Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2024-04-07 18:00:09 |
ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ, ಮಹಿಳಾ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ, ಉಜ್ವಲ ಯೋಜನೆ, ಮನೆ ನಿರ್ಮಾಣ ಮುಂತಾದ ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಕಾನೂನಾತ್ಮಕವಾಗಿ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.
Posted by Vidyamaana on 2023-07-10 13:41:33 |
ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.
ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.
2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ.ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
Posted by Vidyamaana on 2023-03-16 16:35:24 |
ಬಂಟ್ವಾಳ: ಕಳೆದ ಬಾರಿ ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಕಾಂಗ್ರೆಸ್ ಪಕ್ಷವನ್ನು ನಂಬಿ ಸೋತಿದ್ದೇವೆ, ಈ ಬಾರಿ ಅಂತಹ ಮಹಾ ತಪ್ಪು ಮಾಡುವುದಿಲ್ಲ, 2023 ರ ವಿಧಾನಸಭಾ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್. ಡಿ.ಪಿ.ಐ.ಪಕ್ಷದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನ ಹಿರಿಯ ಪ್ರಭಾವಿ ನಾಯಕರ ವಿನಂತಿಯಂತೆ ಎರಡು ಶರತ್ತಿನ ಮೇಲೆ ಒಪ್ಪಂದ ವಾಗಿತ್ತು. ಮೂರು ಕ್ಷೇತ್ರದಲ್ಲಿ ಮಾತ್ರ ಎಸ್.ಡಿ.ಪಿ.ಐ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದು, ಉಳಿದ ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸಹಕಾರ ನೀಡುವ ಒಪ್ಪಂದವಾಗಿತ್ತು. ಆದರೆ ಚುನಾವಣೆಯ ಸಂದರ್ಭದಲ್ಲಿ ಅವರು ನೀಡಿದ ಮಾತನ್ನು ಪಾಲಿಸಿಲ್ಲ, ಅದೇ ನಾಯಕನ ಸೂಚನೆಯಂತೆ ಗೇಮ್ ಪ್ಲಾನ್ ನಂತೆ ಕಾಂಗ್ರೇಸಿಗರು ಬಿಜೆಪಿಗೆ ಸೇರಿ ಬಿಜೆಪಿ ಅಧಿಕಾರಕ್ಕೆ ಬರುವಂತಾಯಿತು. ಇದು ಕಾಂಗ್ರೆಸ್ ವಿಶ್ವಾಸ ದ್ರೋಹದ ಕೆಲಸ ಎಂದು ಟೀಕಿಸಿದರು.ಇನ್ನು ಕಳೆದ ಬಾರಿ ಪಕ್ಷದ ತಪ್ಪು ನಿರ್ಧಾರದಿಂದ ಪಕ್ಷದ ಸಂಘಟನೆಗೆ ಬಲಬಾದ ಹೊಡೆದ ಬಿದ್ದಿದೆ. ಹೀಗಾಗಿ ಈ ಬಾರಿ ಅಂತಹ ತಪ್ಪು ಮರುಕಳಿಸದಂತೆ ಮತ್ತು ತಲಮಟ್ಟದಿಂದ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
Posted by Vidyamaana on 2023-09-22 08:43:11 |
ಪುತ್ತೂರು :"ಡೈಮಂಡ್ ಫೆಸ್ಟ್” ಸೆ.18ರಂದು ಆರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿ ವಜ್ರಾಭರಣಗಳನ್ನು ಬಿಡುಗಡೆಗೊಳಿಸಿ ಫೆಸ್ಟ್ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಳಿಯ ಜ್ಯುವೆಲ್ಸ್ ನಲ್ಲಿ ವಜ್ರಾಭರಣಗಳ ವಿಶೇಷ ಮಳಿಗೆ ಆರಂಭಗೊಂಡಿದೆ. ಮಹಿಳೆಯರಿಗೆ ಅಚ್ಚುಮೆಚ್ಚಿನ ವಜ್ರದ ಆಭರಣಗಳನ್ನು ಖರೀದಿಗೆ ಮುಳಿಯ ಸಂಸ್ಥೆ ಅವಕಾಶ ಒದಗಿಸಿದೆ. ರಿಯಾಯಿತಿ ದರದಲ್ಲಿ ವಜ್ರಗಳ ಆಭರಣ ಖರೀದಿಸಬಹುದು. ವೇದಾಂತ್ ಮತ್ತು ಕಿಸ್ನ ಎಂಬ ಎರಡು ವಿಧದ ಆಭರಣಗಳು ಫೆಸ್ಟ್ನಲ್ಲಿದೆ. ಗ್ರಾಹಕರು ಈ ಫೆಸ್ಟ್ನೊಂದಿಗೆ ಪಾಲ್ಗೊಳ್ಳಿ ಎಂದರು.ಮುಳಿಯ ಸಂಸ್ಥೆಯ ಮುಖ್ಯ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಮಾತನಾಡಿ ವಜ್ರಾದಪಿ ಕಠೋರಾನಿ ಎಂಬ ಮಾತಿನಂತೆ ವಜ್ರ ಕಾಠಿಣ್ಯತೆಯನ್ನು ಹೊಂದಿದ ವಸ್ತು. ವಜ್ರಾಭರಣ ಧರಿಸಿದ ಮಹಿಳೆ ವಜ್ರದ ಮೌಲ್ಯವನ್ನು ತನ್ನಲ್ಲಿ ಪ್ರತಿಬಿಂಬಿಸುತ್ತಾಳೆ. ಮಿಷನ್ ತಂತ್ರಜ್ಞಾನದಲ್ಲಿಯೂ ವಜ್ರವನ್ನು ಬಳಸಲಾಗುತ್ತದೆ. ಆಭರಣ ಚಿನ್ನ, ವಜ್ರಗಳ ಆಭರಣ ಖರೀದಿಗೆ ಪ್ರತೀ ಸಮಯವೂ ಸಕಾಲವಾಗಿದೆ. ವಜ್ರವನ್ನು ಯಾರೂ ಕೂಡ ಖರೀದಿಸಬಹುದು ಎಂದು ಹೇಳಿದರು.ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಪ್ರಾಸ್ತಾವಿಕ ಮಾತನಾಡಿ ಕಳೆದ ಕೆಲವು ವರುಷಗಳಿಂದ ಮುಳಿಯ ಡೈಮಂಡ್ ಫೆಸ್ಟ್ ಆಯೋಜಿಸಲಾಗುತ್ತಿದೆ. ಜನಸಾಮಾನ್ಯರಿಗೆ ಕೈಗೆಟಕುವ ಹಾಗೆ ಫೆಸ್ಟ್ ಮಾಡಲಾಗಿದೆ. ಇದು ಕೈಗೆಟುಕುವ ವೈಭವವಾಗಿದೆ. ಇಲ್ಲಿ ಎಲ್ಲರಿಗೂ ವಜ್ರವನ್ನು ಖರೀದಿಸುವ ಅವಕಾಶಗಳಿವೆ. ಮಿತದರದಲ್ಲಿ ವಜ್ರಾಭರಣ ಪಡೆಯಬಹುದು. ವಜ್ರದ ಆಭರಣಕ್ಕೆ ಕೂಡ ಮಾರುಕಟ್ಟೆ ದರದ ಪ್ರಕಾರ ವಿನಿಮಯ ಆಫರ್ ನೀಡಲಾಗುತ್ತದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದರು.
ಪ್ರಥಮ ಖರೀದಿ:
ಡೈಮಂಡ್ ಫೆಸ್ಟ್ನಲ್ಲಿ ಆರಂಭದ ದಿನವೇ ಗ್ರಾಹಕರಾದ ಗಣೇಶ್ ಮತ್ತು ಸವಿತಾ ಕೇದಗಡಿ ದಂಪತಿ ವಜ್ರಾಭರಣ ಖರೀದಿ ಮಾಡಿದರು. ಈ ಮೂಲಕ ಈ ಫೆಸ್ಟ್ನ ಪ್ರಥಮ ಖರೀದಿದಾರರಾದರು.
ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣನಾರಾಯಣ ಉಪಸ್ಥಿತರಿದ್ದರು. ಸಿಬಂದಿ ಸಂದೇಶ್ ಪ್ರಾರ್ಥಿಸಿದರು. ಶೋರೂಮ್ ಮ್ಯಾನೇಜರ್ ನಾಮದೇವ ಮಲ್ಯ ಸ್ವಾಗತಿಸಿದರು. ಫ್ಲೋರ್ ಮೆನೇಜರ್ ಪ್ರವಿಣ ಕಾರ್ಯಕ್ರಮ ನಿರೂಪಿಸಿದರು. ಸ್ಟೋರ್ ಮ್ಯಾನೇಜರ್ ಯತೀಶ್ ವಂದಿಸಿದರು.
Posted by Vidyamaana on 2023-04-18 14:30:38 |
ಪುತ್ತೂರು: ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಏ. 19ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಯೇ ಇರುವುದಿಲ್ಲ ಎನ್ನುವುದೇ ಇಲ್ಲಿನ ವಿಶೇಷ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಫಿ ಬೆಳ್ಳಾರೆ, ಪುತ್ತೂರು ಎಸ್.ಡಿ.ಪಿ.ಐ. ಅಭ್ಯರ್ಥಿ. ಶಾಫಿ ಬೆಳ್ಳಾರೆ ಯವರ ಪರವಾಗಿ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳಾದ ರಿಯಾಜ್ ಪರಂಗಿಪೇಟೆ, ಅಲ್ಪಾನ್ಸ್ ಫ್ರಾಂಕೋ, ಅಬ್ದುಲ್ ಲತೀಫ್, ಅಬ್ದುಲ್ ಮಜೀದ್, ರಿಯಾಜ್ ಕಡಂಬು, ಅನ್ವರ್ ಸಾದಾತ್, ಇಬ್ರಾಹಿಂ ಸಾಗರ್ ಮೊದಲಾದವರು ಆಗಮಿಸಲಿದ್ದಾರೆ.
ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ತಿಳಿದು ಬಂದಿದೆ.
Posted by Vidyamaana on 2024-01-19 08:41:37 |
ಮುಂಬಯಿ : ಮಹಾ ರಾಷ್ಟ್ರದ ನವಿಮುಂಬಯಿ ಯಿಂದ 2023ರ ಡಿ. 12ರಂದು ನಾಪತ್ತೆಯಾಗಿದ್ದ 19 ವರ್ಷದ ಯುವತಿ ವೈಷ್ಣವಿ ಬಾಬರ್ ಎಂಬವರ ಶವ ಕೊನೆಗೂ ಪತ್ತೆಯಾಗಿದೆ. ವಿಚಿತ್ರವೆಂದರೆ ಶವ ಪತ್ತೆಯಾಗಿರುವುದು ಆಕೆಯ ಪ್ರಿಯಕರ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿದ್ದ ಸೀಕ್ರೆಟ್ ಕೋಡ್ನಿಂದ!ಹೌದು, ವೈಭವ ಎಂಬ ಯುವಕನ ಜತೆಗೆ ಪ್ರೀತಿಯಲ್ಲಿದ್ದ ವೈಷ್ಣವಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಆಕೆ ನಾಪತ್ತೆಯಾಗಿದ್ದ ದಿನವೇ ಇತ್ತ ವೈಭವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತನ ಶವವೇನೋ ಸಿಕ್ಕಿತ್ತು ಆದರೆ ವೈಷ್ಣವಿ ಏನಾದಳೆಂಬುದು ತಿಳಿದು ಬಂದಿರಲಿಲ್ಲ. ಬಳಿಕ ಪೊಲೀಸರು ವೈಭವ್ ಮೊಬೈಲ್ನಲ್ಲಿದ್ದ ಡೆತ್ನೋಟ್ ಗಮನಿಸಿ ದಾಗ ಅದರಲ್ಲಿ “ಎಲ್01-501′ ಎಂಬ ಕೋಡ್ ಇದ್ದದ್ದನ್ನು ಗಮನಿಸಿದ್ದಾರೆ. ಅದರ ಬೆನ್ನು ಹತ್ತಿ ತನಿಖೆ ನಡೆಸಿದಾಗ ಆ ಸಂಖ್ಯೆಯು ಅರಣ್ಯ ಇಲಾಖೆಯು ಮರ ವೊಂದರ ಮೇಲೆ ಬರೆದಿರುವ ಸಂಖ್ಯೆ ಎಂದು ತಿಳಿದುಬಂದಿದ್ದು, ಅದೇ ಮರದ ಕೆಳಗೆ ವೈಷ್ಣವಿಯ ಶವ ಹೂತಿರುವುದು ಪತ್ತೆಯಾಗಿದೆ.