14 |
ಸುಳ್ಯ ; ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ ) ಜ .23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.
ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.