ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

Posted by Vidyamaana on 2023-02-26 15:38:10 |

Share: | | | | |


ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

ಹೊಸದಿಲ್ಲಿ: ದಿಲ್ಲಿಯ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.

ಬೆಳಗ್ಗೆಯಿಂದಲೇ ಒಂಬತ್ತು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಬಳಿಕ ಬಂಧನ ನಡೆದಿದೆ.

“ದೇವರು ನಿಮ್ಮೊಂದಿಗಿದ್ದಾನೆ ಮನೀಶ್, ಲಕ್ಷಾಂತರ ಮಕ್ಕಳ ಮತ್ತು ಅವರ ಪೋಷಕರ ಆಶೀರ್ವಾದ ನಿಮ್ಮ ಮೇಲಿದೆ. ದೇಶ ಮತ್ತು ಸಮಾಜಕ್ಕಾಗಿ ಜೈಲಿಗೆ ಹೋದಾಗ ಜೈಲಿಗೆ ಹೋಗುವುದು ಶಾಪವಲ್ಲ, ಕೀರ್ತಿ, ನೀನು ಬೇಗ ಜೈಲಿನಿಂದ ಹಿಂತಿರುಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಕ್ಕಳು, ಪೋಷಕರು ಮತ್ತು ದೆಹಲಿಯ ನಾವೆಲ್ಲರೂ ನಿಮಗಾಗಿ ಕಾಯುತ್ತಿದ್ದೇವೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.



ವಕ್ಫ್ ಅಧ್ಯಕ್ಷರ ರಾಜೀನಾಮೆ ವರದಿಯ ಶೀರ್ಷಿಕೆ ತಿರುಚಿ ಶೇರಿಂಗ್

Posted by Vidyamaana on 2023-07-06 07:23:25 |

Share: | | | | |


ವಕ್ಫ್ ಅಧ್ಯಕ್ಷರ ರಾಜೀನಾಮೆ ವರದಿಯ ಶೀರ್ಷಿಕೆ ತಿರುಚಿ ಶೇರಿಂಗ್

ಪುತ್ತೂರು: ವಕ್ಫ್ ಅಧ್ಯಕ್ಷ ಶಾಫಿ ಸ ಅದಿ ಅವರ ರಾಜೀನಾಮೆ ವರದಿಯನ್ನು ವಸ್ತುನಿಷ್ಠವಾಗಿ ವಿದ್ಯಮಾನದಲ್ಲಿ ವರದಿ ಮಾಡಲಾಗಿತ್ತು. ಆದರೆ ಈ ವರದಿಯ ಶೇರಿಂಗ್ ಹೆಡ್ಡಿಂಗನ್ನು ಕಿಡಿಗೇಡಿಗಳು ತಿರುಚಿ ಶೇರ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡುತ್ತಿದ್ದು, ಇಂತಹ ಪೋಸ್ಟರನ್ನು ಯಾರೂ ಶೇರ್ ಮಾಡಬಾರದಾಗಿ ಕೇಳಿಕೊಳ್ಳುತ್ತಿದ್ದೇವೆ.

ಶೂಟಿಂಗ್ ಕ್ಯಾನ್ಸಲ್ ಮಾಡಿ ಗದಗಕ್ಕೆ ಬಂದ ಯಶ್, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ​ ಹೇಳಿದ ನಟ

Posted by Vidyamaana on 2024-01-08 20:48:57 |

Share: | | | | |


ಶೂಟಿಂಗ್ ಕ್ಯಾನ್ಸಲ್ ಮಾಡಿ ಗದಗಕ್ಕೆ ಬಂದ ಯಶ್, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ​ ಹೇಳಿದ ನಟ

  ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು  ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು (Yash Birthday) ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ (G

non

aga) ಬಂದಿದ್ದಾರೆ.ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್​, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 


ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.ವಿದ್ಯುತ್ ಸ್ಪರ್ಶಿಸಿ ಮೂವರ ಸಾವು


ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್​ಡೇ ಬ್ಯಾನರ್​ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ


ಇತ್ತ ರಾಜ್ಯ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಲಾಗಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ರಾಜ್ಯದ 34 ಸಾವಿರ ಬಡ ದೇವಸ್ಥಾನಗಳಿಗೂ ಶೀಘ್ರವೇ ಸಿಗಲಿದೆ ಗೃಹಜ್ಯೋತಿ ಉಚಿತ ವಿದ್ಯುತ್ ಸೌಲಭ್ಯ!

Posted by Vidyamaana on 2023-10-26 11:44:20 |

Share: | | | | |


ರಾಜ್ಯದ 34 ಸಾವಿರ ಬಡ ದೇವಸ್ಥಾನಗಳಿಗೂ ಶೀಘ್ರವೇ ಸಿಗಲಿದೆ ಗೃಹಜ್ಯೋತಿ ಉಚಿತ ವಿದ್ಯುತ್ ಸೌಲಭ್ಯ!

ಬೆಂಗಳೂರು : ಸರಕಾರದ ಹೊಸ ಯೋಜನೆ ಅನ್ವಯ ರಾಜ್ಯದಲ್ಲಿ ಈಗಾಗಲೇ ಫಲಾನುಭವಿಗಳಿಗೆ ಉಚಿತವಾಗಿ ದೊರೆಯುತ್ತಿರುವ 200 ಯುನಿಟ್ ವಿದ್ಯುತ್, ಮುಂದಿನ ದಿನಗಳಲ್ಲಿ ಸಿ ಗ್ರೇಡ್ ನ ಬಡ ದೇವಸ್ಥಾನಗಳಿಗೂ ವಿಸ್ತರಣೆಯಾಗಲಿದೆ ಎಂದು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಯಾವ ದೇವಾಲಯವು 5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಪಡೆಯುತ್ತಿದೆಯೋ, ಆ ದೇವಾಲಯವು ಈ ಯೋಜನೆಗೆ ಒಳಗಾಗುತ್ತದೆ. ಅಂದಾಜಿನಂತೆ 34,700 ದೇಗುಲಗಳು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಎ ಗ್ರೇಡ್‌ನ 175, ಬಿ ಗ್ರೇಡ್‌ನ 330 ಮತ್ತು ಸಿ ಗ್ರೇಡ್‌ನ 34,700 ದೇವಸ್ಥಾನಗಳಿವೆ. ವಾರ್ಷಿಕವಾಗಿ ದೇವಾಲಯದ ಆದಾಯ 25 ಲಕ್ಷ ರೂಪಾಯಿಗೂ ಅಧಿಕವಾಗಿದ್ದರೆ, ಮೂಲಸೌಕರ್ಯ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸ್ಥಳೀಯ ಹಂತದಲ್ಲೇ ಅವಕಾಶಗಳಿವೆ. ಆದರೆ, 1 ರಿಂದ 5 ಲಕ್ಷ ರೂ. ಒಳಗೆ ಆದಾಯ ಪಡೆಯುವ ಸಿ ಗ್ರೇಡ್ ದೇಗುಲಗಳಿಗೆ ಮಾತ್ರ ಯಾವುದೇ ಸೌಕರ್ಯಗಳಿಲ್ಲದೆ ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನಲಾಗಿದೆ.ಇನ್ನು ರಾಜ್ಯದಲ್ಲಿ ಸಿ ಗ್ರೇಡ್ ದೇವಾಲಯಗಳು ಮಾಸಿಕ ವಿದ್ಯುತ್, ನೀರಿನ ವೆಚ್ಚ ಭರಿಸಲೂ ಪರದಾಡುವ ಸನ್ನಿವೇಶವಿದೆ. ಆದ್ದರಿಂದ ಪ್ರಸ್ತುತ ಚಾಲ್ತಿಯಲ್ಲಿರುವ ಗೃಹಜ್ಯೋತಿ ಯೋಜನೆ ದೇವಸ್ಥಾನಗಳಿಗು ವಿಸ್ತರಣೆಯಾಗಲಿದೆ.


ರಾಜ್ಯದಲ್ಲಿ ಈ ಹಿಂದಿನ ಸರಕಾರಗಳು ಎ ಗ್ರೇಡ್ ದೇವಸ್ಥಾನಗಳ ಆದಾಯದ ಶೇ.20ರಷ್ಟು ಪಾಲನ್ನು ಸಿ ಗ್ರೇಡ್ ದೇಗುಲಗಳ ಅಭಿವೃದ್ಧಿಗೆ ನೀಡಬೇಕೆಂಬ ಯೋಜನೆಯನ್ನು ರೂಪಿಸಿದ್ದವು. ಅವರ ಯಾವ ಯೋಜನೆಯು ಬರಲಿಲ್ಲ. ದೇವಸ್ಥಾನಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಸಿ ಗ್ರೇಡ್ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಸಲು ರಾಜ್ಯ ಸರಕಾರ ಮುಂದಾಗಿದೆ.


ಈ ಯೋಜನೆಯ ಕುರಿತು ಶೀಘ್ರವೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ

ಪುತ್ತೂರು : ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ತೆಂಗಿನ ಮರದಿಂದ ಬಿದ್ದು ಮೃತ್ಯು.

Posted by Vidyamaana on 2023-08-09 08:17:04 |

Share: | | | | |


ಪುತ್ತೂರು : ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ತೆಂಗಿನ ಮರದಿಂದ ಬಿದ್ದು ಮೃತ್ಯು.

ಪುತ್ತೂರು : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪ್ರಮೋದ್ ಬೊಳ್ಳಾಜೆ ರವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.


ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.

ಇಂದು ಪುಣ್ಚಪ್ಪಾಡಿ ಸಮೀಪ ತೆಂಗಿನ ಮರ ಹತ್ತಿದ್ದ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ..

ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

Posted by Vidyamaana on 2023-08-11 12:56:45 |

Share: | | | | |


ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

ಬೆಳ್ತಂಗಡಿ: ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದರು. ಆದರೆ ಇದೀಗ ನಾನು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.


ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗಳ ಪತ್ತೆ ಹಚ್ಚಲು ಸಾಧ್ಯ ಸಂದರ್ಭ ಬಂದಾಗ ಸೌಜನ್ಯ ವಿಚಾರದಲ್ಲಿ ಹೇಳಬೇಕಾದ ವಿಚಾರವನ್ನು ಹೇಳುತ್ತೇನೆ.


ಆದರೆ ಸತ್ಯ ಹೇಳಿದರೆ ನನ್ನನ್ನು ಕೊಲ್ಲುತ್ತಾರೆ ಎಂದು ನಾನು ಹೇಳೆ ಇಲ್ಲ ಎಂದರು. ಜೀವಂತವಾಗಿ ಯಾರಿಗೂ ನನ್ನನ್ನು ಕೊಲ್ಲಲು ಸಾಧ್ಯವಿಲ್ಲ ಜಿಲ್ಲೆಯಲ್ಲಿ ತಾಲೂಕಿನಲ್ಲಿ ಎಷ್ಟೇ ದೊಡ್ಡವರಿಗೂ ಒಬ್ಬನನ್ನು ಕೊಲ್ಲಲು ಸಾಧ್ಯವಿಲ್ಲ. ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ದೇವರು ನನ್ನನ್ನು ರಕ್ಷಣೆ ಮಾಡುತ್ತಾರೆ ಎಂದಿದ್ದೆ, ಆದರೆ ನನ್ನ ಮಾತನ್ನು ಮಾಧ್ಯಮಗಳ ತಿರುಚಿವೆ ಎಂದಿದ್ದಾರೆ.

Recent News


Leave a Comment: