Posted by vidyamaana on 2024-07-23 21:09:49 |
ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ.
ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.
ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಏನಿದು ಪ್ರಕರಣ?:
ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್ ಸ್ಕೂಲ್ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.
ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.
Posted by Vidyamaana on 2023-10-21 09:54:38 |
ರಿಯಾದ್: ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಆಗ್ರಹಿಸಿದರು. ರಿಯಾದ್ನಲ್ಲಿ ನಡೆದ ಗಲ್ಫ್ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಮಾವೇಶದಲ್ಲಿ ಮಾತನಾಡಿದ ಅವರು, “ಗಾಜಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತೀವ್ರ ದುಃಖವಾಗಿದೆ. ಘರ್ಷಣೆಯಲ್ಲಿ ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್ ಕೂಡಲೇ ನಿಲ್ಲಿಸಬೇಕು. ಶಾಶ್ವತ ಶಾಂತಿ ಸಾಧಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸಿದರು.
ಯಾವುದೇ ಸಂದರ್ಭದಲ್ಲಿ ಹಾಗೂ ಯಾವುದೇ ರೀತಿಯಲ್ಲೂ ನಾಗರಿಕರನ್ನು ಗುರಿಯಾಗಿ ನಡೆಸುವ ದಾಳಿಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಮೊಹಮ್ಮದ್ ಬಿನ್ ಸಲ್ಮಾನ್ ಪ್ರತಿಪಾದಿಸಿದರು.
Posted by Vidyamaana on 2023-06-24 11:18:56 |
ಮಂಗಳೂರು : ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ಇರುವ ಅಬ್ಬಿ ಕಾಂಪ್ಲೆಕ್ಸ್ ನಲ್ಲಿ ಕೃಷ್ಣ ಎಂಬಾತನು ಫ್ಲಾಟ್ ಬಾಡಿಗೆಗೆ ಪಡೆದು ಮಂಡ್ಯ ನಿವಾಸಿ ಲಕ್ಕಪ್ಪ ಎಂಬಾತನ ಜೊತೆ ಸೇರಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.ಈ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಮಂಡ್ಯ ಮೂಲದ ಲಕ್ಕಪ್ಪ(25 ವರ್ಷ),ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Posted by Vidyamaana on 2024-04-07 07:58:32 |
ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ (17) ಮೃತಪಟ್ಟ ಬಾಲಕ.
ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ
Posted by Vidyamaana on 2024-01-18 07:28:03 |
ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು ದೇವಸ್ಥಾನದಿಂದ ತೆಗೆದುಕೊಂಡು ಹೋಗಿ ವಿತರಿಸಿದ್ದಾರೆ. ಇದೆಲ್ಲಾ ನಡೆದ ಬಳಿಕ ಸೋಮವಾರ ಕುಕ್ಕಿನಡ್ಕ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕುರಿತು ಸಭೆ ನಡೆದಿದ್ದು, ಸಭೆ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಕಾಲುದಾರಿಯಲ್ಲಿ ಧನಂಜಯ, ಕೇಶವ ಹಾಗೂ ಜಗದೀಶ್ ಎಂಬವರು ಏಕಾಏಕಿ ಕಬ್ಬಿಣದ ರಾಡು ಹಾಗೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಬೊಬ್ಬೆ ಕೇಳಿ ನನ್ನ ತಾಯಿ ಸವಿತಾ ಅವರು ಸ್ಥಳಕ್ಕೆ ಬಂದಾಗ ಅವರನ್ನು ದೂಡಿ ಹಾಕಿದ್ದಾರೆ. ಪರಿಣಾಮ ಅವರಿಗೂ ಗಾಯವಾಗಿದೆ ಎಂದು ತಿಳಿಸಿದರು.
ಇದಲ್ಲದೆ ನಾಡಾಜೆ – ಬರೆಕೊಲಾಡಿ ರಸ್ತೆ ವಿವಾದವಿದ್ದು, ರಸ್ತೆಗಾಗಿ ನಮ್ಮ ವರ್ಗ ಜಾಗವನ್ನು ಬಳಸಿಕೊಂಡಿದ್ದರು. ಇದೇ ರಸ್ತೆಯನ್ನು ಮೂರು ವರ್ಷದ ಹಿಂದೆ ಬಂದ್ ಮಾಡಿದ್ದರು. ಬಳಿಕ ಜಾಗದ ವಿವಾದ ಮತ್ತೆ ಮತ್ತೆ ಮರುಕಳಿಸಿತ್ತು. ಈ ಘಟನೆಯಲ್ಲಿ ಸಂಪೂರ್ಣ ಪುತ್ತಿಲ ಪರಿವಾರದ ಕೈವಾಡವಿದೆ. ಈ ಕುರಿತು ಎಲ್ಲಿ ಬೇಕಾದರೂ ಬಂದು ನಾನು ಪ್ರಮಾಣ ಮಾಡುತ್ತೇನೆ ಎಂದು ಅವರು ತಿಳಿಸಿದರು.
Posted by Vidyamaana on 2023-04-29 12:21:46 |
ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಅಭಿಮಾನಿ ಬಳಗದಿಂದ ‘ವಿಶ್ವ ಸಂಕಲ್ಪ’ ಕಾರ್ಯಕ್ರಮ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ನಲ್ಲಿ ನಡೆಯುತ್ತಿದ್ದು, ಹಲವಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆಮಹಿಳೆಯರು, ಕಾರ್ಯಕರ್ತರು ಹಾಗೂ ಪುತ್ತಿಲ ಅಭಿಮಾನಿ ಬಳಗದವರು ‘ವಿಶ್ವ ಸಂಕಲ್ಪ’ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.ಅರುಣ್ ಕುಮಾರ್ ಪುತ್ತಿಲ ರವರು ಈ ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೇನ್ನುವುದು ಕಾರ್ಯಕರ್ತರ ಆಶಯವಾಗಿತ್ತು. ಅದೇ ರೀತಿ ಅವರು ಚುನಾವಣಾ ಕಣಕ್ಕಿಳಿದಿದ್ದು, ಅವರು ಜಯಗಳಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಮತಯಾಚನೆಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ..
Posted by Vidyamaana on 2024-05-20 14:34:59 |
ಲಕ್ನೋ: ವ್ಯಕ್ತಿಯೊಬ್ಬ ಮತದಾನ ಮಾಡುವಾಗ ಬಿಜೆಪಿ ಅಭ್ಯರ್ಥಿಗೆ ಹಲವು ಬಾರಿ ಮತದಾನ ಮಾಡಿದ್ದು, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ವೈರಲ್ ಆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೃತ್ಯವೆಸಗಿದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜನ್ ಸಿಂಗ್ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ಎಕ್ಸ್ ನಲ್ಲಿ ವಿಡಿಯೋ ಹಂಚಿ ಆಗ್ರಹಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು.