Posted by vidyamaana on 2024-07-05 17:20:19 |
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2023-09-24 07:43:09 |
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಟ್ಟು 55 ಗ್ರಾಂ ತೂಕದ 2 ಲಕ್ಷ 75 ಸಾವಿರ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಇದೇ ವೇಳೆ ಸ್ಕೂಟರ್, ಮೊಬೈಲ್ ಫೋನ್ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕೂಡಾ ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ.
ಅಬ್ದುಲ್ ಅಜೀಜ್, ಅಕ್ಷಿತ್ ಕುಮಾರ್, ಜಾಕೀರ್ ಮತ್ತು ಕಾರ್ತಿಕ್ ಸುವರ್ಣ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಅಬ್ದುಲ್ ಅಜೀಜ್ 15 ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆ, ಉಳ್ಳಾಲಬೈಲ್ ಪರಿಸರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Posted by Vidyamaana on 2024-02-09 17:24:43 |
ಬೆಂಗಳೂರು (ಫೆ.09): ವಿಭಜನೆ, ದತ್ತು ಪತ್ರ, ಅಫಿಡವಿಟ್, ಕರಾರು ಪತ್ರದ ರದ್ದತಿ, ಕಂಪನಿಗಳ ಪುನರ್ನಿರ್ಮಾಣ ಅಥವಾ ವಿಭಜನೆ, ಅಡಮಾನದ ಮರುಹಂಚಿಕೆ ಸೇರಿದಂತೆ ಸರ್ಕಾರ ಒಟ್ಟು 25ಕ್ಕೂ ಹೆಚ್ಚು ರೀತಿಯ ದಾಖಲೆಗಳ ಮುದ್ರಾಂಕ ಶುಲ್ಕವನ್ನು ರಾಜ್ಯ ಶೇ.200ರಿಂದ ಶೇ.500ರವರೆಗೆ ಹೆಚ್ಚಳ ಮಾಡಿ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.ಇದರಿಂದ ವಿವಿಧ ದಾಖಲೆಗಳಿಗೆ ಮುದ್ರಾಂಕ ಶುಲ್ಕ ಎರಡು ಪಟ್ಟು, ಇನ್ನು ಕೆಲ ದಾಖಲೆಗಳಿಗೆ ಐದು ಪಟ್ಟು ಹೆಚ್ಚಳವಾಗಲಿದೆ. ಅತಿ ಹೆಚ್ಚು ಅಂದರೆ ನಗರ ಪ್ರದೇಶಗಳ ಆಸ್ತಿ ವಿಭಜನಾ ಪತ್ರಗಳಿಗೆ 1000 ರು. ಇದ್ದ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 5,000 ರು.ಗೆ, ನಗರ ಹೊರಗಿರುವ ಆಸ್ತಿಗಳಿಗೆ 500 ರು. ಇದ್ದ ಶುಲ್ಕ ಪ್ರತಿ ಷೇರಿಗೆ 3,000 ರು.ಗೆ ಹೆಚ್ಚಿಸಲಾಗಿದೆ.
ಈ ಸಂಬಂಧ ಕಳೆದ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ಮಸೂದೆ 2023 ಅನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿತ್ತು. ಇದೇ ಫೆಬ್ರವರಿ 3 ರಂದು ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡಿದ್ದು, ಅದೇ ದಿನ ಹೊಸ ದರಗಳ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಸಂಗ್ರಹದಿಂದ ಬರುವ ಆದಾಯ ಕನಿಷ್ಠ 1000 ದಿಂದ 2000 ಕೋಟಿ ರು.ಗಳವರೆಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. 2022-2023ರಲ್ಲಿರಾಜ್ಯದಲ್ಲಿ ಮುದ್ರಾಂಕ ಶುಲ್ಕ ಸಂಗ್ರಹವು ಸುಮಾರು 2,027 ಕೋಟಿ ರು.ಗಳಷ್ಟಿತ್ತು. ಇನ್ನು ಮುಂದೆ ಇದು ಸುಮಾರು 3,000 ಕೋಟಿ ರು. ನಿಂದ 4,000 ಕೋಟಿ ರು.ಗಳಿಗೆ ಹೆಚ್ಚುವ ನಿರೀಕ್ಷೆ ಮಾಡಲಾಗಿದೆ. ಯಾವ ದರ ಎಷ್ಟು ಹೆಚ್ಚಳ?: ರಾಜ್ಯ ಪತ್ರದಲ್ಲಿ ಪ್ರಕಟಿತ ತಿದ್ದುಪಡಿ ದರದ ಪ್ರಕಾರ, ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರು. ನಿಂದ 1,000 ರು.ಗೆ ಏರಿಕೆಯಾಗಿದೆ. ಸದ್ಯ ವಿವಿಧ ಅಫಿಡವಿಟ್ಗಳಿಗೆ 20 ರು. ಇರುವ ಮುದ್ರಾಂಕ ಶುಲ್ಕವನ್ನು 100 ರು. ವರೆಗೆ ಹೆಚ್ಚಿಸಲಾಗಿದೆ. ಪವರ್ಆಫ್ ಅಟಾರ್ನಿಗೆ 100 ರು. ಇದ್ದ ಮುದ್ರಣ ಶುಲ್ಕ 500 ರು.ಗೆ, ಐದಕ್ಕಿಂತ ಹೆಚ್ಚು ಮಂದಿ, ಆದರೆ 10ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿ ಯಾಗಿ ಪವರ್ಆಫ್ ಅಟಾರ್ನಿ ನೀಡುವುದಾದರೆ 200 ರು. ಬದಲು ಇನ್ನು ಮುಂದೆ 1,000 ರು. ಶುಲ್ಕ ಪಾವತಿಸಬೇಕು.
ಷೇರಿಗೆ 5,000 ರು.ಗೆ ಹೆಚ್ಚಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ ಪ್ರಸ್ತುತ ಇರುವ 500 ರು. ಬದಲು ಪ್ರತಿ ಷೇರಿಗೆ 3,000 ರು. ಶುಲ್ಕಪಾವತಿಸಬೇಕು. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ ಇದ್ದ 250 ರು.ಗಳನ್ನು ಈಗ 1,000 ರು.ಗೆ ಹೆಚ್ಚಿಸಲಾಗಿದೆಇನ್ನು, ವಿಚ್ಛೇದನ ಪತ್ರಗಳ ಮೇಲಿನ ಸ್ಟಾಂಪ್ ಡ್ಯೂಟಿ ಕೂಡ 100 ರು. ರಿಂದ 500 ರು.ಗೆ ಹೆಚ್ಚಾಗಿದೆ. ಪ್ರಮಾಣೀಕೃತ ಪ್ರತಿಗಳ ಶುಲ್ಕವನ್ನು 5 ರು.ರಿಂದ20 ರು.ಗೆ, ಸದ್ಯ ವಿವಿಧ ಅಫಿಡವಿಟ್ಟುಗಳಿಗೆ 20 ರು. ಇದ್ದ ಮುದ್ರಾಂಕ ಶುಲ್ಕವನ್ನು 100 ರು.ಗಳ ನಗರ ಪ್ರದೇಶಗಳ ಆಸ್ತಿ ವಿಭಜನಾ ಪತ್ರಗಳಿಗೆ ವರೆಗೆ ಹೆಚ್ಚಿಸಲಾಗಿದೆ. ಅದೇ ರೀತಿ ಟ್ರಸ್ಟ್ಗಳನ್ನು 1000 ರು. ಇದ್ದ ಮುದ್ರಾಂಕ ಶುಲ್ಕವನ್ನು ಪ್ರತಿ ನೋಂದಾಯಿಸುವುದು, ಕಂಪನಿಗಳ ವಿಲೀನ ಮತ್ತಿತರ ಪ್ರಕ್ರಿಯೆಗಳ ಶುಲ್ಕದಲ್ಲೂ ಸಹ ಹೆಚ್ಚಳವಾಗಲಿದೆ. ಕಂಪನಿಗಳ ವಿಲೀನವನ್ನು ಒಳಗೊಂಡಿರುವ ಸಾಗಣೆ ಪತ್ರಗಳಲ್ಲಿ ನಿಗದಿತ ಮುದ್ರಾಂಕ ಶುಲ್ಕವು ಆಸ್ತಿಯ ಮಾರುಕಟ್ಟೆ ಮೌಲ್ಯದ ಮೇಲೆ 3 ಪ್ರತಿಶತ ಅಥವಾ ಷೇರುಗಳ ಒಟ್ಟು ಮೌಲ್ಯದ 1 ಪ್ರತಿಶತಕ್ಕೆ ಸಮನಾಗಿರುತ್ತದೆ. ಇದನ್ನು ಆಸ್ತಿಯ ಮಾರುಕಟ್ಟೆ ಮೌಲ್ಯದ ಶೇ.5 ಮತ್ತು ಷೇರುಗಳ ಮೌಲ್ಯದ ಶೇ.5 ಹೆಚ್ಚಿಸಲು ಮಸೂದೆ ಪ್ರಸ್ತಾಪಿಸುತ್ತದೆ. ಬಿಲ್ನ ಆಪ್ಲೆಕ್ಸ್ ಗಳು ಮತ್ತು ಕಾರಣಗಳ ಹೇಳಿಕೆಯಪ್ರಕಾರ, ಬ್ಯಾಂಕ್ ಗ್ಯಾರಂಟಿಗಳ ಮೇಲೆ ಮುದ್ರಾಂಕ ಶುಲ್ಕವನ್ನು ವಿಧಿಸುವಬಗ್ಗೆ ಪ್ರತ್ಯೇಕನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ.
Posted by Vidyamaana on 2023-11-21 11:39:31 |
ಉತ್ತರಕಾಶಿ: ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.
💥 ಕ್ಲಿಕ್ ಮಾಡಿ 👉 ಸುರಂಗ ದ ಒಳಗಡೆ ಸಿಲುಕಿರುವ ಕಾರ್ಮಿಕರ CCTV ಮೊದಲ ದೃಶ್ಯ
ಸುರಂಗದ ಮೇಲಿನಿಂದ ರಂಧ್ರ ಕೊರೆದು ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಈ ಮಧ್ಯೆ ಎಂಡೋಸ್ಕೋಪಿಕ್ ಫ್ಲೆಕ್ಸಿ ಕ್ಯಾಮರಾವನ್ನು ಸುರಂಗದೊಳಗೆ ಕಳುಹಿಸಲಾಗಿತ್ತು. ಇದೀಗ ಸುರಂಗದೊಳಗಿನ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.
ನಿನ್ನೆ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ.
Posted by Vidyamaana on 2023-02-23 23:23:37 |
ಕಡಬ, ಫೆ.23. ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಂತರ ಉಳಿದ ಆನೆಗಳನ್ನು ಸೆರೆ ಹಿಡಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ವರದಿಯಾಗಿದೆ.ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದು, ಇದಕ್ಕೊಪ್ಪದ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯಾರೋ ಕಿಡಿಗೇಡಿಗಳು ಇಲಾಖೆಯ ವಾಹನಗಳಿಗೆ ಹಾನಿ ಉಂಟುಮಾಡಿ ಅಧಿಕಾರಿಗಳಿಗೆ ಹಲ್ಲೆಗೈದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Posted by Vidyamaana on 2023-12-03 15:51:35 |
ಬೆಂಗಳೂರು: ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.
ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ಮೂಲದ ಪ್ರವೀಣ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ವಾಸವಾಗಿದ್ದರು.
ಅತ್ತೆ ನಾಗಮ್ಮ ಮತ್ತು ಸೋದರ ಮಾವ ರಾಜೇಶ್ ನಿಂದ ಕಿರುಕುಳ ನೀಡಲಾಗಿದೆ, ಪತಿಯ ಕುಟುಂಬದರಿಂದ ಯುವತಿಗೆ ಹಲ್ಲೆ ಯನ್ನೂ ನಡೆಸಲಾಗಿದೆ ಎಂಬ ಆರೋಪ ಮಾಡಲಾಗಿದೆ. ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-10-17 17:21:46 |
ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ
ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.