ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಪರಸ್ಪರ ಪ್ರೀತಿಸಿ ದೇವಸ್ಥಾನದಲ್ಲಿ ವಿವಾಹವಾದ ಸಲಿಂಗಿ ಜೋಡಿ

Posted by Vidyamaana on 2024-01-11 16:46:55 |

Share: | | | | |


ಪರಸ್ಪರ ಪ್ರೀತಿಸಿ ದೇವಸ್ಥಾನದಲ್ಲಿ ವಿವಾಹವಾದ ಸಲಿಂಗಿ ಜೋಡಿ

ಲಕ್ನೋ: ಪರಸ್ಪರ ಪ್ರೀತಿಸುತ್ತಿದ್ದ‌ ಸಲಿಂಗಿ ಜೋಡಿ ಸಾಂಪ್ರದಾಯಿಕವಾಗಿ ದೇವಸ್ಥಾನದಲ್ಲಿ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ.


ಪಶ್ಚಿಮ ಬಂಗಾಳದ ಮೂಲದ ಜಯಶ್ರೀ ರಾಹುಲ್ (28) ಮತ್ತು ರಾಖಿ ದಾಸ್ (23) ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯವರಾದ ಜಯಶ್ರೀ ರಾಹುಲ್‌ ಹಾಗೂ ರಾಖಿ ದಾಸ್ ಡಿಯೋರಿಯಾದಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರೀತಿ ಹುಟ್ಟಿತ್ತು.

ಕೆಲವು ದಿನಗಳ ಹಿಂದೆ ದೀರ್ಗೇಶ್ವರನಾಥ ದೇವಸ್ಥಾನದಲ್ಲಿ ಮದುವೆಗೆ ಅನುಮತಿಯನ್ನು ಕೋರಲಾಗಿತ್ತು. ಆದರೆ ದೇವಸ್ಥಾನದಲ್ಲಿ ಅನುಮತಿ ನಿರಾಕರಿಸಿದ್ದರು. ಇದಾದ ಬಳಿಕ ಆರ್ಕೆಸ್ಟ್ರಾ ತಂಡದ ಮಾಲೀಕ ಮನ್ನಾ ಪಾಲ್‌ ಮದುವೆಗೆ ನೋಟರೈಸ್ ಮಾಡಿದ ಅಫಿಡವಿಟ್ ಪಡೆದುಕೊಂಡಿದ್ದಾರೆ.ನೋಟರಿ ಪ್ರಮಾಣ ಪತ್ರವನ್ನು ಪಡೆದುಕೊಂಡ ನಂತರ ಸೋಮವಾರ(ಜ.8 ರಂದು) ಡಿಯೋರಿಯಾದ ಭಟ್ಪರ್ ರಾಣಿಯ ಭಗದಾ ಭವಾನಿ ದೇವಸ್ಥಾನದಲ್ಲಿ ತನ್ನ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ವಿಟ್ಲ : 400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ

Posted by Vidyamaana on 2023-10-10 15:28:55 |

Share: | | | | |


ವಿಟ್ಲ : 400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ

ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ ಘಟನೆ ನಡೆದಿದೆ.


ಈ ಬಗ್ಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಹಿಂದೂ ಮುಖಂಡ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ಬಗ್ಗೆ ಅಧಿಕಾರಿಗಳ ಜೊತೆ ಹಾಗೂ ರೈತ ವರ್ಗದವರ ಜೊತೆ ಚರ್ಚಿಸಿದರು.

ಯಾವುದೇ ಕಾರಣಕ್ಕೂ ಅನುಷ್ಠಾನ ಮಾಡೋದಕ್ಕೆ ಬಿಡೋದಿಲ್ಲ., ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಯಾವುದೇ ಆಸ್ಪಾದನೆ ಕೊಡಬೇಡಿ ಎಂದು ಅಧಿಕಾರಿಗಳ ಜೊತೆ ಮಾತನಾಡಿದರು.

ರೈತ ವರ್ಗದವರ ಜೊತೆ ಯಾವಾಗಲೂ ನಿಲ್ಲುವುದಾಗಿ., ರೈತರ ಪರ ಪುತ್ತಿಲ ಬ್ಯಾಟ್ ಬೀಸಿದ್ದು, ನಿಮ್ಮೊಂದಿಗೆ ನಾನಿದ್ದೇನೆ ಎಂಬ ಭರವಸೆಯನ್ನು ರೈತರಿಗೆ ನೀಡಿದರು.

400 ಕೆ.ವಿ. ವಿದ್ಯುತ್ ವಿರೋಧಿ ಹೋರಾಟ ಸಮಿತಿ ವಿಟ್ಲದ ಅಧ್ಯಕ್ಷರಾದ ರಾಜೀವ ಗೌಡ, ಸಂಜೀವ ಗೌಡ ಒಕ್ಕೆತ್ತೂರು, ಚಿತ್ರಾಂಜನ್ ಮಂಗಿಲಪದವು, ರೋಹಿತಾಶ್ವ ಮಂಗಿಲಪದವು, ದಾಮೋದರ ಗೌಡ ಒಕ್ಕೆತ್ತೂರು, ಅಬ್ಬಾಸ್ ಪುಣಚ, ಪುಣಚ ಪಂಚಾಯತ್ ಸದಸ್ಯ ಅಶೋಕ್, ಭಾಸ್ಕರ್ ಉಪಾಧ್ಯಾಯ ಪುಣಚ, ಪಾರ್ಥ ಸಾರಥಿ ವಾರಣಾಸಿ ಹಾಗೂ ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತ, ಸುಧೀರ್ ಕುಮಾರ್ ಶೆಟ್ಟಿ ಮೊಡಂಬೈಲ್, ಭೀಮ ಭಟ್, ರಘುರಾಮ್ ಶೆಟ್ಟಿ ವಿಟ್ಲ, ಶರತ್ ಎನ್.ಎಸ್, ನವೀನ್ ಕುಮಾರ್ ಕಾಶೀಮಠ ಮತ್ತು ಹಲವರು ಉಪಸ್ಥಿತರಿದ್ದರು

ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ, ಎಸ್ಪಿ ಕಚೇರಿಗೆ ಬಂದ ಜೋಡಿ ಹಕ್ಕಿಗಳು!

Posted by Vidyamaana on 2024-01-29 15:26:03 |

Share: | | | | |


ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ, ಎಸ್ಪಿ ಕಚೇರಿಗೆ  ಬಂದ ಜೋಡಿ ಹಕ್ಕಿಗಳು!

ಜೋಡಿ ಹಕ್ಕಿ ಬಳ್ಳಾರಿಯಿಂದ ಆಂದ್ರಕ್ಕೆ ಹೋಗಿ ನರಸಿಂಹ ದೇವಸ್ಥಾನದಲ್ಲಿ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ಅಳಿಯನನ್ನ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ರು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ, ಹೀಗಾಗಿ ರಕ್ಷಣೆಗಾಗಿ ಆ ಜೋಡಿ ಠಾಣೆ ಮೆಟ್ಟಿಲು ಏರಿದ್ದಾರೆ… ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.


ಹೌದು ಹೀಗೆ ಮುದ್ದುಮುದ್ದಾಗಿ ಕಾಣುವ ಈ ಜೋಡಿ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ರು, ಒಂದೇ ಜಾತಿಯವರಾದ್ರು ಮನೆಯಲ್ಲಿ ಮದುವೆಗೆ ಒಪ್ಪಿಲ್ಲ, ಹೀಗಾಗಿ ಮನೆ ಬಿಟ್ಟು ಓಡಿ ಬಂದು ಆಂದ್ರದಲ್ಲಿ ನರಸಿಂಹ ದೇವಸ್ಥಾನದ ಮುಂದೆ ಮದುವೆಯಾಗಿದ್ದಾರೆ.. ಮದುವೆಯಾದ ವಿಷಯ ಹುಡಗಿ ಕುಟುಂಬಕ್ಕೆ ತಿಳಿಯುತ್ತಿದ್ದಂತೆ ಹುಡಗನ ಮೇಲೆ ಗರಂ ಆಗಿದ್ದಾರೆ.


ಹೀಗಾಗಿ ಬೆದರಿದ ಈ ಜೋಡಿ ಬಳ್ಳಾರಿ ಎಸ್ಪಿ ಕಚೇರಿಗೆ ಬಂದು ಜೀವ ರಕ್ಷಣೆಗೆ ಮನವಿ ಮಾಡಿದ್ದಾರೆ.. ಎಸ್ ಹೀಗೆ ಕಾಣುವ ಈ ಜೋಡಿ ಹೆಸರು ನಾರಾಯಣ (25) ಮತ್ತು ಶಿಲ್ಪಾ (20) ಅಂತಾ ಯುವಕ ನಾರಾಯಣ ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದವನಾದ್ರೆ, ಯುವತಿ ಶಿಲ್ಪಾ ಸಿರಗುಪ್ಪ ತಾಲೂಕಿ‌ನ ಊಳೂರು ಗ್ರಾಮದವಳು.. ಶಿಲ್ಪಾ 9 ನೇ ತರಗತಿ ಇರುವಾಗ ಗೋನಾಳ ಗ್ರಾಮದಲ್ಲಿರುವ ಅವಳ ದೊಡ್ಡಮ್ಮನ ಮನೆಗೆ ಬಂದಿದ್ದಳಂತೆ ಆಗ ನಾರಾಯಣನ ಪರಿಚಯವಾಗಿದೆ.. ಪರಿಚಯ ಪ್ರೇಮಕ್ಕೆ ತಿರುಗಿ ಈಗ ಈ ಜೋಡಿ ಮದುವೆ ಆಗಿದ್ದಾರೆ.. ಯುವಕ ಯುವತಿ ಕುರುಬ ಸಮುದಾಯಕ್ಕೆ ಸೇರಿದ್ದಾರೆ ಯಾವುದೇ ಜಾತಿ ಸಮಸ್ಯೆ ಇಲ್ಲ ಆದರೂ ಮನೆಯಲ್ಲಿ ಒಪ್ಪಿಲ್ಲ ಹೀಗಾಗಿ ಶಿಲ್ಪಾ ಮನೆ ಬಿಟ್ಟು ಬಂದು ಈ ಯುವಕನನ್ನ ಮದುವೆ ಆಗಿದ್ದಾಳೆ.


ಇನ್ನು ಯುವಕ ನಾರಾಯಣ ಬಳ್ಳಾರಿ ಜಿಲ್ಲಾ ಪಂಚಾಯತ್​​ನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ.. ನೋಡಲು ಸ್ಮಾಟ್೯ ಆಗಿದ್ದಾನೆ.. ಯುವತಿ ಶಿಲ್ಪಾ ಪಿಯುಸಿ ಮುಗಿಸಿದ್ದಾಳೆ ಇವಳು ಕೂಡ ಸುಂದರವಾಗಿದ್ದಾಳೆ. ಪರಸ್ಪರ ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಇರದಂತ ಪ್ರೀತಿ ಮಾಡಿದ್ದಾರೆ..


ಆದರೆ ಈ ಪ್ರೀತಿಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ, ಇದಕ್ಕೆ ಕಾರಣ ಅಂದ್ರೆ ಹುಡಗನಿಗೆ ಆಸ್ತಿಯಿಲ್ಲ ಬಡವ ಇದ್ದಾನೆ ಅಂತಾ. ಆದರೆ ಐದು ವರ್ಷದ ಪ್ರೀತಿ ಹೇಗೆ ಬಿಟ್ಟು ಕೊಡುವುದಕ್ಕೆ ಆಗುತ್ತೆ ಅಂತಾ ಶಿಲ್ಪಾ ಜ. 27 ನೇ ತಾರೀಖು ಮನೆ ಬಿಟ್ಟು ಬಂದಿದ್ದಾಳೆ.. ಮನೆ ಬಿಟ್ಟು ಬಂದು ನನ್ನ ಮದುವೆ ಆಗು ಅಂತಾ ನಾರಾಯಣನಿಗೆ ಹೇಳಿದ್ದಾಳೆ.ಆಗ ಇಬ್ಬರು ಬಳ್ಳಾರಿ ಯಿಂದ ಆಂದ್ರಪ್ರದೇಶಕ್ಕೆ ಹೋಗಿ ಅಲ್ಲಿರುವ ನರಸಿಂಹ ದೇವಸ್ಥಾನದ ಮುಂದೆ ಹಾರ ಬದಲಾಯಿಸಿ ಮದುವೆ ಆಗಿದ್ದಾರೆ.. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಯುವತಿ ಮನೆಯಲ್ಲಿ ನಾರಾಯಣನನ್ನ ಅಳಿಯ ಅಂತಾ ಒಪ್ಪಿಕೊಳ್ಳುತ್ತಿಲ್ಲ.. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗ ಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ.


ಒಟ್ಟಿನಲ್ಲಿ ಐದು ವರ್ಷದಿಂದ ಪ್ರೀತಿ ಪ್ರೇಮದಲ್ಲಿ ಮುಳಗಿದ್ದ ಜೋಡಿ ಮದುವೆ ಆಗಿದ್ದಾರೆ.. ಆದರೆ ಈ ಮದುವೆಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ.. ಹೀಗಾಗಿ ರಕ್ಷಣೆ ಬೇಕು ಅಂತಾ ಠಾಣೆ ಮೆಟ್ಟಿಲೇರಿದ್ದಾರೆ.. ಇನ್ನಾದರೂ ಎರಡೂ ಕುಟುಂಬಗಳು ಹಗೆ ಸಾಧಿಸದೆ ಈ ಜೋಡಿಯನ್ನ ಒಪ್ಪಿ ಆಶೀರ್ವದಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪೆನ್‌ಡ್ರೈವ್ ಪ್ರಕರಣ: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ- ಮೇ 31ಕ್ಕೆ ಭಾರತಕ್ಕೆ ಬರ್ತೀನಿ: ವಿದೇಶದಿಂದಲೇ ಹೇಳಿಕೆ ಕೊಟ್ಟ ಪ್ರಜ್ವಲ್

Posted by Vidyamaana on 2024-05-27 16:35:55 |

Share: | | | | |


ಪೆನ್‌ಡ್ರೈವ್ ಪ್ರಕರಣ: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ- ಮೇ 31ಕ್ಕೆ ಭಾರತಕ್ಕೆ ಬರ್ತೀನಿ: ವಿದೇಶದಿಂದಲೇ ಹೇಳಿಕೆ ಕೊಟ್ಟ ಪ್ರಜ್ವಲ್

ಬೆಂಗಳೂರು : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಕಿಡಿ ಹೊತ್ತಿದ ನಂತರ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಈ ಕುರಿತು ವಿಡಿಯೋ ರಿಲೀಸ್ ಮಾಡಿರುವ ಪ್ರಜ್ವಲ್, ಮೇ 31ಕ್ಕೆ ಎಸ್‌ಐಟಿ ತನಿಖೆಗೆ ಬರುವುದಾಗಿ ಖುದ್ದು ಹೇಳಿದ್ದಾರೆ.ಇನ್ನು ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ. ಹೀಗಾಗಿ ಎಲ್ಲರ ಕ್ಷಮೆ ಕೇಳುವೆ ಎಂದಿದ್ದಾರೆ.

ಆಂಟಿಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

Posted by Vidyamaana on 2023-09-29 07:31:53 |

Share: | | | | |


ಆಂಟಿಯ  ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

ಕಾರವಾರ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ದೇವಾಲಯ ಹಿತರಕ್ಷಣಾ ವೇದಿಕೆಯ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಎಂಬಾತನನ್ನು ಕಾರವಾರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಕರಣದ ವಿವರ :

    ದೂರುದಾರ ವಿವಾಹಿತ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಉಳ್ಳವಳಾಗಿದ್ದು, ಮೊಬೈಲ್ ನಲ್ಲಿರುವ ಕ್ಲಬ್ ಹೌಸ್ ಅಪ್ಲಿಕೇಷನ್ ನಲ್ಲಿ ಆಗಾಗ ಹಾಡು ಹಾಡುತ್ತಿದ್ದಳು. ಕಳೆದ 2020 ರಲ್ಲಿ ಕ್ಲಬ್ ಹೌಸ್ ಅಪ್ಲಿಕೇಶನ್ ಮೂಲಕ ಈಕೆಗೆ ಆರೋಪಿ ಪ್ರಶಾಂತ ಭಟ್ ಮಾಣಿಲ, ಪ್ರಾಯ: 35 ವರ್ಷ, ವೃತ್ತಿ: ಮನೆಕೆಲಸ, ಸಾ, ಅರ್ಲಪದವು, ತಾ: ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಈತನ ಪರಿಚಯ ಆಗಿದ್ದು, ಇದರ ಆ್ಯಪ್‌ನಲ್ಲಿ ಇಬ್ಬರೂ ಚಾಟ್ ಮಾಡುತ್ತಾ ಇದ್ದವರು, ನಂತರ ಫೇಸ್ ಬುಕ್ ನಲ್ಲಿ ಇಬ್ಬರೂ ಫ್ರೆಂಡ್ ಆಗಿದ್ದರು.ಇದಾದ ಬಳಿಕ ಕ್ರಮೇಣ ಇಬ್ಬರೂ ಇಷ್ಟಪಡುತ್ತಿದ್ದು, ನಂತರದ ದಿನಗಳಲ್ಲಿ ಆರೋಪಿ ದೂರುದಾರಳಿಗೆ ನಿನಗೆ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ನಂತರ ದೂರುದಾರಳು ತನ್ನ ಮೊಬೈಲ್ ನಂಬರನ್ನು ಕೂಡ ಆರೋಪಿಗೆ ನೀಡಿ, ಇಬ್ಬರೂ ಪರಸ್ಪರ 2 ವರ್ಷಗಳ ತನಕ ಫೋನ್ ನಲ್ಲಿ ಮೆಸೇಜ್ ಹಾಗೂ ಕಾಲ್ ದಲ್ಲಿ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದೆ


   ಆರೋಪಿಯು ದೂರುದಾರಳಿಗೆ ನಿನ್ನನ್ನು ಭೇಟಿಯಾಗಬೇಕು ಎಂದು ತನಗೆ ಅನಿಸುತ್ತಿದೆ ಎಂದು ಮನವೊಲಿಸಿ ಕಳೆದ 2023 ಜನವರಿ ಕೊನೆಯ ವಾರದಲ್ಲಿ ಒಂದು ದಿನದಂದು ಶಿರಸಿ ಮಾರಿಗುಡಿ ದೇವಸ್ಥಾನದಲ್ಲಿ ಭೇಟಿಯಾಗಿ, ಅಲ್ಲಿಂದ ಶಿರಸಿಯ ಖಾಸಗಿ ಲಾಡ್ಜ್ ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ರೂಮ್ ಮಾಡಿ ಆ ದೂರುದಾರಳ ಮೇಲೆ ಬಲಾತ್ಕಾರದಿಂದಲೈಂಗಿಕ ಸಂಭೋಗ ಮಾಡಿದ್ದ ಎನ್ನಲಾಗಿದೆ.

ಇದಾದ ನಂತರ 2023 ರ ಫೆಬ್ರುವರಿ ಮೊದಲನೇ ವಾರದಲ್ಲಿ ಮತ್ತೆ ಅದೇ ಶಿರಸಿಯ ಖಾಸಗಿ ಲಾಡ್ಜ್‌ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿ, ಅಲ್ಲಿ ದೂರುದಾರಳ ಮೇಲೆ ಬಲಾತ್ಕಾರದಿಂದ ಲೈಂಗಿಕ ಸಂಭೋಗ ಮಾಡಿದ್ದಲ್ಲದೇ ಈ ಎರಡೂ ಘಟನೆಯ ವೇಳೆ ಆರೋಪಿ ದೂರುದಾರಳೊಂದಿಗೆ ತನ್ನ ಫೋಟೋಗಳನ್ನು ತೆಗೆದುಕೊಂಡಿದ್ದವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದಇದಾದ ಬಳಿಕ ನನಗೆ ಹಣದ ಸಮಸ್ಯೆ ಇದೆ, ನೀನು ನನಗೆ ಹಣ ನೀಡು, ಇಲ್ಲವಾದಲ್ಲಿ ನಾನು ನಿನ್ನ ಬೆತ್ತಲೆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪಲೋಡ್ ಮಾಡುವೆ ಎಂದು ಪ್ರತಿ ದಿನ ಮಾನಸಿಕ ಕಿರುಕುಳ ನೀಡಿದ್ದ. ಆದ್ದರಿಂದ ದೂರುದಾರ ಮಹಿಳೆ ಹೆದರಿಕೊಂಡು ಈ ವಿಷಯವನ್ನು ತನ್ನ ಗಂಡನಿಗೆ ತಿಳಿಸಿ, ರೂ. 25,000/- ಗಳನ್ನು ಆರೋಪಿಯ ಮೊಬೈಲ್ ನಂಬರಿಗೆ ಗೂಗಲ್ ಪೇ ಮಾಡಿಸಿರುತ್ತಾಳೆ. ಆದರೂ ಆರೋಪಿ ಪ್ರಶಾಂತ್ ಭಟ್ ಮಾಣಿಲ ತನಗೆ ಇನ್ನೂ ಹಣ ಬೇಕು ಎಂದು ದೂರುದಾರಳಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಾ, ಆಕೆಯ ಖಾಸಗಿ ಫೋಟೋಗಳನ್ನು ಹಾಗೂ ತನ್ನ ಜೊತೆ ಇರುವ ಫೋಟೋಗಳನ್ನು ದೂರುದಾರಳ ತಾಯಿಯ ಮೊಬೈಲಿಗೆ ವಾಟ್ಸಪ್ ಮೂಲಕ ಕಳಿಸಿದ್ದ ಎನ್ನಲಾಗಿದೆ.ಅಷ್ಟೇ ಅಲ್ಲದೇ ನಂತರ ಫೇಸ್ ಬುಕ್ ನಲ್ಲಿ ದೂರುದಾರ ಮಹಿಳೆಯ ಸ್ನೇಹಿತರಿಗೂ ಕಳುಹಿಸಿದ್ದಾನೆ. ನಂತರ ದೂರುದಾರಳ ಗಂಡನಿಗೆ ನಿನ್ನ ಹೆಂಡತಿಯ ಮರ್ಯಾದೆ ಉಳಿಯಬೇಕೆಂದರೆ, 7 ಲಕ್ಷ ರೂಪಾಯಿ ನೀಡಿ, ಮರ್ಯಾದೆ ಉಳಿಸಿಕೋ ಎಂದು ಆತನಿಗೆ ಬ್ಯಾಕ್‌ಮೇಲ್ ಮಾಡಿದ್ದು ಹಾಗೂ ದೂರುದಾರಳಿಗೆ ಅವಾಚ್ಯ ಶಬ್ದಗಳಿಂದ ಬೈದು, ದುಡ್ಡು ನೀಡದಿದ್ದರೆ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ ಎಂದು ಜೀವದ ಬೆದರಿಕೆ ಹಾಕಿದ್ದಾನೆಂದು‌ ಆರೋಪಿಸಲಾಗಿದೆನೊಂದ ದೂರುದಾರ ಮಹಿಳೆ ತನ್ನ ಮನೆಯವರಲ್ಲಿ ಈ ಬಗ್ಗೆ ಚರ್ಚಿಸಿ ಪೋಲಿಸ್ ದೂರು ನೀಡಲು ವಿಳಂಬವಾಗಿದ್ದು, ಮನೆ ಜನರ ಮರ್ಯಾದೆಗೆ ಅಂಜಿ ಇಷ್ಟು ದಿನ ದೂರು ನೀಡಿದೇ ಇದ್ದಿದ್ದನ್ನೇ ಚಾನ್ಸ್ ಎಂದು ಭಾವಿಸಿ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದ ಆರೋಪಿ ಪ್ರಶಾಂತ ಭಟ್ ಮಾಣಿಲನ ವಿರುದ್ಧ ಸದ್ಯ ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಐಪಿಸಿ 376,376(N), 504,506,503,384 ಮತ್ತು IT Act 2008ರ 67(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದುಆರೋಪಿಯನ್ನು ಬಂಧಿಸಿ ಜೈಲಿಗೆ ರವಾನಿಸಲಾಗಿದೆ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

Posted by Vidyamaana on 2023-04-15 07:02:55 |

Share: | | | | |


ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ

 ಬಿಪುತ್ತೂರು :  ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ ತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರು ತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲ ರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲ ರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.



Leave a Comment: