Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2023-09-07 14:22:07 |
ಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಸ್ಪೀಕರ್ ಯು ಟಿ ಖಾದರ್ ಅಚ್ಚರಿ ಮೂಡಿಸಿದ್ದಾರೆ.ಅದು ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಸ್ಪೀಕರ್ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ್ದಾರೆ.
ಇನ್ನೊಂದು ಗಮನಾರ್ಹ ವಿಚಾರವೆಂದರೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ 13 ಶಾಸಕರ ಪೈಕಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಡುಪಿ ಮಠಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದ ಏಕೈಕ ಶಾಸಕರಾಗಿದ್ದಾರೆ.
ಇನ್ನು ಖಾದರ್ ಮಠಕ್ಕೆ ಭೇಟಿ ನೀಡುತ್ತಿದ್ದಂತೆ ಮಠದ ಸತ್ಯನಾರಾಯಣ ಭಟ್ ಅವರು ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ವಿಶೇಷವೆಂದರೆ ಕಾಕತಾಳೀಯವೆಂಬಂತೆ ಭೇಟಿ ನೀಡಿದ ಅದೇ ಗಳಿಗೆಯಲ್ಲಿ ಶ್ರೀಕೃಷ್ಣ ಜನ್ಮ ತಾಳಿದ್ದರು ಎಂದು ಮಠದ ಸತ್ಯನಾರಾಯಣ ಭಟ್ ಉಲ್ಲೇಖಿಸಿದರು. ಈ ಭಾಗ್ಯ ಎಲ್ಲರಿಗೂ ಪ್ರಾಪ್ತವಾಗದು. ಎರಡೂ ಜಿಲ್ಲೆಯ 13 ಶಾಸಕರ ಪೈಕಿ 11 ಮಂದಿ ಬಿಜೆಪಿ ಶಾಸಕರಿದ್ದರೂ ಅವರ್ಯಾರಿಗೂ ಸಿಗದ ಭಾಗ್ಯ ಸ್ಪೀಕರ್ ಖಾದರ್ ಗೆ ಲಭಿಸಿದ್ದು ಕಾಕತಾಳೀಯ.
ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.
Posted by Vidyamaana on 2023-05-01 10:40:09 |
ಪುತ್ತೂರು: ಬೆಲೆ ಏರಿಕೆಯ ಮೂಲಕ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರಕಾರ . ಈ ಪಕ್ಷದ ಕಾರ್ಯಕರ್ತರು ,ಮುಖಂಡರು ಬಡವರ ಮನೆಗೆ ಯಾವ ಮುಖ ಹೊತ್ತು ವೋಟು ಬಡವರ ಮನೆಗೆ ವೋಟು ಕೇಳಲು ಹೋಗುತ್ತಾರೆ ಎಂದು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಂ ಕೆ ಬಿ ಹೇಳಿದರು.
ಬುಳೇರಿಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ದೇಶದಲ್ಲಿಅಚ್ಚೇದಿನ್ ಕೊಡುವುದಾಗಿ ಹೇಳಿದವರು ಬಡವರ ಅನ್ನಕ್ಕೂ ಕಲ್ಲು ಹಾಕುವ ಕೆಲಸವನ್ನು ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ,ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಇವೆಲ್ಲವೂ ಜನರನ್ನು ಕಂಗೆಡಿಸಿದೆ. ಬೆಲೆ ಏರಿಕೆಯಿಂದ ನಾಳೆ ಏನಾಗುತ್ತದೋ ಎಂಬ ಭಯ ಜನರಲ್ಲಿ ನಿತ್ಯವೂ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಎಲ್ಲಾಸಮಸ್ಯೆಗಳಿಗೆ ಪರಿಹಾರವಾಗಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಜನ ಸ್ನೇಹಿ ಪ್ರಣಾಳಿಕೆಯನ್ನು ಜಾರಿಮಾಡಿದೆ. ಪುತ್ತೂರಿನಲ್ಲಿ ಅಶೋಕ್ ರೈ ಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿಮುಂದೆ ಬರುವ ಕಾಂಗ್ರೆಸ್ ಸರಕಾರಕ್ಕೆ ಬಲಕೊಡುವ ಕೆಲಸವನ್ನು ಮಾಡಬೇಕು. ಪ್ರತೀ ಬೂತ್ ನಲ್ಲೂ ಟಾರ್ಗೆಟ್ ವೋಟು ಎಂಬ ಆಲೋಚನೆಯನ್ನು ಇಟ್ಟುಕೊಂಡು ಹೆಚ್ಚಿನಮತಗಳು ಈ ಭಾಗದಿಂದ ಕಾಂಗ್ರೆಸ್ ಗೆ ಬೀಳುವಂತೆ ನಾವು ಕಾರ್ಯಪೃವೃತ್ತರಾಗಬೇಕು ಎಂದುಹೇಳಿದರು.
ಸೈಲೆಂಟ್ ವೋಟು ಕಾಂಗ್ರೆಸ್ ಪಾಲಾಗುವಂತೆ ಪ್ರತೀಯೊಬ್ಬ ಕಾರ್ಯಕರ್ತರು ಒಟ್ಟುಗೂಡಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಅಭ್ಯರ್ಥಿ ಅಶೋಕ್ ರೈ ಹೇಳಿದರು.
ಅಕ್ರನಸಕ್ರಮದಲ್ಲಿ ಪುತ್ತೂರಿನ ಶಾಸಕರು ಭೃಷ್ಟಾಚಾರ ಮಾಡಿದ್ದು ಅದು ಅವರ ದೊಡ್ಡ ಸಾಧನೆಯಾಗಿದೆ. ಯಾರು ಲಕ್ಷಾಂತರ ರೂ ಕೊಟ್ಟಿದ್ದಾರೋ ಅವರಿಗೆಲ್ಲಾ ಅಕ್ರಮ ಸಕ್ರಮ ಮಾಡಿಕೊಡಲಾಗಿದೆ. ನಾನು ಶಾಸಕನಾದರೆ ರಾಜಧರ್ಮ ಪಾಲನೆ ಮಾಡಲಿದ್ದೇನೆ. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ಪಕ್ಷಕ್ಕೆ ಬಲ ಕೊಡುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದರು. ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಿತೋರಿಸುತ್ತೇನೆ ಎಂದು ಹೇಳಿದರು. ಅಭಿವೃದ್ದಿಯಾಗಬೇಕಾದರೆ ಶಾಂತಿ,ಸೌಹಾರ್ಧತೆ ಮುಖ್ಯ. ಪುತ್ತೂರಿನಲ್ಲಿ ಎಲ್ಲಾ ಧರ್ಮದ ಜನರೂ ಒಂದೇ ತಾಯಿಮಕ್ಕಳಂತೆ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಳ್ವ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
Posted by Vidyamaana on 2023-09-04 15:15:25 |
ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಗದ ವತಿಯಿಂದ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಯಿತು.ಪ್ರಮುಖವಾಗಿ ಜಿಎಸ್ಟಿ ನೋಂದಾಯಿತ ವರ್ತಕರಿಗೆ ಮತ್ತು ಸಣ್ಣ ಉದ್ದಿಮೆದಾರರಿಗೆ ಆರೋಗ್ಯ ವಿಮೆ ೫ ಲಕ್ಷದವರೆಗೆ ಕುಟುಂಬ ಸದಸ್ಯರಿಗೂ ದೊರೆಯುವಂತೆ ಸರಕರದ ಗಮನಸೆಳೆಯುವುದು, ಪ್ಲಾಸ್ಟಿಕ್ ಏಕಬಳಕೆ ಚೀಲಗಳ ನಿಷೇಧ ಸಲುವಾಗಿ ವರ್ತಕರಿಗೆ ಪಾರದರ್ಶಕವಾದ ಕಾನೂನಿನ ತೊಡಕಿನಿಂದಾಗಿ ವರ್ತಕರಿಗೆ ದಂಡ ವಿನಾಯಿತಿ, ಪುತ್ತೂರು ನಗರದ ಮುಖ್ಯ ರಸ್ತೆಗಳಲ್ಲಿ ಸರಕು ಸಮಾಗ್ರಿ ಇಳಿಸಲು ಜನದಟ್ಟನೆ ಸಮಯ ಬಿಟ್ಟು ಉಳಿದ ಸಮಯದಲ್ಲಿ ಅವಕಾಶ ನೀಡುವುದು, ಪೇಟೆಯ ವ್ಯವಹಾರಗಳಿಗೆ ಸಾರ್ವಜನಿಕರಿಗೆ ನೆರವಾಗುವ ರೀತಿಯಲ್ಲಿ ಎಂ ಟಿ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ , ಸರಕಾರಿ ಮತ್ತು ಖಾಸಗಿ ಬಸ್ಸುಗಳನ್ನು ಮುಖ್ಯ ರಸ್ತೆಯಲ್ಲೇ ಓಡಾಟಕ್ಕೆ ಅವಕಾಶ ಕಲ್ಪಿಸುವುದು, ವಿದ್ಯುತ್ ಕಡಿತದ ಸಂದರ್ಭದಲ್ಲಿ ಕೈಗಾರಿಕಾ ಉದ್ದಿಮೆಗಳಿಗೆ ತೊಂದರೆಯಾಗುತ್ತಿದ್ದು ನಿಯಮಿತ ಸಮಯದಲ್ಲಿ ದುರಸ್ಥಿ ಮಾಡುವ ಕುರಿತು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನೆಲ್ಲಿಕಟ್ಟೆ ಸರಕರಿ ಶಾಲೆಯನ್ನು ಮೇಲ್ದರ್ಜೆಗೇರಿಸಿ
ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯನ್ನು ಮೇಲ್ದಜೆಗೇರಿಸಬೇಕು, ೧೫೦ ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಕೊಠಡಿಗಳ ಕೊರತೆ ಮತ್ತು ಶಿಕ್ಷಕರ ಕೊರತೆಯೂ ಇದ್ದು , ಶಾಲೆಗೆ ತೆರಳಲು ಸುಕ್ತವಾದ ರಸ್ತೆಯ ವ್ಯವಸ್ಥೆಯನ್ನು ಮಾಡುವಂತೆಯೂ ಶಾಸಕರಲ್ಲಿ ಮನವಿ ಮಾಡಿದರು.
ಶಾಸಕರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಸಂಗದ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಗದ ಅಧ್ಯಕ್ಷರಾದ ಜಾನ್ ಕುಟನ್ಹಾ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಉಪಾಧ್ಯಕ್ಷರುಗಳಾ ವಾಮನ ಪೈ, ಸೂರ್ಯನಾಥ ಆಳ್ವ, ಕಾರ್ಯದರ್ಶಿ ಮಹಮ್ಮದ್ ನೌಶಾದ್, ಶ್ರೀಕಾಂತ್ ಕೊಳತ್ತಾಯ,ಕೋಶಾಧಿಕಾರಿ ರಾಜೇಶ್ ಕಾಮತ್ ಸುದಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಭಾಸ್ಕರ ಬಾರ್ಯ, ಸದಾನಂದ ನಾಯ್ಕ್ ಬೊಳುವಾರು, ಎಂ ಯು ಗೋಪಾಲಕೃಷ್ಣ, ಲಾರೆನ್ಸ್ ಗೋನ್ಸಾಲಿಸ್, ಉಪಸ್ಥಿತರಿದ್ದರು.
Posted by Vidyamaana on 2023-05-17 06:16:59 |
ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿಈತ ಮೋಟಾರ್ ಸೈಕಲ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ.
ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಈ ರವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜ ರವರು ಪಾಲ್ಗೊಂಡಿದ್ದರು.
Posted by Vidyamaana on 2023-06-13 02:18:12 |
ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.
ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್ನ ವಾಕ್ ಪಾಟ್ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.
ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.
Posted by Vidyamaana on 2023-08-30 07:43:57 |
ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.
ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ